Homeಮುಖಪುಟಕೇಂದ್ರ ರಕ್ಷಣಾ ಸಚಿವರಿಗೆ ಹಣ ಸುಲಿಗೆಯ ಬೆದರಿಕೆ ಪತ್ರ; ಇಬ್ಬರ ಬಂಧನ

ಕೇಂದ್ರ ರಕ್ಷಣಾ ಸಚಿವರಿಗೆ ಹಣ ಸುಲಿಗೆಯ ಬೆದರಿಕೆ ಪತ್ರ; ಇಬ್ಬರ ಬಂಧನ

- Advertisement -
- Advertisement -

ರಾಂಚಿ ಸಂಸದ ಮತ್ತು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಅವರು ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿದ್ದಾಗಲೆ ದುಷ್ಕರ್ಮಿಗಳು ಬೆದರಿಕೆ ಪತ್ರ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳು ಕಳುಹಿಸಿದರುವ ಪಠ್ಯದಲ್ಲಿ ಸಚಿವರೊಂದಿಗೆ 50 ಲಕ್ಷ ನೀಡಬೇಕು ಎಂಬ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಕೇಂದ್ರ ರಕ್ಷಣಾ ಸಚಿವರಿಗೆ

ಬೆದರಿಕೆ ಸಂದೇಶದ ಹಿಂದಿರುವ ಆರೋಪಿಗಳು, ಮೂರು ದಿನಗಳಲ್ಲಿ 50 ಲಕ್ಷ ಮೊತ್ತವನ್ನು ಪಾವತಿಸುವಂತೆ ಹೇಳಿದ್ದು, ಇಲ್ಲದಿದ್ದರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರನ್ನು ಎಚ್ಚಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದುಷ್ಕರ್ಮಿಗಳು ಸಚಿವರ ಫೋನ್‌ಗೆ ಸಂದೇಶ ಕಳುಹಿಸಿದ್ದಾಗ ಅವರು ದೆಹಲಿಯಲ್ಲಿದ್ದರು ಎಂದು ವರದಿಯಾಗಿದೆ. ಘಟನೆ ಕುರಿತು ಮಾತನಾಡಿದ ಅವರು, ನಾನು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಇಂದು ನಾನು ನನ್ನ ಕ್ಷೇತ್ರದಲ್ಲಿದ್ದೇನೆ. ಪೊಲೀಸರು ತನಿಖೆಯ ಕೆಲಸವನ್ನು ಮಾಡುತ್ತಿದ್ದಾರೆ, ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಬೆದರಿಕೆಯ ನಂತರ, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ, ದೆಹಲಿ ಮತ್ತು ಜಾರ್ಖಂಡ್ ಎರಡರಲ್ಲೂ ತನಿಖೆ ನಡೆಯುತ್ತಿದೆ. ಸಚಿವರಿಗೆ ಎಚ್ಚರಿಕೆ ನೀಡಿದ ನಂತರ ದೆಹಲಿ ಪೊಲೀಸರು ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ್ದರು. ಪೊಲೀಸ್ ಕಮಿಷನರ್ ಸೇರಿದಂತೆ ಉನ್ನತ ಅಧಿಕಾರಿಗಳು ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ವಿವರಗಳನ್ನು ಸಂಗ್ರಹಿಸಿದ್ದಾರೆ.

ದೆಹಲಿ ಪೊಲೀಸರು ನಡೆಸಿದ ತನಿಖೆಯಲ್ಲಿ, ಆರೋಪಿಗಳು ರಾಂಚಿಯ ಹೊಸಿರ್‌ನಿಂದ ಸಂದೇಶ ಕಳುಹಿಸಿದ್ದಾರೆ ಎಂಬುವುದನ್ನು ಪತ್ತೆಹಚ್ಚಿದ್ದರು. ನಂತರ, ದೆಹಲಿ ಪೊಲೀಸರು ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನುರಾಗ್ ಗುಪ್ತಾ ಅವರಿಗೆ ತನಿಖೆಯ ಬಗ್ಗೆ ಮಾಹಿತಿ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗುಪ್ತಾ ಅವರು ಈ ಬಗ್ಗೆ ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಮತ್ತು ರಾಂಚಿ ಪೊಲೀಸರ ಜಂಟಿ ತಂಡವು ಕಂಕೆ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಿರ್‌ನಲ್ಲಿ ತನಿಖೆ ನಡೆಸುತ್ತಿದೆ. ಇಲ್ಲಿಯವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕೇಂದ್ರ ಮಟ್ಟದ ಸಚಿವರೊಬ್ಬರು ಪಠ್ಯ ಸಂದೇಶದ ಮೂಲಕ ಸುಲಿಗೆ ಬೆದರಿಕೆಯನ್ನು ಸ್ವೀಕರಿಸಿದ ಮೊದಲ ನಿದರ್ಶನ ಇದಾಗಿದೆ ಎಂದು ವರದಿಯಾಗಿದೆ. ಕೇಂದ್ರ ರಕ್ಷಣಾ ಸಚಿವರಿಗೆ

ಇದನ್ನೂ ಓದಿ: ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...