Homeಕರೋನಾ ತಲ್ಲಣಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

- Advertisement -
- Advertisement -

ಕರ್ನಾಟಕ, ಮಹರಾಷ್ಟ್ರ, ತಮಿಳುನಾಡು, ದೆಹಲಿ, ಪಂಜಾಬ್ ಸೇರಿದಂತೆ ದೇಶದ ಅನೇಕ ರಾಜ್ಯಗಳು ಎರಡನೇ ಹಂತದ ಅನ್‌ಲಾಕ್‌ ಪ್ರಕ್ರಿಯೆಯನ್ನು ಆರಂಭಿಸಿವೆ. ಕೊರೊನಾ ಲಾಕ್‌ಡೌನ್‌ನಿಂದ 2 ತಿಂಗಳುಗಳ ಕಾಲ ಬಂದಾಗಿದ್ದ ಅಂಗಡಿ ಮುಂಗಟ್ಟುಗಳು, ವ್ಯಾಪಾರೋದ್ಯಮ, ವಾಣಿಜ್ಯ ಚಟುವಟಿಕೆಗಳು ಮತ್ತೆ ಗರಿಗೆದರಲಾರಂಭಿಸಿವೆ.

ಬೆಂಗಳೂರು, ಮುಂಬೈ, ದೆಹಲಿಯಂತರ ಮಹಾನಗರಗಳಿಂದ ತಮ್ಮ ತಮ್ಮ ಊರಿಗೆ ತೆರಳಿದ್ದ ಜನರು ಮತ್ತೆ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಏಕಾಏಕಿ ನಗರಗಳನ್ನು ಪ್ರವೇಶಿಸುತ್ತಿದ್ದಾರೆ. ಮಾರುಕಟ್ಟೆಗಳು, ಬಸ್‌ ನಿಲ್ಧಾಣ, ರೈಲ್ವೆ ನಿಲ್ದಾಣಗಳು ಜನ ಜಂಗುಳಿಯಿಂದ ತುಂಬಿ ಹೋಗಿದ್ದು, ಅನ್‌ಲಾಕ್‌ ಪ್ರಕ್ರಿಯೆಯೇ ಕೊರೊನಾ ಮೂರನೇ ಅಲೆಗೆ ಆಹ್ವಾನ ನೀಡುತ್ತಿರುವಂತೆ ಭಾಸವಾಗುತ್ತಿದೆ ಎಂದಿರುವ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೆಲವೊಂದಿಷ್ಟು ಮಾರ್ಗಸೂಚಿಗಳನ್ನು ಜಾರಿ ಮಾಡಿದೆ. ಯಾವ ಹಂತದಲ್ಲಿ ಯಾವ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ತಜ್ಞರ ವರದಿಯನ್ನು ಪಾಲಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ಅನ್‌ಲಾಕ್ ಪ್ರಕ್ರಿಯೆಯಿಂದ ನಗರಗಳಲ್ಲಿ ಉಂಟಾಗುತ್ತಿರುವ ಜನ ದಟ್ಟಣೆಯನ್ನುತಡೆಯಲು ಸೂಕ್ತ ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೆಲಸದ ಸ್ಥಳಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್‌, ಸ್ಯಾನಿಟೈಜರ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ ಎಂದಿರುವ ಕೇಂದ್ರ ಸರ್ಕಾರ ಅವಸರದ ಅನ್‌ಲಾಕ್ ಬೇಡ ಎಂಬ ಸಲಹೆಯನ್ನು ನೀಡಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ರಾಜ್ಯಗಳು 5 ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್‌ಗಳಾದ (CAB)  ಟೆಸ್ಟಿಂಗ್, ಟ್ರ್ಯಾಕಿಂಗ್, ಟ್ರೀಟ್‌ಮೆಂಟ್, ವ್ಯಾಕ್ಸಿನೇಶನ್, ಪ್ರಿವೆನ್ಶನ್‌ಗಳನ್ನು ತಪ್ಪದೇ ಪಾಲಿಸಬೇಕು. ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ಚುರುಕು ನೀಡಬೇಕು. ಎಲ್ಲ ರೀತಿಯ ಅಗತ್ಯ ಸುರಕ್ಷಾಕ್ರಮಗಳನ್ನು ಕೈಗೊಂಡು ಹಂತ ಹಂತವಾಗಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

ಅನ್‌ಲಾಕ್ ಪ್ರಕ್ರಿಯೆಗಳ ನಡುವೆಯೇ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ , ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಮಾರ್ಗಸೂಚಿಯನ್ನು ನೀಡಿದೆ.

ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕ ರಂದೀಪ್ ಗುಲೇರಿಯಾ, ಭಾರತದಲ್ಲಿ ಇನ್ನು 6 ರಿಂದ 8 ವಾರಗಳಲ್ಲಿ ಕೊರೊನಾ ಮೂರನೇ ಅಲೆಯು ದೇಶದಲ್ಲಿ ಅಪ್ಪಳಿಸಲಿದೆ. ಒಂದು ವೇಳೆ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಮೂರನೇ ಅಲೆಯು ಎರಡನೇ ಅಲೆಗಿಂತ ತೀವ್ರವಾಗಿರಲಿದೆ. ಮುಂದಿನ ಮೂರು ತಿಂಗಳು ಕೋವಿಡ್ ಸುರಕ್ಷತಾ ಕ್ರಮಗಳ ಪಾಲನೆ ಮತ್ತು ಜನದಟ್ಟಣೆ ನಿಯಂತ್ರಣ ಅತ್ಯಂತ ಅಗತ್ಯವಾಗಿದೆ ಎಂದು ರಾಜ್ಯಗಳಿಗೆ ಎಚ್ಚರಿಸಿದ್ದಾರೆ.

ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ತೀವ್ರ ವೇಗವನ್ನು ನೀಡುವಂತೆ ಸೂಚಿಸಿದ್ದಾರೆ. ಕೊರೊನಾ ವಿರುದ್ಧ ದೇಶವು ಒಟ್ಟಾಗಿ ಹೋರಾಡುವ ಸಂದರ್ಭದಲ್ಲಿ ಇದ್ದೇವೆ. ವ್ಯಾಕ್ಸೀನ್ ಸೇರಿದಂತೆ ಎಲ್ಲಾ ವಿಚಾರಗಳಲ್ಲಿ ರಾಜ್ಯ ರಾಜ್ಯಗಳು ಸಮನ್ವಯವನ್ನು ಸಾಧಿಸಿ ಜನಸಾಮಾನ್ಯರ ಆರೋಗ್ಯದ ಕಾಳಜಿ ಮಾಡಬೇಕು ಕೇಂದ್ರ ಸೂಚಿಸಿದೆ.


ಇದನ್ನೂ ಓದಿ : ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...