Homeಕರೋನಾ ತಲ್ಲಣ3 ನೇ ಹಂತದ ಪ್ರಯೋಗ ಮುಗಿಸದೆ ’ಕೊವ್ಯಾಕ್ಸಿನ್’‌ಗೆ ಅನುಮತಿ ನೀಡಿದ ಒಕ್ಕೂಟ ಸರ್ಕಾರ?

3 ನೇ ಹಂತದ ಪ್ರಯೋಗ ಮುಗಿಸದೆ ’ಕೊವ್ಯಾಕ್ಸಿನ್’‌ಗೆ ಅನುಮತಿ ನೀಡಿದ ಒಕ್ಕೂಟ ಸರ್ಕಾರ?

- Advertisement -
- Advertisement -

ಭಾರತೀಯ ಔಷಧ ನಿಯಂತ್ರಕ ಈಗಾಗಲೇ ಕೋವಿಶೀಲ್ಡ್‌ ಹಾಗೂ ಕೊವ್ಯಾಕ್ಸಿನ್‌ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ. ಇದರ ಬೆನ್ನಿಗೆ ದೇಶಿಯವಾಗಿ ಅಭಿವೃದ್ಧಿ ಪಡಿಸಲಾಗಿರುವ ’ಕೊವ್ಯಾಕ್ಸಿನ್’ ಲಸಿಕೆಯ ಬಗ್ಗೆ ಹಲವಾರು ಅನುಮಾನಗಳು ಎದ್ದಿದೆ. ಕಾಂಗ್ರೆಸ್ ಪಕ್ಷವು ಕೋವ್ಯಾಕ್ಸಿನ್‌ ಲಸಿಕೆಯ 3 ನೇ ಹಂತದ ಪ್ರಯೋಗ ಇನ್ನೂ ಮುಗಿದಿಲ್ಲ. ಒಕ್ಕೂಟ ಸರ್ಕಾರದ ನಿರ್ಧಾರವು ಅಕಾಲಿಕವಾಗಿದ್ದು, ಅಪಾಯಕಾರಿ ಎನಿಸಿಕೊಳ್ಳಬಹುದು ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಗೃಹ ಸಚಿವಾಲಯದ ಸಂಸದೀಯ ಸಮಿತಿಯ ಮುಖ್ಯಸ್ಥರಾಗಿರುವ, ಕಾಂಗ್ರೆಸ್‌ನ ಹಿರಿಯ ಮುಖಂಡ ಆನಂದ್ ಶರ್ಮಾ, “ತಜ್ಞರ ಸಮಿತಿಯ ಮುಂದೆ ಸಲ್ಲಿಸಿದ ವರದಿ ಪ್ರಕಾರ, ಮೂರನೇ ಹಂತದ ಪ್ರಯೋಗಗಳು ಪೂರ್ಣಗೊಂಡಿಲ್ಲ. ಸುರಕ್ಷತೆ, ಪರಿಣಾಮಕಾರಿತ್ವದ ಅಂಕಿಅಂಶವನ್ನು ಪರಿಶೀಲಿಸಲಾಗಿಲ್ಲ. ಕಡ್ಡಾಯ ಮೂರನೇ ಹಂತದ ಪ್ರಯೋಗಗಳು ಹಾಗೂ ದತ್ತಾಂಶ ಪರಿಶೀಲನೆಯನ್ನು ಯಾವುದೇ ದೇಶ ವಿತರಿಸದ ಕಾರಣ ಲಸಿಕೆ ಬಳಕೆಗೆ ಅನುಮತಿ ನೀಡುವ ವಿಷಯವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಾಗಿದೆ” ಎಂದು ಎಚ್ಚರಿಸಿದ್ದಾರೆ.

ಅಲ್ಲದೆ, ಕಾಂಗ್ರೆಸ್‌ನ ಮತ್ತೊಬ್ಬ ನಾಯಕ ಶಶಿ ತರೂರ್‌ ಕೂಡಾ ಕೊವ್ಯಾಕ್ಸಿನ್‌ ಲಸಿಕಯ ತರ್ತು ಬಳಕೆಯ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. “ಕೊವ್ಯಾಕ್ಸಿನ್ ಇನ್ನೂ 3ನೇ ಹಂತದ ಪ್ರಯೋಗವನ್ನು ಮುಗಿಸಿಲ್ಲ. ಈ ನಿರ್ಧಾರವು ಅಕಾಲಿಕವಾಗಿದ್ದು, ಅಪಾಯಕಾರಿ ಎನಿಸಿಕೊಳ್ಳಬಹುದು. ಸಂಪೂರ್ಣ ಕ್ಲಿನಿಕಲ್ ಪ್ರಯೋಗಗಳು ಮುಗಿಯುವವರೆಗೂ ಇದರ ಬಳಕೆಯನ್ನು ತಪ್ಪಿಸಬೇಕು. ಈ ಮಧ್ಯೆ ಆಸ್ಟ್ರಾಝೆನೆಕಾ ಲಸಿಕೆಯೊಂದಿಗೆ ಭಾರತ ಮುಂದುವರಿಯಬಹುದು” ಎಂದು ಹೇಳಿರುವ ಶಶಿ ತರೂರ್, ಇದರ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಂದಲೂ ಸ್ಪಷ್ಟನೆ ಕೇಳಿದ್ದಾರೆ.

ಇದನ್ನೂ ಓದಿ: ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...