Homeಮುಖಪುಟ'ನರೇಗಾ' ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು ‘ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ.

ಸರ್ಕಾರ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಒದಗಿಸುವ ಖಾತರಿಯುಕ್ತ ಉದ್ಯೋಗವನ್ನು ಪ್ರಸ್ತುತದ 100 ದಿನಗಳಿಂದ 125 ದಿನಗಳಿಗೆ ಏರಿಸಲು ನಿರ್ಧರಿಸಿದೆ. ಜೊತೆಗೆ, ಈ ಯೋಜನೆಯಡಿ ಕನಿಷ್ಠ ಕೂಲಿಯನ್ನು ದಿನಕ್ಕೆ 240 ರೂಪಾಯಿಗೆ ಮರುಪರಿಷ್ಕರಣೆ ಮಾಡಲು ಉದ್ದೇಶಿಸಿದೆ. ಈ ವಿಸ್ತರಿತ ಯೋಜನೆಯನ್ನು ಜಾರಿಗೆ ತರುವ ಸಲುವಾಗಿ ಹೆಚ್ಚುವರಿ ಬಜೆಟ್ ಅನುದಾನ ಒದಗಿಸಲು ತೀರ್ಮಾನಿಸಿದೆ.

ನರೇಗಾ ಯೋಜನೆಯಡಿ ಬಾಕಿ ಉಳಿದಿರುವ ರಾಜ್ಯದ ಪಾಲು ಸುಮಾರು 51,627 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುತ್ತಿರುವ ನಡುವೆ ಯೋಜನೆಯಲ್ಲಿ ಬದಲಾವಣೆಗಳನ್ನು ತರಲು ಕೇಂದ್ರ ಮುಂದಾಗಿದೆ.

ನರೇಗಾ ಹಣ ತಡೆಹಿಡಿದಿರುವುದರಿಂದ ಗ್ರಾಮೀಣ ಭಾಗದ ಕಾರ್ಮಿಕರಿಗೆ ಕೂಲಿ ಕೊಡುವುದೇ ನಿಂತುಹೋಗಿದೆ ಮತ್ತು ಚಾಲ್ತಿಯಲ್ಲಿರುವ ಅನೇಕ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿಕೊಂಡಿದೆ. ರಾಜಕೀಯ ದ್ವೇಷದಿಂದ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದೆ.

ನರೇಗಾ ಯೋಜನೆಯ ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ, ಮಾರ್ಚ್ 9, 2022 ರಿಂದ ಪಶ್ಚಿಮ ಬಂಗಾಳದಲ್ಲಿ ಯೋಜನೆಗೆ ಹಣಕಾಸು ಒದಗಿಸುವುದನ್ನು ನಿಲ್ಲಿಸಿದೆ. ಬಾಕಿ ಪಾವತಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಸರ್ಕಾರ ಕಾನೂನು ಹೋರಾಟ ನಡೆಸುತ್ತಿದೆ.

ಆಗಸ್ಟ್ 1,2025ರಿಂದ ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಂತೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್‌ ಜೂನ್ 18,2025ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅಕ್ಟೋಬರ್ 27, 2025ರಂದು ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ರಾಜ್ಯದಲ್ಲಿ ಯೋಜನೆಯ ಅನುಷ್ಠಾನಕ್ಕೆ ‘ವಿಶೇಷ ಷರತ್ತುಗಳನ್ನು’ ವಿಧಿಸುವ ಅಧಿಕಾರವನ್ನು ಹೈಕೋರ್ಟ್ ಕೇಂದ್ರಕ್ಕೆ ಬಿಟ್ಟಿತ್ತು.

ಜೂನ್‌ 18ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜುಲೈ 31ರಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಿಶೇಷ ರಜಾ ಅವಧಿಯ ಅರ್ಜಿ ಸಲ್ಲಿಸಿತ್ತು. ಆದರೆ, ಅದರ ಮರುದಿನ ಆಗಸ್ಟ್ 1ರಂದು ಯೋಜನೆ ಪುನರಾರಂಭಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಆಗಸ್ಟ್ 2025ರಿಂದ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಾಗ, ಯಾವುದೇ ಅಕ್ರಮಗಳು ಸಂಭವಿಸದಂತೆ ನೋಡಿಕೊಳ್ಳಲು ದೇಶದ ಇತರ ರಾಜ್ಯಗಳಲ್ಲಿ ಇರುವಂತೆ ವಿಶೇಷ ಷರತ್ತುಗಳು, ನಿರ್ಬಂಧಗಳು ಮತ್ತು ನಿಯಮಗಳು ಇತ್ಯಾದಿಗಳನ್ನು ವಿಧಿಸಲು ಕೇಂದ್ರ ಸರ್ಕಾರ ಸಂಪೂರ್ಣ ಅಧಿಕಾರ ಹೊಂದಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ನರೇಗಾ ಯೋಜನೆಯನ್ನು ಪುನರಾರಂಭಿಸಲು ಮುಂದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ನವೆಂಬರ್‌ನಲ್ಲಿ ವರದಿ ಮಾಡಿತ್ತು.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸದ ಕಾರಣ 2005ರ ನರೇಗಾ ಕಾಯ್ದೆಯ ಸೆಕ್ಷನ್ 27 ಅನ್ನು ಅನ್ವಯಿಸಿ ಕೇಂದ್ರ ಸರ್ಕಾರ ಮಾರ್ಚ್ 9, 2022ರಿಂದ ಪಶ್ಚಿಮ ಬಂಗಾಳಕ್ಕೆ ಯೋಜನೆಯ ಹಣ ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಿದೆ. ಅಂದಿನಿಂದ, ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಯಾವುದೇ ಕೆಲಸ ನಡೆದಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಮೊದಲು, 2014-15 ಮತ್ತು 2021-22 ರ ನಡುವೆ ಪಶ್ಚಿಮ ಬಂಗಾಳದ 51 ಲಕ್ಷದಿಂದ 80 ಲಕ್ಷ ಕುಟುಂಬಗಳು ವಾರ್ಷಿಕವಾಗಿ ಯೋಜನೆಯ ಲಾಭ ಪಡೆಯುತ್ತಿದ್ದವು.

2005ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿರುವ ನರೇಗಾ ಕಾಯ್ದೆ ಭಾರತದ ಅತಿದೊಡ್ಡ ಸಾಮಾಜಿಕ ಭದ್ರತಾ ಕ್ರಮಗಳಲ್ಲಿ ಒಂದಾಗಿದೆ. ಗ್ರಾಮೀಣ ಕುಟುಂಬಗಳಿಗೆ ‘ಕೆಲಸದ ಹಕ್ಕನ್ನು’ ಖಾತರಿಪಡಿಸುವ ಉದ್ದೇಶದಿಂದ ರಚಿತವಾದ ಈ ಕಾನೂನು, ವಿಶೇಷ ಕೌಶಲ್ಯಗಳಿಲ್ಲದ ಜನರಿಗೆ ಕೆಲಸದ ಖಾತರಿ ಒದಗಿಸುತ್ತದೆ.

ಪ್ರಸ್ತುತ ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಕೆಲಸ ಸಿಗುತ್ತಿದೆ ಮತ್ತು ಕೂಲಿ ದರಗಳು ರಾಜ್ಯ ಸರ್ಕಾರಗಳು ಪ್ರಕಟಿಸುವ ಅಧಿಸೂಚನೆಗಳ ಅನುಸಾರ ಇದೆ. ಆದರೆ ಹೋರಾಟಗಾರರು ಮತ್ತು ಸಂಘಟನೆಗಳು ದೀರ್ಘಕಾಲದಿಂದಲೂ ಈ ಯೋಜನೆಯ ಕೊರತೆಗಳನ್ನು ಎತ್ತಿತೋರಿಸುತ್ತಲೇ ಬಂದಿದ್ದಾರೆ. ಕೂಲಿ ಅತ್ಯಂತ ಕಡಿಮೆ ಇರುವುದು, ಕೂಲಿ ಪಾವತಿಯಲ್ಲಿ ತಿಂಗಳುಗಳ ಕಾಲ ತಡವಾಗುವುದು, ಹಾಗೂ ಯೋಜನೆಗೆ ತೀವ್ರ ಹಣಕಾಸಿನ ಕೊರತೆ, ಇವೆಲ್ಲವೂ ಈ ಯೋಜನೆಯ ದೊಡ್ಡ ತೊಡಕುಗಳು.

ನರೇಗಾ ಯೋಜನೆಯ ಕೂಲಿಯನ್ನು ಪ್ರತಿ ರಾಜ್ಯದ ಕನಿಷ್ಠ ಕೂಲಿಗೆ (statutory minimum wage) ಸಮನಾಗಿ ಹೆಚ್ಚಿಸಬೇಕು. ಸರ್ಕಾರ ಈಗ ಪ್ರಸ್ತಾವಿಸಿರುವ ದಿನಕ್ಕೆ 240 ರೂಪಾಯಿ ಕೂಲಿ ಕೂಡ ಹಲವು ರಾಜ್ಯಗಳಲ್ಲಿ ಕಾನೂನುಬದ್ಧವಾಗಿ ನಿಗದಿಪಡಿಸಿರುವ ಕನಿಷ್ಠ ಕೂಲಿಗಿಂತ ಕಡಿಮೆ ಇದೆ. ಇದರಿಂದಾಗಿ ಗ್ರಾಮೀಣ ಕಾರ್ಮಿಕರಿಗೆ ರಾಜ್ಯದ ಇತರ ಕಾರ್ಮಿಕರಿಗಿಂತ ಕಡಿಮೆ ಕೂಲಿ ಕೊಡುವುದು ಕಾನೂನಿನ ಮಟ್ಟದಲ್ಲೇ ಸ್ಥಿರೀಕರಣಗೊಂಡಂತಾಗುತ್ತದೆ. ಈ ಮೂಲಕ ‘ಕೂಲಿ ತಾರತಮ್ಯವನ್ನು ಸಾಂಸ್ಥಿಕಗೊಳಿಸಲಾಗುತ್ತಿದೆ (institutionalising wage discrimination)ಎಂದು ಹೋರಾಟಗಾರರು ಹೇಳುತ್ತಿದ್ದಾರೆ.

ಹಣಕಾಸು ವರ್ಷದ ಮಧ್ಯದಲ್ಲಿ ಯೋಜನೆಯ ಹಣ ನಿಯಮಿತವಾಗಿ ಖಾಲಿಯಾಗುವುದರಿಂದ, ರಾಜ್ಯಗಳು ಕೆಲಸ ನಿಲ್ಲಿಸುವ ಅಥವಾ ವೇತನ ವಿಳಂಬ ಮಾಡುವ ಪರಿಸ್ಥಿತಿಯಿದೆ. ಹಾಗಾಗಿ ಯೋಜನೆಯ ಬಜೆಟ್ ಹೆಚ್ಚಿಸಬೇಕು ಎಂಬ ಬೇಡಿಕೆ ಬಹಳ ಹಿಂದಿನಿಂದಲೂ ಇದೆ. ಇದರ ಜೊತೆಗೆ ಆಧಾರ್-ಸಂಬಂಧಿತ ಪಾವತಿ ಅಡೆತಡೆಗಳನ್ನು ಪರಿಹರಿಸಬೇಕು ಎಂಬ ಮತ್ತೊಂದು ಬೇಡಿಕೆಯೂ ಇದೆ. ಜನವರಿ 1, 2024 ರಿಂದ ಆಧಾರ್ ಆಧರಿತ ಪಾವತಿ ವ್ಯವಸ್ಥೆ( ಎಬಿಪಿಎಸ್‌) ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇದರಿಂದ ಕಾರ್ಮಿಕರ ಕೂಲಿ ಪಾವತಿಯಲ್ಲಿ ಇನ್ನಷ್ಟು ಅಡೆತಡೆಗಳು ಎದುರಾಗುತ್ತಿವೆ ಎಂಬ ವರದಿಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...