Homeಮುಖಪುಟಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ - ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ...

ಗಲ್ಫ್ ದೇಶಗಳ ವಿಮಾನಯಾನ ದರ ಕಡಿಮೆ ಮಾಡಿ – ಒಕ್ಕೂಟ ಸರ್ಕಾರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್

ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗವನ್ನು ಕಳೆದುಕೊಂಡು ಸುಮಾರು 11 ಲಕ್ಷ ಜನರು ಕೇರಳಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

- Advertisement -
- Advertisement -

ಗಲ್ಫ್ ದೇಶಗಳ ವಿಮಾನಯಾನ ದರವನ್ನು ಕೈಗೆಟುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಒಕ್ಕೂಟ ಸರ್ಕಾರದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಬರೆದ ಪತ್ರದಲ್ಲಿ, “ಕೊರೊನಾ ಸಾಂಕ್ರಮಿಕದ ಸಮಯದಲ್ಲಿ ಅತೀ ಹೆಚ್ಚು ಪರಿಣಾಮ ಬೀರಿದ ವಿಭಾಗ ಅನಿವಾಸಿ ಭಾರತೀಯರಾಗಿದ್ದಾರೆ. ಸಾಂಕ್ರಾಮಿಕದ ಮೊದಲ ಲಾಕ್‌ಡೌನ್ ಸಮಯದಲ್ಲಿ ದೇಶಕ್ಕೆ ಬಂದ ಅವರು, ನಂತರ ಯಾವುದೆ ಉದ್ಯೋಗವಿಲ್ಲದೆ ಇಲ್ಲಿ ಇರಬೇಕಾಯಿತು” ಎಂದು ಹೇಳಿದ್ದಾರೆ.

ಗಲ್ಫ್ ದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ವಿಮಾನದ ಟಿಕೆಟ್‌ಗಳನ್ನು ಕೈಗೆಟುಕುವಂತೆ ಮಾಡಲು ಸಚಿವರು “ತಕ್ಷಣದ ಮಧ್ಯಸ್ಥಿಕೆ” ವಹಿಸಬೇಕು ಎಂದು ಪಿಣರಾಯಿ ಕೋರಿದ್ದಾರೆ. ವಿವಿಧ ವಿಮಾನ ಮಾರ್ಗಗಳು ಶೀಘ್ರದಲ್ಲೇ ತೆರೆಯುತ್ತಿರುವುದರಿಂದ ಜನರು ಗಲ್ಫ್ ದೇಶಗಳಿಗೆ ಮರಳಲು ಉತ್ಸುಕರಾಗಿದ್ದಾರೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಕಳೆದ ಒಂದು ವರ್ಷದಿಂದ ನಿರುದ್ಯೋಗಿಗಳಾಗಿರುವ ಅನೇಕರಿಗೆ ವಿಮಾನ ಪ್ರಯಾಣದ ದರಗಳನ್ನು ಭರಿಸಲು ಕಷ್ಟವಾಗುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚು ಸಂಕಷ್ಟ ಅನುಭವಿಸಿದವರಲ್ಲಿ ಕೌಶಲ್ಯರಹಿತ ಮತ್ತು ಅರೆಕೌಶಲ್ಯ ಹೊಂದಿರುವ ಅನಿವಾಸಿ ಕಾರ್ಮಿಕರಾಗಿದ್ದಾರೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಸಾಂಕ್ರಮಿದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವುದರಿಂದ ಸಚಿವರು ಅದಕ್ಕೆ ಬೆಂಬಲ ನೀಡಬೇಕು ಎಂದು ಪಿಣರಾಯಿ ವಿಜಯನ್ ಪತ್ರದಲ್ಲಿ ಸಿಂದಿಯಾ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ.

ಹೆಚ್ಚಿನ ಜನರು ಕೈಗೆಟುಕುವ ದರದಲ್ಲಿ ವಿದೇಶಕ್ಕೆ ಪ್ರಯಾಣಿಸಲು ಸಾಧ್ಯವಾದಾಗ ವಿದೇಶಿ ವಿನಿಮಯದ ಮೂಲಕ ಭಾರತದ ಬೊಕ್ಕಸಕ್ಕೆ ಹೆಚ್ಚಿನ ಹಣ ಬರುತ್ತದೆ ಎಂದು ಅವರು ಹೇಳಿದ್ದು, ಇದು ದೇಶದ ಆರ್ಥಿಕ ಚೇತರಿಕೆಯನ್ನು ಸುಧಾರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಸೆಂಟರ್ ಫಾರ್ ಇಂಡಿಯನ್ ಮೈಗ್ರಂಟ್ ಸ್ಟಡೀಸ್ (ಸಿಐಎಂಎಸ್) ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಅನೇಕ ಅನಿವಾಸಿ ಭಾರತೀಯರು ತಮ್ಮ ಉದ್ಯೋಗದಾತರಿಂದ  ಬರಬೇಕಿರುವ ಬಾಕಿ ಹಣವನ್ನು ಪಡೆದಿಲ್ಲ ಎಂದು ಬಹಿರಂಗಪಡಿಸಿದೆ. ಸಾಂಕ್ರಾಮಿಕದ ಸಮಯದಲ್ಲಿ ಉದ್ಯೋಗವನ್ನು ಕಳೆದುಕೊಂಡು ಸುಮಾರು 11 ಲಕ್ಷ ಜನರು ಕೇರಳಕ್ಕೆ ಮರಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...