Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...