Homeಮುಖಪುಟಕೇಂದ್ರ ಸಂಪುಟ ಪುನರ್ರಚನೆ: ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?

ಕೇಂದ್ರ ಸಂಪುಟ ಪುನರ್ರಚನೆ: ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದು ಎರಡು ವರ್ಷಗಳ ನಂತರ ಸಂಪುಟ ಪುನರ್ರಚನೆ ಕಸರತ್ತಿಗೆ ಕೈಹಾಕಿದೆ. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು 20 ಕ್ಕೂ ಹೆಚ್ಚು ಸಂಸದರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಕೆಲವು ನಾಯಕರು ಅಂತಿಮ ಕ್ಷಣದವರೆಗೂ ಮಂತ್ರಿ ಸ್ಥಾನದ ಲಾಭಿಯನ್ನು ಮುಂದುವರೆಸಿದ್ದರೆ, ಇನ್ನು ಅನೇಕರು RSS ಮುಖಂಡರ ಮನೆಗಳಿಗೆ ಸುತ್ತು ಹಾಕುತ್ತಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ ಮುಂತಾದ ರಾಜ್ಯಗಳಿಗೆ ಹೆಚ್ಚಿನ ಮಂತ್ರಿ ಸ್ಥಾನಗಳು ಸಿಗುವ ಸಾಧ್ಯತೆಗಳಿವೆ. ಉತ್ತರಾಖಂಡದಲ್ಲಿ 45 ವರ್ಷದ ಪುಷ್ಕರ್ ಸಿಂಗ್ ಧಾಮಿಯವರನ್ನು ಮುಖ್ಯಮಂತ್ರಿ ಮಾಡಿರುವ ಬಿಜೆಪಿ, ಕೇಂದ್ರ ಸಚಿವ ಸಂಪೂಟದಲ್ಲೂ ಹೊಸ ಮುಖಗಳಿಗೆ ಮಣೆ ಹಾಕಲಿದೆ ಎಂಬ ನಿರೀಕ್ಷೆ ಬಿಜೆಪಿ ಪಾಳಯದಲ್ಲಿ ಗರಿಗೆದರಿದೆ.

ಯಾರಿಗೆ ಮಂತ್ರಿ ಸ್ಥಾನ ಸಿಗಬಹದು? ಯಾವ ರಾಜ್ಯಕ್ಕೆ ಬಿಜೆಪಿ ಪ್ರಾಧಾನ್ಯತೆ ಸಿಗಲಿದೆ? ಕರ್ನಾಟಕದ ಬಿಜೆಪಿ ಸಂಸದರಿಗೂ ಮಂತ್ರಿಯಾಗುವ ಅವಕಾಶ ಇದೆಯೇ? ಇಲ್ಲಿದೆ ಸಂಪೂರ್ಣ ವಿವರ..

ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಜ್ಯೋತಿರಾದಿತ್ಯ ಸಿಂಧ್ಯಾಗೆ ಸ್ಥಾನ ಸಾಧ್ಯತೆ

ಕರ್ನಾಟಕ ಸೇರಿದಂತೆ ದೇಶದ ಅನೇಕ ಸಂಸದರು ಮತ್ತು ಸಚಿವ ಸ್ಥಾನ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಜ್ಯೋತಿರಾದಿತ್ಯ ಸಿಂಧ್ಯ ಈಗಾಗಲೇ ದೆಹಲಿಯನ್ನು ತಲುಪಿದ್ದು ನರೇಂದ್ರ ಮೋದಿ ಸಚಿವ ಸಂಪುಟವನ್ನು ಸೇರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ಮೂಲಕ ಮತ್ತೊಮ್ಮೆ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದ ಕಾರಣಕ್ಕೆ ಪ್ರತಿಫಲವಾಗಿ ಬಿಜೆಪಿ ಕೆಂದ್ರದಲ್ಲಿ ಮಂತ್ರಿ ಸ್ಥಾನವನ್ನು ಕೊಡಲಿದೆ ಎಂದು ಹೇಳಲಾಗುತ್ತಿದ್ದು ಈ ಸುದ್ದಿಯ ಬೆನ್ನಲ್ಲೇ ಸಿಂಧ್ಯ ಉಜ್ಜಯನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಹ ಕೈಗೊಂಡಿದ್ದಾರೆ.

ಉಜ್ಜಯನಿಯ ಮಹಾಕಾಲ ದೇವಸ್ಥಾನದಲ್ಲಿ ಜ್ಯೋತಿರಾದಿತ್ಯ ಸಿಂಧ್ಯ ವಿಶೇಷ ಪೂಜೆ

ಅಸ್ಸಾಂ ಚುನಾವಣೆಯ ನಂತರ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಟ್ಟಿದ್ದ ಸರ್ಬನಂದ್ ಸೋನೆವಾಲ ಅವರಿಗೂ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್‌ನಲ್ಲಿ ಸಚಿವರಾಗುವ ಅವಕಾಶ ಒದಗಿ ಬಂದಿದೆ ಎಂದು ಹೇಳಲಾಗುತ್ತಿದ್ದು ಅವರು ಕೂಡ ಗುವಾಹಟಿಯಿಂದ ದೆಹಲಿಗೆ ತೆರಳಿದ್ದಾರೆ.

ಮಾಜಿ ಸಚಿವ ರಾಮ್‌ವಿಲಾಸ್‌ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ವಿರುದ್ಧ ಬಂಡಾಯವೆದ್ದಿರುವ ಎಲ್‌ಜೆಪಿಯ ಪಶುಪತಿ ಪರಸ್‌ ಅವರೂ ಕೆಂದ್ರ ಸಚಿವ ಸಂಪುಟದ ಭಾಗವಾಗಬಹುದು. ದೆಹಲಿಯಲ್ಲಿ ಹೊಸ ಕುರ್ತಾ ಖರೀದಿಯಲ್ಲಿ ತೊಡಗಿದ್ದ ಪಾರಸ್‌ ಅವರನ್ನು ಮಂತ್ರಿಯಾಗಿವ ವಿಷಯವನ್ನು ಕೇಳಿದಾಗ ಅದೆಲ್ಲ ಪಕ್ಷದ ರಹಸ್ಯ ಬಹಿರಂಗಗೊಳಿಸಾಗುವುದಿಲ್ಲ ಎಂದು ನಾಜೂಕಿನ ಉತ್ತರ ನೀಡಿ ಜಾರಿಕೊಂಡಿದ್ದಾರೆ. ಪರಸ್‌ ಅವರಿಗೆ ಗೃಹಮಂತ್ರಿ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಹ್ವಾನಿಸಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಕೇಂದ್ರ ಮಂತ್ರಿ ತಾರಾಚಂದ್ ಗೆಹ್ಲೋಟ್‌ ಅವರನ್ನು ಕರ್ನಾಟಕ ರಾಜ್ಯಪಾಲರನ್ನಾಗಿ ನೇಮಿಸಿದ್ದರಿಂದ ಅವರಿಂದ ತೆರವಾದ ಒಂದು ಹೆಚ್ಚುವರಿ ಮಂತ್ರಿ ಸ್ಥಾನ ಸೃಷ್ಟಿಯಾಗಿದೆ. ಗೆಹ್ಲೋಟ್ ಅವರ ರಾಜ್ಯಸಭೆ ಅವಧಿ ಮೇ 2024ರ ವರೆಗೆ ಇದ್ದು ರಾಜ್ಯಪಾಲರಾಗಿ ನೇಮಕಗೊಂಡ ಪರಿಣಾಮ ರಾಜ್ಯಸಭೆ ಸ್ಥಾನ ಕೂಡ ತೆರವಾಗಲಿದೆ. ಇತ್ತೀಚೆಗಷ್ಟೆ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಜಿತಿನ್ ಪ್ರಸಾದ್ ಅವರು ಈ ಸ್ಥಾನವನ್ನು ತುಂಬಲಿದ್ದಾರೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ. 2022 ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಪ್ರಾತಿನಿಧ್ಯವನ್ನು ನೀಡುವ ಸಾಧ್ಯತೆ ಇದೆ ಎಂದು ಉತ್ತರಪ್ರದೇಶದ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಇತ್ತೀಚಿನ ಬೆಳವಣಿಗೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಬಿಜೆಪಿಯ ಬ್ರಾಹ್ಮಣ ನಾಯಕರು ಮುನಿಸಿಕೊಂಡಿದ್ದು ಪಕ್ಷದಲ್ಲಿ ಆಂತರಿಕ ಭಿನ್ನಮತ ಕೂಡ ತಲೆದೋರಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಭದ್ರ ಮತಬ್ಯಾಂಕ್‌ ಆದ ಬ್ರಾಹ್ಮಣ ಸಮುದಾಯದ ಅಸಮಾಧಾನವನ್ನು ತಣ್ಣಗಾಗಿಸಲು ಜಿತಿನ್ ಪ್ರಸಾದ್‌ ಅವರಿಗೆ ಕೇಂದ್ರದಲ್ಲಿ ಮಂತ್ರಿಸ್ಥಾನ ಲಭಿಸಿದರೂ ಆಶ್ಚರ್ಯವಿಲ್ಲ.

ಟಿಎಂಸಿಯಿಂದ ಬಿಜೆಪಿ ಸೇರಿರುವ ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ ದಿನೇಶ್ ತ್ರಿವೇದಿ ಅವರು ಕೂಡ ಬ್ರಾಹ್ಮಣರ ಕೋಟಾದಲ್ಲಿ ಮಂತ್ರಿ ಸ್ಥಾನದ ಆಕಾಂಕ್ಷೆಯಲ್ಲಿ ಇದ್ದಾರೆ.

ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ಅನುಪ್ರಿಯಾ ಪಟೇಲ್ (ಅಪ್ನಾ ದಳ), ಪಂಕಜ್ ಚೌಧರಿ, ರೀಟಾ ಬಹುಗುಣ ಜೋಶಿ, ರಾಮ್‌ಶಂಕರ್ ಕ್ಯಾಥೇರಿಯಾ, ವರುಣ್ ಗಾಂಧಿ, ಲಲ್ಲನ್ ಸಿಂಗ್ ಮತ್ತು ರಾಹುಲ್ ಕಸ್ವಾನ್ ಮಂತ್ರಿ ಸ್ಥಾನವನ್ನು ಖಚಿತಪಡಿಸಿಕೊಂಡು ದೆಹಲಿಯಲ್ಲಿ ನಡೆಯುವ ಪ್ರಮಾಣವಚನಕ್ಕೆ ಸಿದ್ಧರಾಗಿದ್ದಾರೆಂದು ರಾಷ್ಟ್ರೀಯ ಸುದ್ದಿವಾಹಿನಿ ವರದಿ ಮಾಡಿದೆ.

ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟದ ಹಿರಿಯ ಸಹುದ್ಯೋಗಿಗಳೊಂದಿಗೆ ಇಂದು ಸಂಜೆ 5 ಗಂಟೆಗೆ ನಡೆಸಲು ಉದ್ಧೇಶಿಸಿದ್ದ ಮಹತ್ವದ ಸಭೆ ಅಂತಿಮ ಕ್ಷಣಗಳಲ್ಲಿ ರದ್ದುಗೊಂಡಿದೆ. ಸಭೆ ರದ್ದಾಗಿರುವುದು ಮಂತ್ರಿ ಮಂಡಲ ವಿಸ್ತರಣೆಯ ಸ್ಪಷ್ಟ ಸೂಚನೆಯಾಗಿದ್ದು ಈಗಾಗಲೇ ಪ್ರಧಾನಿಯವರು ಸಂಪುಟ ಸೇರಲಿರುವವರ ಪಟ್ಟಿಯನ್ನು ಅಂತಿಮಗೊಳಿಸಿದಂತಿದೆ. 2 ದಿನದಲ್ಲಿ ಸಚಿವ ಸಂಪುಟದ ಪುನರ್ರಚನೆ ನಿಶ್ಚಿತ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: 12 ಬಿಜೆಪಿ ಶಾಸಕರ ಅಮಾನತಿಗೆ ಕೌಂಟರ್ ಅಸೆಂಬ್ಲಿ ನಡೆಸಿ ವಿಪಕ್ಷಗಳ ಆಕ್ರೋಶ

ಕರ್ನಾಟಕ ಸಂಸದರಲ್ಲೂ ಚಿಗುರಿದ ಕನಸು – ಹಿರಿಯ ಸಚಿವರಿಗೆ ಆತಂಕ

ಕರ್ನಾಟಕದ ಕೆಲವು ಸಂಸದರು ತಮಗೂ ದೆಹಲಿಗೆ ಕರೆ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಮಣೆಹಾಕುವ ಸಾಧ್ಯತೆಯಿರುವದರಿಂದ ಇದುವರೆಗೆ ಸಚಿವರಾಗಿರದ ಕೆಲವು ಬಿಜೆಪಿ ಸಂಸದರು ತಮ್ಮದೇ ಲೆಕ್ಕಾಚರದಲ್ಲಿ ತೊಡಗಿದ್ದರೆ, ಕೆಲವರು ಹಿರಿಯ ಆರ್‌ಎಸ್‌ಎಸ್‌ ನಾಯಕರ ಮೂಲಕ ಲಾಬಿ ನಡೆಸಲು ಮುಂದಾಗಿದ್ದಾರೆ. ಕರ್ನಾಟಕದ ಕೋಟಾದಿಂದ ಇಬ್ಬರಿಗೆ ಮಾತ್ರ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದ್ದು ಇರುವ 2 ಸ್ಥಾನಗಳಿಗೆ 8 ಜನರು ಲಾಬಿ ನಡೆಸುತ್ತಿರುವುದು ತಿಳಿದು ಬಂದಿದೆ. ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಹಾವೇರಿ ಸಂಸದ ಶಿವಕುಮಾರ್ ಉದಾಸಿ, ಕೊಪ್ಪಳ ಸಂಸದ ಕರಡಿ‌ ಸಂಗಣ್ಣ, ಗುಲ್ಬರ್ಗ ಸಂಸದ ಉಮೇಶ್ ಜಾಧವ್, ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್, ಬೀದರ್ ಸಂಸದ ಭಗವಂತ ಖೂಬಾ, ಬಾಗಲಕೋಟೆ ಸಂಸದ ಪಿ.ಸಿ. ಗದ್ದೀಗೌಡರ್, ಚಿತ್ರದುರ್ಗದ ಸಂಸದ ಎ. ನಾರಾಯಣಸ್ವಾಮಿ, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳು.

ಕರ್ನಾಟಕದಿಂದ ಸಂಭವನೀಯ ಮಂತ್ರಿಗಳ ಪಟ್ಟಿಯಲ್ಲಿ ಮೊದಲು ಕೇಳಿ ಬಂದ ಹೆಸರು ಶಿವಮೊಗ್ಗ ಸಂಸದ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ  ಬಿ.ವೈ ರಾಘವೇಂದ್ರ ಅವರದು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗಿದ್ದು ಒಂದು ವೇಳೆ ಯಡಿಯೂರಪ್ಪನವರ ಬದಲಾವಣೆ ಮಾಡುವುದಾರೆ ಪುತ್ರ ರಾಘವೇಂದ್ರ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ರಾಜ್ಯ ಬಿಜೆಪಿಯ ಮೂಲಗಳು ಸುದ್ದಿ ಹರಿಬಿಟ್ಟಿವೆ.

ಕೇಂದ್ರ ಸರ್ಕಾರದಲ್ಲಿ ಬಹು ದೀರ್ಘಾವಧಿಯಿಂದ ಮಂತ್ರಿಯಾಗಿರುವ  ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಅವರ ಕಾರ್ಯ ವೈಖರಿ ಕುರಿತು ಪ್ರಧಾನಿ ಮೋದಿ ಅಸಮಾಧಾನಗೊಂಡಿದ್ದಾರೆ. ರಸಗೊಬ್ಬರದ ಬೆಲೆ ಏರಿಕೆ, ಆಕ್ಸಿಜನ್ ಮತ್ತು ಔಷಧದ ಕೊರತೆ ನಿರ್ವಹಣೆ ಸೇರಿದಂತೆ ಸದಾನಂದ ಗೌಡರು ತಮ್ಮ ಇಲಾಖೆಯ ನಿರ್ವಹಣೆಯ ವೈಫಲ್ಯದ ಕುರಿತು ಬಿಜೆಪಿ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಹೇಳಲಾಗುತ್ತಿದ್ದು ಒಂದು ವೇಳೆ ಸದಾನಂದ ಗೌಡ ಅವರನ್ನು ಕೈಬಿಟ್ಟರೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

ದಲಿತ ಎಡಗೈ ಸಮಯದಾಯದ ರಮೇಶ್ ಜಿಗಜಿಣಗಿ ಸ್ಥಾನ ತುಂಬಲು ತಮ್ಮನ್ನು ಪರಿಗಣಿಸಬಹುದೆಂದು ಎ. ನಾರಾಯಣಸ್ವಾಮಿ ಅವರ ಲೆಕ್ಕಾಚಾರವಾಗಿದೆ. ಪುದುಚೇರಿಯಲ್ಲಿ ಎನ್ಡಿಎ ಗೆಲುವಿಗೆ ಕಾರ್ಯತಂತ್ರ ರೂಪಿಸಿದ ಕಾರಣಕ್ಕೆ ತನಗೆ ಸಚಿವ ಸ್ಥಾನ ನೀಡಬಹುದೆಂಬುದು ರಾಜೀವ್ ಚಂದ್ರಶೇಖರ್ ಅವರ ನಿರೀಕ್ಷೆ.

ಲಿಂಗಾಯತ ಮತ್ತು ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಸಕ್ರೀಯ ಎನ್ನುವ ಕಾರಣಕ್ಕೆ ಶಿವಕುಮಾರ್ ಉದಾಸಿಗೆ ಅವಕಾಶ ಸಿಗಬಹುದು. ತಮ್ಮ ವಿರುದ್ಧ ಬಂಡಾಯ ಎದ್ದಿರುವ ಪಂಚಮಸಾಲಿಗಳನ್ನು ವಿಶ್ವಾಸಕ್ಕೆ ಪಡೆಯಲು ಕರಡಿ ಸಂಗಣ್ಣ ಅವರ ಪರವಾಗಿ ಸಿಎಂ ಯಡಿಯೂರಪ್ಪ ಲಾಭಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಹಿರಿಯ ನಾಯಕ, ಅನುಭವಿ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಕಾರಣಕ್ಕೆ ಉಮೇಶ್ ಜಾಧವ್ ಅವರೂ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಬೇಕೆನಿಸಿದರೆ ಪಿ.ಸಿ. ಮೋಹನ್ ಗೆ ಅವಕಾಶ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಲಿಂಗಾಯತ, ಹಿರಿತನ, ಉತ್ತರ ಕರ್ನಾಟಕದವರು ಎಂಬ ಕಾರಣಗಳಿಂದ ಪಿ.ಸಿ. ಗದ್ದೀಗೌಡರ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ನರೇಂದ್ರ  ಮೋದಿ ನೇತೃತ್ವದ ಬಿಜೆಪಿ ಉನ್ನತ ಸಮಿತಿ ಮಂತ್ರಿಗಳ ಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಿದ್ದು ಕರ್ನಾಟಕದಿಂದ ಯಾರ ಹೆಸರು ಪಟ್ಟಿಯಲ್ಲಿ ಇದೆ ಎಂಬ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಹಿರಿತನಕ್ಕೊ ಅಥವಾ ಹೊಸತನಕ್ಕೊ, ಜಾತಿ ಲೆಕ್ಕಾಚರಕ್ಕೊ ಅಥವಾ ಸಂಘಟನೆ ಮತ್ತು ಚುನಾವಣೆಗಳಲ್ಲಿನ ಪ್ರದರ್ಶನದ ಆಧಾರದಲ್ಲಿಯೊ ಯಾವ ಮಾನದಂಡದಲ್ಲಿ ಸಚಿವ ಸ್ಥಾನಗಳನ್ನು ನೀಡಲಾಗುತ್ತದೆ ಎಂಬುದು ಕುತೂಹಲದ ಸಂಗತಿ.  81 ಜನರ ಕೇಂದ್ರ ಸಂಪುಟದಲ್ಲಿ ಒಟ್ಟೂ 28 ಸಚಿವ ಸ್ಥಾನಗಳು ಖಾಲಿ ಉಳಿದಿದ್ದು ಬಿಜೆಪಿ ಎಷ್ಟು ಸ್ಥಾನಗಳನ್ನು ಭರ್ತಿ ಮಾಡುತ್ತದೆ ಎಂಬ ಪ್ರಶ್ನೆಗೆ ಬಹುಶಃ ನಾಳೆಯಷ್ಟರ ಹೊತ್ತಿಗೆ ತೆರೆ ಬೀಳಬಹುದು.

ರಾಜೇಶ್ ಹೆಬ್ಬಾರ್‌


ಇದನ್ನೂ ಓದಿ: ರಾಜ್ಯದ ಹೊಸ ರಾಜ್ಯಪಾಲರಾಗಿ ಒಕ್ಕೂಟ ಸರ್ಕಾರದ ಸಚಿವ ತಾವರ್‌ಚಂದ್ ಗೆಹ್ಲೋಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...