Homeಮುಖಪುಟಕೇಂದ್ರ ಬಜೆಟ್ 2024: ಕ್ಯಾನ್ಸರ್ ಔಷಧಿ, ಮೊಬೈಲ್ ಫೋನ್‌ಗಳ ಮೇಲಿನ ಕಸ್ಟಮ್ಸ್ ಸುಂಕದಲ್ಲಿ ಭಾರಿ ಕಡಿತ

ಕೇಂದ್ರ ಬಜೆಟ್ 2024: ಕ್ಯಾನ್ಸರ್ ಔಷಧಿ, ಮೊಬೈಲ್ ಫೋನ್‌ಗಳ ಮೇಲಿನ ಕಸ್ಟಮ್ಸ್ ಸುಂಕದಲ್ಲಿ ಭಾರಿ ಕಡಿತ

- Advertisement -
- Advertisement -

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ 2024ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ, ಕ್ಯಾನ್ಸರ್ ಔಷಧಿಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ಕಸ್ಟಮ್ಸ್ ಸುಂಕದಲ್ಲಿ ಭಾರಿ ಕಡಿತವನ್ನು ಘೋಷಿಸಿದರು. ಇದು ಚಿಲ್ಲರೆ ಮಾರುಕಟ್ಟೆಯಲ್ಲಿ ಅವುಗಳ ಬೆಲೆಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಆಮದು ಮಾಡಿಕೊಳ್ಳುವ ಚಿನ್ನ, ಬೆಳ್ಳಿ, ಚರ್ಮದ ವಸ್ತುಗಳು ಮತ್ತು ಸಮುದ್ರಾಹಾರ ಕೂಡ ಅಗ್ಗವಾಗಲಿದೆ.

“ಸರ್ಕಾರವು ಇನ್ನೂ 3 ಕ್ಯಾನ್ಸರ್ ಚಿಕಿತ್ಸಾ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡಲಿದೆ. ನಾವು ಮೊಬೈಲ್ ಫೋನ್‌ಗಳು, ಚಾರ್ಜರ್‌ಗಳು ಮತ್ತು ಇತರ ಮೊಬೈಲ್ ಭಾಗಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಸಹ ಕಡಿಮೆ ಮಾಡುತ್ತೇವೆ” ಎಂದು ಸಂಸತ್ತಿನಲ್ಲಿ ಬಜೆಟ್ 2024 ಅನ್ನು ಮಂಡಿಸುವಾಗ ಸೀತಾರಾಮನ್ ಹೇಳಿದರು.

ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು 6% ಕ್ಕೆ ಕಡಿತಗೊಳಿಸಿರುವುದಾಗ ಘೋಷಿಸಿದ್ದಾರೆ. ಇದರಿಂದ, ಆಭರಣಗಳ ಚಿಲ್ಲರೆ ಬೇಡಿಕೆಯನ್ನು ಹೆಚ್ಚಿಸಬಹುದು ಮತ್ತು ವಿಶ್ವದ ಎರಡನೇ ಅತಿದೊಡ್ಡ ಬೆಳ್ಳಿಯ ಗ್ರಾಹಕರ ಕಳ್ಳಸಾಗಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಂದಾಜಿಸಲಾಗಿದೆ.

ಭಾರತದಿಂದ ಚಿನ್ನಕ್ಕೆ ಹೆಚ್ಚಿನ ಬೇಡಿಕೆಯು ಜಾಗತಿಕ ಬೆಲೆಗಳನ್ನು ಬೆಂಬಲಿಸಬಹುದು, ಇದು ಈ ವರ್ಷದ ಆರಂಭದಲ್ಲಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತು. ಆದರೂ ಅದು ಭಾರತದ ವ್ಯಾಪಾರ ಕೊರತೆಯನ್ನು ಹೆಚ್ಚಿಸುವುದರ ಜತೆಗೆ, ಕುಸಿಯುತ್ತಿರುವ ರೂಪಾಯಿಯ ಮೇಲೆ ಮತ್ತಷ್ಟು ಭಾರವನ್ನು ಉಂಟುಮಾಡಬಹುದು.

ಮತ್ತೊಂದೆಡೆ, ಸರ್ಕಾರವು ಅಮೋನಿಯಂ ನೈಟ್ರೇಟ್ ಮೇಲಿನ ಕಸ್ಟಮ್ಸ್ ಸುಂಕವನ್ನು 10% ಮತ್ತು ಜೈವಿಕ ವಿಘಟನೀಯವಲ್ಲದ ಪ್ಲಾಸ್ಟಿಕ್‌ಗಳ ಮೇಲೆ 25% ರಷ್ಟು ಹೆಚ್ಚಿಸಲಿದೆ.

ಇದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಆಗಿದ್ದು, ಮೂಲಸೌಕರ್ಯ ಅಭಿವೃದ್ಧಿಯಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳವರೆಗೆ ವಿವಿಧ ಕ್ಷೇತ್ರಗಳ ಮೇಲೆ ಸ್ಪರ್ಶಿಸುವ ಭಾರತದ ಆರ್ಥಿಕತೆ ಮೇಲೆ ಗಮನಾರ್ಹ ಪರಿಣಾಮ ಬೀರುವ ನಿರೀಕ್ಷೆಯಿದೆ.

ವಿತ್ತ ಸಚಿವರು ಸದೃಢ ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ಭರವಸೆಗಳು ಜನಸಾಮಾನ್ಯರಿಗೆ ತಲುಪುವಂತೆ ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ನಿನ್ನೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು.

ಇದನ್ನೂ ಓದಿ; ಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...