Homeಮುಖಪುಟಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

ಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಘೋಷಣೆ ಮಾಡಿದ್ದಾರೆ. ಎರಡೂ ರಾಜ್ಯಗಳ ಆಡಳಿತ ಪಕ್ಷಗಳು ಪ್ರಸ್ತುತ ಎನ್‌ಡಿಎ ಸರ್ಕಾರದ ಮಿತ್ರಪಕ್ಷಗಳಾಗಿವೆ.

ಜೆಡಿಯು ಆಡಳಿತವಿರುವ ಬಿಹಾರಕ್ಕೆ ಸರ್ಕಾರವು ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಮೀಸಲಿಡುವುದರೊಂದಿಗೆ ಬಿಹಾರಕ್ಕೆ ಉತ್ತಮ ಆರ್ಥೀಕ ನೆರವು ಸಿಗುವ ಸಾಧ್ಯತೆ ಇದೆ. ಬಿಹಾರದ ವಿವಿಧ ರಸ್ತೆ ಯೋಜನೆಗಳಿಗೆ ಬಜೆಟ್‌ನಲ್ಲಿ ₹20,000 ಕೋಟಿ ನೀಡಲಾಗಿದೆ.

ಪಾಟ್ನಾ-ಪೂರ್ಣಿಯಾ, ಬಕ್ಸರ್-ಭಾಗಲ್ಪುರ್ ಮತ್ತು ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಎಕ್ಸ್‌ಪ್ರೆಸ್‌ವೇ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ಎರಡು-ಪಥದ ಸೇತುವೆ ಸೇರಿದಂತೆ, ರಾಜ್ಯದಲ್ಲಿ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸ್ಥಾಪಿಸಲು ಕೇಂದ್ರವು ಯೋಜಿಸಿದೆ. ಬಹುಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ನೆರವಿನ ಮೂಲಕ ಬಿಹಾರಕ್ಕೆ ಹಣಕಾಸಿನ ನೆರವು ವ್ಯವಸ್ಥೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

“ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ, ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ದಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಪ್ರದೇಶದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ” ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

ರಾಜ್ಯದ ಪ್ರವಾಸೋದ್ಯಮ ವಲಯವು ವಿಷ್ಣುಪಾದ್ ಮತ್ತು ಮಹಾಬೋಧಿ ದೇವಸ್ಥಾನದ ಕಾರಿಡಾರ್‌ಗಳನ್ನು ವಿಶ್ವದರ್ಜೆಯ ಯಾತ್ರಿಗಳು ಮತ್ತು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಯೋಜನೆಗಳೊಂದಿಗೆ ಪ್ರಮುಖ ಹಂಚಿಕೆಗಳನ್ನು ಹೊಂದಿದೆ. ಕೇಂದ್ರವು ರಾಜಗೀರ್ ಮತ್ತು ನಳಂದಾವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಯೋಜಿಸಿದೆ. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನಾವು ಪೂರ್ವೋದಯ ಯೋಜನೆಯನ್ನು ರೂಪಿಸುತ್ತೇವೆ ಎಂದು ಹಣಕಾಸು ಸಚಿವರು ಹೇಳಿದರು.

ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಾಲದ ಮೊತ್ತದ ಶೇಕಡಾ 3 ರ ಬಡ್ಡಿ ರಿಯಾಯಿತಿಯೊಂದಿಗೆ ಸರ್ಕಾರವು ನೇರವಾಗಿ ಇ-ವೋಚರ್‌ಗಳನ್ನು ನೀಡುತ್ತದೆ ಎಂದು ಹಣಕಾಸು ಸಚಿವರು ಹೇಳಿದರು.

ಆಂಧ್ರಪ್ರದೇಶ

ಟಿಡಿಪಿ ಆಡಳಿತದಲ್ಲಿರುವ ಆಂಧ್ರಪ್ರದೇಶಕ್ಕೆ ಅದರ ರಾಜಧಾನಿ ಅಮರಾವತಿಯ ಅಭಿವೃದ್ಧಿಗೆ ₹15,000 ಕೋಟಿ  ಆರ್ಥಿಕ ನೆರವು ನೀಡಲಾಗುವುದು. ಕೇಂದ್ರವು ಆರ್ಥಿಕ ನೆರವು ನೀಡುವ ಭರವಸೆಯೊಂದಿಗೆ ಪೋಲಾವರಂ ನೀರಾವರಿ ಯೋಜನೆಗೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ಈ ಯೋಜನೆಯನ್ನು ಆಂಧ್ರದ ರೈತರಿಗೆ ಜೀವನಾಡಿ ಎಂದು ಪರಿಗಣಿಸಲಾಗಿದೆ.

“ಆಂಧ್ರ ಪ್ರದೇಶ ಮರುಸಂಘಟನೆ ಕಾಯಿದೆಯಲ್ಲಿನ ಬದ್ಧತೆಗಳನ್ನು ಪೂರೈಸಲು ನಮ್ಮ ಸರ್ಕಾರವು ಸಂಘಟಿತ ಪ್ರಯತ್ನಗಳನ್ನು ಮಾಡಿದೆ. ನಾವು ರಾಜ್ಯದ ಬಂಡವಾಳದ ಅಗತ್ಯವನ್ನು ಗುರುತಿಸುತ್ತಿದ್ದೇವೆ. ನಾವು ಬಹುಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ಮೂಲಕ ವಿಶೇಷ ಹಣಕಾಸಿನ ನೆರವು ನೀಡುತ್ತೇವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ₹15,000 ಕೋಟಿ ಮುಂದಿನ ವರ್ಷಗಳಲ್ಲಿ ಹೆಚ್ಚುವರಿ ಮೊತ್ತ ನೀಡಲಾಗುವುದು” ಎಂದು ಅವರು ಹೇಳಿದರು.

ಎಪಿ ಮರುಸಂಘಟನೆ ಕಾಯಿದೆಯಡಿಯಲ್ಲಿ ರಾಯಲಸೀಮಾ, ಪ್ರಕಾಶಂ ಉತ್ತರ ಕರಾವಳಿ ಆಂಧ್ರಪ್ರದೇಶದ ಹಿಂದುಳಿದ ಪ್ರದೇಶಗಳಿಗೆ ನೀರು, ವಿದ್ಯುತ್, ರೈಲ್ವೆ ಮತ್ತು ರಸ್ತೆಗಳಂತಹ ಕೈಗಾರಿಕೆಗಳ ಅಭಿವೃದ್ಧಿ ಮತ್ತು ಅಗತ್ಯ ಮೂಲಸೌಕರ್ಯಗಳಿಗೆ ಸಹ ಹಣವನ್ನು ಒದಗಿಸಲಾಗುವುದು. ವಿಶಾಖಪಟ್ಟಣಂ-ಚೆನ್ನೈ ಮತ್ತು ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್‌ಗಳನ್ನೂ ಸಹ ಸಚಿವರು ಘೋಷಿಸಿದರು.

ಇದನ್ನೂ ಓದಿ; ಕೇಂದ್ರ ಬಜೆಟ್ | ವಿತ್ತ ಸಚಿವರು ಕಾಂಗ್ರೆಸ್ ಪ್ರಣಾಳಿಕೆ ಓದಿರುವುದು ಖುಷಿ ತಂದಿದೆ: ಪಿ. ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...