Homeಎಕಾನಮಿಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ - ಟಿ. ಆರ್. ಚಂದ್ರಶೇಖರ

ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಇದ್ದ ಅನುದಾನ ರೂ.98,467 ಕೋಟಿ ಈಗ 2023-24ರಲ್ಲಿ ರೂ. 60,000 ಕೋಟಿಗೆ ತಗ್ಗಿಸಲಾಗಿದೆ.

- Advertisement -
- Advertisement -

ನಮ್ಮ ವಿತ್ತ ಮಂತ್ರಿ ರೂ.45.03 ಲಕ್ಷ ಕೋಟಿಯ 2023-24ನೆಯ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವೆಚ್ಚಗಳನ್ನು ಕಡಿತ ಮಾಡಲಾಗಿದೆ. ಕಾರ್ಪೋರೇಟ್ ತೆರಿಗೆ ಭಾರ ಕಡಿಮೆಯಾಗುತ್ತಿರುವುದರಿಂದ ಉಳ್ಳವರ ಹಿತಾಸಕ್ತಿಯ ರಕ್ಷಣೆಯಾಗಿದೆ. ಅಪ್ರತ್ಯಕ್ಷ ತೆರಿಗೆ ಜಿಎಸ್‌ಟಿ ಭಾರ ಅಧಿಕವಾಗುತ್ತಿರುವುರಿಂದ ಉಳಿದವರ ಬಾಳು ಗೋಳಾಗುತ್ತಿದೆ.

ರಸಗೊಬ್ಬರ ಮತ್ತು ಆಹಾರ ಸಬ್ಸಿಡಿಯು 2022-23ನೆಯ ಸಾಲಿನಲ್ಲಿ ರೂ.5.12 ಲಕ್ಷ ಕೋಟಿಯಿತ್ತು. ಇದನ್ನು 2023-24ನೆಯ ಸಾಲಿನಲ್ಲಿ ರೂ.3.72 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.27.34). ಭಾರತೀಯ ಆಹಾರ ಕಾರ್ಪೋರೇಶನ್ನಿಗೆ ನೀಡುತ್ತಿದ್ದ ಸಬ್ಸಿಡಿಯನ್ನು 2022-23ನೆಯ ಸಾಲಿನ ರೂ.2.86 ಲಕ್ಷ ಕೋಟಿಯಿಂದ 23-24ನೆಯ ಸಾಲಿನಲ್ಲಿ ರೂ.1.96 ಲಕ್ಷ ಕೋಟಿಗಿಳಿಸಲಾಗಿದೆ (- ಶೇ.31.47) ಪ್ರಧಾನಮಂತ್ರಿ ಕಿಸಾನ್ ಸಿಂಚನ ನಿಧಿಗೆ 2021-22ರಲ್ಲಿ ರೂ. 66825 ಕೋಟಿ ಅನುದಾನವಿತ್ತು. ಈ ವರ್ಷ ಇದನ್ನು ರೂ.60000 ಕೋಟಿಗೆ ಇಳಿಸಲಾಗಿದೆ.

ತೆರಿಗೆ ಬಾರ ಉಳ್ಳವರಿಗೆ ಕಡಿಮೆಯಾಗುತ್ತಿದ್ದರೆ ಉಳಿದವರಿಗೆ ಅಧಿಕವಾಗುತ್ತಿದೆ

ಕಾರ್ಪೋರೇಟ್ ತೆರಿಗೆಯು 2021-22 ಮತ್ತು 2022-23ರ ನಡುವೆ ಜಿಡಿಪಿಯ ಶೇ. 3.06 ರಷ್ಟಿದ್ದುದು 2023-24ರಲ್ಲಿಯೂ ಸ್ಥಿರವಾಗಿದೆ. ಆದರೆ ಜಿಎಸ್‌ಟಿಯು 2021-22ರಲ್ಲಿ ಜಿಡಿಪಿಯ ಶೇ. 3.00ರಷ್ಟಿದ್ದುದು 2022-23ರಲ್ಲಿ ಜಿಡಿಪಿಯ ಶೇ. 3.12 ರಷ್ಟಾಗಿತ್ತು. ಮತ್ತೆ 2023-24ರಲ್ಲಿ ಇದು ಜಿಡಿಪಿಯ ಶೇ. 3.16ರಷ್ಟಾಗಿದೆ. ಕಾರ್ಪೋರೇಟ್ ತೆರಿಗೆ ರಾಶಿಯ ಬೆಳವಣಿಗೆ 2021-24ರ ನಡುವೆ ಶೇ.29.49 ರಷ್ಟಿದ್ದರೆ ಜಿಎಸ್‌ಟಿಯ ಬೆಳವಣಿಗೆಯು ಇದೇ ಅವಧಿಯಲ್ಲಿ ಶೇ.36.96 ರಷ್ಟಾಗಿದೆ.

ನರೇಗಾಕ್ಕೆ ಅನುದಾನ ಕಡಿತ

ಗ್ರಾಮೀಣ ಬಡವರ ಪಾಲಿನ ಅಮೃತವಾಗಿರುವ ಮನ್‌ರೇಗಾಕ್ಕೆ 2021-22ರಲ್ಲಿ ಅನುದಾನ ರೂ.98467 ಕೋಟಿಯಿದ್ದುದನ್ನು 2022-23ರಲ್ಲಿ ರೂ. 89400 ಕೋಟಿಗೆ ಮತ್ತು 2023-24ರಲ್ಲಿ ರೂ. 60000 ಕೋಟಿಗೆ ತಗ್ಗಿಸಲಾಗಿದೆ.

ಬಜೆಟ್ ಗಾತ್ರ

ಬಜೆಟ್ಟಿನ ಒಟ್ಟು ಗಾತ್ರವು 2021-22ರಲ್ಲಿ ಜಿಡಿಪಿಯ (ರೂ.232.14 ಲಕ್ಷ ಕೋಟಿ) ಶೇ.16.33 ರಷ್ಟಿತ್ತು. ಇದು 2022-23ರಲ್ಲಿ ಜಿಡಿಪಿಯ(ರೂ.273.07 ಲಕ್ಷ ಕೋಟಿ) ಶೇ.15.33 ಕ್ಕಿಳಿದು ಮತ್ತು 2023-24ರಲ್ಲಿ ಜಿಡಿಪಿಯ(ರೂ.301.75 ಲಕ್ಷ ಕೋಟಿ) ಶೇ.14.18ಕ್ಕಿಳಿದಿದೆ.

ಸಾಲದ ಮೇಲಿನ ಬಡ್ಡಿಯಲ್ಲಿ ಹೆಚ್ಚಳ

ಆರ್ಥಿಕತೆಯ ಸಾಲದ ಮೇಲಿನ ವಾರ್ಷಿಕ ಬಡ್ಡಿ ಪಾವತಿಯು ಒಕ್ಕೂಟದ 2021-22ನೆಯ ಸಾಲಿನ ಒಟ್ಟು ತೆರಿಗೆ ರಾಶಿಯಲ್ಲಿ(ರೂ. 21.69 ಲಕ್ಷ ಕೋಟಿ) ಶೇ.37.11 ರಷ್ಟಿದ್ದುದು 2023-24 ರಲ್ಲಿ ತೆರಿಗೆ ರಾಶಿಯ(ರೂ.26.32 ಲಕ್ಷ ಕೋಟಿ)ಯ ಶೇ.40.99ರಷ್ಟಾಗಿದೆ. ಆದ್ದರಿಂದ 2023-24ರ ಬಜೆಟ್ಟು ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರ ಪಾಲಿಗೆ ‘ಕಡಿತ-ಬಡಿತ’ಗಳ ಬಜೆಟ್ಟಾಗಿದೆ.

  • ಟಿ. ಆರ್. ಚಂದ್ರಶೇಖರ

(ಅಭಿವೃದ್ಧಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಹಂಪಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಚಂದ್ರಶೇಖರ್ ಅವರು ಅರ್ಥಶಾಸ್ತ್ರದ ವಿಷಯದಲ್ಲಿ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇತಿಹಾಸ – ಸಂಸ್ಕೃತಿಗಳ ಬಗ್ಗೆಯೂ ತಮ್ಮ ಚಿಂತನೆಗಳನ್ನು ಪ್ರಸ್ತುತಪಡಿಸುವ ಪ್ರೊ. ಟಿ.ಆರ್.ಸಿ ಅವರು ಇತ್ತೀಚೆಗೆ ‘ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ – ಒಂದು ಅಧ್ಯಯನ’ ಎಂಬ ಪುಸ್ತಕವನ್ನು ರಚಿಸಿದ್ದಾರೆ.)

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...