Homeಮುಖಪುಟಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

- Advertisement -
- Advertisement -

ಯೂನಿಯನ್ ಕಾರ್ಬೈಡ್ ಫ್ಯಾಕ್ಟರಿ ತ್ಯಾಜ್ಯದ ಬಗ್ಗೆ ಸುರಕ್ಷತಾ ಪ್ರೋಟೋಕಾಲ್‌ಗಳ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜೊತೆಗೆ, ಮಾಧ್ಯಮಗಳು ಈ ಬಗ್ಗೆ ತಪ್ಪು ಸುದ್ದಿ ನೀಡುವುದನ್ನು ನಿಷೇಧಿಸಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಶಾಂತ್ ಸಿಂಗ್, ಕಂಟೈನರ್‌ಗಳು ತ್ಯಾಜ್ಯವನ್ನು ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವಂತಿಲ್ಲ ಮತ್ತು ಪಿತಾಂಪುರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ ನಂತರ ಅವುಗಳನ್ನು ಇಳಿಸಲು ಅನುಮತಿ ಕೋರಿದ್ದೇವೆ ಎಂದು ಹೇಳಿದರು.

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಲ್ಪನಿಕ ಮತ್ತು ನಕಲಿ ಸುದ್ದಿಗಳಿಂದಾಗಿ ಪಿತಾಂಪುರ ಟೌನ್‌ಶಿಪ್‌ನಲ್ಲಿ ಅಶಾಂತಿ ಉಂಟಾಗಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ಈ ವಿಷಯದ ಬಗ್ಗೆ ಯಾವುದೇ ತಪ್ಪು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮುದ್ರಣ, ರೇಡಿಯೋ ಮತ್ತು ದೃಶ್ಯ ಮಾಧ್ಯಮವನ್ನು ನಿರ್ಬಂಧಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಭೋಪಾಲ್‌ನಿಂದ ಪಿತಾಂಪುರಕ್ಕೆ ಸ್ಥಳಾಂತರಿಸಲಾದ ತ್ಯಾಜ್ಯವನ್ನು 12 ಮುಚ್ಚಿದ ಕಂಟೈನರ್‌ಗಳಲ್ಲಿ ಇಳಿಸಲು ರಾಜ್ಯವು ಮೂರು ದಿನಗಳ ಕಾಲಾವಕಾಶವನ್ನು ಕೋರಿತು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ತ್ಯಾಜ್ಯವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯದ ಆದ್ಯತೆಯಾಗಿದೆ ಎಂದು ಹೇಳಿದೆ.

ವಿಚಾರಣೆಯಲ್ಲಿ, ಅರ್ಜಿದಾರರ ಪರ ವಕೀಲ ಅಭಿನವ್ ಧನೋಡ್ಕರ್ ಅವರು ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಿಂದ ಪಿತಾಂಪುರ, ಮೋವ್ ಮತ್ತು ಧಾರ್ ನಿವಾಸಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಮೂರು ಹಂತಗಳಲ್ಲಿ ತ್ಯಾಜ್ಯವನ್ನು ನಾಶಪಡಿಸುವ ಕುರಿತು ಸರ್ಕಾರವು ಚರ್ಚಿಸಿದ್ದು, ತ್ಯಾಜ್ಯವನ್ನು ಸುಡುವುದರಿಂದ ಮಾರಣಾಂತಿಕ ರೋಗಗಳು ಹರಡುವುದಲ್ಲದೆ ಭೂಮಿ ಮತ್ತು ನೀರನ್ನು ಕಲುಷಿತಗೊಳಿಸುತ್ತದೆ, ಇದು ಹಾನಿಕಾರಕವಾಗಿದೆ ಎಂದು ಧನೋದ್ಕರ್ ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸುರೇಶ್, ಮುಂದಿನ ವಿಚಾರಣೆಯ ದಿನಾಂಕವಾಗಿ ಫೆಬ್ರವರಿ 18, ಅಂದರೆ ಆರು ವಾರಗಳ ನಂತರ ನಿರ್ಧರಿಸಲಾಗುತ್ತದೆ.

ಡಿಸೆಂಬರ್ 2-3, 1984 ರ ಮಧ್ಯರಾತ್ರಿಯಲ್ಲಿ, ಭೋಪಾಲ್‌ನ ಯೂನಿಯನ್ ಕಾರ್ಬೈಡ್ ಕೀಟನಾಶಕ ಕಾರ್ಖಾನೆಯಿಂದ ಮೀಥೈಲ್ ಐಸೊಸೈನೇಟ್ (ಎಂಐಸಿ) ಅನಿಲ ಸೋರಿಕೆಯಾಯಿತು. ಇದರಿಂದ ಕನಿಷ್ಠ 5,479 ಜನರ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಗಂಭೀರವಾದ ಗಾಯಗಳು ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಡಿಸೆಂಬರ್ 3, 2024 ರಂದು ಕೊನೆಯ ವಿಚಾರಣೆಯ ಸಂದರ್ಭದಲ್ಲಿ, ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ವಿಫಲವಾದ ಕಾರಣಕ್ಕಾಗಿ ಹೈಕೋರ್ಟ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಅನಿಲ ದುರಂತದ 40 ವರ್ಷಗಳ ನಂತರವೂ ಅಧಿಕಾರಿಗಳು “ಜಡತ್ವದ ಸ್ಥಿತಿಯಲ್ಲಿ” ಇದ್ದಾರೆ, ಅದು ಮತ್ತೊಂದು ದುರಂತಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ.

ನಾಲ್ಕು ವಾರಗಳಲ್ಲಿ ಸ್ಥಳದಿಂದ ತ್ಯಾಜ್ಯವನ್ನು ತೆಗೆದು ಸಾಗಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ನಿರ್ದೇಶನವನ್ನು ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಯ ಎಚ್ಚರಿಕೆ ನೀಡಿತು.

ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿ, “ನಾವು ಜನರಿಗೆ ಏನು ಹೇಳಿದ್ದೇವೆ, ಅದನ್ನೇ ಹೈಕೋರ್ಟ್‌ನಲ್ಲಿ ಪುನರಾವರ್ತಿಸಿದ್ದೇವೆ. ನಾವು ಯೂನಿಯನ್ ಕಾರ್ಬೈಡ್ ತ್ಯಾಜ್ಯವನ್ನು ಹೈಕೋರ್ಟ್‌ನ ನಿರ್ದೇಶನದಂತೆ ಪಿತಾಂಪುರಕ್ಕೆ ಸ್ಥಳಾಂತರಿಸಿದ್ದೇವೆ ಎಂದು ಹೇಳಿದ್ದೇವೆ” ಎಂದರು.

“ಕಕ್ಷಿದಾರರ ವಾದ ಆಲಿಸಿದ ನಂತರ, ಹೈಕೋರ್ಟ್ ಅವರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಅದರ ತೀರ್ಪಿಗೆ ನಾನು ಗೌರವಾನ್ವಿತ ಹೈಕೋರ್ಟಿಗೆ ಧನ್ಯವಾದ ಹೇಳುತ್ತೇನೆ. ಸರ್ಕಾರದ ಉದ್ದೇಶವನ್ನು ತಿಳಿದುಕೊಂಡ ನಂತರ ಹೈಕೋರ್ಟ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.. ನಾವು ಗೌರವಾನ್ವಿತ ಹೈಕೋರ್ಟ್ ಅನ್ನು ಸಂಪರ್ಕಿಸಿದ ನಂತರವೇ ಮುಂದುವರಿಯುತ್ತೇವೆ. ಗೌರವಾನ್ವಿತ ಹೈಕೋರ್ಟನ್ನು ನಾವೆಲ್ಲರೂ ನಂಬುತ್ತೇವೆ; ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಕೇಳುತ್ತೇವೆ ಎಂದು ನಾನು ಹೇಳಲು ಬಯಸುತ್ತೇನೆ, ಆದ್ದರಿಂದ ಸ್ಥಳೀಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಕೋರುತ್ತೇನೆ” ಎಂದು ಯಾದವ್ ಹೇಳಿದರು.

ಜನವರಿ 1 ರ ಸಂಜೆ, ಭೋಪಾಲ್ ಗ್ಯಾಸ್ ಫ್ಯಾಕ್ಟರಿಯಿಂದ 358 ಮೆಟ್ರಿಕ್ ಟನ್ ತ್ಯಾಜ್ಯವನ್ನು ಹೊಂದಿರುವ 12 ಕಂಟೇನರ್‌ಗಳನ್ನು ಭೋಪಾಲ್‌ನಿಂದ ಪಿತಾಂಪುರಕ್ಕೆ ಸಾಗಿಸಲಾಯಿತು. ಅಲ್ಲಿ ಅವುಗಳನ್ನು ರಾಮ್ಕಿ ಎನ್ವಿರೋ ಇಂಡಸ್ಟ್ರೀಸ್ ಸುಡಬೇಕಿತ್ತು. ಪಿತಾಂಪುರದ ಜನರು ಮತ್ತು ಸ್ಥಳೀಯ ಸಂಸ್ಥೆಗಳು ಈ ತ್ಯಾಜ್ಯವು ಅಲ್ಲಿಗೆ ಬಂದಾಗಿನಿಂದಲೂ ವಿರೋಧಿಸುತ್ತಿವೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಜನವರಿ 3 ರಂದು ಉನ್ನತ ಮಟ್ಟದ ಸಭೆಯನ್ನು ಕರೆದರು. ಅಲ್ಲಿ ಸದ್ಯಕ್ಕೆ ತ್ಯಾಜ್ಯವನ್ನು ಸುಡುವುದಿಲ್ಲ ಮತ್ತು ಎಲ್ಲಾ ವಿಷಯಗಳನ್ನು ಹೈಕೋರ್ಟ್‌ಗೆ ತರಲಾಗುವುದು ಎಂದು ನಿರ್ಧರಿಸಲಾಯಿತು. ಜನರು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಮಾತನಾಡುವ ಮೂಲಕ ಅವರ ಮನವೊಲಿಸುವುದಕ್ಕೆ ಸರ್ಕಾರ ಮತ್ತು ಆಡಳಿತ ನಿರ್ಧರಿಸಿದೆ.

ಇದನ್ನೂ ಓದಿ; ಚೀನಾ, ಟಿಬೆಟ್‌ನಲ್ಲಿ ಪ್ರಬಲ ಭೂಕಂಪನ; 30ಕ್ಕೂ ಹೆಚ್ಚು ಜನರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...