Homeಮುಖಪುಟಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ 'ಕಪ್ಪು ದಿನ' - ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ ‘ಕಪ್ಪು ದಿನ’ – ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

- Advertisement -
- Advertisement -

ಜಮ್ಮು ಕಾಶ್ಮೀರವನ್ನು ಒಡೆದು ಎರಡು ಕೇಂದ್ರಾಡಳಿತಗಳಾಗಿ ಮಾಡಿದ ಸಂಸ್ಥಾಪನಾ ದಿನವನ್ನು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ”ಕಪ್ಪು ದಿನ” ಎಂದು ಕರೆದಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಈ ನಿರ್ಧಾರವು ರಾಜ್ಯದ ಜನರ ಹಕ್ಕು ನಿರಾಕರಣೆಯ ದಿನವಾಗಿದೆ ಎಂದು ಅವರು ಹೇಳಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಆಡಳಿತವು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಐದನೇ ಸಂಸ್ಥಾಪನಾ ದಿನವನ್ನು ಗುರುವಾರ ಆಚರಿಸಿದ್ದಾರೆ.

“ಕೇಂದ್ರಾಡಳಿತ ಪ್ರದೇಶ ಸಂಸ್ಥಾಪನಾ ದಿನವು ಜಮ್ಮು ಕಾಶ್ಮೀರದ ಜನರಿಗೆ ‘ಕಪ್ಪು ದಿನ’ವಾಗಿದ್ದು, ಏಕೆಂದರೆ ಇದು ಅಭಿವೃದ್ಧಿಯಲ್ಲ, ಹಕ್ಕು ನಿರಾಕರಣೆಯನ್ನು ಸೂಚಿಸುತ್ತದೆ” ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಕಾಂಗ್ರೆಸ್ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಅವರು ಕೂಡಾ ಕೂಡಾ ದಿನವನ್ನು ”ಕಪ್ಪು ದಿನ” ಎಂದು ಕರೆದಿದ್ದು, ಜನರು ಈ ದಿನವನ್ನು ಆಚರಿಸುತ್ತಾರೆ ಎಂದು ನಿರೀಕ್ಷಿಸುವುದು, ಅತೀಯಾದ ನಿರೀಕ್ಷೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಚರಣೆ ಬಗ್ಗ ಪ್ರತಿಕ್ರಿಯಿಸಿರುವ ಮೆಹಬೂಬಾ ಮುಫ್ತಿ, “ಜುಮ್ಮು ಕಾಶ್ಮೀರದ ಜನರಿಗೆ ಮತ್ತು ವಿಶೇಷವಾಗಿ ಪಿಡಿಪಿಗೆ ಇಂದು ಕರಾಳ ದಿನವಾಗಿದೆ. ರಾಜ್ಯದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸದವರೆಗೆ ನಾವು ಇದನ್ನು ಕರಾಳ ದಿನವಾಗಿ ನೋಡುತ್ತೇವೆ ಎಂದು ನಾನು ಲೆಫ್ಟಿನೆಂಟ್ ಗವರ್ನರ್‌ಗೆ ಹೇಳಲು ಬಯಸುತ್ತೇನೆ” ಎಂದು ಪುಲ್ವಾಮಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

“ಗೌರವದಿಂದ ಶಾಂತಿ ಸ್ಥಾಪಿಸಲು ಕಾಶ್ಮೀರ ಸಮಸ್ಯೆ ಬಗೆಹರಿಯುವವರೆಗೂ ತನ್ನ ಹೋರಾಟವನ್ನು ಪಕ್ಷ ಮುಂದುವರಿಸಲಿದೆ. ಹೊಸದಾಗಿ ಚುನಾಯಿತರಾದ ಸರ್ಕಾರವು ಎಲ್ಲಾ ಜನರನ್ನು ಜೊತೆಗೆ ಕರೆದುಕೊಂಡು ಹೋಗುತ್ತದೆ ಮತ್ತು ಪ್ರಸ್ತುತ ಪರಿಸ್ಥಿತಿಯಿಂದ ರಾಜ್ಯವನ್ನು ಜೊತೆಗೆ ಕರೆದು ಹೋರಾಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 31 ಜಮ್ಮು ಕಾಶ್ಮೀರದ ಜನರಿಗೆ ಸಂಭ್ರಮದ ದಿನವಲ್ಲ ಎಂದು ಮುಫ್ತಿ ಹೇಳಿದ್ದಾರೆ. “ಕೇಂದ್ರಾಡಳಿತ ಪ್ರದೇಶದ ‘ಸ್ಥಾಪನಾ ದಿನ’ ಎಂದು ಕರೆಯಲ್ಪಡುವ ಈ ದಿನವನ್ನು ಪಕ್ಷವು ದೃಢವಾಗಿ ತಿರಸ್ಕರಿಸುತ್ತದೆ. ಇದು ರಾಜ್ಯದ ಜನರ ಇಚ್ಛೆ, ಅಸ್ಮಿತೆ ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುವಲ್ಲಿ ವಿಫಲವಾಗಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮೇಲೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನವನ್ನು ಹೇರುವುದು ಪ್ರಗತಿಪರ ಹೆಜ್ಜೆಯಲ್ಲ, ಬದಲಿಗೆ ಅನ್ಯಾಯವಾಗಿದ್ದು, ಹಕ್ಕುಗಳನ್ನು ರದ್ದುಪಡಿಸುವ ಕ್ರಮ ಎಂದು ಮುಫ್ತಿ ಒತ್ತಿ ಹೇಳಿದ್ದಾರೆ.

“ಐತಿಹಾಸಿಕ ಮಹತ್ವವಿರುವ ನಮ್ಮ ಸ್ವಾಯತ್ತ ರಾಜ್ಯವನ್ನು ಅದರ ಜನರ ಒಪ್ಪಿಗೆಯಿಲ್ಲದೆ ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸುವುದು ಅಭಿವೃದ್ಧಿಯ ಸಂಕೇತವಲ್ಲ, ಬದಲಾಗಿ ನಮ್ಮ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನದ ಅಸ್ಪಷ್ಟ ಅಳಿಸುವಿಕೆಯಾಗಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳು ಕೇಂದ್ರಾಡಳಿತದ ಸಂಸ್ಥಾಪನಾ ದಿನವನ್ನು ಆಚರಿಸಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ಆಡಳಿತವನ್ನು ಟೀಕಿಸಿದ್ದು, ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು.

ಬಹಳ ಮುಖ್ಯವಾಗಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕ್ರಮಕ್ಕೆ ಹಾಜರಾಗದೆ ಬಹಿಷ್ಕರಿಸಿದ್ದವು. ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಜಾದ್ ಗನಿ ಲೋನ್ ಮತ್ತು ಸಿಪಿಐ(ಎಂ) ನಾಯಕ ಮೊಹಮ್ಮದ್ ಯೂಸುಫ್ ತರಿಗಾಮಿ ಅವರು ಲೆಫ್ಟಿನೆಂಟ್ ಗವರ್ನರ್ ಅವರನ್ನು ಟೀಕಿಸಿದ್ದು, “ಜನರು ಆಡಳಿತದ ವಿರುದ್ಧ ಸ್ಪಷ್ಟವಾಗಿ ಮತ ಚಲಾಯಿಸಿದರೂ, ಅವರು ಕಾರ್ಯಕ್ರಮ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಮೀದ್ ಕರ್ರಾ ಸುದ್ದಿಗಾರರೊಂದಿಗೆ ಮಾತನಾಡಿ, “ಜಮ್ಮು ಕಾಶ್ಮೀರದ ಜನರಿಗೆ ಇದು ಕರಾಳ ದಿನವಾಗಿದೆ. ಜನರು ಇದನ್ನು ಆಚರಿಸುತ್ತಾರೆ ಎಂದು ನೀವು ಭಾವಿಸಿದರೆ ಅದು ನಿಮ್ಮ ಅತಿಯಾದ ನಿರೀಕ್ಷೆಯಾಗಿದೆ” ಎಂದು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಆಡಳಿತ ಆಯೋಜಿಸಿದ್ದ ಕೇಂದ್ರಾಡಳಿತ ಪ್ರದೇಶದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಏಕೆ ಹಾಜರಾಗಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಸಾಂವಿಧಾನಿಕ ಸಂರಚನೆಯನ್ನು ಅಪಹಾಸ್ಯ ಮಾಡಿ ಆಚರಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಭಿಪ್ರಾಯವಲ್ಲ. ಈ ಅಪಹಾಸ್ಯದಿಂದ ಎಲ್ಲಾ ಜನರು ಬಾಧಿತರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...