Homeಮುಖಪುಟಕೇಂದ್ರ ಬಜೆಟ್ 2023: ಶ್ರೀಮಂತರಿಗಾಗಿ, ಶ್ರೀಮಂತರಿಂದ, ಶ್ರೀಮಂತರಿಗೋಸ್ಕರ

ಕೇಂದ್ರ ಬಜೆಟ್ 2023: ಶ್ರೀಮಂತರಿಗಾಗಿ, ಶ್ರೀಮಂತರಿಂದ, ಶ್ರೀಮಂತರಿಗೋಸ್ಕರ

- Advertisement -
- Advertisement -

ಕಳೆದ ಡಿಸೆಂಬರ್ 2022ರ CMIE (Centre for monitoring Indian economy) ವರದಿ ಪ್ರಕಾರ ಭಾರತದಲ್ಲಿ ಗ್ರಾಮೀಣ ಭಾಗದ ನಿರುದ್ಯೋಗ ಶೇ.8.3 ಮತ್ತು ನಗರ ಭಾಗದ ನಿರುದ್ಯೋಗ ದರ ಶೇ.10. ಇದು ಸ್ವತಂತ್ರ ಭಾರತದ ಇತಿಹಾಸದಲ್ಲೇ ಅತಿ ಹೆಚ್ಚಿನ ನಿರುದ್ಯೋಗ ದರ.

ಅಂದರೆ, ಭಾರತದಲ್ಲಿ ದಿನೇದಿನೇ ನಿರುದ್ಯೋಗ ಹೆಚ್ಚುತ್ತಿದೆ ಎಂಬುದು ನಿಚ್ಚಳವಾಗಿದೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 121 ದೇಶಗಳಲ್ಲಿ ಭಾರತದ ಸ್ಥಾನ 107. ಹಸಿವಿನಿಂದ ನರಳುತ್ತಿರುವ ಶೇಕಡಾವಾರು ಜನಸಂಖ್ಯೆಯನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಭಾರತ ನೆರೆಯ ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳಿಗಿಂತ ದುಸ್ಥಿತಿಯಲ್ಲಿದೆ. ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳು ಮತ್ತು ಮಹಿಳೆಯರ ಸಂಖ್ಯೆ ಆಫ್ರಿಕಾದ ಬಡರಾಷ್ಟ್ರಗಳಿಗಿಂತ ಇಂಡಿಯಾದಲ್ಲಿ ಹೆಚ್ಚಾಗಿದೆ. ಮೇ 2022ರ ಯೂನಿಸೆಫ್ ಅಂಕಿಅಂಶಗಳ ಪ್ರಕಾರ ತೀವ್ರ ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಅತಿ ಹೆಚ್ಚು ಇರುವುದು ಇಂಡಿಯಾದಲ್ಲಿ.

ಆಕ್ಸ್‌ಫಾಮ್ 2023ರ ವರದಿಯಂತೆ ಇಂಡಿಯಾದಲ್ಲಿ ಶೇ.1 ಶ್ರೀಮಂತರು ಈ ದೇಶದ ಶೇ.40 ಆಸ್ತಿಯನ್ನು ಹೊಂದಿದ್ದಾರೆ.

ವಾಸ್ತವ ಹೀಗಿರುವಾಗ ಕೇಂದ್ರ ಸರ್ಕಾರದ ಬಜೆಟ್ ಯಾವುದರ ಮೇಲೆ ಹೆಚ್ಚಿನ ಗಮನ ಕೊಡಬೇಕಿತ್ತು? ಬಜೆಟ್ ಅಂದರೆ ನಮಗೆಲ್ಲಾ ತಿಳಿದಿರುವಂತೆ ಆಯಾ ವರ್ಷದ ಖರ್ಚು ಮತ್ತು ಆದಾಯದ ಸ್ಟೇಟ್‌ಮೆಂಟ್. ಯಾವುದಕ್ಕೆ ಎಷ್ಟು ಹಣ ಕೊಡಲಾಗುತ್ತಿದೆ ಎಂಬುದರ ಮೇಲೆ ಬಜೆಟ್‌ನ ಮತ್ತು ಆ ಮೂಲಕ ಕೇಂದ್ರ ಸರ್ಕಾರದ ಆದ್ಯತೆಯನ್ನು ಸುಲಭವಾಗಿ ಗುರುತಿಸಬಹುದು.

ಮೇಲಿನ ವಾಸ್ತವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಮತ್ತು ಎಲ್ಲರಿಗೂ ಪೌಷ್ಟಿಕ ಆಹಾರದ ಲಭ್ಯತೆಯನ್ನು ಖಚಿತಪಡಿಸಿ, ಅಪೌಷ್ಟಿಕತೆ ನಿವಾರಣೆಗೆ ಒತ್ತುನೀಡಬೇಕಾಗಿತ್ತು. ದೇಶದಲ್ಲಿ ಬಡವ ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಡವರ ಆದಾಯ ಮತ್ತು ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸುವತ್ತ ಬಜೆಟ್ ಕ್ರಮ ಕೈಗೊಳ್ಳಬೇಕಿತ್ತು.

ಆದರೆ, ಈ ಬಾರಿಯ ಬಜೆಟ್‌ನಲ್ಲಿ ಹಣದ ಹಂಚಿಕೆಯನ್ನು ಗಮನಿಸಿದಾಗ, ಅತ್ಯಂತ ಸ್ಪಷ್ಟವಾಗಿ ಈ ಬಜೆಟ್ ಶ್ರೀಮಂತರ ಪರವಾದ ಮತ್ತು ಬಡವರನ್ನು ಮತ್ತಷ್ಟು ಬಡವರನ್ನಾಗಿಸುವ ಬಜೆಟ್ ಎಂದು ಗೊತ್ತಾಗುತ್ತದೆ.

ಏರುತ್ತಿರುವ ನಿರುದ್ಯೋಗದ ಹಿನ್ನೆಲೆಯಲ್ಲಿ, ಹಲವು ಆರ್ಥಿಕ ತಜ್ಞರ ಅಭಿಪ್ರಾಯದಂತೆ ಈ ಬಾರಿಯ ಬಜೆಟ್‌ನಲ್ಲಿ ನಗರ ಉದ್ಯೋಗ ಖಾತರಿ ಯೋಜನೆಯನ್ನು ಆರಂಭಿಸಬೇಕಾಗಿತ್ತು. ಆದರೆ ನಗರ ಉದ್ಯೋಗ ಖಾತರಿ ಯೋಜನೆ ಆರಂಭಿಸುವುದಿರಿಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹಣಕ್ಕೇ ಕತ್ತರಿ ಹಾಕಲಾಗಿದೆ. (ಹೋದವರ್ಷದ ರೂ. 89.000 ಕೋಟಿಯಿಂದ -Revised estimate- ಈ ವರ್ಷ ಕೇವಲ ರೂ 60,000 ಕೋಟಿಗೆ.)

ವಿಶ್ವಬ್ಯಾಂಕ್ ಆರ್ಥಿಕ ತಜ್ಞರ ಪ್ರಕಾರ ಕನಿಷ್ಠ ರೂ.3.4 ಲಕ್ಷಕೋಟಿಯಷ್ಟು (1.6% of GDP) ಹಣವನ್ನು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮೀಸಲಿಟ್ಟರೆ ಮಾತ್ರ ಅಗತ್ಯವಿರುವ 8 ಕೋಟಿಗಿಂತ ಹೆಚ್ಚು ಕುಟುಂಬಗಳಿಗೆ ವಾರ್ಷಿಕ ನೂರು ದಿನಗಳಷ್ಟು ಉದ್ಯೋಗ ನೀಡಲು ಸಾಧ್ಯ. ಈಗ ಹಂಚಿಕೆ ಮಾಡಿರುವ ರೂ.60,000 ಕೋಟಿಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ 20 ದಿನಗಳಷ್ಟು ಕೆಲಸ ಕೊಡಲು ಕೂಡ ಸಾಧ್ಯವಿಲ್ಲ.

ಇದನ್ನೂ ಓದಿ: ‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

ಸರ್ಕಾರ ಈ ಬಾರಿ ಅತಿ ಹೆಚ್ಚು, ಅಂದರೆ ರೂ.10 ಲಕ್ಷ ಕೋಟಿ ಹಣವನ್ನು ರಸ್ತೆ, ಬಂದರು, ವಿಮಾನ ನಿಲ್ದಾಣ, ರೈಲ್ವೆಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ಹೂಡಿಕೆ ಮಾಡುತ್ತಿದ್ದು ಅದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತದೆಯೆಂದು ಹೇಳುತ್ತಿದೆ. ಆದರೆ, ಕಳೆದ ವರ್ಷ ಮೂಲಸೌಕರ್ಯ ಅಭಿವೃದ್ದಿಗೆ ರೂ.7.5 ಲಕ್ಷ ಕೋಟಿ (2021ರ ಬಜೆಟ್‌ಗಿಂತ 35% ಹೆಚ್ಚು) ಹಣ ಹಂಚಿಕೆ ಮಾಡಲಾಗಿದ್ದರೂ 2022ರ ಕೊನೆಯಲ್ಲಿ ಅತಿಹೆಚ್ಚು ನಿರುದ್ಯೋಗ ತಾಂಡವವಾಡುತ್ತಿರುವುದು ಬೇರೆ ಕಥೆಯನ್ನು ಹೇಳುತ್ತದೆ; ಈ ರೀತಿಯ ಬಂಡವಾಳ ಹೂಡಿಕೆ ಉದ್ಯೋಗ ಸೃಷ್ಟಿ ಮಾಡಿಲ್ಲವೆಂದು ಸ್ಪಷ್ಟಪಡಿಸುತ್ತಿದೆ. ಕಾರಣ, ಇತ್ತೀಚಿನ ವರ್ಷಗಳಲ್ಲಿ ಈ ರೀತಿಯ ಮೂಲಸೌಕರ್ಯ ಅಭಿವೃದ್ದಿಯ ಕೆಲಸಗಳಲ್ಲಿ ಆದಷ್ಟೂ ದೊಡ್ಡ ಯಂತ್ರಗಳನ್ನು ಬಳಸಿಕೊಳ್ಳುತ್ತಿರುವುದರಿಂದ ಉದ್ಯೋಗ ಸೃಷ್ಟಿ ಪ್ರಮಾಣ ಜಾಸ್ತಿ ಇರುವುದಿಲ್ಲ. ಆದುದರಿಂದ, ಈ ರೂ.10 ಲಕ್ಷ ಕೋಟಿಯ ಹೂಡಿಕೆ ಮುಂದಿನ ವರ್ಷಗಳಲ್ಲಿ ಖಾಸಗಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಿದೆಯೇ ಹೊರತು ಅಗತ್ಯವಿರುವಷ್ಟು ಉದ್ಯೋಗ ಸೃಷ್ಟಿ ಮಾಡುವುದಿಲ್ಲ.

ಇಂತಹ ಕಟು ವಾಸ್ತವದಲ್ಲಿ, ಒಂದು ಕಡೆ ನಗರ ಉದ್ಯೋಗ ಖಾತ್ರಿ ಯೋಜನೆಯಂಥದ್ದನ್ನೇನೂ ಮಾಡದೆ, ಮತ್ತೊಂದು ಕಡೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಭಾರೀ ಹಣ ಕಡಿತ ಮಾಡಿರುವುದು ಕೇಂದ್ರ ಸರ್ಕಾರದ ಬಜೆಟ್ ಶ್ರೀಮಂತ ಉದ್ಯಮಪತಿಗಳ ಪರವಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಮತ್ತು ದೇಶದಲ್ಲಿ ಅಪೌಷ್ಟಿಕತೆಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶದ ಬಹುಸಂಖ್ಯಾತರಿಗೆ (ಈ ದೇಶದಲ್ಲಿ ಮಧ್ಯಮ ವರ್ಗ ಕೂಡ ಅಪೌಷ್ಟಿಕತೆಯಿಂದ ನರಳುತ್ತಿದೆ) ಪೌಷ್ಟಿಕ ಆಹಾರ ಲಭ್ಯತೆಯನ್ನು ಖಾತರಿಪಡಿಸುವ ಯೋಜನೆಗೆ ಇನ್ನೂ ಹೆಚ್ಚಿನ ಹಣ ಹಂಚಿಕೆ ಮಾಡಬೇಕಾಗಿತ್ತು. ಆದರೆ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಆಹಾರ ಸಬ್ಸಿಡಿಗೆ ಕಳೆದ ವರ್ಷ ಕೊಟ್ಟಿದ್ದ ಹಣದಲ್ಲಿ ರೂ.90000 ಕೋಟಿಯಷ್ಟು ಭಾರೀ ಕಡಿತ ಮಾಡಿರುವುದು ಈ ಸರ್ಕಾರದ ಆದ್ಯತೆ ಶ್ರೀಮಂತರೇ ಹೊರತು ಬಡವರಲ್ಲ ಎಂಬುದನ್ನು ಮತ್ತೆಮತ್ತೆ ಎತ್ತಿತೋರಿಸುತ್ತದೆ.

ಕಳೆದ ವರ್ಷ ಆಹಾರ ಸಬ್ಸಿಡಿಗೆ ರೂ.2,87,000 ಕೋಟಿ ವ್ಯಯಿಸಿದ್ದರೆ (Revised estimate) ಈ ಬಜೆಟ್‌ನಲ್ಲಿ ಹಂಚಿಕೆ ಮಾಡಿರುವುದು ಕೇವಲ ರೂ.1.97.000 ಕೋಟಿ. ಇದರಿಂದ ರೈತರು ಬೆಳೆದ ಆಹಾರ ಧಾನ್ಯಗಳನ್ನು ಸರ್ಕಾರ ಖರೀದಿ ಮಾಡುವ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿ, ರೈತರ ಆದಾಯವೂ ಇದರಿಂದ ಗಣನೀಯವಾಗಿ ಕುಸಿಯಲಿದೆ.

ಈ ದೇಶದ ರೈತರ ಪೈಕಿ ಶೇ.82ರಷ್ಟು ರೈತರು ಎರಡು ಹೆಕ್ಟೇರಿಗಿಂತ ಕಡಿಮೆ ಜಮೀನು ಹೊಂದಿರುವ ಸಣ್ಣ ರೈತರಾಗಿದ್ದಾರೆ. ಅವರೂ ಸೇರಿದಂತೆ ಎಲ್ಲಾ ರೈತರಿಗೆ ಕೊಡುತ್ತಿದ್ದ ರಸಗೊಬ್ಬರ ಸಬ್ಸಿಡಿಯಲ್ಲಿ ಕಳೆದ ವರ್ಷಕ್ಕಿಂತ ಶೇ.21ರಷ್ಟು ಹಣ ಕಡಿತ ಮಾಡಲಾಗಿದೆ. ರೈತರು ಬೆಳೆದ ಬೆಳೆಗಳ ಬೆಲೆಗಳು ಮಾರುಕಟ್ಟೆಯಲ್ಲಿ ದಿಢೀರ್ ಕುಸಿತಗೊಂಡ ಸನ್ನಿವೇಶದಲ್ಲಿ ಅವರಿಗೆ ಬೆಂಬಲ ಬೆಲೆಯ ರೂಪದಲ್ಲಿ ಸಹಾಯ ಮಾಡಲು Market intervention scheme ಅಡಿಯಲ್ಲಿ ಕಳೆದ ವರ್ಷ ಕೊಡಲಾಗಿದ್ದ ರೂ.1500 ಕೋಟಿ ರೂಪಾಯಿಗಳನ್ನು ಈ ಬಜೆಟ್‌ನಲ್ಲಿ ಕೇವಲ ಒಂದು ಲಕ್ಷ ರೂಪಾಯಿಗೆ ಇಳಿಸಲಾಗಿದೆ. ಹೀಗೆ ಮಾಡಿ ರೈತರನ್ನು ಅವಮಾನಿಸುವುದಕ್ಕಿಂತ ಆ ಯೋಜನೆಯನ್ನೇ ರದ್ದುಮಾಡುವುದು ಬೆಟರ್ ಆಗಿತ್ತಲ್ಲವೇ ಎಂದು ಯಾರಿಗೇ ಆದರೂ ಅನಿಸದೇ ಇರದು.

ಆರೋಗ್ಯ ಕ್ಷೇತ್ರಕ್ಕೆ ಕಳೆದ ವರ್ಷಕ್ಕಿಂತ ಹತ್ತಿರಹತ್ತಿರ ಮೂರು ಸಾವಿರ ಕೋಟಿಯಷ್ಟು ಹಂಚಿಕೆಯನ್ನು ಹೆಚ್ಚಿಸಲಾಗಿದ್ದು (Approximately from Rs. 86,606 crores to 88,956 crores) ಈ ಹೆಚ್ಚಳ ಕೇವಲ ಶೇ.2.7ರಷ್ಟಾಗಿದೆ. ಆದರೆ 5.5% ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡರೆ ಹೋದವರ್ಷಕ್ಕಿಂತ ಅಂದಾಜು ಶೇ.2.5ರಷ್ಟು ಕಡಿಮೆ ಹಣವನ್ನು ಆರೋಗ್ಯ ಕ್ಷೇತ್ರಕ್ಕೆ ಕೊಟ್ಟಂತಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ರೂ.1,12,000 ಕೋಟಿ (ಕಳೆದ ವರ್ಷ ರೂ.99,000 ಕೋಟಿ) ಕೊಟ್ಟಿದ್ದರೂ ಇದು GDPಯ ಕೇವಲ ಶೇ.0.5 ಆಗಿದೆ.

ಬಾಜಾಭಜಂತ್ರಿ ಬಾರಿಸಿಕೊಂಡು ಜಾರಿ ತಂದ NEP (New education policy) ಪ್ರಕಾರವೇ ದೇಶ ಶೈಕ್ಷಣಿಕವಾಗಿ ಮುಂದುವರೆಯಬೇಕಾದರೆ ಶಿಕ್ಷಣಕ್ಕೆ GDPಯ ಕನಿಷ್ಟ 6% ಹಣ ಬಜೆಟ್‌ನಲ್ಲಿ ಮೀಸಲಿಡಬೇಕಿದೆ; ತಾನೇ ಜಾರಿ ತಂದ NEPಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ಸರ್ಕಾರ ಪ್ರಯತ್ನಿಸುತ್ತಿಲ್ಲವೆಂಬುದು ಅತ್ಯಂತ ಸ್ಪಷ್ಟವಾಗುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಕಳೆದ ವರ್ಷಕ್ಕಿಂತ ಸುಮಾರು ರೂ.800 ಕೋಟಿಗಳಷ್ಟು ಕಡಿತ ಮಾಡಲಾಗಿದೆ.

ಹೀಗೆ ಒಂದು ಕಡೆ ಉದ್ಯೋಗ ಸೃಷ್ಟಿಗೂ ಒತ್ತುಕೊಡದೆ, ರೈತರ ಆದಾಯ ವೃದ್ಧಿಯನ್ನೂ ಕಡೆಗಣಿಸಿ, ಬಡವರ ಬದುಕಿನ ಮಟ್ಟದ ಸುಧಾರಣೆಗೂ ಕವಡೆ ಕಿಮ್ಮತ್ತು ನೀಡದ ಈ ಬಜೆಟ್ ಶ್ರೀಮಂತರ ವೆಚ್ಚವನ್ನು ಕಡಿಮೆ ಮಾಡಿ ಅವರಿಗೆ ಮತ್ತಷ್ಟು ಮಗದಷ್ಟು ಅನುಕೂಲಗಳನ್ನು ಮಾಡಿಕೊಡುವ ಕಡೆ ಗಮನಹರಿಸಿದೆ.

ದೊಡ್ಡ ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವುದನ್ನು ಈ ಬಜೆಟ್ ಮುಂದುವರಿಸಿದೆ. (ಉದಾಹರಣೆಗೆ 2019ರಲ್ಲಿ ಕಾರ್ಪೋರೇಟ್ ಟ್ಯಾಕ್ಸ್‌ಅನ್ನು 30%ನಿಂದ 22%ಕ್ಕೆ ಇಳಿಸಿದ್ದನ್ನು ನೆನಪಿಸಿಕೊಳ್ಳಬಹುದು.) ಅವರುಗಳು ಹೆಚ್ಚು ಬಂಡವಾಳ ಹೂಡಿಕೆ ಮಾಡಿ, ಅದರಿಂದ ಉದ್ಯೋಗ ಸೃಷ್ಟಿ ಆಗುತ್ತದೆ ಎಂಬ ನಂಬಿಕೆಯೊಂದಿಗೆ ಸರ್ಕಾರ ಕಳೆದ ಎಂಟು ವರ್ಷಗಳಿಂದ ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲಗಳ ಹೊಳೆಯನ್ನೇ ಹರಿಸುತ್ತಿದೆ. ಆದರೆ, ಅದಕ್ಕೆ ತಕ್ಕ ಹಾಗೆ ಖಾಸಗಿ ಬಂಡವಾಳ ಹೂಡಿಕೆಯಾಗಲೀ, ಉದ್ಯೋಗ ಸೃಷ್ಟಿಯಾಗಲೀ ದೊಡ್ಡ ಕಾರ್ಪೋರೆಟ್ ಕಂಪನಿಗಳಿಂದ ಆಗಿಲ್ಲ ಎಂಬುದು ವಾಸ್ತವ.

ಈ ಬಾರಿಯೂ ವಾರ್ಷಿಕ ಐದು ಕೋಟಿಗಿಂತ ಹೆಚ್ಚು ಆದಾಯವಿರುವ ಶ್ರೀಮಂತರ ಆದಾಯ ತೆರಿಗೆ ಮೇಲೆ ವಿಧಿಸುತ್ತಿದ್ದ ಸೆಸ್‌ಅನ್ನು 37%ರಿಂದ 25%ಕ್ಕೆ ಇಳಿಸಲಾಗಿದೆ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್‌ನಲ್ಲಿ ಅತ್ಯಂತ ಸ್ಪಷ್ಟವಾಗಿ ಸರ್ಕಾರ ತಾನು ಉಳ್ಳವರ ಪರವೆಂದು ತೋರಿಸಿಕೊಂಡಿದೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...