Homeಮುಖಪುಟಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ; ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ವಿಚಾರ ಪ್ರಸ್ತಾಪಕ್ಕೆ ವಿಪಕ್ಷಗಳು...

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ; ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ವಿಚಾರ ಪ್ರಸ್ತಾಪಕ್ಕೆ ವಿಪಕ್ಷಗಳು ಸಜ್ಜು

- Advertisement -
- Advertisement -

ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ಸೇರಿದಂತೆ ಹಲವು ವಿವಾದಗಳ ನೆರಳಿನಲ್ಲಿ ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮೂರು ರಾಜ್ಯಗಳು, ಅವುಗಳಲ್ಲಿ ಎರಡು ಮಿತ್ರಪಕ್ಷಗಳು ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸುತ್ತಿರುವ ನಡುವೆ ಮಂಗಳವಾರ (ಜು.23) ಬಜೆಟ್ ಮಂಡನೆಯಾಗಲಿದೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಅವರು ಮತ್ತೊಂದು ಅವಧಿಗೆ ತಮ್ಮ ಹಣಕಾಸು ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, 2024-25ರ ಮಧ್ಯಂತರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಂಡಿಸಲಾಯಿತು.

ಬಜೆಟ್ ಮಂಡನೆಗೆ ಮುನ್ನ ಇಂದು ಆರ್ಥಿಕ ಸಮೀಕ್ಷೆ ನಡೆಯಲಿದೆ. ಆರ್ಥಿಕತೆ ಮತ್ತು ಬೆಳವಣಿಗೆಯ ವರದಿ ಕಾರ್ಡ್, ಸಮೀಕ್ಷೆಯನ್ನು ಲೋಕಸಭೆಗೆ ಪ್ರಸ್ತುತಪಡಿಸಲಾಗುತ್ತದೆ. ಸಮೀಕ್ಷೆಯು ವಿವಿಧ ಆರ್ಥಿಕ ವಲಯಗಳ ಕಾರ್ಯಕ್ಷಮತೆ ಮತ್ತು ಉದ್ಯೋಗ, ಜಿಡಿಪಿ ಬೆಳವಣಿಗೆ, ಹಣದುಬ್ಬರ ಮತ್ತು ಬಜೆಟ್ ಕೊರತೆಯ ಬಗ್ಗೆ ವಿವರಗಳನ್ನು ಒಳಗೊಂಡಿದೆ.

ಬಜೆಟ್ ಮಂಡನೆಯನ್ನು ಅನುಸರಿಸುವ ಚರ್ಚೆಯು ಉಭಯ ಸದನಗಳಲ್ಲಿ ಬಿರುಗಾಳಿ ಎಬ್ಬಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ, ಪ್ರತಿಪಕ್ಷಗಳು ವಿವಾದಾತ್ಮಕ ವಿಷಯಗಳ ಪಟ್ಟಿಯೊಂದಿಗೆ ಚರ್ಚೆಗೆ ಆಗ್ರಹಿಸಲು ಸಿದ್ಧವಾಗಿವೆ. ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಅಧಿವೇಶನದಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಲು ಪ್ರತಿಪಕ್ಷಗಳಿಗೆ ಸಾಧ್ಯವಾಗಿಲ್ಲ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹೋಟೆಲ್ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಬೋರ್ಡ್‌ಗಳನ್ನು ಹಾಕಬೇಕು ಎಂಬ ವಿವಾದಾತ್ಮಕ ಆದೇಶವನ್ನು ಹಿಂಪಡೆಯುವುದು ಸೇರಿದಂತೆ ಮಿತ್ರಪಕ್ಷಗಳ ಬೇಡಿಕೆಗಳಿಗೆ ಬಿಜೆಪಿ ಕೂಡ ಮುಂದಾಗಿದೆ.

ಪ್ರತಿಪಕ್ಷ ಕಾಂಗ್ರೆಸ್ ಈ ಆದೇಶವನ್ನು ಟೀಕಿಸಿದೆ, “ಕೋಮುವಾದ ಮತ್ತು ವಿಭಜಕ” ಎಂದು ಕರೆದಿದೆ. ಅವರ ಗುರುತನ್ನು ಬಹಿರಂಗಪಡಿಸಲು ಒತ್ತಾಯಿಸುವ ಮೂಲಕ ಮುಸ್ಲಿಮರು ಮತ್ತು ಪರಿಶಿಷ್ಟ ಜಾತಿಗಳನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿದೆ. ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ ಮತ್ತು ಎಎಪಿ ಈ ವಿಷಯವನ್ನು ಉಭಯ ಸದನಗಳಲ್ಲಿ ಪ್ರಸ್ತಾಪಿಸುವುದಾಗಿ ಸ್ಪಷ್ಟಪಡಿಸಿವೆ.

ಬಿಹಾರದ ಬಿಜೆಪಿಯ ಮಿತ್ರಪಕ್ಷಗಳು ಈ ಮಧ್ಯೆ ವಿಶೇಷ ವರ್ಗದ ಸ್ಥಾನಮಾನಕ್ಕೆ ಒತ್ತಾಯಿಸುತ್ತಿವೆ. ಆಂಧ್ರಪ್ರದೇಶಕ್ಕೆ ವೈಎಸ್‌ಆರ್ ಕಾಂಗ್ರೆಸ್ ಮತ್ತು ಒಡಿಶಾಗೆ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳದಿಂದ ಬೇಡಿಕೆಯೂ ಇದೆ. ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಈ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆದರೆ, ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನದ ಬೇಡಿಕೆಯನ್ನು ಬಿಜೆಪಿ ಮಿತ್ರ ಮತ್ತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಸ್ತಾಪಿಸಲಿಲ್ಲ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ಗಮನ ಸೆಳೆದಿದ್ದಾರೆ.

ಸಭೆಯ ನಂತರ, ಬಿಜೆಪಿ ಮಿತ್ರ ಜಯಂತ್ ಚೌಧರಿ, ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ, ವಿವಾದಿತ ಹೋಟೆಲ್ ಹೆಸರಿನ ಆದೇಶದ ಬಗ್ಗೆ ಮಾತನಾಡಿದರು. ‘ಹೆಚ್ಚು ಯೋಚನೆ ಮಾಡದೆ ಆದೇಶ ಹೊರಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ನಿರ್ಧಾರ ಕೈಗೊಂಡಿರುವ ಕಾರಣಕ್ಕೆ ಸರ್ಕಾರ ಹಠ ಹಿಡಿದಿದೆ’ ಎಂದರು.

ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಹಿರಿಯ ನಾಯಕರ ಭಾಷಣದ ವೇಳೆ ಅಡ್ಡಿಪಡಿಸುವುದನ್ನು ತಪ್ಪಿಸಲು ಪ್ರತಿಪಕ್ಷಗಳನ್ನು ಕೇಳಿದರು. ಸಂಸತ್ತಿನ ಚೊಚ್ಚಲ ಅಧಿವೇಶನದಲ್ಲಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರವನ್ನು ಪ್ರತಿಪಕ್ಷಗಳ ಸದಸ್ಯರು ಘೋಷಣೆ ಕೂಗುವ ಮೂಲಕ ಪದೇ ಪದೇ ಅಡ್ಡಿಪಡಿಸಿದರು.

ಬಜೆಟ್ ಅಧಿವೇಶನವು ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಆ ವೇಳೆಗೆ, ವಿಮಾನಯಾನ ವಲಯದಲ್ಲಿ ವ್ಯವಹಾರವನ್ನು ಸುಲಭಗೊಳಿಸಲು 90 ವರ್ಷಗಳಷ್ಟು ಹಳೆಯದಾದ ಏರ್‌ಕ್ರಾಫ್ಟ್ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಒಂದು ಸೇರಿದಂತೆ ಆರು ಮಸೂದೆಗಳನ್ನು ಅಂಗೀಕರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಇದನ್ನೂ ಓದಿ; ಭಾರತದ ವಾಯುಮಾಲಿನ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ‘ಕಳಪೆ ನೀತಿ ನಿರೂಪಣೆ’ ಕಾರಣ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...