Homeಮುಖಪುಟಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

- Advertisement -
- Advertisement -

ಯೂನಿಯನ್ ಕಾರ್ಬೈಡ್ ಫ್ಯಾಕ್ಟರಿ ತ್ಯಾಜ್ಯದ ಬಗ್ಗೆ ಸುರಕ್ಷತಾ ಪ್ರೋಟೋಕಾಲ್‌ಗಳ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜೊತೆಗೆ, ಮಾಧ್ಯಮಗಳು ಈ ಬಗ್ಗೆ ತಪ್ಪು ಸುದ್ದಿ ನೀಡುವುದನ್ನು ನಿಷೇಧಿಸಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಶಾಂತ್ ಸಿಂಗ್, ಕಂಟೈನರ್‌ಗಳು ತ್ಯಾಜ್ಯವನ್ನು ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವಂತಿಲ್ಲ ಮತ್ತು ಪಿತಾಂಪುರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ ನಂತರ ಅವುಗಳನ್ನು ಇಳಿಸಲು ಅನುಮತಿ ಕೋರಿದ್ದೇವೆ ಎಂದು ಹೇಳಿದರು.

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಲ್ಪನಿಕ ಮತ್ತು ನಕಲಿ ಸುದ್ದಿಗಳಿಂದಾಗಿ ಪಿತಾಂಪುರ ಟೌನ್‌ಶಿಪ್‌ನಲ್ಲಿ ಅಶಾಂತಿ ಉಂಟಾಗಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ಈ ವಿಷಯದ ಬಗ್ಗೆ ಯಾವುದೇ ತಪ್ಪು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮುದ್ರಣ, ರೇಡಿಯೋ ಮತ್ತು ದೃಶ್ಯ ಮಾಧ್ಯಮವನ್ನು ನಿರ್ಬಂಧಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಭೋಪಾಲ್‌ನಿಂದ ಪಿತಾಂಪುರಕ್ಕೆ ಸ್ಥಳಾಂತರಿಸಲಾದ ತ್ಯಾಜ್ಯವನ್ನು 12 ಮುಚ್ಚಿದ ಕಂಟೈನರ್‌ಗಳಲ್ಲಿ ಇಳಿಸಲು ರಾಜ್ಯವು ಮೂರು ದಿನಗಳ ಕಾಲಾವಕಾಶವನ್ನು ಕೋರಿತು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ತ್ಯಾಜ್ಯವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯದ ಆದ್ಯತೆಯಾಗಿದೆ ಎಂದು ಹೇಳಿದೆ.

ವಿಚಾರಣೆಯಲ್ಲಿ, ಅರ್ಜಿದಾರರ ಪರ ವಕೀಲ ಅಭಿನವ್ ಧನೋಡ್ಕರ್ ಅವರು ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಿಂದ ಪಿತಾಂಪುರ, ಮೋವ್ ಮತ್ತು ಧಾರ್ ನಿವಾಸಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಮೂರು ಹಂತಗಳಲ್ಲಿ ತ್ಯಾಜ್ಯವನ್ನು ನಾಶಪಡಿಸುವ ಕುರಿತು ಸರ್ಕಾರವು ಚರ್ಚಿಸಿದ್ದು, ತ್ಯಾಜ್ಯವನ್ನು ಸುಡುವುದರಿಂದ ಮಾರಣಾಂತಿಕ ರೋಗಗಳು ಹರಡುವುದಲ್ಲದೆ ಭೂಮಿ ಮತ್ತು ನೀರನ್ನು ಕಲುಷಿತಗೊಳಿಸುತ್ತದೆ, ಇದು ಹಾನಿಕಾರಕವಾಗಿದೆ ಎಂದು ಧನೋದ್ಕರ್ ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸುರೇಶ್, ಮುಂದಿನ ವಿಚಾರಣೆಯ ದಿನಾಂಕವಾಗಿ ಫೆಬ್ರವರಿ 18, ಅಂದರೆ ಆರು ವಾರಗಳ ನಂತರ ನಿರ್ಧರಿಸಲಾಗುತ್ತದೆ.

ಡಿಸೆಂಬರ್ 2-3, 1984 ರ ಮಧ್ಯರಾತ್ರಿಯಲ್ಲಿ, ಭೋಪಾಲ್‌ನ ಯೂನಿಯನ್ ಕಾರ್ಬೈಡ್ ಕೀಟನಾಶಕ ಕಾರ್ಖಾನೆಯಿಂದ ಮೀಥೈಲ್ ಐಸೊಸೈನೇಟ್ (ಎಂಐಸಿ) ಅನಿಲ ಸೋರಿಕೆಯಾಯಿತು. ಇದರಿಂದ ಕನಿಷ್ಠ 5,479 ಜನರ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಗಂಭೀರವಾದ ಗಾಯಗಳು ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಡಿಸೆಂಬರ್ 3, 2024 ರಂದು ಕೊನೆಯ ವಿಚಾರಣೆಯ ಸಂದರ್ಭದಲ್ಲಿ, ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ವಿಫಲವಾದ ಕಾರಣಕ್ಕಾಗಿ ಹೈಕೋರ್ಟ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಅನಿಲ ದುರಂತದ 40 ವರ್ಷಗಳ ನಂತರವೂ ಅಧಿಕಾರಿಗಳು “ಜಡತ್ವದ ಸ್ಥಿತಿಯಲ್ಲಿ” ಇದ್ದಾರೆ, ಅದು ಮತ್ತೊಂದು ದುರಂತಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ.

ನಾಲ್ಕು ವಾರಗಳಲ್ಲಿ ಸ್ಥಳದಿಂದ ತ್ಯಾಜ್ಯವನ್ನು ತೆಗೆದು ಸಾಗಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ನಿರ್ದೇಶನವನ್ನು ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಯ ಎಚ್ಚರಿಕೆ ನೀಡಿತು.

ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿ, “ನಾವು ಜನರಿಗೆ ಏನು ಹೇಳಿದ್ದೇವೆ, ಅದನ್ನೇ ಹೈಕೋರ್ಟ್‌ನಲ್ಲಿ ಪುನರಾವರ್ತಿಸಿದ್ದೇವೆ. ನಾವು ಯೂನಿಯನ್ ಕಾರ್ಬೈಡ್ ತ್ಯಾಜ್ಯವನ್ನು ಹೈಕೋರ್ಟ್‌ನ ನಿರ್ದೇಶನದಂತೆ ಪಿತಾಂಪುರಕ್ಕೆ ಸ್ಥಳಾಂತರಿಸಿದ್ದೇವೆ ಎಂದು ಹೇಳಿದ್ದೇವೆ” ಎಂದರು.

“ಕಕ್ಷಿದಾರರ ವಾದ ಆಲಿಸಿದ ನಂತರ, ಹೈಕೋರ್ಟ್ ಅವರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಅದರ ತೀರ್ಪಿಗೆ ನಾನು ಗೌರವಾನ್ವಿತ ಹೈಕೋರ್ಟಿಗೆ ಧನ್ಯವಾದ ಹೇಳುತ್ತೇನೆ. ಸರ್ಕಾರದ ಉದ್ದೇಶವನ್ನು ತಿಳಿದುಕೊಂಡ ನಂತರ ಹೈಕೋರ್ಟ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.. ನಾವು ಗೌರವಾನ್ವಿತ ಹೈಕೋರ್ಟ್ ಅನ್ನು ಸಂಪರ್ಕಿಸಿದ ನಂತರವೇ ಮುಂದುವರಿಯುತ್ತೇವೆ. ಗೌರವಾನ್ವಿತ ಹೈಕೋರ್ಟನ್ನು ನಾವೆಲ್ಲರೂ ನಂಬುತ್ತೇವೆ; ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಕೇಳುತ್ತೇವೆ ಎಂದು ನಾನು ಹೇಳಲು ಬಯಸುತ್ತೇನೆ, ಆದ್ದರಿಂದ ಸ್ಥಳೀಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಕೋರುತ್ತೇನೆ” ಎಂದು ಯಾದವ್ ಹೇಳಿದರು.

ಜನವರಿ 1 ರ ಸಂಜೆ, ಭೋಪಾಲ್ ಗ್ಯಾಸ್ ಫ್ಯಾಕ್ಟರಿಯಿಂದ 358 ಮೆಟ್ರಿಕ್ ಟನ್ ತ್ಯಾಜ್ಯವನ್ನು ಹೊಂದಿರುವ 12 ಕಂಟೇನರ್‌ಗಳನ್ನು ಭೋಪಾಲ್‌ನಿಂದ ಪಿತಾಂಪುರಕ್ಕೆ ಸಾಗಿಸಲಾಯಿತು. ಅಲ್ಲಿ ಅವುಗಳನ್ನು ರಾಮ್ಕಿ ಎನ್ವಿರೋ ಇಂಡಸ್ಟ್ರೀಸ್ ಸುಡಬೇಕಿತ್ತು. ಪಿತಾಂಪುರದ ಜನರು ಮತ್ತು ಸ್ಥಳೀಯ ಸಂಸ್ಥೆಗಳು ಈ ತ್ಯಾಜ್ಯವು ಅಲ್ಲಿಗೆ ಬಂದಾಗಿನಿಂದಲೂ ವಿರೋಧಿಸುತ್ತಿವೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಜನವರಿ 3 ರಂದು ಉನ್ನತ ಮಟ್ಟದ ಸಭೆಯನ್ನು ಕರೆದರು. ಅಲ್ಲಿ ಸದ್ಯಕ್ಕೆ ತ್ಯಾಜ್ಯವನ್ನು ಸುಡುವುದಿಲ್ಲ ಮತ್ತು ಎಲ್ಲಾ ವಿಷಯಗಳನ್ನು ಹೈಕೋರ್ಟ್‌ಗೆ ತರಲಾಗುವುದು ಎಂದು ನಿರ್ಧರಿಸಲಾಯಿತು. ಜನರು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಮಾತನಾಡುವ ಮೂಲಕ ಅವರ ಮನವೊಲಿಸುವುದಕ್ಕೆ ಸರ್ಕಾರ ಮತ್ತು ಆಡಳಿತ ನಿರ್ಧರಿಸಿದೆ.

ಇದನ್ನೂ ಓದಿ; ಚೀನಾ, ಟಿಬೆಟ್‌ನಲ್ಲಿ ಪ್ರಬಲ ಭೂಕಂಪನ; 30ಕ್ಕೂ ಹೆಚ್ಚು ಜನರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...