Homeಮುಖಪುಟಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

- Advertisement -
- Advertisement -

ಯೂನಿಯನ್ ಕಾರ್ಬೈಡ್ ಫ್ಯಾಕ್ಟರಿ ತ್ಯಾಜ್ಯದ ಬಗ್ಗೆ ಸುರಕ್ಷತಾ ಪ್ರೋಟೋಕಾಲ್‌ಗಳ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜೊತೆಗೆ, ಮಾಧ್ಯಮಗಳು ಈ ಬಗ್ಗೆ ತಪ್ಪು ಸುದ್ದಿ ನೀಡುವುದನ್ನು ನಿಷೇಧಿಸಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಶಾಂತ್ ಸಿಂಗ್, ಕಂಟೈನರ್‌ಗಳು ತ್ಯಾಜ್ಯವನ್ನು ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವಂತಿಲ್ಲ ಮತ್ತು ಪಿತಾಂಪುರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ ನಂತರ ಅವುಗಳನ್ನು ಇಳಿಸಲು ಅನುಮತಿ ಕೋರಿದ್ದೇವೆ ಎಂದು ಹೇಳಿದರು.

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಲ್ಪನಿಕ ಮತ್ತು ನಕಲಿ ಸುದ್ದಿಗಳಿಂದಾಗಿ ಪಿತಾಂಪುರ ಟೌನ್‌ಶಿಪ್‌ನಲ್ಲಿ ಅಶಾಂತಿ ಉಂಟಾಗಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ಈ ವಿಷಯದ ಬಗ್ಗೆ ಯಾವುದೇ ತಪ್ಪು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮುದ್ರಣ, ರೇಡಿಯೋ ಮತ್ತು ದೃಶ್ಯ ಮಾಧ್ಯಮವನ್ನು ನಿರ್ಬಂಧಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಭೋಪಾಲ್‌ನಿಂದ ಪಿತಾಂಪುರಕ್ಕೆ ಸ್ಥಳಾಂತರಿಸಲಾದ ತ್ಯಾಜ್ಯವನ್ನು 12 ಮುಚ್ಚಿದ ಕಂಟೈನರ್‌ಗಳಲ್ಲಿ ಇಳಿಸಲು ರಾಜ್ಯವು ಮೂರು ದಿನಗಳ ಕಾಲಾವಕಾಶವನ್ನು ಕೋರಿತು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ತ್ಯಾಜ್ಯವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯದ ಆದ್ಯತೆಯಾಗಿದೆ ಎಂದು ಹೇಳಿದೆ.

ವಿಚಾರಣೆಯಲ್ಲಿ, ಅರ್ಜಿದಾರರ ಪರ ವಕೀಲ ಅಭಿನವ್ ಧನೋಡ್ಕರ್ ಅವರು ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಿಂದ ಪಿತಾಂಪುರ, ಮೋವ್ ಮತ್ತು ಧಾರ್ ನಿವಾಸಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಮೂರು ಹಂತಗಳಲ್ಲಿ ತ್ಯಾಜ್ಯವನ್ನು ನಾಶಪಡಿಸುವ ಕುರಿತು ಸರ್ಕಾರವು ಚರ್ಚಿಸಿದ್ದು, ತ್ಯಾಜ್ಯವನ್ನು ಸುಡುವುದರಿಂದ ಮಾರಣಾಂತಿಕ ರೋಗಗಳು ಹರಡುವುದಲ್ಲದೆ ಭೂಮಿ ಮತ್ತು ನೀರನ್ನು ಕಲುಷಿತಗೊಳಿಸುತ್ತದೆ, ಇದು ಹಾನಿಕಾರಕವಾಗಿದೆ ಎಂದು ಧನೋದ್ಕರ್ ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸುರೇಶ್, ಮುಂದಿನ ವಿಚಾರಣೆಯ ದಿನಾಂಕವಾಗಿ ಫೆಬ್ರವರಿ 18, ಅಂದರೆ ಆರು ವಾರಗಳ ನಂತರ ನಿರ್ಧರಿಸಲಾಗುತ್ತದೆ.

ಡಿಸೆಂಬರ್ 2-3, 1984 ರ ಮಧ್ಯರಾತ್ರಿಯಲ್ಲಿ, ಭೋಪಾಲ್‌ನ ಯೂನಿಯನ್ ಕಾರ್ಬೈಡ್ ಕೀಟನಾಶಕ ಕಾರ್ಖಾನೆಯಿಂದ ಮೀಥೈಲ್ ಐಸೊಸೈನೇಟ್ (ಎಂಐಸಿ) ಅನಿಲ ಸೋರಿಕೆಯಾಯಿತು. ಇದರಿಂದ ಕನಿಷ್ಠ 5,479 ಜನರ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಗಂಭೀರವಾದ ಗಾಯಗಳು ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಡಿಸೆಂಬರ್ 3, 2024 ರಂದು ಕೊನೆಯ ವಿಚಾರಣೆಯ ಸಂದರ್ಭದಲ್ಲಿ, ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ವಿಫಲವಾದ ಕಾರಣಕ್ಕಾಗಿ ಹೈಕೋರ್ಟ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಅನಿಲ ದುರಂತದ 40 ವರ್ಷಗಳ ನಂತರವೂ ಅಧಿಕಾರಿಗಳು “ಜಡತ್ವದ ಸ್ಥಿತಿಯಲ್ಲಿ” ಇದ್ದಾರೆ, ಅದು ಮತ್ತೊಂದು ದುರಂತಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ.

ನಾಲ್ಕು ವಾರಗಳಲ್ಲಿ ಸ್ಥಳದಿಂದ ತ್ಯಾಜ್ಯವನ್ನು ತೆಗೆದು ಸಾಗಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ನಿರ್ದೇಶನವನ್ನು ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಯ ಎಚ್ಚರಿಕೆ ನೀಡಿತು.

ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿ, “ನಾವು ಜನರಿಗೆ ಏನು ಹೇಳಿದ್ದೇವೆ, ಅದನ್ನೇ ಹೈಕೋರ್ಟ್‌ನಲ್ಲಿ ಪುನರಾವರ್ತಿಸಿದ್ದೇವೆ. ನಾವು ಯೂನಿಯನ್ ಕಾರ್ಬೈಡ್ ತ್ಯಾಜ್ಯವನ್ನು ಹೈಕೋರ್ಟ್‌ನ ನಿರ್ದೇಶನದಂತೆ ಪಿತಾಂಪುರಕ್ಕೆ ಸ್ಥಳಾಂತರಿಸಿದ್ದೇವೆ ಎಂದು ಹೇಳಿದ್ದೇವೆ” ಎಂದರು.

“ಕಕ್ಷಿದಾರರ ವಾದ ಆಲಿಸಿದ ನಂತರ, ಹೈಕೋರ್ಟ್ ಅವರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಅದರ ತೀರ್ಪಿಗೆ ನಾನು ಗೌರವಾನ್ವಿತ ಹೈಕೋರ್ಟಿಗೆ ಧನ್ಯವಾದ ಹೇಳುತ್ತೇನೆ. ಸರ್ಕಾರದ ಉದ್ದೇಶವನ್ನು ತಿಳಿದುಕೊಂಡ ನಂತರ ಹೈಕೋರ್ಟ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.. ನಾವು ಗೌರವಾನ್ವಿತ ಹೈಕೋರ್ಟ್ ಅನ್ನು ಸಂಪರ್ಕಿಸಿದ ನಂತರವೇ ಮುಂದುವರಿಯುತ್ತೇವೆ. ಗೌರವಾನ್ವಿತ ಹೈಕೋರ್ಟನ್ನು ನಾವೆಲ್ಲರೂ ನಂಬುತ್ತೇವೆ; ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಕೇಳುತ್ತೇವೆ ಎಂದು ನಾನು ಹೇಳಲು ಬಯಸುತ್ತೇನೆ, ಆದ್ದರಿಂದ ಸ್ಥಳೀಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಕೋರುತ್ತೇನೆ” ಎಂದು ಯಾದವ್ ಹೇಳಿದರು.

ಜನವರಿ 1 ರ ಸಂಜೆ, ಭೋಪಾಲ್ ಗ್ಯಾಸ್ ಫ್ಯಾಕ್ಟರಿಯಿಂದ 358 ಮೆಟ್ರಿಕ್ ಟನ್ ತ್ಯಾಜ್ಯವನ್ನು ಹೊಂದಿರುವ 12 ಕಂಟೇನರ್‌ಗಳನ್ನು ಭೋಪಾಲ್‌ನಿಂದ ಪಿತಾಂಪುರಕ್ಕೆ ಸಾಗಿಸಲಾಯಿತು. ಅಲ್ಲಿ ಅವುಗಳನ್ನು ರಾಮ್ಕಿ ಎನ್ವಿರೋ ಇಂಡಸ್ಟ್ರೀಸ್ ಸುಡಬೇಕಿತ್ತು. ಪಿತಾಂಪುರದ ಜನರು ಮತ್ತು ಸ್ಥಳೀಯ ಸಂಸ್ಥೆಗಳು ಈ ತ್ಯಾಜ್ಯವು ಅಲ್ಲಿಗೆ ಬಂದಾಗಿನಿಂದಲೂ ವಿರೋಧಿಸುತ್ತಿವೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಜನವರಿ 3 ರಂದು ಉನ್ನತ ಮಟ್ಟದ ಸಭೆಯನ್ನು ಕರೆದರು. ಅಲ್ಲಿ ಸದ್ಯಕ್ಕೆ ತ್ಯಾಜ್ಯವನ್ನು ಸುಡುವುದಿಲ್ಲ ಮತ್ತು ಎಲ್ಲಾ ವಿಷಯಗಳನ್ನು ಹೈಕೋರ್ಟ್‌ಗೆ ತರಲಾಗುವುದು ಎಂದು ನಿರ್ಧರಿಸಲಾಯಿತು. ಜನರು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಮಾತನಾಡುವ ಮೂಲಕ ಅವರ ಮನವೊಲಿಸುವುದಕ್ಕೆ ಸರ್ಕಾರ ಮತ್ತು ಆಡಳಿತ ನಿರ್ಧರಿಸಿದೆ.

ಇದನ್ನೂ ಓದಿ; ಚೀನಾ, ಟಿಬೆಟ್‌ನಲ್ಲಿ ಪ್ರಬಲ ಭೂಕಂಪನ; 30ಕ್ಕೂ ಹೆಚ್ಚು ಜನರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...