Homeಮುಖಪುಟ'ನರೇಗಾ' ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು ‘ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ.

ಸರ್ಕಾರ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಒದಗಿಸುವ ಖಾತರಿಯುಕ್ತ ಉದ್ಯೋಗವನ್ನು ಪ್ರಸ್ತುತದ 100 ದಿನಗಳಿಂದ 125 ದಿನಗಳಿಗೆ ಏರಿಸಲು ನಿರ್ಧರಿಸಿದೆ. ಜೊತೆಗೆ, ಈ ಯೋಜನೆಯಡಿ ಕನಿಷ್ಠ ಕೂಲಿಯನ್ನು ದಿನಕ್ಕೆ 240 ರೂಪಾಯಿಗೆ ಮರುಪರಿಷ್ಕರಣೆ ಮಾಡಲು ಉದ್ದೇಶಿಸಿದೆ. ಈ ವಿಸ್ತರಿತ ಯೋಜನೆಯನ್ನು ಜಾರಿಗೆ ತರುವ ಸಲುವಾಗಿ ಹೆಚ್ಚುವರಿ ಬಜೆಟ್ ಅನುದಾನ ಒದಗಿಸಲು ತೀರ್ಮಾನಿಸಿದೆ.

ನರೇಗಾ ಯೋಜನೆಯಡಿ ಬಾಕಿ ಉಳಿದಿರುವ ರಾಜ್ಯದ ಪಾಲು ಸುಮಾರು 51,627 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುತ್ತಿರುವ ನಡುವೆ ಯೋಜನೆಯಲ್ಲಿ ಬದಲಾವಣೆಗಳನ್ನು ತರಲು ಕೇಂದ್ರ ಮುಂದಾಗಿದೆ.

ನರೇಗಾ ಹಣ ತಡೆಹಿಡಿದಿರುವುದರಿಂದ ಗ್ರಾಮೀಣ ಭಾಗದ ಕಾರ್ಮಿಕರಿಗೆ ಕೂಲಿ ಕೊಡುವುದೇ ನಿಂತುಹೋಗಿದೆ ಮತ್ತು ಚಾಲ್ತಿಯಲ್ಲಿರುವ ಅನೇಕ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿಕೊಂಡಿದೆ. ರಾಜಕೀಯ ದ್ವೇಷದಿಂದ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದೆ.

ನರೇಗಾ ಯೋಜನೆಯ ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ, ಮಾರ್ಚ್ 9, 2022 ರಿಂದ ಪಶ್ಚಿಮ ಬಂಗಾಳದಲ್ಲಿ ಯೋಜನೆಗೆ ಹಣಕಾಸು ಒದಗಿಸುವುದನ್ನು ನಿಲ್ಲಿಸಿದೆ. ಬಾಕಿ ಪಾವತಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಸರ್ಕಾರ ಕಾನೂನು ಹೋರಾಟ ನಡೆಸುತ್ತಿದೆ.

ಆಗಸ್ಟ್ 1,2025ರಿಂದ ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಂತೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್‌ ಜೂನ್ 18,2025ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅಕ್ಟೋಬರ್ 27, 2025ರಂದು ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ರಾಜ್ಯದಲ್ಲಿ ಯೋಜನೆಯ ಅನುಷ್ಠಾನಕ್ಕೆ ‘ವಿಶೇಷ ಷರತ್ತುಗಳನ್ನು’ ವಿಧಿಸುವ ಅಧಿಕಾರವನ್ನು ಹೈಕೋರ್ಟ್ ಕೇಂದ್ರಕ್ಕೆ ಬಿಟ್ಟಿತ್ತು.

ಜೂನ್‌ 18ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜುಲೈ 31ರಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಿಶೇಷ ರಜಾ ಅವಧಿಯ ಅರ್ಜಿ ಸಲ್ಲಿಸಿತ್ತು. ಆದರೆ, ಅದರ ಮರುದಿನ ಆಗಸ್ಟ್ 1ರಂದು ಯೋಜನೆ ಪುನರಾರಂಭಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಆಗಸ್ಟ್ 2025ರಿಂದ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಾಗ, ಯಾವುದೇ ಅಕ್ರಮಗಳು ಸಂಭವಿಸದಂತೆ ನೋಡಿಕೊಳ್ಳಲು ದೇಶದ ಇತರ ರಾಜ್ಯಗಳಲ್ಲಿ ಇರುವಂತೆ ವಿಶೇಷ ಷರತ್ತುಗಳು, ನಿರ್ಬಂಧಗಳು ಮತ್ತು ನಿಯಮಗಳು ಇತ್ಯಾದಿಗಳನ್ನು ವಿಧಿಸಲು ಕೇಂದ್ರ ಸರ್ಕಾರ ಸಂಪೂರ್ಣ ಅಧಿಕಾರ ಹೊಂದಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ನರೇಗಾ ಯೋಜನೆಯನ್ನು ಪುನರಾರಂಭಿಸಲು ಮುಂದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ನವೆಂಬರ್‌ನಲ್ಲಿ ವರದಿ ಮಾಡಿತ್ತು.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸದ ಕಾರಣ 2005ರ ನರೇಗಾ ಕಾಯ್ದೆಯ ಸೆಕ್ಷನ್ 27 ಅನ್ನು ಅನ್ವಯಿಸಿ ಕೇಂದ್ರ ಸರ್ಕಾರ ಮಾರ್ಚ್ 9, 2022ರಿಂದ ಪಶ್ಚಿಮ ಬಂಗಾಳಕ್ಕೆ ಯೋಜನೆಯ ಹಣ ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಿದೆ. ಅಂದಿನಿಂದ, ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಯಾವುದೇ ಕೆಲಸ ನಡೆದಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಮೊದಲು, 2014-15 ಮತ್ತು 2021-22 ರ ನಡುವೆ ಪಶ್ಚಿಮ ಬಂಗಾಳದ 51 ಲಕ್ಷದಿಂದ 80 ಲಕ್ಷ ಕುಟುಂಬಗಳು ವಾರ್ಷಿಕವಾಗಿ ಯೋಜನೆಯ ಲಾಭ ಪಡೆಯುತ್ತಿದ್ದವು.

2005ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿರುವ ನರೇಗಾ ಕಾಯ್ದೆ ಭಾರತದ ಅತಿದೊಡ್ಡ ಸಾಮಾಜಿಕ ಭದ್ರತಾ ಕ್ರಮಗಳಲ್ಲಿ ಒಂದಾಗಿದೆ. ಗ್ರಾಮೀಣ ಕುಟುಂಬಗಳಿಗೆ ‘ಕೆಲಸದ ಹಕ್ಕನ್ನು’ ಖಾತರಿಪಡಿಸುವ ಉದ್ದೇಶದಿಂದ ರಚಿತವಾದ ಈ ಕಾನೂನು, ವಿಶೇಷ ಕೌಶಲ್ಯಗಳಿಲ್ಲದ ಜನರಿಗೆ ಕೆಲಸದ ಖಾತರಿ ಒದಗಿಸುತ್ತದೆ.

ಪ್ರಸ್ತುತ ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಕೆಲಸ ಸಿಗುತ್ತಿದೆ ಮತ್ತು ಕೂಲಿ ದರಗಳು ರಾಜ್ಯ ಸರ್ಕಾರಗಳು ಪ್ರಕಟಿಸುವ ಅಧಿಸೂಚನೆಗಳ ಅನುಸಾರ ಇದೆ. ಆದರೆ ಹೋರಾಟಗಾರರು ಮತ್ತು ಸಂಘಟನೆಗಳು ದೀರ್ಘಕಾಲದಿಂದಲೂ ಈ ಯೋಜನೆಯ ಕೊರತೆಗಳನ್ನು ಎತ್ತಿತೋರಿಸುತ್ತಲೇ ಬಂದಿದ್ದಾರೆ. ಕೂಲಿ ಅತ್ಯಂತ ಕಡಿಮೆ ಇರುವುದು, ಕೂಲಿ ಪಾವತಿಯಲ್ಲಿ ತಿಂಗಳುಗಳ ಕಾಲ ತಡವಾಗುವುದು, ಹಾಗೂ ಯೋಜನೆಗೆ ತೀವ್ರ ಹಣಕಾಸಿನ ಕೊರತೆ, ಇವೆಲ್ಲವೂ ಈ ಯೋಜನೆಯ ದೊಡ್ಡ ತೊಡಕುಗಳು.

ನರೇಗಾ ಯೋಜನೆಯ ಕೂಲಿಯನ್ನು ಪ್ರತಿ ರಾಜ್ಯದ ಕನಿಷ್ಠ ಕೂಲಿಗೆ (statutory minimum wage) ಸಮನಾಗಿ ಹೆಚ್ಚಿಸಬೇಕು. ಸರ್ಕಾರ ಈಗ ಪ್ರಸ್ತಾವಿಸಿರುವ ದಿನಕ್ಕೆ 240 ರೂಪಾಯಿ ಕೂಲಿ ಕೂಡ ಹಲವು ರಾಜ್ಯಗಳಲ್ಲಿ ಕಾನೂನುಬದ್ಧವಾಗಿ ನಿಗದಿಪಡಿಸಿರುವ ಕನಿಷ್ಠ ಕೂಲಿಗಿಂತ ಕಡಿಮೆ ಇದೆ. ಇದರಿಂದಾಗಿ ಗ್ರಾಮೀಣ ಕಾರ್ಮಿಕರಿಗೆ ರಾಜ್ಯದ ಇತರ ಕಾರ್ಮಿಕರಿಗಿಂತ ಕಡಿಮೆ ಕೂಲಿ ಕೊಡುವುದು ಕಾನೂನಿನ ಮಟ್ಟದಲ್ಲೇ ಸ್ಥಿರೀಕರಣಗೊಂಡಂತಾಗುತ್ತದೆ. ಈ ಮೂಲಕ ‘ಕೂಲಿ ತಾರತಮ್ಯವನ್ನು ಸಾಂಸ್ಥಿಕಗೊಳಿಸಲಾಗುತ್ತಿದೆ (institutionalising wage discrimination)ಎಂದು ಹೋರಾಟಗಾರರು ಹೇಳುತ್ತಿದ್ದಾರೆ.

ಹಣಕಾಸು ವರ್ಷದ ಮಧ್ಯದಲ್ಲಿ ಯೋಜನೆಯ ಹಣ ನಿಯಮಿತವಾಗಿ ಖಾಲಿಯಾಗುವುದರಿಂದ, ರಾಜ್ಯಗಳು ಕೆಲಸ ನಿಲ್ಲಿಸುವ ಅಥವಾ ವೇತನ ವಿಳಂಬ ಮಾಡುವ ಪರಿಸ್ಥಿತಿಯಿದೆ. ಹಾಗಾಗಿ ಯೋಜನೆಯ ಬಜೆಟ್ ಹೆಚ್ಚಿಸಬೇಕು ಎಂಬ ಬೇಡಿಕೆ ಬಹಳ ಹಿಂದಿನಿಂದಲೂ ಇದೆ. ಇದರ ಜೊತೆಗೆ ಆಧಾರ್-ಸಂಬಂಧಿತ ಪಾವತಿ ಅಡೆತಡೆಗಳನ್ನು ಪರಿಹರಿಸಬೇಕು ಎಂಬ ಮತ್ತೊಂದು ಬೇಡಿಕೆಯೂ ಇದೆ. ಜನವರಿ 1, 2024 ರಿಂದ ಆಧಾರ್ ಆಧರಿತ ಪಾವತಿ ವ್ಯವಸ್ಥೆ( ಎಬಿಪಿಎಸ್‌) ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇದರಿಂದ ಕಾರ್ಮಿಕರ ಕೂಲಿ ಪಾವತಿಯಲ್ಲಿ ಇನ್ನಷ್ಟು ಅಡೆತಡೆಗಳು ಎದುರಾಗುತ್ತಿವೆ ಎಂಬ ವರದಿಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...