Homeಮುಖಪುಟಜೆಪಿ ನಡ್ಡಾ ಬೆದರಿಕೆಯಂತೆ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರ: ಜೈರಾಮ್ ರಮೇಶ್ ವಾಗ್ದಾಳಿ

ಜೆಪಿ ನಡ್ಡಾ ಬೆದರಿಕೆಯಂತೆ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರ: ಜೈರಾಮ್ ರಮೇಶ್ ವಾಗ್ದಾಳಿ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಬೆದರಿಕೆ ಹಾಕಿದ್ದರು. ಅದರಂತೆ ಇದೀಗ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಪ್ರಸ್ತಾಪಿಸಿ ಟ್ವಿಟ್ ಮಾಡಿರುವ ಅವರು, ”ಜನವರಿ 1, 2023 ರಿಂದ ಮೇ 24, 2023 ರವರೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕವೊಂದರಲ್ಲೇ ಎಲ್ಲಾ ರಾಜ್ಯ ಸರ್ಕಾರಗಳು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಲ್‌ಗೆ 13,400 ದರದಲ್ಲಿ ಸಂಗ್ರಹಿಸಿದ ಶೇ 95 ಕ್ಕಿಂತ ಹೆಚ್ಚು ಅಕ್ಕಿಯನ್ನು ತೆಗೆದುಕೊಂಡಿದೆ. ಬಹುಶಃ ಇದು ಮೋದಿ ಜೀಯವರ ಆಶೀರ್ವಾದದಿಂದಲೇ ಆಗಿರಬೇಕು” ಎಂದು ಟೀಕಿಸಿದ್ದಾರೆ.

”ಬಡವರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಏಕೈಕ ಕಾರಣಕ್ಕೆ ಶಿಕ್ಷೆ ನೀಡುತ್ತಿರುವುದು ಕರ್ನಾಟಕದ ದೌರ್ಭಾಗ್ಯವಲ್ಲದೆ ಮತ್ತೇನಲ್ಲ” ಎಂದು ರಮೇಶ್ ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆದರಿಕೆಯಂತೆ ಈ ಮೋದಿ ಜೀ ಅವರು ಆಶೀರ್ವಾದವನ್ನು ಅತ್ಯಂತ ವೇಗದಲ್ಲಿ ಹಿಂತೆಗೆದುಕೊಳ್ಳಲಾಗಿದೆ” ಎಂದು ಕಿಡಿಕಾರಿದ್ದಾರೆ.

”ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಿರುವ ಎಲ್ಲವನ್ನೂ ಪ್ರಯತ್ನಗಳನ್ನು ಮಾಡುತ್ತದೆ. ಜತೆಗೆ, ಪ್ರತಿಯೊಬ್ಬರಿಗೂ ತಲಾ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲು ಅನ್ನ ಭಾಗ್ಯ 2.0 ಖಾತ್ರಿಯನ್ನು ಶೀಘ್ರವಾಗಿ ಜಾರಿಗೆ ತರಲಾಗುತ್ತದೆ” ಎಂದು ರಮೇಶ್ ಭರವಸೆ ನೀಡಿದ್ದಾರೆ.

ಮುನಿಯಪ್ಪ ಮೂರು ದಿನ ಕಾದ ಬಳಿಕ ಕೇಂದ್ರ ಸಚಿವರ ಭೇಟಿ 

ಜೂನ್ 23ರಂದು ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...