Homeಮುಖಪುಟಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ 'ಕಪ್ಪು ದಿನ' - ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ ‘ಕಪ್ಪು ದಿನ’ – ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

- Advertisement -
- Advertisement -

ಜಮ್ಮು ಕಾಶ್ಮೀರವನ್ನು ಒಡೆದು ಎರಡು ಕೇಂದ್ರಾಡಳಿತಗಳಾಗಿ ಮಾಡಿದ ಸಂಸ್ಥಾಪನಾ ದಿನವನ್ನು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ”ಕಪ್ಪು ದಿನ” ಎಂದು ಕರೆದಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಈ ನಿರ್ಧಾರವು ರಾಜ್ಯದ ಜನರ ಹಕ್ಕು ನಿರಾಕರಣೆಯ ದಿನವಾಗಿದೆ ಎಂದು ಅವರು ಹೇಳಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಆಡಳಿತವು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಐದನೇ ಸಂಸ್ಥಾಪನಾ ದಿನವನ್ನು ಗುರುವಾರ ಆಚರಿಸಿದ್ದಾರೆ.

“ಕೇಂದ್ರಾಡಳಿತ ಪ್ರದೇಶ ಸಂಸ್ಥಾಪನಾ ದಿನವು ಜಮ್ಮು ಕಾಶ್ಮೀರದ ಜನರಿಗೆ ‘ಕಪ್ಪು ದಿನ’ವಾಗಿದ್ದು, ಏಕೆಂದರೆ ಇದು ಅಭಿವೃದ್ಧಿಯಲ್ಲ, ಹಕ್ಕು ನಿರಾಕರಣೆಯನ್ನು ಸೂಚಿಸುತ್ತದೆ” ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಕಾಂಗ್ರೆಸ್ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಅವರು ಕೂಡಾ ಕೂಡಾ ದಿನವನ್ನು ”ಕಪ್ಪು ದಿನ” ಎಂದು ಕರೆದಿದ್ದು, ಜನರು ಈ ದಿನವನ್ನು ಆಚರಿಸುತ್ತಾರೆ ಎಂದು ನಿರೀಕ್ಷಿಸುವುದು, ಅತೀಯಾದ ನಿರೀಕ್ಷೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಚರಣೆ ಬಗ್ಗ ಪ್ರತಿಕ್ರಿಯಿಸಿರುವ ಮೆಹಬೂಬಾ ಮುಫ್ತಿ, “ಜುಮ್ಮು ಕಾಶ್ಮೀರದ ಜನರಿಗೆ ಮತ್ತು ವಿಶೇಷವಾಗಿ ಪಿಡಿಪಿಗೆ ಇಂದು ಕರಾಳ ದಿನವಾಗಿದೆ. ರಾಜ್ಯದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸದವರೆಗೆ ನಾವು ಇದನ್ನು ಕರಾಳ ದಿನವಾಗಿ ನೋಡುತ್ತೇವೆ ಎಂದು ನಾನು ಲೆಫ್ಟಿನೆಂಟ್ ಗವರ್ನರ್‌ಗೆ ಹೇಳಲು ಬಯಸುತ್ತೇನೆ” ಎಂದು ಪುಲ್ವಾಮಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

“ಗೌರವದಿಂದ ಶಾಂತಿ ಸ್ಥಾಪಿಸಲು ಕಾಶ್ಮೀರ ಸಮಸ್ಯೆ ಬಗೆಹರಿಯುವವರೆಗೂ ತನ್ನ ಹೋರಾಟವನ್ನು ಪಕ್ಷ ಮುಂದುವರಿಸಲಿದೆ. ಹೊಸದಾಗಿ ಚುನಾಯಿತರಾದ ಸರ್ಕಾರವು ಎಲ್ಲಾ ಜನರನ್ನು ಜೊತೆಗೆ ಕರೆದುಕೊಂಡು ಹೋಗುತ್ತದೆ ಮತ್ತು ಪ್ರಸ್ತುತ ಪರಿಸ್ಥಿತಿಯಿಂದ ರಾಜ್ಯವನ್ನು ಜೊತೆಗೆ ಕರೆದು ಹೋರಾಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 31 ಜಮ್ಮು ಕಾಶ್ಮೀರದ ಜನರಿಗೆ ಸಂಭ್ರಮದ ದಿನವಲ್ಲ ಎಂದು ಮುಫ್ತಿ ಹೇಳಿದ್ದಾರೆ. “ಕೇಂದ್ರಾಡಳಿತ ಪ್ರದೇಶದ ‘ಸ್ಥಾಪನಾ ದಿನ’ ಎಂದು ಕರೆಯಲ್ಪಡುವ ಈ ದಿನವನ್ನು ಪಕ್ಷವು ದೃಢವಾಗಿ ತಿರಸ್ಕರಿಸುತ್ತದೆ. ಇದು ರಾಜ್ಯದ ಜನರ ಇಚ್ಛೆ, ಅಸ್ಮಿತೆ ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುವಲ್ಲಿ ವಿಫಲವಾಗಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮೇಲೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನವನ್ನು ಹೇರುವುದು ಪ್ರಗತಿಪರ ಹೆಜ್ಜೆಯಲ್ಲ, ಬದಲಿಗೆ ಅನ್ಯಾಯವಾಗಿದ್ದು, ಹಕ್ಕುಗಳನ್ನು ರದ್ದುಪಡಿಸುವ ಕ್ರಮ ಎಂದು ಮುಫ್ತಿ ಒತ್ತಿ ಹೇಳಿದ್ದಾರೆ.

“ಐತಿಹಾಸಿಕ ಮಹತ್ವವಿರುವ ನಮ್ಮ ಸ್ವಾಯತ್ತ ರಾಜ್ಯವನ್ನು ಅದರ ಜನರ ಒಪ್ಪಿಗೆಯಿಲ್ಲದೆ ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸುವುದು ಅಭಿವೃದ್ಧಿಯ ಸಂಕೇತವಲ್ಲ, ಬದಲಾಗಿ ನಮ್ಮ ರಾಜ್ಯತ್ವ ಮತ್ತು ವಿಶೇಷ ಸ್ಥಾನಮಾನದ ಅಸ್ಪಷ್ಟ ಅಳಿಸುವಿಕೆಯಾಗಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳು ಕೇಂದ್ರಾಡಳಿತದ ಸಂಸ್ಥಾಪನಾ ದಿನವನ್ನು ಆಚರಿಸಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ಆಡಳಿತವನ್ನು ಟೀಕಿಸಿದ್ದು, ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು.

ಬಹಳ ಮುಖ್ಯವಾಗಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕ್ರಮಕ್ಕೆ ಹಾಜರಾಗದೆ ಬಹಿಷ್ಕರಿಸಿದ್ದವು. ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಜಾದ್ ಗನಿ ಲೋನ್ ಮತ್ತು ಸಿಪಿಐ(ಎಂ) ನಾಯಕ ಮೊಹಮ್ಮದ್ ಯೂಸುಫ್ ತರಿಗಾಮಿ ಅವರು ಲೆಫ್ಟಿನೆಂಟ್ ಗವರ್ನರ್ ಅವರನ್ನು ಟೀಕಿಸಿದ್ದು, “ಜನರು ಆಡಳಿತದ ವಿರುದ್ಧ ಸ್ಪಷ್ಟವಾಗಿ ಮತ ಚಲಾಯಿಸಿದರೂ, ಅವರು ಕಾರ್ಯಕ್ರಮ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಮೀದ್ ಕರ್ರಾ ಸುದ್ದಿಗಾರರೊಂದಿಗೆ ಮಾತನಾಡಿ, “ಜಮ್ಮು ಕಾಶ್ಮೀರದ ಜನರಿಗೆ ಇದು ಕರಾಳ ದಿನವಾಗಿದೆ. ಜನರು ಇದನ್ನು ಆಚರಿಸುತ್ತಾರೆ ಎಂದು ನೀವು ಭಾವಿಸಿದರೆ ಅದು ನಿಮ್ಮ ಅತಿಯಾದ ನಿರೀಕ್ಷೆಯಾಗಿದೆ” ಎಂದು ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಆಡಳಿತ ಆಯೋಜಿಸಿದ್ದ ಕೇಂದ್ರಾಡಳಿತ ಪ್ರದೇಶದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಏಕೆ ಹಾಜರಾಗಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಸಾಂವಿಧಾನಿಕ ಸಂರಚನೆಯನ್ನು ಅಪಹಾಸ್ಯ ಮಾಡಿ ಆಚರಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಭಿಪ್ರಾಯವಲ್ಲ. ಈ ಅಪಹಾಸ್ಯದಿಂದ ಎಲ್ಲಾ ಜನರು ಬಾಧಿತರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...