Homeಮುಖಪುಟಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ - ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ...

ಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ – ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್

ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗವನ್ನು ಕಳೆದುಕೊಂಡು ಸುಮಾರು 11 ಲಕ್ಷ ಜನರು ಕೇರಳಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

- Advertisement -
- Advertisement -

ಗಲ್ಫ್ ದೇಶಗಳ ವಿಮಾನಯಾನ ದರವನ್ನು ಕೈಗೆಟುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಒಕ್ಕೂಟ ಸರ್ಕಾರದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಬರೆದ ಪತ್ರದಲ್ಲಿ, “ಕೊರೊನಾ ಸಾಂಕ್ರಮಿಕದ ಸಮಯದಲ್ಲಿ ಅತೀ ಹೆಚ್ಚು ಪರಿಣಾಮ ಬೀರಿದ ವಿಭಾಗ ಅನಿವಾಸಿ ಭಾರತೀಯರಾಗಿದ್ದಾರೆ. ಸಾಂಕ್ರಾಮಿಕದ ಮೊದಲ ಲಾಕ್‌ಡೌನ್ ಸಮಯದಲ್ಲಿ ದೇಶಕ್ಕೆ ಬಂದ ಅವರು, ನಂತರ ಯಾವುದೆ ಉದ್ಯೋಗವಿಲ್ಲದೆ ಇಲ್ಲಿ ಇರಬೇಕಾಯಿತು” ಎಂದು ಹೇಳಿದ್ದಾರೆ.

ಗಲ್ಫ್ ದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ವಿಮಾನದ ಟಿಕೆಟ್‌ಗಳನ್ನು ಕೈಗೆಟುಕುವಂತೆ ಮಾಡಲು ಸಚಿವರು “ತಕ್ಷಣದ ಮಧ್ಯಸ್ಥಿಕೆ” ವಹಿಸಬೇಕು ಎಂದು ಪಿಣರಾಯಿ ಕೋರಿದ್ದಾರೆ. ವಿವಿಧ ವಿಮಾನ ಮಾರ್ಗಗಳು ಶೀಘ್ರದಲ್ಲೇ ತೆರೆಯುತ್ತಿರುವುದರಿಂದ ಜನರು ಗಲ್ಫ್ ದೇಶಗಳಿಗೆ ಮರಳಲು ಉತ್ಸುಕರಾಗಿದ್ದಾರೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಕಳೆದ ಒಂದು ವರ್ಷದಿಂದ ನಿರುದ್ಯೋಗಿಗಳಾಗಿರುವ ಅನೇಕರಿಗೆ ವಿಮಾನ ಪ್ರಯಾಣದ ದರಗಳನ್ನು ಭರಿಸಲು ಕಷ್ಟವಾಗುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚು ಸಂಕಷ್ಟ ಅನುಭವಿಸಿದವರಲ್ಲಿ ಕೌಶಲ್ಯರಹಿತ ಮತ್ತು ಅರೆಕೌಶಲ್ಯ ಹೊಂದಿರುವ ಅನಿವಾಸಿ ಕಾರ್ಮಿಕರಾಗಿದ್ದಾರೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಸಾಂಕ್ರಮಿದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವುದರಿಂದ ಸಚಿವರು ಅದಕ್ಕೆ ಬೆಂಬಲ ನೀಡಬೇಕು ಎಂದು ಪಿಣರಾಯಿ ವಿಜಯನ್ ಪತ್ರದಲ್ಲಿ ಸಿಂದಿಯಾ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ.

ಹೆಚ್ಚಿನ ಜನರು ಕೈಗೆಟುಕುವ ದರದಲ್ಲಿ ವಿದೇಶಕ್ಕೆ ಪ್ರಯಾಣಿಸಲು ಸಾಧ್ಯವಾದಾಗ ವಿದೇಶಿ ವಿನಿಮಯದ ಮೂಲಕ ಭಾರತದ ಬೊಕ್ಕಸಕ್ಕೆ ಹೆಚ್ಚಿನ ಹಣ ಬರುತ್ತದೆ ಎಂದು ಅವರು ಹೇಳಿದ್ದು, ಇದು ದೇಶದ ಆರ್ಥಿಕ ಚೇತರಿಕೆಯನ್ನು ಸುಧಾರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಸೆಂಟರ್ ಫಾರ್ ಇಂಡಿಯನ್ ಮೈಗ್ರಂಟ್ ಸ್ಟಡೀಸ್ (ಸಿಐಎಂಎಸ್) ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಅನೇಕ ಅನಿವಾಸಿ ಭಾರತೀಯರು ತಮ್ಮ ಉದ್ಯೋಗದಾತರಿಂದ  ಬರಬೇಕಿರುವ ಬಾಕಿ ಹಣವನ್ನು ಪಡೆದಿಲ್ಲ ಎಂದು ಬಹಿರಂಗಪಡಿಸಿದೆ. ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗವನ್ನು ಕಳೆದುಕೊಂಡು ಸುಮಾರು 11 ಲಕ್ಷ ಜನರು ಕೇರಳಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...