Homeಮುಖಪುಟಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

- Advertisement -
- Advertisement -

ಯೂನಿಯನ್ ಕಾರ್ಬೈಡ್ ಫ್ಯಾಕ್ಟರಿ ತ್ಯಾಜ್ಯದ ಬಗ್ಗೆ ಸುರಕ್ಷತಾ ಪ್ರೋಟೋಕಾಲ್‌ಗಳ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜೊತೆಗೆ, ಮಾಧ್ಯಮಗಳು ಈ ಬಗ್ಗೆ ತಪ್ಪು ಸುದ್ದಿ ನೀಡುವುದನ್ನು ನಿಷೇಧಿಸಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಶಾಂತ್ ಸಿಂಗ್, ಕಂಟೈನರ್‌ಗಳು ತ್ಯಾಜ್ಯವನ್ನು ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವಂತಿಲ್ಲ ಮತ್ತು ಪಿತಾಂಪುರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ ನಂತರ ಅವುಗಳನ್ನು ಇಳಿಸಲು ಅನುಮತಿ ಕೋರಿದ್ದೇವೆ ಎಂದು ಹೇಳಿದರು.

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಲ್ಪನಿಕ ಮತ್ತು ನಕಲಿ ಸುದ್ದಿಗಳಿಂದಾಗಿ ಪಿತಾಂಪುರ ಟೌನ್‌ಶಿಪ್‌ನಲ್ಲಿ ಅಶಾಂತಿ ಉಂಟಾಗಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ಈ ವಿಷಯದ ಬಗ್ಗೆ ಯಾವುದೇ ತಪ್ಪು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮುದ್ರಣ, ರೇಡಿಯೋ ಮತ್ತು ದೃಶ್ಯ ಮಾಧ್ಯಮವನ್ನು ನಿರ್ಬಂಧಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಭೋಪಾಲ್‌ನಿಂದ ಪಿತಾಂಪುರಕ್ಕೆ ಸ್ಥಳಾಂತರಿಸಲಾದ ತ್ಯಾಜ್ಯವನ್ನು 12 ಮುಚ್ಚಿದ ಕಂಟೈನರ್‌ಗಳಲ್ಲಿ ಇಳಿಸಲು ರಾಜ್ಯವು ಮೂರು ದಿನಗಳ ಕಾಲಾವಕಾಶವನ್ನು ಕೋರಿತು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ತ್ಯಾಜ್ಯವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯದ ಆದ್ಯತೆಯಾಗಿದೆ ಎಂದು ಹೇಳಿದೆ.

ವಿಚಾರಣೆಯಲ್ಲಿ, ಅರ್ಜಿದಾರರ ಪರ ವಕೀಲ ಅಭಿನವ್ ಧನೋಡ್ಕರ್ ಅವರು ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಿಂದ ಪಿತಾಂಪುರ, ಮೋವ್ ಮತ್ತು ಧಾರ್ ನಿವಾಸಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಮೂರು ಹಂತಗಳಲ್ಲಿ ತ್ಯಾಜ್ಯವನ್ನು ನಾಶಪಡಿಸುವ ಕುರಿತು ಸರ್ಕಾರವು ಚರ್ಚಿಸಿದ್ದು, ತ್ಯಾಜ್ಯವನ್ನು ಸುಡುವುದರಿಂದ ಮಾರಣಾಂತಿಕ ರೋಗಗಳು ಹರಡುವುದಲ್ಲದೆ ಭೂಮಿ ಮತ್ತು ನೀರನ್ನು ಕಲುಷಿತಗೊಳಿಸುತ್ತದೆ, ಇದು ಹಾನಿಕಾರಕವಾಗಿದೆ ಎಂದು ಧನೋದ್ಕರ್ ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸುರೇಶ್, ಮುಂದಿನ ವಿಚಾರಣೆಯ ದಿನಾಂಕವಾಗಿ ಫೆಬ್ರವರಿ 18, ಅಂದರೆ ಆರು ವಾರಗಳ ನಂತರ ನಿರ್ಧರಿಸಲಾಗುತ್ತದೆ.

ಡಿಸೆಂಬರ್ 2-3, 1984 ರ ಮಧ್ಯರಾತ್ರಿಯಲ್ಲಿ, ಭೋಪಾಲ್‌ನ ಯೂನಿಯನ್ ಕಾರ್ಬೈಡ್ ಕೀಟನಾಶಕ ಕಾರ್ಖಾನೆಯಿಂದ ಮೀಥೈಲ್ ಐಸೊಸೈನೇಟ್ (ಎಂಐಸಿ) ಅನಿಲ ಸೋರಿಕೆಯಾಯಿತು. ಇದರಿಂದ ಕನಿಷ್ಠ 5,479 ಜನರ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಗಂಭೀರವಾದ ಗಾಯಗಳು ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಡಿಸೆಂಬರ್ 3, 2024 ರಂದು ಕೊನೆಯ ವಿಚಾರಣೆಯ ಸಂದರ್ಭದಲ್ಲಿ, ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ವಿಫಲವಾದ ಕಾರಣಕ್ಕಾಗಿ ಹೈಕೋರ್ಟ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಅನಿಲ ದುರಂತದ 40 ವರ್ಷಗಳ ನಂತರವೂ ಅಧಿಕಾರಿಗಳು “ಜಡತ್ವದ ಸ್ಥಿತಿಯಲ್ಲಿ” ಇದ್ದಾರೆ, ಅದು ಮತ್ತೊಂದು ದುರಂತಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ.

ನಾಲ್ಕು ವಾರಗಳಲ್ಲಿ ಸ್ಥಳದಿಂದ ತ್ಯಾಜ್ಯವನ್ನು ತೆಗೆದು ಸಾಗಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ನಿರ್ದೇಶನವನ್ನು ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಯ ಎಚ್ಚರಿಕೆ ನೀಡಿತು.

ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿ, “ನಾವು ಜನರಿಗೆ ಏನು ಹೇಳಿದ್ದೇವೆ, ಅದನ್ನೇ ಹೈಕೋರ್ಟ್‌ನಲ್ಲಿ ಪುನರಾವರ್ತಿಸಿದ್ದೇವೆ. ನಾವು ಯೂನಿಯನ್ ಕಾರ್ಬೈಡ್ ತ್ಯಾಜ್ಯವನ್ನು ಹೈಕೋರ್ಟ್‌ನ ನಿರ್ದೇಶನದಂತೆ ಪಿತಾಂಪುರಕ್ಕೆ ಸ್ಥಳಾಂತರಿಸಿದ್ದೇವೆ ಎಂದು ಹೇಳಿದ್ದೇವೆ” ಎಂದರು.

“ಕಕ್ಷಿದಾರರ ವಾದ ಆಲಿಸಿದ ನಂತರ, ಹೈಕೋರ್ಟ್ ಅವರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಅದರ ತೀರ್ಪಿಗೆ ನಾನು ಗೌರವಾನ್ವಿತ ಹೈಕೋರ್ಟಿಗೆ ಧನ್ಯವಾದ ಹೇಳುತ್ತೇನೆ. ಸರ್ಕಾರದ ಉದ್ದೇಶವನ್ನು ತಿಳಿದುಕೊಂಡ ನಂತರ ಹೈಕೋರ್ಟ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.. ನಾವು ಗೌರವಾನ್ವಿತ ಹೈಕೋರ್ಟ್ ಅನ್ನು ಸಂಪರ್ಕಿಸಿದ ನಂತರವೇ ಮುಂದುವರಿಯುತ್ತೇವೆ. ಗೌರವಾನ್ವಿತ ಹೈಕೋರ್ಟನ್ನು ನಾವೆಲ್ಲರೂ ನಂಬುತ್ತೇವೆ; ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಕೇಳುತ್ತೇವೆ ಎಂದು ನಾನು ಹೇಳಲು ಬಯಸುತ್ತೇನೆ, ಆದ್ದರಿಂದ ಸ್ಥಳೀಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಕೋರುತ್ತೇನೆ” ಎಂದು ಯಾದವ್ ಹೇಳಿದರು.

ಜನವರಿ 1 ರ ಸಂಜೆ, ಭೋಪಾಲ್ ಗ್ಯಾಸ್ ಫ್ಯಾಕ್ಟರಿಯಿಂದ 358 ಮೆಟ್ರಿಕ್ ಟನ್ ತ್ಯಾಜ್ಯವನ್ನು ಹೊಂದಿರುವ 12 ಕಂಟೇನರ್‌ಗಳನ್ನು ಭೋಪಾಲ್‌ನಿಂದ ಪಿತಾಂಪುರಕ್ಕೆ ಸಾಗಿಸಲಾಯಿತು. ಅಲ್ಲಿ ಅವುಗಳನ್ನು ರಾಮ್ಕಿ ಎನ್ವಿರೋ ಇಂಡಸ್ಟ್ರೀಸ್ ಸುಡಬೇಕಿತ್ತು. ಪಿತಾಂಪುರದ ಜನರು ಮತ್ತು ಸ್ಥಳೀಯ ಸಂಸ್ಥೆಗಳು ಈ ತ್ಯಾಜ್ಯವು ಅಲ್ಲಿಗೆ ಬಂದಾಗಿನಿಂದಲೂ ವಿರೋಧಿಸುತ್ತಿವೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಜನವರಿ 3 ರಂದು ಉನ್ನತ ಮಟ್ಟದ ಸಭೆಯನ್ನು ಕರೆದರು. ಅಲ್ಲಿ ಸದ್ಯಕ್ಕೆ ತ್ಯಾಜ್ಯವನ್ನು ಸುಡುವುದಿಲ್ಲ ಮತ್ತು ಎಲ್ಲಾ ವಿಷಯಗಳನ್ನು ಹೈಕೋರ್ಟ್‌ಗೆ ತರಲಾಗುವುದು ಎಂದು ನಿರ್ಧರಿಸಲಾಯಿತು. ಜನರು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಮಾತನಾಡುವ ಮೂಲಕ ಅವರ ಮನವೊಲಿಸುವುದಕ್ಕೆ ಸರ್ಕಾರ ಮತ್ತು ಆಡಳಿತ ನಿರ್ಧರಿಸಿದೆ.

ಇದನ್ನೂ ಓದಿ; ಚೀನಾ, ಟಿಬೆಟ್‌ನಲ್ಲಿ ಪ್ರಬಲ ಭೂಕಂಪನ; 30ಕ್ಕೂ ಹೆಚ್ಚು ಜನರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...