Homeಮುಖಪುಟಟ್ವಿಟರ್‌ಗೆ ಕೊನೆಯ ನೋಟಿಸ್ ನೀಡಿದ ಒಕ್ಕೂಟ ಸರ್ಕಾರ

ಟ್ವಿಟರ್‌ಗೆ ಕೊನೆಯ ನೋಟಿಸ್ ನೀಡಿದ ಒಕ್ಕೂಟ ಸರ್ಕಾರ

- Advertisement -
- Advertisement -

ಹೊಸ ಐಟಿ ನಿಯಮಗಳನ್ನು “ತಕ್ಷಣ” ಪಾಲಿಸಲು ಕೊನೆಯ ಅವಕಾಶವನ್ನು ನೀಡುತ್ತಿರುವುದಾಗಿ ಒಕ್ಕೂಟ ಸರ್ಕಾರ ಶನಿವಾರ ಟ್ವಿಟರ್‌ಗೆ ನೋಟಿಸ್ ನೀಡಿದ್ದು, ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದರೆ ಟ್ವಿಟರ್‌‌ ಐಟಿ ಕಾಯ್ದೆಯಡಿ ಹೊಣೆಗಾರಿಕೆಯಿಂದ ವಿನಾಯಿತಿ ಕಳೆದುಕೊಳ್ಳುತ್ತದೆ ಎಂದು ಎಚ್ಚರಿಸಿದೆ.

ನಿಯಮಗಳನ್ನು ಅನುಸರಿಸಲು ಟ್ವಿಟರ್ ನಿರಾಕರಿಸಿರುವುದಕ್ಕೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ವು, “ಟ್ವಿಟರ್‌‌‌ನ ಈ ನಡೆಯು ತನ್ನ ವೇದಿಕೆಯಲ್ಲಿ ಭಾರತದ ಜನರಿಗೆ ಸುರಕ್ಷಿತ ಅನುಭವವನ್ನು ನೀಡುವ ಬಗ್ಗೆಗಿನ ಬದ್ಧತೆ ಮತ್ತು ಪ್ರಯತ್ನಗಳ ಕೊರಯಾಗಿದೆ” ಎಂದು ಹೇಳಿದೆ.

“ಒಂದು ದಶಕಕ್ಕೂ ಹೆಚ್ಚು ಕಾಲ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಟ್ವಿಟರ್‌ ಯಾಂತ್ರಿಕ ವ್ಯವಸ್ಥೆಯನ್ನು ರಚಿಸಲು ನಿರಾಕರಿಸಿದೆ” ಎಂದು ಐಟಿ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಸ ಐಟಿ ನಿಯಮಗಳು 2021 ರ ಮೇ 26 ರಿಂದ ಜಾರಿಗೆ ಬಂದರೂ, ಟ್ವಿಟ್ಟರ್ ಈ ನಿಯಮಗಳನ್ನು ಪಾಲಿಸಿಲ್ಲ. ಅದಾಗಿಯು ಸದ್ಭಾವನೆಯ ಸೂಚಕವಾಗಿ, ಟ್ವಿಟರ್‌ಗೆ ನಿಯಮಗಳನ್ನು ಅನುಸರಿಸಲು ಕೊನೆಯ ನೋಟಿಸ್ ನೀಡಲಾಗಿದೆ. ಅದರಲ್ಲಿ ಅವರು ವಿಫಲವಾದರೆ ಲಭ್ಯವಿರುವ ಹೊಣೆಗಾರಿಕೆಯಿಂದ ವಿನಾಯಿತಿ ಹಿಂತೆಗೆದುಕೊಳ್ಳಲಾಗುತ್ತದೆ. ಐಟಿ ಕಾಯ್ದೆ ಮತ್ತು ಭಾರತದ ಇತರ ದಂಡ ಕಾನೂನುಗಳ ಪ್ರಕಾರ ಪರಿಣಾಮಗಳನ್ನು ಟ್ವಿಟರ್ ಎದುರಿಸಬೇಕಾಗುತ್ತದೆ ಎಂದು ಹೇಳಿದೆ.

ಆದಾಗ್ಯೂ, ನೋಟಿಸ್ ನಿಯಮಗಳನ್ನು ಅನುಸರಿಸಲು ನಿರ್ದಿಷ್ಟ ಗಡುವನ್ನು ನೀಡಿಲ್ಲ.

ಹೊಸ ಐಟಿ ನಿಯಮಗಳು ಫೆಬ್ರವರಿ 25 ರಿಂದ ಜಾರಿಗೆ ಬಂದಿದ್ದು ಫೇಸ್‌ಬುಕ್ ಮತ್ತು ವಾಟ್ಸಪ್ ನಿಯಮಗಳಿಗೆ ಬದ್ದ ಎಂದು ಈಗಾಗಲೆ ತಿಳಿಸಿದೆ. ಟ್ವಿಟರ್‌ ಕೂಡಾ ತಾನು ನಿಯಮಕ್ಕೆ ಬದ್ದ ಎಂದು ಹೇಳಿದ್ದರೂ ಒಕ್ಕೂಟ ಸರ್ಕಾರ ಮಾತ್ರ ಅದನ್ನು ನಿರಾಕರಿಸಿದೆ.

ಅದಾಗ್ಯೂ ಹೊಸ ಐಟಿ ನಿಯಮಗಳು ಮತ್ತು ನಿಬಂಧನೆಗಳನ್ನು ಟ್ವಿಟರ್‌‌ ಟೀಕಿಸಿದ್ದು, “ಭಾರತವು ಮುಕ್ತ ಸಾರ್ವಜನಿಕ ಅಭಿವ್ಯಕ್ತಿಯನ್ನು ತಡೆಯುತ್ತಿದೆ” ಎಂದು ಹೇಳಿತ್ತು. ಟ್ವಿಟರ್‌ನ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಒಕ್ಕೂಟ ಸರ್ಕಾರವು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿತ್ತು.

ಹೊಸ ಡಿಜಿಟಲ್ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪೆನಿಗಳಾದ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳು, ‘ಸೂಚಿಸಿದ’(ಫ್ಲ್ಯಾಗ್‌ ಮಾಡಲಾಗಿರುವ) ಸಂದೇಶದ ಮೂಲವನ್ನು 36 ಗಂಟೆಗಳಲ್ಲಿ ಗುರುತಿಸುವುದು ಮತ್ತು ಹೆಚ್ಚುವರಿ ಕ್ರಮಗಳನ್ನು ತಗೆದುಕೊಳ್ಳ ಬೇಕಿದೆ. ಮುಖ್ಯ ಪಾಲನೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಎಂದು ನಿಯಮವು ಹೇಳುತ್ತದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...