Homeಮುಖಪುಟಕೇಂದ್ರ ಸಂಪುಟ ಪುನರ್ರಚನೆ: ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?

ಕೇಂದ್ರ ಸಂಪುಟ ಪುನರ್ರಚನೆ: ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದು ಎರಡು ವರ್ಷಗಳ ನಂತರ ಸಂಪುಟ ಪುನರ್ರಚನೆ ಕಸರತ್ತಿಗೆ ಕೈಹಾಕಿದೆ. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು 20 ಕ್ಕೂ ಹೆಚ್ಚು ಸಂಸದರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಕೆಲವು ನಾಯಕರು ಅಂತಿಮ ಕ್ಷಣದವರೆಗೂ ಮಂತ್ರಿ ಸ್ಥಾನದ ಲಾಭಿಯನ್ನು ಮುಂದುವರೆಸಿದ್ದರೆ, ಇನ್ನು ಅನೇಕರು RSS ಮುಖಂಡರ ಮನೆಗಳಿಗೆ ಸುತ್ತು ಹಾಕುತ್ತಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ ಮುಂತಾದ ರಾಜ್ಯಗಳಿಗೆ ಹೆಚ್ಚಿನ ಮಂತ್ರಿ ಸ್ಥಾನಗಳು ಸಿಗುವ ಸಾಧ್ಯತೆಗಳಿವೆ. ಉತ್ತರಾಖಂಡದಲ್ಲಿ 45 ವರ್ಷದ ಪುಷ್ಕರ್ ಸಿಂಗ್ ಧಾಮಿಯವರನ್ನು ಮುಖ್ಯಮಂತ್ರಿ ಮಾಡಿರುವ ಬಿಜೆಪಿ, ಕೇಂದ್ರ ಸಚಿವ ಸಂಪೂಟದಲ್ಲೂ ಹೊಸ ಮುಖಗಳಿಗೆ ಮಣೆ ಹಾಕಲಿದೆ ಎಂಬ ನಿರೀಕ್ಷೆ ಬಿಜೆಪಿ ಪಾಳಯದಲ್ಲಿ ಗರಿಗೆದರಿದೆ.

ಯಾರಿಗೆ ಮಂತ್ರಿ ಸ್ಥಾನ ಸಿಗಬಹದು? ಯಾವ ರಾಜ್ಯಕ್ಕೆ ಬಿಜೆಪಿ ಪ್ರಾಧಾನ್ಯತೆ ಸಿಗಲಿದೆ? ಕರ್ನಾಟಕದ ಬಿಜೆಪಿ ಸಂಸದರಿಗೂ ಮಂತ್ರಿಯಾಗುವ ಅವಕಾಶ ಇದೆಯೇ? ಇಲ್ಲಿದೆ ಸಂಪೂರ್ಣ ವಿವರ..

ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಜ್ಯೋತಿರಾದಿತ್ಯ ಸಿಂಧ್ಯಾಗೆ ಸ್ಥಾನ ಸಾಧ್ಯತೆ

ಕರ್ನಾಟಕ ಸೇರಿದಂತೆ ದೇಶದ ಅನೇಕ ಸಂಸದರು ಮತ್ತು ಸಚಿವ ಸ್ಥಾನ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಜ್ಯೋತಿರಾದಿತ್ಯ ಸಿಂಧ್ಯ ಈಗಾಗಲೇ ದೆಹಲಿಯನ್ನು ತಲುಪಿದ್ದು ನರೇಂದ್ರ ಮೋದಿ ಸಚಿವ ಸಂಪುಟವನ್ನು ಸೇರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ಮೂಲಕ ಮತ್ತೊಮ್ಮೆ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದ ಕಾರಣಕ್ಕೆ ಪ್ರತಿಫಲವಾಗಿ ಬಿಜೆಪಿ ಕೆಂದ್ರದಲ್ಲಿ ಮಂತ್ರಿ ಸ್ಥಾನವನ್ನು ಕೊಡಲಿದೆ ಎಂದು ಹೇಳಲಾಗುತ್ತಿದ್ದು ಈ ಸುದ್ದಿಯ ಬೆನ್ನಲ್ಲೇ ಸಿಂಧ್ಯ ಉಜ್ಜಯನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಹ ಕೈಗೊಂಡಿದ್ದಾರೆ.

ಉಜ್ಜಯನಿಯ ಮಹಾಕಾಲ ದೇವಸ್ಥಾನದಲ್ಲಿ ಜ್ಯೋತಿರಾದಿತ್ಯ ಸಿಂಧ್ಯ ವಿಶೇಷ ಪೂಜೆ

ಅಸ್ಸಾಂ ಚುನಾವಣೆಯ ನಂತರ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಟ್ಟಿದ್ದ ಸರ್ಬನಂದ್ ಸೋನೆವಾಲ ಅವರಿಗೂ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್‌ನಲ್ಲಿ ಸಚಿವರಾಗುವ ಅವಕಾಶ ಒದಗಿ ಬಂದಿದೆ ಎಂದು ಹೇಳಲಾಗುತ್ತಿದ್ದು ಅವರು ಕೂಡ ಗುವಾಹಟಿಯಿಂದ ದೆಹಲಿಗೆ ತೆರಳಿದ್ದಾರೆ.

ಮಾಜಿ ಸಚಿವ ರಾಮ್‌ವಿಲಾಸ್‌ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ವಿರುದ್ಧ ಬಂಡಾಯವೆದ್ದಿರುವ ಎಲ್‌ಜೆಪಿಯ ಪಶುಪತಿ ಪರಸ್‌ ಅವರೂ ಕೆಂದ್ರ ಸಚಿವ ಸಂಪುಟದ ಭಾಗವಾಗಬಹುದು. ದೆಹಲಿಯಲ್ಲಿ ಹೊಸ ಕುರ್ತಾ ಖರೀದಿಯಲ್ಲಿ ತೊಡಗಿದ್ದ ಪಾರಸ್‌ ಅವರನ್ನು ಮಂತ್ರಿಯಾಗಿವ ವಿಷಯವನ್ನು ಕೇಳಿದಾಗ ಅದೆಲ್ಲ ಪಕ್ಷದ ರಹಸ್ಯ ಬಹಿರಂಗಗೊಳಿಸಾಗುವುದಿಲ್ಲ ಎಂದು ನಾಜೂಕಿನ ಉತ್ತರ ನೀಡಿ ಜಾರಿಕೊಂಡಿದ್ದಾರೆ. ಪರಸ್‌ ಅವರಿಗೆ ಗೃಹಮಂತ್ರಿ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಹ್ವಾನಿಸಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಕೇಂದ್ರ ಮಂತ್ರಿ ತಾರಾಚಂದ್ ಗೆಹ್ಲೋಟ್‌ ಅವರನ್ನು ಕರ್ನಾಟಕ ರಾಜ್ಯಪಾಲರನ್ನಾಗಿ ನೇಮಿಸಿದ್ದರಿಂದ ಅವರಿಂದ ತೆರವಾದ ಒಂದು ಹೆಚ್ಚುವರಿ ಮಂತ್ರಿ ಸ್ಥಾನ ಸೃಷ್ಟಿಯಾಗಿದೆ. ಗೆಹ್ಲೋಟ್ ಅವರ ರಾಜ್ಯಸಭೆ ಅವಧಿ ಮೇ 2024ರ ವರೆಗೆ ಇದ್ದು ರಾಜ್ಯಪಾಲರಾಗಿ ನೇಮಕಗೊಂಡ ಪರಿಣಾಮ ರಾಜ್ಯಸಭೆ ಸ್ಥಾನ ಕೂಡ ತೆರವಾಗಲಿದೆ. ಇತ್ತೀಚೆಗಷ್ಟೆ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಜಿತಿನ್ ಪ್ರಸಾದ್ ಅವರು ಈ ಸ್ಥಾನವನ್ನು ತುಂಬಲಿದ್ದಾರೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ. 2022 ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಪ್ರಾತಿನಿಧ್ಯವನ್ನು ನೀಡುವ ಸಾಧ್ಯತೆ ಇದೆ ಎಂದು ಉತ್ತರಪ್ರದೇಶದ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಇತ್ತೀಚಿನ ಬೆಳವಣಿಗೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಬಿಜೆಪಿಯ ಬ್ರಾಹ್ಮಣ ನಾಯಕರು ಮುನಿಸಿಕೊಂಡಿದ್ದು ಪಕ್ಷದಲ್ಲಿ ಆಂತರಿಕ ಭಿನ್ನಮತ ಕೂಡ ತಲೆದೋರಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಭದ್ರ ಮತಬ್ಯಾಂಕ್‌ ಆದ ಬ್ರಾಹ್ಮಣ ಸಮುದಾಯದ ಅಸಮಾಧಾನವನ್ನು ತಣ್ಣಗಾಗಿಸಲು ಜಿತಿನ್ ಪ್ರಸಾದ್‌ ಅವರಿಗೆ ಕೇಂದ್ರದಲ್ಲಿ ಮಂತ್ರಿಸ್ಥಾನ ಲಭಿಸಿದರೂ ಆಶ್ಚರ್ಯವಿಲ್ಲ.

ಟಿಎಂಸಿಯಿಂದ ಬಿಜೆಪಿ ಸೇರಿರುವ ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ ದಿನೇಶ್ ತ್ರಿವೇದಿ ಅವರು ಕೂಡ ಬ್ರಾಹ್ಮಣರ ಕೋಟಾದಲ್ಲಿ ಮಂತ್ರಿ ಸ್ಥಾನದ ಆಕಾಂಕ್ಷೆಯಲ್ಲಿ ಇದ್ದಾರೆ.

ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ಅನುಪ್ರಿಯಾ ಪಟೇಲ್ (ಅಪ್ನಾ ದಳ), ಪಂಕಜ್ ಚೌಧರಿ, ರೀಟಾ ಬಹುಗುಣ ಜೋಶಿ, ರಾಮ್‌ಶಂಕರ್ ಕ್ಯಾಥೇರಿಯಾ, ವರುಣ್ ಗಾಂಧಿ, ಲಲ್ಲನ್ ಸಿಂಗ್ ಮತ್ತು ರಾಹುಲ್ ಕಸ್ವಾನ್ ಮಂತ್ರಿ ಸ್ಥಾನವನ್ನು ಖಚಿತಪಡಿಸಿಕೊಂಡು ದೆಹಲಿಯಲ್ಲಿ ನಡೆಯುವ ಪ್ರಮಾಣವಚನಕ್ಕೆ ಸಿದ್ಧರಾಗಿದ್ದಾರೆಂದು ರಾಷ್ಟ್ರೀಯ ಸುದ್ದಿವಾಹಿನಿ ವರದಿ ಮಾಡಿದೆ.

ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟದ ಹಿರಿಯ ಸಹುದ್ಯೋಗಿಗಳೊಂದಿಗೆ ಇಂದು ಸಂಜೆ 5 ಗಂಟೆಗೆ ನಡೆಸಲು ಉದ್ಧೇಶಿಸಿದ್ದ ಮಹತ್ವದ ಸಭೆ ಅಂತಿಮ ಕ್ಷಣಗಳಲ್ಲಿ ರದ್ದುಗೊಂಡಿದೆ. ಸಭೆ ರದ್ದಾಗಿರುವುದು ಮಂತ್ರಿ ಮಂಡಲ ವಿಸ್ತರಣೆಯ ಸ್ಪಷ್ಟ ಸೂಚನೆಯಾಗಿದ್ದು ಈಗಾಗಲೇ ಪ್ರಧಾನಿಯವರು ಸಂಪುಟ ಸೇರಲಿರುವವರ ಪಟ್ಟಿಯನ್ನು ಅಂತಿಮಗೊಳಿಸಿದಂತಿದೆ. 2 ದಿನದಲ್ಲಿ ಸಚಿವ ಸಂಪುಟದ ಪುನರ್ರಚನೆ ನಿಶ್ಚಿತ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: 12 ಬಿಜೆಪಿ ಶಾಸಕರ ಅಮಾನತಿಗೆ ಕೌಂಟರ್ ಅಸೆಂಬ್ಲಿ ನಡೆಸಿ ವಿಪಕ್ಷಗಳ ಆಕ್ರೋಶ

ಕರ್ನಾಟಕ ಸಂಸದರಲ್ಲೂ ಚಿಗುರಿದ ಕನಸು – ಹಿರಿಯ ಸಚಿವರಿಗೆ ಆತಂಕ

ಕರ್ನಾಟಕದ ಕೆಲವು ಸಂಸದರು ತಮಗೂ ದೆಹಲಿಗೆ ಕರೆ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಮಣೆಹಾಕುವ ಸಾಧ್ಯತೆಯಿರುವದರಿಂದ ಇದುವರೆಗೆ ಸಚಿವರಾಗಿರದ ಕೆಲವು ಬಿಜೆಪಿ ಸಂಸದರು ತಮ್ಮದೇ ಲೆಕ್ಕಾಚರದಲ್ಲಿ ತೊಡಗಿದ್ದರೆ, ಕೆಲವರು ಹಿರಿಯ ಆರ್‌ಎಸ್‌ಎಸ್‌ ನಾಯಕರ ಮೂಲಕ ಲಾಬಿ ನಡೆಸಲು ಮುಂದಾಗಿದ್ದಾರೆ. ಕರ್ನಾಟಕದ ಕೋಟಾದಿಂದ ಇಬ್ಬರಿಗೆ ಮಾತ್ರ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದ್ದು ಇರುವ 2 ಸ್ಥಾನಗಳಿಗೆ 8 ಜನರು ಲಾಬಿ ನಡೆಸುತ್ತಿರುವುದು ತಿಳಿದು ಬಂದಿದೆ. ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಹಾವೇರಿ ಸಂಸದ ಶಿವಕುಮಾರ್ ಉದಾಸಿ, ಕೊಪ್ಪಳ ಸಂಸದ ಕರಡಿ‌ ಸಂಗಣ್ಣ, ಗುಲ್ಬರ್ಗ ಸಂಸದ ಉಮೇಶ್ ಜಾಧವ್, ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್, ಬೀದರ್ ಸಂಸದ ಭಗವಂತ ಖೂಬಾ, ಬಾಗಲಕೋಟೆ ಸಂಸದ ಪಿ.ಸಿ. ಗದ್ದೀಗೌಡರ್, ಚಿತ್ರದುರ್ಗದ ಸಂಸದ ಎ. ನಾರಾಯಣಸ್ವಾಮಿ, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳು.

ಕರ್ನಾಟಕದಿಂದ ಸಂಭವನೀಯ ಮಂತ್ರಿಗಳ ಪಟ್ಟಿಯಲ್ಲಿ ಮೊದಲು ಕೇಳಿ ಬಂದ ಹೆಸರು ಶಿವಮೊಗ್ಗ ಸಂಸದ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ  ಬಿ.ವೈ ರಾಘವೇಂದ್ರ ಅವರದು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗಿದ್ದು ಒಂದು ವೇಳೆ ಯಡಿಯೂರಪ್ಪನವರ ಬದಲಾವಣೆ ಮಾಡುವುದಾರೆ ಪುತ್ರ ರಾಘವೇಂದ್ರ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ರಾಜ್ಯ ಬಿಜೆಪಿಯ ಮೂಲಗಳು ಸುದ್ದಿ ಹರಿಬಿಟ್ಟಿವೆ.

ಕೇಂದ್ರ ಸರ್ಕಾರದಲ್ಲಿ ಬಹು ದೀರ್ಘಾವಧಿಯಿಂದ ಮಂತ್ರಿಯಾಗಿರುವ  ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಅವರ ಕಾರ್ಯ ವೈಖರಿ ಕುರಿತು ಪ್ರಧಾನಿ ಮೋದಿ ಅಸಮಾಧಾನಗೊಂಡಿದ್ದಾರೆ. ರಸಗೊಬ್ಬರದ ಬೆಲೆ ಏರಿಕೆ, ಆಕ್ಸಿಜನ್ ಮತ್ತು ಔಷಧದ ಕೊರತೆ ನಿರ್ವಹಣೆ ಸೇರಿದಂತೆ ಸದಾನಂದ ಗೌಡರು ತಮ್ಮ ಇಲಾಖೆಯ ನಿರ್ವಹಣೆಯ ವೈಫಲ್ಯದ ಕುರಿತು ಬಿಜೆಪಿ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಹೇಳಲಾಗುತ್ತಿದ್ದು ಒಂದು ವೇಳೆ ಸದಾನಂದ ಗೌಡ ಅವರನ್ನು ಕೈಬಿಟ್ಟರೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

ದಲಿತ ಎಡಗೈ ಸಮಯದಾಯದ ರಮೇಶ್ ಜಿಗಜಿಣಗಿ ಸ್ಥಾನ ತುಂಬಲು ತಮ್ಮನ್ನು ಪರಿಗಣಿಸಬಹುದೆಂದು ಎ. ನಾರಾಯಣಸ್ವಾಮಿ ಅವರ ಲೆಕ್ಕಾಚಾರವಾಗಿದೆ. ಪುದುಚೇರಿಯಲ್ಲಿ ಎನ್ಡಿಎ ಗೆಲುವಿಗೆ ಕಾರ್ಯತಂತ್ರ ರೂಪಿಸಿದ ಕಾರಣಕ್ಕೆ ತನಗೆ ಸಚಿವ ಸ್ಥಾನ ನೀಡಬಹುದೆಂಬುದು ರಾಜೀವ್ ಚಂದ್ರಶೇಖರ್ ಅವರ ನಿರೀಕ್ಷೆ.

ಲಿಂಗಾಯತ ಮತ್ತು ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಸಕ್ರೀಯ ಎನ್ನುವ ಕಾರಣಕ್ಕೆ ಶಿವಕುಮಾರ್ ಉದಾಸಿಗೆ ಅವಕಾಶ ಸಿಗಬಹುದು. ತಮ್ಮ ವಿರುದ್ಧ ಬಂಡಾಯ ಎದ್ದಿರುವ ಪಂಚಮಸಾಲಿಗಳನ್ನು ವಿಶ್ವಾಸಕ್ಕೆ ಪಡೆಯಲು ಕರಡಿ ಸಂಗಣ್ಣ ಅವರ ಪರವಾಗಿ ಸಿಎಂ ಯಡಿಯೂರಪ್ಪ ಲಾಭಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಹಿರಿಯ ನಾಯಕ, ಅನುಭವಿ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಕಾರಣಕ್ಕೆ ಉಮೇಶ್ ಜಾಧವ್ ಅವರೂ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಬೇಕೆನಿಸಿದರೆ ಪಿ.ಸಿ. ಮೋಹನ್ ಗೆ ಅವಕಾಶ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಲಿಂಗಾಯತ, ಹಿರಿತನ, ಉತ್ತರ ಕರ್ನಾಟಕದವರು ಎಂಬ ಕಾರಣಗಳಿಂದ ಪಿ.ಸಿ. ಗದ್ದೀಗೌಡರ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ನರೇಂದ್ರ  ಮೋದಿ ನೇತೃತ್ವದ ಬಿಜೆಪಿ ಉನ್ನತ ಸಮಿತಿ ಮಂತ್ರಿಗಳ ಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಿದ್ದು ಕರ್ನಾಟಕದಿಂದ ಯಾರ ಹೆಸರು ಪಟ್ಟಿಯಲ್ಲಿ ಇದೆ ಎಂಬ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಹಿರಿತನಕ್ಕೊ ಅಥವಾ ಹೊಸತನಕ್ಕೊ, ಜಾತಿ ಲೆಕ್ಕಾಚರಕ್ಕೊ ಅಥವಾ ಸಂಘಟನೆ ಮತ್ತು ಚುನಾವಣೆಗಳಲ್ಲಿನ ಪ್ರದರ್ಶನದ ಆಧಾರದಲ್ಲಿಯೊ ಯಾವ ಮಾನದಂಡದಲ್ಲಿ ಸಚಿವ ಸ್ಥಾನಗಳನ್ನು ನೀಡಲಾಗುತ್ತದೆ ಎಂಬುದು ಕುತೂಹಲದ ಸಂಗತಿ.  81 ಜನರ ಕೇಂದ್ರ ಸಂಪುಟದಲ್ಲಿ ಒಟ್ಟೂ 28 ಸಚಿವ ಸ್ಥಾನಗಳು ಖಾಲಿ ಉಳಿದಿದ್ದು ಬಿಜೆಪಿ ಎಷ್ಟು ಸ್ಥಾನಗಳನ್ನು ಭರ್ತಿ ಮಾಡುತ್ತದೆ ಎಂಬ ಪ್ರಶ್ನೆಗೆ ಬಹುಶಃ ನಾಳೆಯಷ್ಟರ ಹೊತ್ತಿಗೆ ತೆರೆ ಬೀಳಬಹುದು.

ರಾಜೇಶ್ ಹೆಬ್ಬಾರ್‌


ಇದನ್ನೂ ಓದಿ: ರಾಜ್ಯದ ಹೊಸ ರಾಜ್ಯಪಾಲರಾಗಿ ಒಕ್ಕೂಟ ಸರ್ಕಾರದ ಸಚಿವ ತಾವರ್‌ಚಂದ್ ಗೆಹ್ಲೋಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...