Homeಮುಖಪುಟಕೇಂದ್ರ ಬಜೆಟ್ 2023: ಶ್ರೀಮಂತರಿಗಾಗಿ, ಶ್ರೀಮಂತರಿಂದ, ಶ್ರೀಮಂತರಿಗೋಸ್ಕರ

ಕೇಂದ್ರ ಬಜೆಟ್ 2023: ಶ್ರೀಮಂತರಿಗಾಗಿ, ಶ್ರೀಮಂತರಿಂದ, ಶ್ರೀಮಂತರಿಗೋಸ್ಕರ

- Advertisement -
- Advertisement -

ಕಳೆದ ಡಿಸೆಂಬರ್ 2022ರ CMIE (Centre for monitoring Indian economy) ವರದಿ ಪ್ರಕಾರ ಭಾರತದಲ್ಲಿ ಗ್ರಾಮೀಣ ಭಾಗದ ನಿರುದ್ಯೋಗ ಶೇ.8.3 ಮತ್ತು ನಗರ ಭಾಗದ ನಿರುದ್ಯೋಗ ದರ ಶೇ.10. ಇದು ಸ್ವತಂತ್ರ ಭಾರತದ ಇತಿಹಾಸದಲ್ಲೇ ಅತಿ ಹೆಚ್ಚಿನ ನಿರುದ್ಯೋಗ ದರ.

ಅಂದರೆ, ಭಾರತದಲ್ಲಿ ದಿನೇದಿನೇ ನಿರುದ್ಯೋಗ ಹೆಚ್ಚುತ್ತಿದೆ ಎಂಬುದು ನಿಚ್ಚಳವಾಗಿದೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 121 ದೇಶಗಳಲ್ಲಿ ಭಾರತದ ಸ್ಥಾನ 107. ಹಸಿವಿನಿಂದ ನರಳುತ್ತಿರುವ ಶೇಕಡಾವಾರು ಜನಸಂಖ್ಯೆಯನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಭಾರತ ನೆರೆಯ ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳಿಗಿಂತ ದುಸ್ಥಿತಿಯಲ್ಲಿದೆ. ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳು ಮತ್ತು ಮಹಿಳೆಯರ ಸಂಖ್ಯೆ ಆಫ್ರಿಕಾದ ಬಡರಾಷ್ಟ್ರಗಳಿಗಿಂತ ಇಂಡಿಯಾದಲ್ಲಿ ಹೆಚ್ಚಾಗಿದೆ. ಮೇ 2022ರ ಯೂನಿಸೆಫ್ ಅಂಕಿಅಂಶಗಳ ಪ್ರಕಾರ ತೀವ್ರ ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಅತಿ ಹೆಚ್ಚು ಇರುವುದು ಇಂಡಿಯಾದಲ್ಲಿ.

ಆಕ್ಸ್‌ಫಾಮ್ 2023ರ ವರದಿಯಂತೆ ಇಂಡಿಯಾದಲ್ಲಿ ಶೇ.1 ಶ್ರೀಮಂತರು ಈ ದೇಶದ ಶೇ.40 ಆಸ್ತಿಯನ್ನು ಹೊಂದಿದ್ದಾರೆ.

ವಾಸ್ತವ ಹೀಗಿರುವಾಗ ಕೇಂದ್ರ ಸರ್ಕಾರದ ಬಜೆಟ್ ಯಾವುದರ ಮೇಲೆ ಹೆಚ್ಚಿನ ಗಮನ ಕೊಡಬೇಕಿತ್ತು? ಬಜೆಟ್ ಅಂದರೆ ನಮಗೆಲ್ಲಾ ತಿಳಿದಿರುವಂತೆ ಆಯಾ ವರ್ಷದ ಖರ್ಚು ಮತ್ತು ಆದಾಯದ ಸ್ಟೇಟ್‌ಮೆಂಟ್. ಯಾವುದಕ್ಕೆ ಎಷ್ಟು ಹಣ ಕೊಡಲಾಗುತ್ತಿದೆ ಎಂಬುದರ ಮೇಲೆ ಬಜೆಟ್‌ನ ಮತ್ತು ಆ ಮೂಲಕ ಕೇಂದ್ರ ಸರ್ಕಾರದ ಆದ್ಯತೆಯನ್ನು ಸುಲಭವಾಗಿ ಗುರುತಿಸಬಹುದು.

ಮೇಲಿನ ವಾಸ್ತವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಮತ್ತು ಎಲ್ಲರಿಗೂ ಪೌಷ್ಟಿಕ ಆಹಾರದ ಲಭ್ಯತೆಯನ್ನು ಖಚಿತಪಡಿಸಿ, ಅಪೌಷ್ಟಿಕತೆ ನಿವಾರಣೆಗೆ ಒತ್ತುನೀಡಬೇಕಾಗಿತ್ತು. ದೇಶದಲ್ಲಿ ಬಡವ ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಡವರ ಆದಾಯ ಮತ್ತು ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸುವತ್ತ ಬಜೆಟ್ ಕ್ರಮ ಕೈಗೊಳ್ಳಬೇಕಿತ್ತು.

ಆದರೆ, ಈ ಬಾರಿಯ ಬಜೆಟ್‌ನಲ್ಲಿ ಹಣದ ಹಂಚಿಕೆಯನ್ನು ಗಮನಿಸಿದಾಗ, ಅತ್ಯಂತ ಸ್ಪಷ್ಟವಾಗಿ ಈ ಬಜೆಟ್ ಶ್ರೀಮಂತರ ಪರವಾದ ಮತ್ತು ಬಡವರನ್ನು ಮತ್ತಷ್ಟು ಬಡವರನ್ನಾಗಿಸುವ ಬಜೆಟ್ ಎಂದು ಗೊತ್ತಾಗುತ್ತದೆ.

ಏರುತ್ತಿರುವ ನಿರುದ್ಯೋಗದ ಹಿನ್ನೆಲೆಯಲ್ಲಿ, ಹಲವು ಆರ್ಥಿಕ ತಜ್ಞರ ಅಭಿಪ್ರಾಯದಂತೆ ಈ ಬಾರಿಯ ಬಜೆಟ್‌ನಲ್ಲಿ ನಗರ ಉದ್ಯೋಗ ಖಾತರಿ ಯೋಜನೆಯನ್ನು ಆರಂಭಿಸಬೇಕಾಗಿತ್ತು. ಆದರೆ ನಗರ ಉದ್ಯೋಗ ಖಾತರಿ ಯೋಜನೆ ಆರಂಭಿಸುವುದಿರಿಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹಣಕ್ಕೇ ಕತ್ತರಿ ಹಾಕಲಾಗಿದೆ. (ಹೋದವರ್ಷದ ರೂ. 89.000 ಕೋಟಿಯಿಂದ -Revised estimate- ಈ ವರ್ಷ ಕೇವಲ ರೂ 60,000 ಕೋಟಿಗೆ.)

ವಿಶ್ವಬ್ಯಾಂಕ್ ಆರ್ಥಿಕ ತಜ್ಞರ ಪ್ರಕಾರ ಕನಿಷ್ಠ ರೂ.3.4 ಲಕ್ಷಕೋಟಿಯಷ್ಟು (1.6% of GDP) ಹಣವನ್ನು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮೀಸಲಿಟ್ಟರೆ ಮಾತ್ರ ಅಗತ್ಯವಿರುವ 8 ಕೋಟಿಗಿಂತ ಹೆಚ್ಚು ಕುಟುಂಬಗಳಿಗೆ ವಾರ್ಷಿಕ ನೂರು ದಿನಗಳಷ್ಟು ಉದ್ಯೋಗ ನೀಡಲು ಸಾಧ್ಯ. ಈಗ ಹಂಚಿಕೆ ಮಾಡಿರುವ ರೂ.60,000 ಕೋಟಿಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ 20 ದಿನಗಳಷ್ಟು ಕೆಲಸ ಕೊಡಲು ಕೂಡ ಸಾಧ್ಯವಿಲ್ಲ.

ಇದನ್ನೂ ಓದಿ: ‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

ಸರ್ಕಾರ ಈ ಬಾರಿ ಅತಿ ಹೆಚ್ಚು, ಅಂದರೆ ರೂ.10 ಲಕ್ಷ ಕೋಟಿ ಹಣವನ್ನು ರಸ್ತೆ, ಬಂದರು, ವಿಮಾನ ನಿಲ್ದಾಣ, ರೈಲ್ವೆಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ಹೂಡಿಕೆ ಮಾಡುತ್ತಿದ್ದು ಅದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತದೆಯೆಂದು ಹೇಳುತ್ತಿದೆ. ಆದರೆ, ಕಳೆದ ವರ್ಷ ಮೂಲಸೌಕರ್ಯ ಅಭಿವೃದ್ದಿಗೆ ರೂ.7.5 ಲಕ್ಷ ಕೋಟಿ (2021ರ ಬಜೆಟ್‌ಗಿಂತ 35% ಹೆಚ್ಚು) ಹಣ ಹಂಚಿಕೆ ಮಾಡಲಾಗಿದ್ದರೂ 2022ರ ಕೊನೆಯಲ್ಲಿ ಅತಿಹೆಚ್ಚು ನಿರುದ್ಯೋಗ ತಾಂಡವವಾಡುತ್ತಿರುವುದು ಬೇರೆ ಕಥೆಯನ್ನು ಹೇಳುತ್ತದೆ; ಈ ರೀತಿಯ ಬಂಡವಾಳ ಹೂಡಿಕೆ ಉದ್ಯೋಗ ಸೃಷ್ಟಿ ಮಾಡಿಲ್ಲವೆಂದು ಸ್ಪಷ್ಟಪಡಿಸುತ್ತಿದೆ. ಕಾರಣ, ಇತ್ತೀಚಿನ ವರ್ಷಗಳಲ್ಲಿ ಈ ರೀತಿಯ ಮೂಲಸೌಕರ್ಯ ಅಭಿವೃದ್ದಿಯ ಕೆಲಸಗಳಲ್ಲಿ ಆದಷ್ಟೂ ದೊಡ್ಡ ಯಂತ್ರಗಳನ್ನು ಬಳಸಿಕೊಳ್ಳುತ್ತಿರುವುದರಿಂದ ಉದ್ಯೋಗ ಸೃಷ್ಟಿ ಪ್ರಮಾಣ ಜಾಸ್ತಿ ಇರುವುದಿಲ್ಲ. ಆದುದರಿಂದ, ಈ ರೂ.10 ಲಕ್ಷ ಕೋಟಿಯ ಹೂಡಿಕೆ ಮುಂದಿನ ವರ್ಷಗಳಲ್ಲಿ ಖಾಸಗಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಿದೆಯೇ ಹೊರತು ಅಗತ್ಯವಿರುವಷ್ಟು ಉದ್ಯೋಗ ಸೃಷ್ಟಿ ಮಾಡುವುದಿಲ್ಲ.

ಇಂತಹ ಕಟು ವಾಸ್ತವದಲ್ಲಿ, ಒಂದು ಕಡೆ ನಗರ ಉದ್ಯೋಗ ಖಾತ್ರಿ ಯೋಜನೆಯಂಥದ್ದನ್ನೇನೂ ಮಾಡದೆ, ಮತ್ತೊಂದು ಕಡೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಭಾರೀ ಹಣ ಕಡಿತ ಮಾಡಿರುವುದು ಕೇಂದ್ರ ಸರ್ಕಾರದ ಬಜೆಟ್ ಶ್ರೀಮಂತ ಉದ್ಯಮಪತಿಗಳ ಪರವಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಮತ್ತು ದೇಶದಲ್ಲಿ ಅಪೌಷ್ಟಿಕತೆಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶದ ಬಹುಸಂಖ್ಯಾತರಿಗೆ (ಈ ದೇಶದಲ್ಲಿ ಮಧ್ಯಮ ವರ್ಗ ಕೂಡ ಅಪೌಷ್ಟಿಕತೆಯಿಂದ ನರಳುತ್ತಿದೆ) ಪೌಷ್ಟಿಕ ಆಹಾರ ಲಭ್ಯತೆಯನ್ನು ಖಾತರಿಪಡಿಸುವ ಯೋಜನೆಗೆ ಇನ್ನೂ ಹೆಚ್ಚಿನ ಹಣ ಹಂಚಿಕೆ ಮಾಡಬೇಕಾಗಿತ್ತು. ಆದರೆ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಆಹಾರ ಸಬ್ಸಿಡಿಗೆ ಕಳೆದ ವರ್ಷ ಕೊಟ್ಟಿದ್ದ ಹಣದಲ್ಲಿ ರೂ.90000 ಕೋಟಿಯಷ್ಟು ಭಾರೀ ಕಡಿತ ಮಾಡಿರುವುದು ಈ ಸರ್ಕಾರದ ಆದ್ಯತೆ ಶ್ರೀಮಂತರೇ ಹೊರತು ಬಡವರಲ್ಲ ಎಂಬುದನ್ನು ಮತ್ತೆಮತ್ತೆ ಎತ್ತಿತೋರಿಸುತ್ತದೆ.

ಕಳೆದ ವರ್ಷ ಆಹಾರ ಸಬ್ಸಿಡಿಗೆ ರೂ.2,87,000 ಕೋಟಿ ವ್ಯಯಿಸಿದ್ದರೆ (Revised estimate) ಈ ಬಜೆಟ್‌ನಲ್ಲಿ ಹಂಚಿಕೆ ಮಾಡಿರುವುದು ಕೇವಲ ರೂ.1.97.000 ಕೋಟಿ. ಇದರಿಂದ ರೈತರು ಬೆಳೆದ ಆಹಾರ ಧಾನ್ಯಗಳನ್ನು ಸರ್ಕಾರ ಖರೀದಿ ಮಾಡುವ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿ, ರೈತರ ಆದಾಯವೂ ಇದರಿಂದ ಗಣನೀಯವಾಗಿ ಕುಸಿಯಲಿದೆ.

ಈ ದೇಶದ ರೈತರ ಪೈಕಿ ಶೇ.82ರಷ್ಟು ರೈತರು ಎರಡು ಹೆಕ್ಟೇರಿಗಿಂತ ಕಡಿಮೆ ಜಮೀನು ಹೊಂದಿರುವ ಸಣ್ಣ ರೈತರಾಗಿದ್ದಾರೆ. ಅವರೂ ಸೇರಿದಂತೆ ಎಲ್ಲಾ ರೈತರಿಗೆ ಕೊಡುತ್ತಿದ್ದ ರಸಗೊಬ್ಬರ ಸಬ್ಸಿಡಿಯಲ್ಲಿ ಕಳೆದ ವರ್ಷಕ್ಕಿಂತ ಶೇ.21ರಷ್ಟು ಹಣ ಕಡಿತ ಮಾಡಲಾಗಿದೆ. ರೈತರು ಬೆಳೆದ ಬೆಳೆಗಳ ಬೆಲೆಗಳು ಮಾರುಕಟ್ಟೆಯಲ್ಲಿ ದಿಢೀರ್ ಕುಸಿತಗೊಂಡ ಸನ್ನಿವೇಶದಲ್ಲಿ ಅವರಿಗೆ ಬೆಂಬಲ ಬೆಲೆಯ ರೂಪದಲ್ಲಿ ಸಹಾಯ ಮಾಡಲು Market intervention scheme ಅಡಿಯಲ್ಲಿ ಕಳೆದ ವರ್ಷ ಕೊಡಲಾಗಿದ್ದ ರೂ.1500 ಕೋಟಿ ರೂಪಾಯಿಗಳನ್ನು ಈ ಬಜೆಟ್‌ನಲ್ಲಿ ಕೇವಲ ಒಂದು ಲಕ್ಷ ರೂಪಾಯಿಗೆ ಇಳಿಸಲಾಗಿದೆ. ಹೀಗೆ ಮಾಡಿ ರೈತರನ್ನು ಅವಮಾನಿಸುವುದಕ್ಕಿಂತ ಆ ಯೋಜನೆಯನ್ನೇ ರದ್ದುಮಾಡುವುದು ಬೆಟರ್ ಆಗಿತ್ತಲ್ಲವೇ ಎಂದು ಯಾರಿಗೇ ಆದರೂ ಅನಿಸದೇ ಇರದು.

ಆರೋಗ್ಯ ಕ್ಷೇತ್ರಕ್ಕೆ ಕಳೆದ ವರ್ಷಕ್ಕಿಂತ ಹತ್ತಿರಹತ್ತಿರ ಮೂರು ಸಾವಿರ ಕೋಟಿಯಷ್ಟು ಹಂಚಿಕೆಯನ್ನು ಹೆಚ್ಚಿಸಲಾಗಿದ್ದು (Approximately from Rs. 86,606 crores to 88,956 crores) ಈ ಹೆಚ್ಚಳ ಕೇವಲ ಶೇ.2.7ರಷ್ಟಾಗಿದೆ. ಆದರೆ 5.5% ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡರೆ ಹೋದವರ್ಷಕ್ಕಿಂತ ಅಂದಾಜು ಶೇ.2.5ರಷ್ಟು ಕಡಿಮೆ ಹಣವನ್ನು ಆರೋಗ್ಯ ಕ್ಷೇತ್ರಕ್ಕೆ ಕೊಟ್ಟಂತಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ರೂ.1,12,000 ಕೋಟಿ (ಕಳೆದ ವರ್ಷ ರೂ.99,000 ಕೋಟಿ) ಕೊಟ್ಟಿದ್ದರೂ ಇದು GDPಯ ಕೇವಲ ಶೇ.0.5 ಆಗಿದೆ.

ಬಾಜಾಭಜಂತ್ರಿ ಬಾರಿಸಿಕೊಂಡು ಜಾರಿ ತಂದ NEP (New education policy) ಪ್ರಕಾರವೇ ದೇಶ ಶೈಕ್ಷಣಿಕವಾಗಿ ಮುಂದುವರೆಯಬೇಕಾದರೆ ಶಿಕ್ಷಣಕ್ಕೆ GDPಯ ಕನಿಷ್ಟ 6% ಹಣ ಬಜೆಟ್‌ನಲ್ಲಿ ಮೀಸಲಿಡಬೇಕಿದೆ; ತಾನೇ ಜಾರಿ ತಂದ NEPಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ಸರ್ಕಾರ ಪ್ರಯತ್ನಿಸುತ್ತಿಲ್ಲವೆಂಬುದು ಅತ್ಯಂತ ಸ್ಪಷ್ಟವಾಗುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಕಳೆದ ವರ್ಷಕ್ಕಿಂತ ಸುಮಾರು ರೂ.800 ಕೋಟಿಗಳಷ್ಟು ಕಡಿತ ಮಾಡಲಾಗಿದೆ.

ಹೀಗೆ ಒಂದು ಕಡೆ ಉದ್ಯೋಗ ಸೃಷ್ಟಿಗೂ ಒತ್ತುಕೊಡದೆ, ರೈತರ ಆದಾಯ ವೃದ್ಧಿಯನ್ನೂ ಕಡೆಗಣಿಸಿ, ಬಡವರ ಬದುಕಿನ ಮಟ್ಟದ ಸುಧಾರಣೆಗೂ ಕವಡೆ ಕಿಮ್ಮತ್ತು ನೀಡದ ಈ ಬಜೆಟ್ ಶ್ರೀಮಂತರ ವೆಚ್ಚವನ್ನು ಕಡಿಮೆ ಮಾಡಿ ಅವರಿಗೆ ಮತ್ತಷ್ಟು ಮಗದಷ್ಟು ಅನುಕೂಲಗಳನ್ನು ಮಾಡಿಕೊಡುವ ಕಡೆ ಗಮನಹರಿಸಿದೆ.

ದೊಡ್ಡ ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವುದನ್ನು ಈ ಬಜೆಟ್ ಮುಂದುವರಿಸಿದೆ. (ಉದಾಹರಣೆಗೆ 2019ರಲ್ಲಿ ಕಾರ್ಪೋರೇಟ್ ಟ್ಯಾಕ್ಸ್‌ಅನ್ನು 30%ನಿಂದ 22%ಕ್ಕೆ ಇಳಿಸಿದ್ದನ್ನು ನೆನಪಿಸಿಕೊಳ್ಳಬಹುದು.) ಅವರುಗಳು ಹೆಚ್ಚು ಬಂಡವಾಳ ಹೂಡಿಕೆ ಮಾಡಿ, ಅದರಿಂದ ಉದ್ಯೋಗ ಸೃಷ್ಟಿ ಆಗುತ್ತದೆ ಎಂಬ ನಂಬಿಕೆಯೊಂದಿಗೆ ಸರ್ಕಾರ ಕಳೆದ ಎಂಟು ವರ್ಷಗಳಿಂದ ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲಗಳ ಹೊಳೆಯನ್ನೇ ಹರಿಸುತ್ತಿದೆ. ಆದರೆ, ಅದಕ್ಕೆ ತಕ್ಕ ಹಾಗೆ ಖಾಸಗಿ ಬಂಡವಾಳ ಹೂಡಿಕೆಯಾಗಲೀ, ಉದ್ಯೋಗ ಸೃಷ್ಟಿಯಾಗಲೀ ದೊಡ್ಡ ಕಾರ್ಪೋರೆಟ್ ಕಂಪನಿಗಳಿಂದ ಆಗಿಲ್ಲ ಎಂಬುದು ವಾಸ್ತವ.

ಈ ಬಾರಿಯೂ ವಾರ್ಷಿಕ ಐದು ಕೋಟಿಗಿಂತ ಹೆಚ್ಚು ಆದಾಯವಿರುವ ಶ್ರೀಮಂತರ ಆದಾಯ ತೆರಿಗೆ ಮೇಲೆ ವಿಧಿಸುತ್ತಿದ್ದ ಸೆಸ್‌ಅನ್ನು 37%ರಿಂದ 25%ಕ್ಕೆ ಇಳಿಸಲಾಗಿದೆ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್‌ನಲ್ಲಿ ಅತ್ಯಂತ ಸ್ಪಷ್ಟವಾಗಿ ಸರ್ಕಾರ ತಾನು ಉಳ್ಳವರ ಪರವೆಂದು ತೋರಿಸಿಕೊಂಡಿದೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...