Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...