Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...