Homeಮುಖಪುಟಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

ಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಘೋಷಣೆ ಮಾಡಿದ್ದಾರೆ. ಎರಡೂ ರಾಜ್ಯಗಳ ಆಡಳಿತ ಪಕ್ಷಗಳು ಪ್ರಸ್ತುತ ಎನ್‌ಡಿಎ ಸರ್ಕಾರದ ಮಿತ್ರಪಕ್ಷಗಳಾಗಿವೆ.

ಜೆಡಿಯು ಆಡಳಿತವಿರುವ ಬಿಹಾರಕ್ಕೆ ಸರ್ಕಾರವು ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಮೀಸಲಿಡುವುದರೊಂದಿಗೆ ಬಿಹಾರಕ್ಕೆ ಉತ್ತಮ ಆರ್ಥೀಕ ನೆರವು ಸಿಗುವ ಸಾಧ್ಯತೆ ಇದೆ. ಬಿಹಾರದ ವಿವಿಧ ರಸ್ತೆ ಯೋಜನೆಗಳಿಗೆ ಬಜೆಟ್‌ನಲ್ಲಿ ₹20,000 ಕೋಟಿ ನೀಡಲಾಗಿದೆ.

ಪಾಟ್ನಾ-ಪೂರ್ಣಿಯಾ, ಬಕ್ಸರ್-ಭಾಗಲ್ಪುರ್ ಮತ್ತು ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಎಕ್ಸ್‌ಪ್ರೆಸ್‌ವೇ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ಎರಡು-ಪಥದ ಸೇತುವೆ ಸೇರಿದಂತೆ, ರಾಜ್ಯದಲ್ಲಿ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸ್ಥಾಪಿಸಲು ಕೇಂದ್ರವು ಯೋಜಿಸಿದೆ. ಬಹುಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ನೆರವಿನ ಮೂಲಕ ಬಿಹಾರಕ್ಕೆ ಹಣಕಾಸಿನ ನೆರವು ವ್ಯವಸ್ಥೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

“ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ, ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ದಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಪ್ರದೇಶದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ” ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

ರಾಜ್ಯದ ಪ್ರವಾಸೋದ್ಯಮ ವಲಯವು ವಿಷ್ಣುಪಾದ್ ಮತ್ತು ಮಹಾಬೋಧಿ ದೇವಸ್ಥಾನದ ಕಾರಿಡಾರ್‌ಗಳನ್ನು ವಿಶ್ವದರ್ಜೆಯ ಯಾತ್ರಿಗಳು ಮತ್ತು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಯೋಜನೆಗಳೊಂದಿಗೆ ಪ್ರಮುಖ ಹಂಚಿಕೆಗಳನ್ನು ಹೊಂದಿದೆ. ಕೇಂದ್ರವು ರಾಜಗೀರ್ ಮತ್ತು ನಳಂದಾವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಯೋಜಿಸಿದೆ. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನಾವು ಪೂರ್ವೋದಯ ಯೋಜನೆಯನ್ನು ರೂಪಿಸುತ್ತೇವೆ ಎಂದು ಹಣಕಾಸು ಸಚಿವರು ಹೇಳಿದರು.

ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಾಲದ ಮೊತ್ತದ ಶೇಕಡಾ 3 ರ ಬಡ್ಡಿ ರಿಯಾಯಿತಿಯೊಂದಿಗೆ ಸರ್ಕಾರವು ನೇರವಾಗಿ ಇ-ವೋಚರ್‌ಗಳನ್ನು ನೀಡುತ್ತದೆ ಎಂದು ಹಣಕಾಸು ಸಚಿವರು ಹೇಳಿದರು.

ಆಂಧ್ರಪ್ರದೇಶ

ಟಿಡಿಪಿ ಆಡಳಿತದಲ್ಲಿರುವ ಆಂಧ್ರಪ್ರದೇಶಕ್ಕೆ ಅದರ ರಾಜಧಾನಿ ಅಮರಾವತಿಯ ಅಭಿವೃದ್ಧಿಗೆ ₹15,000 ಕೋಟಿ  ಆರ್ಥಿಕ ನೆರವು ನೀಡಲಾಗುವುದು. ಕೇಂದ್ರವು ಆರ್ಥಿಕ ನೆರವು ನೀಡುವ ಭರವಸೆಯೊಂದಿಗೆ ಪೋಲಾವರಂ ನೀರಾವರಿ ಯೋಜನೆಗೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ಈ ಯೋಜನೆಯನ್ನು ಆಂಧ್ರದ ರೈತರಿಗೆ ಜೀವನಾಡಿ ಎಂದು ಪರಿಗಣಿಸಲಾಗಿದೆ.

“ಆಂಧ್ರ ಪ್ರದೇಶ ಮರುಸಂಘಟನೆ ಕಾಯಿದೆಯಲ್ಲಿನ ಬದ್ಧತೆಗಳನ್ನು ಪೂರೈಸಲು ನಮ್ಮ ಸರ್ಕಾರವು ಸಂಘಟಿತ ಪ್ರಯತ್ನಗಳನ್ನು ಮಾಡಿದೆ. ನಾವು ರಾಜ್ಯದ ಬಂಡವಾಳದ ಅಗತ್ಯವನ್ನು ಗುರುತಿಸುತ್ತಿದ್ದೇವೆ. ನಾವು ಬಹುಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ಮೂಲಕ ವಿಶೇಷ ಹಣಕಾಸಿನ ನೆರವು ನೀಡುತ್ತೇವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ₹15,000 ಕೋಟಿ ಮುಂದಿನ ವರ್ಷಗಳಲ್ಲಿ ಹೆಚ್ಚುವರಿ ಮೊತ್ತ ನೀಡಲಾಗುವುದು” ಎಂದು ಅವರು ಹೇಳಿದರು.

ಎಪಿ ಮರುಸಂಘಟನೆ ಕಾಯಿದೆಯಡಿಯಲ್ಲಿ ರಾಯಲಸೀಮಾ, ಪ್ರಕಾಶಂ ಉತ್ತರ ಕರಾವಳಿ ಆಂಧ್ರಪ್ರದೇಶದ ಹಿಂದುಳಿದ ಪ್ರದೇಶಗಳಿಗೆ ನೀರು, ವಿದ್ಯುತ್, ರೈಲ್ವೆ ಮತ್ತು ರಸ್ತೆಗಳಂತಹ ಕೈಗಾರಿಕೆಗಳ ಅಭಿವೃದ್ಧಿ ಮತ್ತು ಅಗತ್ಯ ಮೂಲಸೌಕರ್ಯಗಳಿಗೆ ಸಹ ಹಣವನ್ನು ಒದಗಿಸಲಾಗುವುದು. ವಿಶಾಖಪಟ್ಟಣಂ-ಚೆನ್ನೈ ಮತ್ತು ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್‌ಗಳನ್ನೂ ಸಹ ಸಚಿವರು ಘೋಷಿಸಿದರು.

ಇದನ್ನೂ ಓದಿ; ಕೇಂದ್ರ ಬಜೆಟ್ | ವಿತ್ತ ಸಚಿವರು ಕಾಂಗ್ರೆಸ್ ಪ್ರಣಾಳಿಕೆ ಓದಿರುವುದು ಖುಷಿ ತಂದಿದೆ: ಪಿ. ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...