Homeಮುಖಪುಟಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ; ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ವಿಚಾರ ಪ್ರಸ್ತಾಪಕ್ಕೆ ವಿಪಕ್ಷಗಳು...

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ; ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ವಿಚಾರ ಪ್ರಸ್ತಾಪಕ್ಕೆ ವಿಪಕ್ಷಗಳು ಸಜ್ಜು

- Advertisement -
- Advertisement -

ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ಸೇರಿದಂತೆ ಹಲವು ವಿವಾದಗಳ ನೆರಳಿನಲ್ಲಿ ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮೂರು ರಾಜ್ಯಗಳು, ಅವುಗಳಲ್ಲಿ ಎರಡು ಮಿತ್ರಪಕ್ಷಗಳು ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸುತ್ತಿರುವ ನಡುವೆ ಮಂಗಳವಾರ (ಜು.23) ಬಜೆಟ್ ಮಂಡನೆಯಾಗಲಿದೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಅವರು ಮತ್ತೊಂದು ಅವಧಿಗೆ ತಮ್ಮ ಹಣಕಾಸು ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, 2024-25ರ ಮಧ್ಯಂತರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಂಡಿಸಲಾಯಿತು.

ಬಜೆಟ್ ಮಂಡನೆಗೆ ಮುನ್ನ ಇಂದು ಆರ್ಥಿಕ ಸಮೀಕ್ಷೆ ನಡೆಯಲಿದೆ. ಆರ್ಥಿಕತೆ ಮತ್ತು ಬೆಳವಣಿಗೆಯ ವರದಿ ಕಾರ್ಡ್, ಸಮೀಕ್ಷೆಯನ್ನು ಲೋಕಸಭೆಗೆ ಪ್ರಸ್ತುತಪಡಿಸಲಾಗುತ್ತದೆ. ಸಮೀಕ್ಷೆಯು ವಿವಿಧ ಆರ್ಥಿಕ ವಲಯಗಳ ಕಾರ್ಯಕ್ಷಮತೆ ಮತ್ತು ಉದ್ಯೋಗ, ಜಿಡಿಪಿ ಬೆಳವಣಿಗೆ, ಹಣದುಬ್ಬರ ಮತ್ತು ಬಜೆಟ್ ಕೊರತೆಯ ಬಗ್ಗೆ ವಿವರಗಳನ್ನು ಒಳಗೊಂಡಿದೆ.

ಬಜೆಟ್ ಮಂಡನೆಯನ್ನು ಅನುಸರಿಸುವ ಚರ್ಚೆಯು ಉಭಯ ಸದನಗಳಲ್ಲಿ ಬಿರುಗಾಳಿ ಎಬ್ಬಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ, ಪ್ರತಿಪಕ್ಷಗಳು ವಿವಾದಾತ್ಮಕ ವಿಷಯಗಳ ಪಟ್ಟಿಯೊಂದಿಗೆ ಚರ್ಚೆಗೆ ಆಗ್ರಹಿಸಲು ಸಿದ್ಧವಾಗಿವೆ. ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಅಧಿವೇಶನದಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಲು ಪ್ರತಿಪಕ್ಷಗಳಿಗೆ ಸಾಧ್ಯವಾಗಿಲ್ಲ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹೋಟೆಲ್ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಬೋರ್ಡ್‌ಗಳನ್ನು ಹಾಕಬೇಕು ಎಂಬ ವಿವಾದಾತ್ಮಕ ಆದೇಶವನ್ನು ಹಿಂಪಡೆಯುವುದು ಸೇರಿದಂತೆ ಮಿತ್ರಪಕ್ಷಗಳ ಬೇಡಿಕೆಗಳಿಗೆ ಬಿಜೆಪಿ ಕೂಡ ಮುಂದಾಗಿದೆ.

ಪ್ರತಿಪಕ್ಷ ಕಾಂಗ್ರೆಸ್ ಈ ಆದೇಶವನ್ನು ಟೀಕಿಸಿದೆ, “ಕೋಮುವಾದ ಮತ್ತು ವಿಭಜಕ” ಎಂದು ಕರೆದಿದೆ. ಅವರ ಗುರುತನ್ನು ಬಹಿರಂಗಪಡಿಸಲು ಒತ್ತಾಯಿಸುವ ಮೂಲಕ ಮುಸ್ಲಿಮರು ಮತ್ತು ಪರಿಶಿಷ್ಟ ಜಾತಿಗಳನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿದೆ. ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ ಮತ್ತು ಎಎಪಿ ಈ ವಿಷಯವನ್ನು ಉಭಯ ಸದನಗಳಲ್ಲಿ ಪ್ರಸ್ತಾಪಿಸುವುದಾಗಿ ಸ್ಪಷ್ಟಪಡಿಸಿವೆ.

ಬಿಹಾರದ ಬಿಜೆಪಿಯ ಮಿತ್ರಪಕ್ಷಗಳು ಈ ಮಧ್ಯೆ ವಿಶೇಷ ವರ್ಗದ ಸ್ಥಾನಮಾನಕ್ಕೆ ಒತ್ತಾಯಿಸುತ್ತಿವೆ. ಆಂಧ್ರಪ್ರದೇಶಕ್ಕೆ ವೈಎಸ್‌ಆರ್ ಕಾಂಗ್ರೆಸ್ ಮತ್ತು ಒಡಿಶಾಗೆ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳದಿಂದ ಬೇಡಿಕೆಯೂ ಇದೆ. ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಈ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆದರೆ, ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನದ ಬೇಡಿಕೆಯನ್ನು ಬಿಜೆಪಿ ಮಿತ್ರ ಮತ್ತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಸ್ತಾಪಿಸಲಿಲ್ಲ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ಗಮನ ಸೆಳೆದಿದ್ದಾರೆ.

ಸಭೆಯ ನಂತರ, ಬಿಜೆಪಿ ಮಿತ್ರ ಜಯಂತ್ ಚೌಧರಿ, ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ, ವಿವಾದಿತ ಹೋಟೆಲ್ ಹೆಸರಿನ ಆದೇಶದ ಬಗ್ಗೆ ಮಾತನಾಡಿದರು. ‘ಹೆಚ್ಚು ಯೋಚನೆ ಮಾಡದೆ ಆದೇಶ ಹೊರಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ನಿರ್ಧಾರ ಕೈಗೊಂಡಿರುವ ಕಾರಣಕ್ಕೆ ಸರ್ಕಾರ ಹಠ ಹಿಡಿದಿದೆ’ ಎಂದರು.

ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಹಿರಿಯ ನಾಯಕರ ಭಾಷಣದ ವೇಳೆ ಅಡ್ಡಿಪಡಿಸುವುದನ್ನು ತಪ್ಪಿಸಲು ಪ್ರತಿಪಕ್ಷಗಳನ್ನು ಕೇಳಿದರು. ಸಂಸತ್ತಿನ ಚೊಚ್ಚಲ ಅಧಿವೇಶನದಲ್ಲಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರವನ್ನು ಪ್ರತಿಪಕ್ಷಗಳ ಸದಸ್ಯರು ಘೋಷಣೆ ಕೂಗುವ ಮೂಲಕ ಪದೇ ಪದೇ ಅಡ್ಡಿಪಡಿಸಿದರು.

ಬಜೆಟ್ ಅಧಿವೇಶನವು ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಆ ವೇಳೆಗೆ, ವಿಮಾನಯಾನ ವಲಯದಲ್ಲಿ ವ್ಯವಹಾರವನ್ನು ಸುಲಭಗೊಳಿಸಲು 90 ವರ್ಷಗಳಷ್ಟು ಹಳೆಯದಾದ ಏರ್‌ಕ್ರಾಫ್ಟ್ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಒಂದು ಸೇರಿದಂತೆ ಆರು ಮಸೂದೆಗಳನ್ನು ಅಂಗೀಕರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಇದನ್ನೂ ಓದಿ; ಭಾರತದ ವಾಯುಮಾಲಿನ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ‘ಕಳಪೆ ನೀತಿ ನಿರೂಪಣೆ’ ಕಾರಣ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...