Homeಮುಖಪುಟಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

- Advertisement -
- Advertisement -

ಯೂನಿಯನ್ ಕಾರ್ಬೈಡ್ ಫ್ಯಾಕ್ಟರಿ ತ್ಯಾಜ್ಯದ ಬಗ್ಗೆ ಸುರಕ್ಷತಾ ಪ್ರೋಟೋಕಾಲ್‌ಗಳ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜೊತೆಗೆ, ಮಾಧ್ಯಮಗಳು ಈ ಬಗ್ಗೆ ತಪ್ಪು ಸುದ್ದಿ ನೀಡುವುದನ್ನು ನಿಷೇಧಿಸಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಶಾಂತ್ ಸಿಂಗ್, ಕಂಟೈನರ್‌ಗಳು ತ್ಯಾಜ್ಯವನ್ನು ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವಂತಿಲ್ಲ ಮತ್ತು ಪಿತಾಂಪುರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ ನಂತರ ಅವುಗಳನ್ನು ಇಳಿಸಲು ಅನುಮತಿ ಕೋರಿದ್ದೇವೆ ಎಂದು ಹೇಳಿದರು.

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಲ್ಪನಿಕ ಮತ್ತು ನಕಲಿ ಸುದ್ದಿಗಳಿಂದಾಗಿ ಪಿತಾಂಪುರ ಟೌನ್‌ಶಿಪ್‌ನಲ್ಲಿ ಅಶಾಂತಿ ಉಂಟಾಗಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ಈ ವಿಷಯದ ಬಗ್ಗೆ ಯಾವುದೇ ತಪ್ಪು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮುದ್ರಣ, ರೇಡಿಯೋ ಮತ್ತು ದೃಶ್ಯ ಮಾಧ್ಯಮವನ್ನು ನಿರ್ಬಂಧಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಭೋಪಾಲ್‌ನಿಂದ ಪಿತಾಂಪುರಕ್ಕೆ ಸ್ಥಳಾಂತರಿಸಲಾದ ತ್ಯಾಜ್ಯವನ್ನು 12 ಮುಚ್ಚಿದ ಕಂಟೈನರ್‌ಗಳಲ್ಲಿ ಇಳಿಸಲು ರಾಜ್ಯವು ಮೂರು ದಿನಗಳ ಕಾಲಾವಕಾಶವನ್ನು ಕೋರಿತು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ತ್ಯಾಜ್ಯವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯದ ಆದ್ಯತೆಯಾಗಿದೆ ಎಂದು ಹೇಳಿದೆ.

ವಿಚಾರಣೆಯಲ್ಲಿ, ಅರ್ಜಿದಾರರ ಪರ ವಕೀಲ ಅಭಿನವ್ ಧನೋಡ್ಕರ್ ಅವರು ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಿಂದ ಪಿತಾಂಪುರ, ಮೋವ್ ಮತ್ತು ಧಾರ್ ನಿವಾಸಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಮೂರು ಹಂತಗಳಲ್ಲಿ ತ್ಯಾಜ್ಯವನ್ನು ನಾಶಪಡಿಸುವ ಕುರಿತು ಸರ್ಕಾರವು ಚರ್ಚಿಸಿದ್ದು, ತ್ಯಾಜ್ಯವನ್ನು ಸುಡುವುದರಿಂದ ಮಾರಣಾಂತಿಕ ರೋಗಗಳು ಹರಡುವುದಲ್ಲದೆ ಭೂಮಿ ಮತ್ತು ನೀರನ್ನು ಕಲುಷಿತಗೊಳಿಸುತ್ತದೆ, ಇದು ಹಾನಿಕಾರಕವಾಗಿದೆ ಎಂದು ಧನೋದ್ಕರ್ ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸುರೇಶ್, ಮುಂದಿನ ವಿಚಾರಣೆಯ ದಿನಾಂಕವಾಗಿ ಫೆಬ್ರವರಿ 18, ಅಂದರೆ ಆರು ವಾರಗಳ ನಂತರ ನಿರ್ಧರಿಸಲಾಗುತ್ತದೆ.

ಡಿಸೆಂಬರ್ 2-3, 1984 ರ ಮಧ್ಯರಾತ್ರಿಯಲ್ಲಿ, ಭೋಪಾಲ್‌ನ ಯೂನಿಯನ್ ಕಾರ್ಬೈಡ್ ಕೀಟನಾಶಕ ಕಾರ್ಖಾನೆಯಿಂದ ಮೀಥೈಲ್ ಐಸೊಸೈನೇಟ್ (ಎಂಐಸಿ) ಅನಿಲ ಸೋರಿಕೆಯಾಯಿತು. ಇದರಿಂದ ಕನಿಷ್ಠ 5,479 ಜನರ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಗಂಭೀರವಾದ ಗಾಯಗಳು ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಡಿಸೆಂಬರ್ 3, 2024 ರಂದು ಕೊನೆಯ ವಿಚಾರಣೆಯ ಸಂದರ್ಭದಲ್ಲಿ, ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ವಿಫಲವಾದ ಕಾರಣಕ್ಕಾಗಿ ಹೈಕೋರ್ಟ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಅನಿಲ ದುರಂತದ 40 ವರ್ಷಗಳ ನಂತರವೂ ಅಧಿಕಾರಿಗಳು “ಜಡತ್ವದ ಸ್ಥಿತಿಯಲ್ಲಿ” ಇದ್ದಾರೆ, ಅದು ಮತ್ತೊಂದು ದುರಂತಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ.

ನಾಲ್ಕು ವಾರಗಳಲ್ಲಿ ಸ್ಥಳದಿಂದ ತ್ಯಾಜ್ಯವನ್ನು ತೆಗೆದು ಸಾಗಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ನಿರ್ದೇಶನವನ್ನು ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಯ ಎಚ್ಚರಿಕೆ ನೀಡಿತು.

ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿ, “ನಾವು ಜನರಿಗೆ ಏನು ಹೇಳಿದ್ದೇವೆ, ಅದನ್ನೇ ಹೈಕೋರ್ಟ್‌ನಲ್ಲಿ ಪುನರಾವರ್ತಿಸಿದ್ದೇವೆ. ನಾವು ಯೂನಿಯನ್ ಕಾರ್ಬೈಡ್ ತ್ಯಾಜ್ಯವನ್ನು ಹೈಕೋರ್ಟ್‌ನ ನಿರ್ದೇಶನದಂತೆ ಪಿತಾಂಪುರಕ್ಕೆ ಸ್ಥಳಾಂತರಿಸಿದ್ದೇವೆ ಎಂದು ಹೇಳಿದ್ದೇವೆ” ಎಂದರು.

“ಕಕ್ಷಿದಾರರ ವಾದ ಆಲಿಸಿದ ನಂತರ, ಹೈಕೋರ್ಟ್ ಅವರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಅದರ ತೀರ್ಪಿಗೆ ನಾನು ಗೌರವಾನ್ವಿತ ಹೈಕೋರ್ಟಿಗೆ ಧನ್ಯವಾದ ಹೇಳುತ್ತೇನೆ. ಸರ್ಕಾರದ ಉದ್ದೇಶವನ್ನು ತಿಳಿದುಕೊಂಡ ನಂತರ ಹೈಕೋರ್ಟ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.. ನಾವು ಗೌರವಾನ್ವಿತ ಹೈಕೋರ್ಟ್ ಅನ್ನು ಸಂಪರ್ಕಿಸಿದ ನಂತರವೇ ಮುಂದುವರಿಯುತ್ತೇವೆ. ಗೌರವಾನ್ವಿತ ಹೈಕೋರ್ಟನ್ನು ನಾವೆಲ್ಲರೂ ನಂಬುತ್ತೇವೆ; ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಕೇಳುತ್ತೇವೆ ಎಂದು ನಾನು ಹೇಳಲು ಬಯಸುತ್ತೇನೆ, ಆದ್ದರಿಂದ ಸ್ಥಳೀಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಕೋರುತ್ತೇನೆ” ಎಂದು ಯಾದವ್ ಹೇಳಿದರು.

ಜನವರಿ 1 ರ ಸಂಜೆ, ಭೋಪಾಲ್ ಗ್ಯಾಸ್ ಫ್ಯಾಕ್ಟರಿಯಿಂದ 358 ಮೆಟ್ರಿಕ್ ಟನ್ ತ್ಯಾಜ್ಯವನ್ನು ಹೊಂದಿರುವ 12 ಕಂಟೇನರ್‌ಗಳನ್ನು ಭೋಪಾಲ್‌ನಿಂದ ಪಿತಾಂಪುರಕ್ಕೆ ಸಾಗಿಸಲಾಯಿತು. ಅಲ್ಲಿ ಅವುಗಳನ್ನು ರಾಮ್ಕಿ ಎನ್ವಿರೋ ಇಂಡಸ್ಟ್ರೀಸ್ ಸುಡಬೇಕಿತ್ತು. ಪಿತಾಂಪುರದ ಜನರು ಮತ್ತು ಸ್ಥಳೀಯ ಸಂಸ್ಥೆಗಳು ಈ ತ್ಯಾಜ್ಯವು ಅಲ್ಲಿಗೆ ಬಂದಾಗಿನಿಂದಲೂ ವಿರೋಧಿಸುತ್ತಿವೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಜನವರಿ 3 ರಂದು ಉನ್ನತ ಮಟ್ಟದ ಸಭೆಯನ್ನು ಕರೆದರು. ಅಲ್ಲಿ ಸದ್ಯಕ್ಕೆ ತ್ಯಾಜ್ಯವನ್ನು ಸುಡುವುದಿಲ್ಲ ಮತ್ತು ಎಲ್ಲಾ ವಿಷಯಗಳನ್ನು ಹೈಕೋರ್ಟ್‌ಗೆ ತರಲಾಗುವುದು ಎಂದು ನಿರ್ಧರಿಸಲಾಯಿತು. ಜನರು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಮಾತನಾಡುವ ಮೂಲಕ ಅವರ ಮನವೊಲಿಸುವುದಕ್ಕೆ ಸರ್ಕಾರ ಮತ್ತು ಆಡಳಿತ ನಿರ್ಧರಿಸಿದೆ.

ಇದನ್ನೂ ಓದಿ; ಚೀನಾ, ಟಿಬೆಟ್‌ನಲ್ಲಿ ಪ್ರಬಲ ಭೂಕಂಪನ; 30ಕ್ಕೂ ಹೆಚ್ಚು ಜನರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...