Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...