Homeಮುಖಪುಟಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ 'ಕಪ್ಪು ದಿನ' - ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ ‘ಕಪ್ಪು ದಿನ’ – ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

- Advertisement -
- Advertisement -

ಜಮ್ಮು ಕಾಶ್ಮೀರವನ್ನು ಒಡೆದು ಎರಡು ಕೇಂದ್ರಾಡಳಿತಗಳಾಗಿ ಮಾಡಿದ ಸಂಸ್ಥಾಪನಾ ದಿನವನ್ನು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ”ಕಪ್ಪು ದಿನ” ಎಂದು ಕರೆದಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಈ ನಿರ್ಧಾರವು ರಾಜ್ಯದ ಜನರ ಹಕ್ಕು ನಿರಾಕರಣೆಯ ದಿನವಾಗಿದೆ ಎಂದು ಅವರು ಹೇಳಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಆಡಳಿತವು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಐದನೇ ಸಂಸ್ಥಾಪನಾ ದಿನವನ್ನು ಗುರುವಾರ ಆಚರಿಸಿದ್ದಾರೆ.

“ಕೇಂದ್ರಾಡಳಿತ ಪ್ರದೇಶ ಸಂಸ್ಥಾಪನಾ ದಿನವು ಜಮ್ಮು ಕಾಶ್ಮೀರದ ಜನರಿಗೆ ‘ಕಪ್ಪು ದಿನ’ವಾಗಿದ್ದು, ಏಕೆಂದರೆ ಇದು ಅಭಿವೃದ್ಧಿಯಲ್ಲ, ಹಕ್ಕು ನಿರಾಕರಣೆಯನ್ನು ಸೂಚಿಸುತ್ತದೆ” ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಕಾಂಗ್ರೆಸ್ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಅವರು ಕೂಡಾ ಕೂಡಾ ದಿನವನ್ನು ”ಕಪ್ಪು ದಿನ” ಎಂದು ಕರೆದಿದ್ದು, ಜನರು ಈ ದಿನವನ್ನು ಆಚರಿಸುತ್ತಾರೆ ಎಂದು ನಿರೀಕ್ಷಿಸುವುದು, ಅತೀಯಾದ ನಿರೀಕ್ಷೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಚರಣೆ ಬಗ್ಗ ಪ್ರತಿಕ್ರಿಯಿಸಿರುವ ಮೆಹಬೂಬಾ ಮುಫ್ತಿ, “ಜುಮ್ಮು ಕಾಶ್ಮೀರದ ಜನರಿಗೆ ಮತ್ತು ವಿಶೇಷವಾಗಿ ಪಿಡಿಪಿಗೆ ಇಂದು ಕರಾಳ ದಿನವಾಗಿದೆ. ರಾಜ್ಯದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸದವರೆಗೆ ನಾವು ಇದನ್ನು ಕರಾಳ ದಿನವಾಗಿ ನೋಡುತ್ತೇವೆ ಎಂದು ನಾನು ಲೆಫ್ಟಿನೆಂಟ್ ಗವರ್ನರ್‌ಗೆ ಹೇಳಲು ಬಯಸುತ್ತೇನೆ” ಎಂದು ಪುಲ್ವಾಮಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

“ಗೌರವದಿಂದ ಶಾಂತಿ ಸ್ಥಾಪಿಸಲು ಕಾಶ್ಮೀರ ಸಮಸ್ಯೆ ಬಗೆಹರಿಯುವವರೆಗೂ ತನ್ನ ಹೋರಾಟವನ್ನು ಪಕ್ಷ ಮುಂದುವರಿಸಲಿದೆ. ಹೊಸದಾಗಿ ಚುನಾಯಿತರಾದ ಸರ್ಕಾರವು ಎಲ್ಲಾ ಜನರನ್ನು ಜೊತೆಗೆ ಕರೆದುಕೊಂಡು ಹೋಗುತ್ತದೆ ಮತ್ತು ಪ್ರಸ್ತುತ ಪರಿಸ್ಥಿತಿಯಿಂದ ರಾಜ್ಯವನ್ನು ಜೊತೆಗೆ ಕರೆದು ಹೋರಾಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 31 ಜಮ್ಮು ಕಾಶ್ಮೀರದ ಜನರಿಗೆ ಸಂಭ್ರಮದ ದಿನವಲ್ಲ ಎಂದು ಮುಫ್ತಿ ಹೇಳಿದ್ದಾರೆ. “ಕೇಂದ್ರಾಡಳಿತ ಪ್ರದೇಶದ ‘ಸ್ಥಾಪನಾ ದಿನ’ ಎಂದು ಕರೆಯಲ್ಪಡುವ ಈ ದಿನವನ್ನು ಪಕ್ಷವು ದೃಢವಾಗಿ ತಿರಸ್ಕರಿಸುತ್ತದೆ. ಇದು ರಾಜ್ಯದ ಜನರ ಇಚ್ಛೆ, ಅಸ್ಮಿತೆ ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುವಲ್ಲಿ ವಿಫಲವಾಗಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮೇಲೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನವನ್ನು ಹೇರುವುದು ಪ್ರಗತಿಪರ ಹೆಜ್ಜೆಯಲ್ಲ, ಬದಲಿಗೆ ಅನ್ಯಾಯವಾಗಿದ್ದು, ಹಕ್ಕುಗಳನ್ನು ರದ್ದುಪಡಿಸುವ ಕ್ರಮ ಎಂದು ಮುಫ್ತಿ ಒತ್ತಿ ಹೇಳಿದ್ದಾರೆ.

“ಐತಿಹಾಸಿಕ ಮಹತ್ವವಿರುವ ನಮ್ಮ ಸ್ವಾಯತ್ತ ರಾಜ್ಯವನ್ನು ಅದರ ಜನರ ಒಪ್ಪಿಗೆಯಿಲ್ಲದೆ ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸುವುದು ಅಭಿವೃದ್ಧಿಯ ಸಂಕೇತವಲ್ಲ, ಬದಲಾಗಿ ನಮ್ಮ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನದ ಅಸ್ಪಷ್ಟ ಅಳಿಸುವಿಕೆಯಾಗಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳು ಕೇಂದ್ರಾಡಳಿತದ ಸಂಸ್ಥಾಪನಾ ದಿನವನ್ನು ಆಚರಿಸಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ಆಡಳಿತವನ್ನು ಟೀಕಿಸಿದ್ದು, ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು.

ಬಹಳ ಮುಖ್ಯವಾಗಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕ್ರಮಕ್ಕೆ ಹಾಜರಾಗದೆ ಬಹಿಷ್ಕರಿಸಿದ್ದವು. ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಜಾದ್ ಗನಿ ಲೋನ್ ಮತ್ತು ಸಿಪಿಐ(ಎಂ) ನಾಯಕ ಮೊಹಮ್ಮದ್ ಯೂಸುಫ್ ತರಿಗಾಮಿ ಅವರು ಲೆಫ್ಟಿನೆಂಟ್ ಗವರ್ನರ್ ಅವರನ್ನು ಟೀಕಿಸಿದ್ದು, “ಜನರು ಆಡಳಿತದ ವಿರುದ್ಧ ಸ್ಪಷ್ಟವಾಗಿ ಮತ ಚಲಾಯಿಸಿದರೂ, ಅವರು ಕಾರ್ಯಕ್ರಮ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಮೀದ್ ಕರ್ರಾ ಸುದ್ದಿಗಾರರೊಂದಿಗೆ ಮಾತನಾಡಿ, “ಜಮ್ಮು ಕಾಶ್ಮೀರದ ಜನರಿಗೆ ಇದು ಕರಾಳ ದಿನವಾಗಿದೆ. ಜನರು ಇದನ್ನು ಆಚರಿಸುತ್ತಾರೆ ಎಂದು ನೀವು ಭಾವಿಸಿದರೆ ಅದು ನಿಮ್ಮ ಅತಿಯಾದ ನಿರೀಕ್ಷೆಯಾಗಿದೆ” ಎಂದು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಆಡಳಿತ ಆಯೋಜಿಸಿದ್ದ ಕೇಂದ್ರಾಡಳಿತ ಪ್ರದೇಶದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಏಕೆ ಹಾಜರಾಗಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಸಾಂವಿಧಾನಿಕ ಸಂರಚನೆಯನ್ನು ಅಪಹಾಸ್ಯ ಮಾಡಿ ಆಚರಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಭಿಪ್ರಾಯವಲ್ಲ. ಈ ಅಪಹಾಸ್ಯದಿಂದ ಎಲ್ಲಾ ಜನರು ಬಾಧಿತರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...