Homeರಾಷ್ಟ್ರೀಯ‘ಸುಳ್ಳು ಸುದ್ದಿ’ಗಳನ್ನು ಹರಡುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳನ್ನು ಪತ್ತೆ ಹಚ್ಚಿದ ಒಕ್ಕೂಟ ಸರ್ಕಾರ

‘ಸುಳ್ಳು ಸುದ್ದಿ’ಗಳನ್ನು ಹರಡುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳನ್ನು ಪತ್ತೆ ಹಚ್ಚಿದ ಒಕ್ಕೂಟ ಸರ್ಕಾರ

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಗುರುವಾರ “ಭಾರತದಲ್ಲಿ ಸುಸಂಘಟಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಸುಳ್ಳು ಮಾಹಿತಿಯನ್ನು ಹರಡುವ” ಆರು ಯೂಟ್ಯೂಬ್ ಚಾನೆಲ್‌ಗಳನ್ನು ಪತ್ತೆ ಹಚ್ಚಿದೆ.

ಸಚಿವಾಲಯದ PIB (ಪ್ರೆಸ್ ಇನ್ಫರ್ಮೇಷನ್ ಬ್ಯೂರೋ) ಫ್ಯಾಕ್ಟ್‌ಚೆಕ್ ಘಟಕವು ಟ್ವಿಟರ್‌ನಲ್ಲಿ ಆರು ಪ್ರತ್ಯೇಕ ಟ್ವಿಟರ್ ಥ್ರೆಡ್‌ಗಳನ್ನು ಪೋಸ್ಟ್‌ ಮಾಡಿದ್ದು, ಈ ಚಾನೆಲ್‌ಗಳು ನಕಲಿ ಸುದ್ದಿಗಳನ್ನು ಹರಡುತ್ತಿವೆ ಎಂಬುವನ್ನು ಸಾಬೀತುಪಡಿಸಲು ಹಲವಾರು ಪುರಾವೆಗಳನ್ನು ಬಿಡುಗಡೆ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರು ಯೂಟ್ಯೂಬ್ ಚಾನೆಲ್‌ಗಳು ಸಂಘಟಿತ ತಪ್ಪು ಮಾಹಿತಿ ನೆಟ್‌ವರ್ಕ್‌ನ ಭಾಗವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದ್ದು, ಸುಮಾರು 20 ಲಕ್ಷ ಚಂದಾದಾರರನ್ನು ಹೊಂದಿದೆ. ಅಲ್ಲದೆ ಈ ಚಾನೆಲ್‌ಗಳ ವೀಡಿಯೊಗಳನ್ನು 51 ಕೋಟಿಗೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ” ಎಂದು ಸಚಿವಾಲಯದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

PIB ಪತ್ತೆ ಹಚ್ಚಿದ ಚಾನಲ್‌ಗಳ ಪಟ್ಟಿಯನ್ನು ಇಲ್ಲಿ ಪರಿಶೀಲಿಸಿ:

ಚಾನಲ್‌‌                  ಚಂದಾದಾರರು
Nation TV                   5.57 ಲಕ್ಷ
Samvaad TV              10.9 ಲಕ್ಷ
Sarokar Bharat          21.1 ಸಾವಿರ
Nation 24                  25.4 ಸಾವಿರ
Swarnim Bharat        6.07 ಸಾವಿರ
Samvaad Samachar   3.48 ಲಕ್ಷ

ಫ್ಯಾಕ್ಟ್‌‌ಚೆಕ್ ಟ್ವೀಟ್ ಪೋಸ್ಟ್‌ ಆಗುತ್ತಿದ್ದಂತೆ ಕೆಲವು ಚಾನೆಲ್‌ಗಳು ತಮ್ಮ ಹೆಸರುಗಳನ್ನು ಬದಲಾಯಿಸಿದೆ. ಸಂವಾದ್ ಸಮಾಚಾರ್, ಸಂವಾದ್ ಟಿವಿ ಮತ್ತು ನೇಷನ್ ಟಿವಿ ಚಾನೆಲ್‌ಗಳು, ತಮ್ಮ ಹೆಸರನ್ನು ಕ್ರಮವಾಗಿ ಇನ್‌ಸೈಡ್ ಇಂಡಿಯಾ, ಇನ್‌ಸೈಡ್ ಭಾರತ್ ಮತ್ತು ನೇಷನ್ ವೀಕ್ಲಿ ಎಂದು ಬದಲಾಯಿಸಿಕೊಂಡಿವೆ. ಆದರೆ ಎಲ್ಲಾ ಚಾನೆಲ್‌ಗಳು ಇನ್ನೂ ಕೂಡಾ ಕಾರ್ಯನಿರ್ವಹಿಸುತ್ತಿವೆ.

ಸಚಿವಾಲಯದ ಪ್ರಕಾರ, ಈ ಚಾನೆಲ್‌ಗಳು ಸುಪ್ರೀಂಕೋರ್ಟ್, ಸಂಸತ್ತಿನ ಕಲಾಪಗಳು, ಚುನಾವಣೆಗಳು ಮತ್ತು ಒಕ್ಕೂಟ ಸರ್ಕಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುತ್ತಿವೆ.

“ಈ ಚಾನೆಲ್‌ಗಳು ನಕಲಿ ಸುದ್ದಿ ಮತ್ತು ಕ್ಲಿಕ್‌ಬೈಟ್, ಸಂವೇದನಾಶೀಲ ಥಂಬ್‌ನೇಲ್‌ಗಳು ಮತ್ತು ಟಿವಿ ಚಾನೆಲ್‌ಗಳ ನ್ಯೂಸ್ ಆಂಕರ್‌ಗಳ ಚಿತ್ರಗಳನ್ನು ಬಳಸಿಕೊಂಡು ವೀಕ್ಷಕರನ್ನು ತಪ್ಪುದಾರಿಗೆಳೆಯುವ ಸುದ್ದಿಗಳನ್ನು ಪ್ರಕಟಿಸುತ್ತಿವೆ” ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ಪ್ರಕರಣ: ಸ್ಟಾನ್ ಸ್ವಾಮಿಯವರ ಕಂಪ್ಯೂಟರ್‌ಗೆ ನಕಲಿ ದಾಖಲೆ ತುರುಕಿದ್ದ ಹ್ಯಾಕರ್‌- ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...