Homeಮುಖಪುಟಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ - ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ...

ಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ – ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್

ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗವನ್ನು ಕಳೆದುಕೊಂಡು ಸುಮಾರು 11 ಲಕ್ಷ ಜನರು ಕೇರಳಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

- Advertisement -
- Advertisement -

ಗಲ್ಫ್ ದೇಶಗಳ ವಿಮಾನಯಾನ ದರವನ್ನು ಕೈಗೆಟುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಒಕ್ಕೂಟ ಸರ್ಕಾರದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಬರೆದ ಪತ್ರದಲ್ಲಿ, “ಕೊರೊನಾ ಸಾಂಕ್ರಮಿಕದ ಸಮಯದಲ್ಲಿ ಅತೀ ಹೆಚ್ಚು ಪರಿಣಾಮ ಬೀರಿದ ವಿಭಾಗ ಅನಿವಾಸಿ ಭಾರತೀಯರಾಗಿದ್ದಾರೆ. ಸಾಂಕ್ರಾಮಿಕದ ಮೊದಲ ಲಾಕ್‌ಡೌನ್ ಸಮಯದಲ್ಲಿ ದೇಶಕ್ಕೆ ಬಂದ ಅವರು, ನಂತರ ಯಾವುದೆ ಉದ್ಯೋಗವಿಲ್ಲದೆ ಇಲ್ಲಿ ಇರಬೇಕಾಯಿತು” ಎಂದು ಹೇಳಿದ್ದಾರೆ.

ಗಲ್ಫ್ ದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ವಿಮಾನದ ಟಿಕೆಟ್‌ಗಳನ್ನು ಕೈಗೆಟುಕುವಂತೆ ಮಾಡಲು ಸಚಿವರು “ತಕ್ಷಣದ ಮಧ್ಯಸ್ಥಿಕೆ” ವಹಿಸಬೇಕು ಎಂದು ಪಿಣರಾಯಿ ಕೋರಿದ್ದಾರೆ. ವಿವಿಧ ವಿಮಾನ ಮಾರ್ಗಗಳು ಶೀಘ್ರದಲ್ಲೇ ತೆರೆಯುತ್ತಿರುವುದರಿಂದ ಜನರು ಗಲ್ಫ್ ದೇಶಗಳಿಗೆ ಮರಳಲು ಉತ್ಸುಕರಾಗಿದ್ದಾರೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಕಳೆದ ಒಂದು ವರ್ಷದಿಂದ ನಿರುದ್ಯೋಗಿಗಳಾಗಿರುವ ಅನೇಕರಿಗೆ ವಿಮಾನ ಪ್ರಯಾಣದ ದರಗಳನ್ನು ಭರಿಸಲು ಕಷ್ಟವಾಗುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚು ಸಂಕಷ್ಟ ಅನುಭವಿಸಿದವರಲ್ಲಿ ಕೌಶಲ್ಯರಹಿತ ಮತ್ತು ಅರೆಕೌಶಲ್ಯ ಹೊಂದಿರುವ ಅನಿವಾಸಿ ಕಾರ್ಮಿಕರಾಗಿದ್ದಾರೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಸಾಂಕ್ರಮಿದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವುದರಿಂದ ಸಚಿವರು ಅದಕ್ಕೆ ಬೆಂಬಲ ನೀಡಬೇಕು ಎಂದು ಪಿಣರಾಯಿ ವಿಜಯನ್ ಪತ್ರದಲ್ಲಿ ಸಿಂದಿಯಾ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ.

ಹೆಚ್ಚಿನ ಜನರು ಕೈಗೆಟುಕುವ ದರದಲ್ಲಿ ವಿದೇಶಕ್ಕೆ ಪ್ರಯಾಣಿಸಲು ಸಾಧ್ಯವಾದಾಗ ವಿದೇಶಿ ವಿನಿಮಯದ ಮೂಲಕ ಭಾರತದ ಬೊಕ್ಕಸಕ್ಕೆ ಹೆಚ್ಚಿನ ಹಣ ಬರುತ್ತದೆ ಎಂದು ಅವರು ಹೇಳಿದ್ದು, ಇದು ದೇಶದ ಆರ್ಥಿಕ ಚೇತರಿಕೆಯನ್ನು ಸುಧಾರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಸೆಂಟರ್ ಫಾರ್ ಇಂಡಿಯನ್ ಮೈಗ್ರಂಟ್ ಸ್ಟಡೀಸ್ (ಸಿಐಎಂಎಸ್) ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಅನೇಕ ಅನಿವಾಸಿ ಭಾರತೀಯರು ತಮ್ಮ ಉದ್ಯೋಗದಾತರಿಂದ  ಬರಬೇಕಿರುವ ಬಾಕಿ ಹಣವನ್ನು ಪಡೆದಿಲ್ಲ ಎಂದು ಬಹಿರಂಗಪಡಿಸಿದೆ. ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗವನ್ನು ಕಳೆದುಕೊಂಡು ಸುಮಾರು 11 ಲಕ್ಷ ಜನರು ಕೇರಳಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...