Homeಮುಖಪುಟಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ; ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ವಿಚಾರ ಪ್ರಸ್ತಾಪಕ್ಕೆ ವಿಪಕ್ಷಗಳು...

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ; ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ವಿಚಾರ ಪ್ರಸ್ತಾಪಕ್ಕೆ ವಿಪಕ್ಷಗಳು ಸಜ್ಜು

- Advertisement -
- Advertisement -

ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ಸೇರಿದಂತೆ ಹಲವು ವಿವಾದಗಳ ನೆರಳಿನಲ್ಲಿ ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮೂರು ರಾಜ್ಯಗಳು, ಅವುಗಳಲ್ಲಿ ಎರಡು ಮಿತ್ರಪಕ್ಷಗಳು ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸುತ್ತಿರುವ ನಡುವೆ ಮಂಗಳವಾರ (ಜು.23) ಬಜೆಟ್ ಮಂಡನೆಯಾಗಲಿದೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಅವರು ಮತ್ತೊಂದು ಅವಧಿಗೆ ತಮ್ಮ ಹಣಕಾಸು ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, 2024-25ರ ಮಧ್ಯಂತರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಂಡಿಸಲಾಯಿತು.

ಬಜೆಟ್ ಮಂಡನೆಗೆ ಮುನ್ನ ಇಂದು ಆರ್ಥಿಕ ಸಮೀಕ್ಷೆ ನಡೆಯಲಿದೆ. ಆರ್ಥಿಕತೆ ಮತ್ತು ಬೆಳವಣಿಗೆಯ ವರದಿ ಕಾರ್ಡ್, ಸಮೀಕ್ಷೆಯನ್ನು ಲೋಕಸಭೆಗೆ ಪ್ರಸ್ತುತಪಡಿಸಲಾಗುತ್ತದೆ. ಸಮೀಕ್ಷೆಯು ವಿವಿಧ ಆರ್ಥಿಕ ವಲಯಗಳ ಕಾರ್ಯಕ್ಷಮತೆ ಮತ್ತು ಉದ್ಯೋಗ, ಜಿಡಿಪಿ ಬೆಳವಣಿಗೆ, ಹಣದುಬ್ಬರ ಮತ್ತು ಬಜೆಟ್ ಕೊರತೆಯ ಬಗ್ಗೆ ವಿವರಗಳನ್ನು ಒಳಗೊಂಡಿದೆ.

ಬಜೆಟ್ ಮಂಡನೆಯನ್ನು ಅನುಸರಿಸುವ ಚರ್ಚೆಯು ಉಭಯ ಸದನಗಳಲ್ಲಿ ಬಿರುಗಾಳಿ ಎಬ್ಬಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ, ಪ್ರತಿಪಕ್ಷಗಳು ವಿವಾದಾತ್ಮಕ ವಿಷಯಗಳ ಪಟ್ಟಿಯೊಂದಿಗೆ ಚರ್ಚೆಗೆ ಆಗ್ರಹಿಸಲು ಸಿದ್ಧವಾಗಿವೆ. ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಅಧಿವೇಶನದಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಲು ಪ್ರತಿಪಕ್ಷಗಳಿಗೆ ಸಾಧ್ಯವಾಗಿಲ್ಲ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹೋಟೆಲ್ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಬೋರ್ಡ್‌ಗಳನ್ನು ಹಾಕಬೇಕು ಎಂಬ ವಿವಾದಾತ್ಮಕ ಆದೇಶವನ್ನು ಹಿಂಪಡೆಯುವುದು ಸೇರಿದಂತೆ ಮಿತ್ರಪಕ್ಷಗಳ ಬೇಡಿಕೆಗಳಿಗೆ ಬಿಜೆಪಿ ಕೂಡ ಮುಂದಾಗಿದೆ.

ಪ್ರತಿಪಕ್ಷ ಕಾಂಗ್ರೆಸ್ ಈ ಆದೇಶವನ್ನು ಟೀಕಿಸಿದೆ, “ಕೋಮುವಾದ ಮತ್ತು ವಿಭಜಕ” ಎಂದು ಕರೆದಿದೆ. ಅವರ ಗುರುತನ್ನು ಬಹಿರಂಗಪಡಿಸಲು ಒತ್ತಾಯಿಸುವ ಮೂಲಕ ಮುಸ್ಲಿಮರು ಮತ್ತು ಪರಿಶಿಷ್ಟ ಜಾತಿಗಳನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿದೆ. ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ ಮತ್ತು ಎಎಪಿ ಈ ವಿಷಯವನ್ನು ಉಭಯ ಸದನಗಳಲ್ಲಿ ಪ್ರಸ್ತಾಪಿಸುವುದಾಗಿ ಸ್ಪಷ್ಟಪಡಿಸಿವೆ.

ಬಿಹಾರದ ಬಿಜೆಪಿಯ ಮಿತ್ರಪಕ್ಷಗಳು ಈ ಮಧ್ಯೆ ವಿಶೇಷ ವರ್ಗದ ಸ್ಥಾನಮಾನಕ್ಕೆ ಒತ್ತಾಯಿಸುತ್ತಿವೆ. ಆಂಧ್ರಪ್ರದೇಶಕ್ಕೆ ವೈಎಸ್‌ಆರ್ ಕಾಂಗ್ರೆಸ್ ಮತ್ತು ಒಡಿಶಾಗೆ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳದಿಂದ ಬೇಡಿಕೆಯೂ ಇದೆ. ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಈ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಆದರೆ, ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನದ ಬೇಡಿಕೆಯನ್ನು ಬಿಜೆಪಿ ಮಿತ್ರ ಮತ್ತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಸ್ತಾಪಿಸಲಿಲ್ಲ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ಗಮನ ಸೆಳೆದಿದ್ದಾರೆ.

ಸಭೆಯ ನಂತರ, ಬಿಜೆಪಿ ಮಿತ್ರ ಜಯಂತ್ ಚೌಧರಿ, ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ, ವಿವಾದಿತ ಹೋಟೆಲ್ ಹೆಸರಿನ ಆದೇಶದ ಬಗ್ಗೆ ಮಾತನಾಡಿದರು. ‘ಹೆಚ್ಚು ಯೋಚನೆ ಮಾಡದೆ ಆದೇಶ ಹೊರಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ನಿರ್ಧಾರ ಕೈಗೊಂಡಿರುವ ಕಾರಣಕ್ಕೆ ಸರ್ಕಾರ ಹಠ ಹಿಡಿದಿದೆ’ ಎಂದರು.

ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಹಿರಿಯ ನಾಯಕರ ಭಾಷಣದ ವೇಳೆ ಅಡ್ಡಿಪಡಿಸುವುದನ್ನು ತಪ್ಪಿಸಲು ಪ್ರತಿಪಕ್ಷಗಳನ್ನು ಕೇಳಿದರು. ಸಂಸತ್ತಿನ ಚೊಚ್ಚಲ ಅಧಿವೇಶನದಲ್ಲಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರವನ್ನು ಪ್ರತಿಪಕ್ಷಗಳ ಸದಸ್ಯರು ಘೋಷಣೆ ಕೂಗುವ ಮೂಲಕ ಪದೇ ಪದೇ ಅಡ್ಡಿಪಡಿಸಿದರು.

ಬಜೆಟ್ ಅಧಿವೇಶನವು ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಆ ವೇಳೆಗೆ, ವಿಮಾನಯಾನ ವಲಯದಲ್ಲಿ ವ್ಯವಹಾರವನ್ನು ಸುಲಭಗೊಳಿಸಲು 90 ವರ್ಷಗಳಷ್ಟು ಹಳೆಯದಾದ ಏರ್‌ಕ್ರಾಫ್ಟ್ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಒಂದು ಸೇರಿದಂತೆ ಆರು ಮಸೂದೆಗಳನ್ನು ಅಂಗೀಕರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಇದನ್ನೂ ಓದಿ; ಭಾರತದ ವಾಯುಮಾಲಿನ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ‘ಕಳಪೆ ನೀತಿ ನಿರೂಪಣೆ’ ಕಾರಣ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....