Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...