Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...