Homeಮುಖಪುಟಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರ

ಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 1ರಂದು ’ಪತ್ರಿಕೆಗಳು ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ-2023’ನ್ನು ರಾಜ್ಯಸಭೆಯಲ್ಲಿ ಮಂಡಿಸಿ, ಎರಡು ದಿನಗಳ ನಂತರ ಧ್ವನಿ ಮತದಿಂದ ಅಂಗೀಕರಿಸಿತು. ಇದು ಅಸ್ತಿತ್ವದಲ್ಲಿರುವ ’ಪ್ರೆಸ್ ಅಂಡ್ ರಿಜಿಸ್ಟ್ರೇಶನ್ ಆಫ್ ಬುಕ್ಸ್ ಆಕ್ಟ್, 1867’ಅನ್ನು ಬದಲಿಸುತ್ತದೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ’ಈ ಮಸೂದೆಯಿಂದ ಮಾಧ್ಯಮ ಮತ್ತು ಪ್ರಕಾಶನ ಕಂಪನಿಗಳಿಗೆ ವ್ಯವಹಾರವನ್ನು ಸುಲಭಗೊಳಿಸಲು ಕಾರಣವಾಗುತ್ತದೆ, ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ ಮತ್ತು ವಸಾಹತುಶಾಹಿ ಯುಗದ ಹಲವಾರು ದಂಡದ ನಿಬಂಧನೆಗಳನ್ನು ತೊಡೆದುಹಾಕುತ್ತದೆ’ ಎಂದು ಹೇಳಿದ್ದಾರೆ. ಆದರೆ ಎಡಿಟರ್ಸ್ ಗಿಲ್ಡ್ ಮಾತ್ರ ಈ ಮಸೂದೆ ಅನಗತ್ಯವಾದ ಕಠಿಣ ನಿಬಂಧನೆಗಳನ್ನು ಒಳಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಅನುರಾಗ್ ಠಾಕೂರ್

ಭಯೋತ್ಪಾದಕ ಚಟುವಟಿಕೆಗಳು ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಪತ್ರಿಕೆ ಅಥವಾ ನಿಯತಕಾಲಿಕವನ್ನು ಪ್ರಾರಂಭಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಮಸೂದೆ ಹೇಳುತ್ತದೆ. ಆದರೆ ಈ ನಿಬಂಧನೆಯು ಸರ್ಕಾರವನ್ನು ಟೀಕಿಸುವ ವ್ಯಕ್ತಿಗಳಿಗೆ ಸುದ್ದಿಪತ್ರಿಕೆಗಳನ್ನು ಹೊರತರುವ ಹಕ್ಕನ್ನು ಕಿತ್ತುಕೊಳ್ಳಲು ದಾರಿ ಮಾಡಿಕೊಡುತ್ತದೆ ಎಂದು ದೆಹಲಿ ಮೂಲದ ಸಂಪಾದಕರ ಸಮೂಹ ಭಾರತದ ಎಡಿಟರ್ಸ್ ಗಿಲ್ಡ್ ತೀವ್ರ ಆತಂಕ ವ್ಯಕ್ತಪಡಿಸಿದೆ.

“ಭಯೋತ್ಪಾದಕ ಕೃತ್ಯ ಅಥವಾ ಕಾನೂನುಬಾಹಿರ ಚಟುವಟಿಕೆ” ಅಥವಾ “ರಾಜ್ಯದ ಭದ್ರತೆಯ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ” ಅಪರಾಧಿಗಳಿಗೆ ನಿಯತಕಾಲಿಕವನ್ನು ಹೊರತರುವ ಹಕ್ಕನ್ನು ನಿರಾಕರಿಸಲು ಮಸೂದೆಯ ಸೆಕ್ಷನ್ 4(1) ಮತ್ತು 11(4) ಸರ್ಕಾರಕ್ಕೆ ಅವಕಾಶ ನೀಡುತ್ತದೆ. ಆದರೆ PRB ಕಾಯಿದೆ 1867 ಅಂತಹ ಯಾವುದೇ ನಿಬಂಧನೆಗಳನ್ನು ಹೊಂದಿರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್ ಹೇಳುತ್ತದೆ.

ಭಯೋತ್ಪಾದಕರಿಗೆ ಪತ್ರಿಕೆ ನೋಂದಣಿಗೆ ಅವಕಾಶವಿಲ್ಲ ಎನ್ನುವುದು ಸರಿ ಎನಿಸಿದರೂ ಈ ಕಾನೂನುಬಾಹಿರ ಚಟುವಟಿಕೆ ಎಂಬುದನ್ನು ಹೇಗೆ ಅರ್ಥೈಸಬೇಕು ಎನ್ನುವ ಪ್ರಶ್ನೆ ಮೂಡುತ್ತದೆ. ಈ ಕಾನೂನುಬಾಹಿರ ಪ್ರಕರಣಗಳನ್ನು ದಾಖಲು ಮಾಡುವವರು ಪೊಲೀಸರು. ಸರ್ಕಾರದ ಅಣತಿಯಂತೆ ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳು ಸರ್ಕಾರವನ್ನು ಟೀಕಿಸಿದರೆ ಸುಮ್ಮನಿರುವವರೇ? ಸರ್ಕಾರವು ಈ ಮಸೂದೆಯ ನಿಯಮಗಳಿಂದಲೇ ಪತ್ರಿಕೆಗಳನ್ನು ಕಟ್ಟಿಹಾಕುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಪತ್ರಕರ್ತರು ಸರ್ಕಾರವನ್ನು ಟೀಕಿಸಿ ಲೇಖನಗಳನ್ನು ಬರೆಯುತ್ತಾರೆ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗಿರುತ್ತವೆ. ಅಂತ ಪತ್ರಕರ್ತರನ್ನು ನಿಯಂತ್ರಿಸಲು ಮತ್ತು ಅವರಿಗೆ ನಿರ್ಬಂಧ ಹೇರುವ ಹುನ್ನಾರದ ಭಾಗವಾಗಿ ಈ ಮಸೂದೆಯನ್ನು ಕೇಂದ್ರ ಸರ್ಕಾರ ತರಲು ಮುಂದಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ತೀವ್ರ ಏರಿಕೆ ಕಂಡ ಫೇಕ್ ನ್ಯೂಸ್‌ಗಳ ಹರಿದಾಟ; ಕಡಿವಾಣಕ್ಕೆ ಸಿದ್ಧವಾಗಿದೆಯೇ ಸರ್ಕಾರ?

ಇತ್ತಿಚೆಗೆ ಸರ್ಕಾರಗಳು ಈ UAPA (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಕಾನೂನನ್ನು ಉದಾರವಾಗಿ ಮತ್ತು ಅನಿಯಂತ್ರಿತವಾಗಿ ಬಳಕೆ ಮಾಡುತ್ತವೆ. ಹಾಗೆಯೇ ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸಲು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ದೇಶದ್ರೋಹ ಸೇರಿದಂತೆ ಇತರ ಕ್ರಿಮಿನಲ್ ಕಾನೂನುಗಳನ್ನು ಎಗ್ಗಿಲ್ಲದೆ ಬಳಸಲಾಗುತ್ತಿದೆ. ಸಿದ್ದಿಕ್ ಕಪ್ಪನ್‌ರಂತಹ ಪತ್ರಕರ್ತರು ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದಾರೆ. ದೈನಿಕ್ ಭಾಸ್ಕರ್ ಪತ್ರಿಕೆಯ ಮೇಲೆ ಐಟಿ, ಇಡಿ ದಾಳಿ ಮಾಡಿ ಬೆದರಿಸಲಾಗಿದೆ. 2023ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು 180 ದೇಶಗಳಲ್ಲಿ 161ಕ್ಕೆ ಕುಸಿದಿದೆ ಎಂದು ಜಾಗತಿಕ ಮಾಧ್ಯಮ ವಾಚ್‌ಡಾಗ್ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ಹೇಳಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳನ್ನು ಟೀಕಿಸುವ ವ್ಯಕ್ತಿಗಳಿಗೆ ಸುದ್ದಿ ಪ್ರಕಟಣೆಯ ಹಕ್ಕನ್ನು ಕಿತ್ತುಕೊಳ್ಳಲು ಈ ಹೊಸ ನಿಬಂಧನೆಗಳು ದುರುಪಯೋಗಪಡಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತವೆ.

ಹೊಸ ಮಸೂದೆಯು ಪ್ರೆಸ್ ರಿಜಿಸ್ಟ್ರಾರ್ ಹೊರತುಪಡಿಸಿ ಸರ್ಕಾರಿ ಏಜೆನ್ಸಿಗಳಿಗೆ ತನ್ನ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಅಂದರೆ ಒಂದು ಪತ್ರಿಕೆ ನೋಂದಣಿ ಆಗಬೇಕಾದರೆ ಆ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿ ಮಾತ್ರವಲ್ಲದೇ ಪೊಲೀಸ್ ಇಲಾಖೆಯೂ ಒಳಗೊಳ್ಳಬೇಕಾಗುತ್ತದೆ. ಈ ಕ್ರಮವು ಅತ್ಯಂತ ಖೇದಕರ ಎಂದು ಎಡಿಟರ್ ಗಿಲ್ಡ್ ಹೇಳುತ್ತದೆ.

ಈ ಹೊಸ ಮಸೂದೆಯು ಪತ್ರಿಕೆಗಳು ಮತ್ತು ನಿಯತಕಾಲಿಕೆಗಳ ಕಾರ್ಯಚಟುವಟಿಕೆಗಳ ಮೇಲೆ ಅನಿಯಂತ್ರಿತ ತಪಾಸಣೆಗಳನ್ನು ನಡೆಸಲು ಸರ್ಕಾರಕ್ಕೆ ಅಧಿಕಾರವನ್ನು ವಿಸ್ತರಿಸುತ್ತದೆ. ಪ್ರೆಸ್ ರಿಜಿಸ್ಟ್ರಾರ್‌ನ ಅಧಿಕಾರವನ್ನು ವಿಸ್ತರಣೆ ಮಾಡುವುದರಿಂದ ಪತ್ರಿಕೆಗಳನ್ನು ಹೊರತರಲು ಸಾಧ್ಯವಾಗುವುದಿಲ್ಲ ಮಾತ್ರವಲ್ಲ ಚಾಲ್ತಿಯಲ್ಲಿರುವ ಸುದ್ದಿ ಪ್ರಕಟಣೆಗಳಲ್ಲೂ ಸರ್ಕಾರ ಹಸ್ತಕ್ಷೇಪ ಮಾಡಬಹುದಾಗಿದ್ದು, ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಮಾಡುವ ಉದ್ದೇಶ ಹೊಂದಿದೆ.

ಈ ಮಸೂದೆಯಲ್ಲಿ ಅನೇಕ ನಿಬಂಧನೆಗಳು ಸರ್ಕಾರಿ ನಿಯಂತ್ರಣ ಸಂಸ್ಥೆಗಳ ಅಧಿಕಾರದ ಕುರಿತು ಅಸ್ಪಷ್ಟವಾಗಿವೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುವ ನಿಯಮಗಳನ್ನು ಹೊಂದಿದೆ ಎಂದು ಎಡಿಟರ್ಸ್ ಗಿಲ್ಡ್ ಸಂಸ್ಥೆಯು ತನ್ನ ಹೇಳಿಕೆಯಲ್ಲಿ ಹೇಳಿದೆ.

“ನಿರ್ದಿಷ್ಟ ಅಧಿಕಾರ” ಎಂಬ ಪದವು ಪತ್ರಿಕಾ ರಿಜಿಸ್ಟ್ರಾರ್‌ಅನ್ನು ಹೊರತುಪಡಿಸಿ ಸರ್ಕಾರಿ ಏಜೆನ್ಸಿಗಳಿಗೆ ತನ್ನ ಕಾರ್ಯವನ್ನು ನಡೆಸಲು ಅನುವು ಮಾಡಿಕೊಡುತ್ತದೆ. ಇದು ಪೊಲೀಸ್ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳನ್ನು ಸಹ ಒಳಗೊಂಡಿರುತ್ತದೆ. ಹಾಗಿದ್ದಾಗ ಪತ್ರಿಕೆಗಳು ವಿರೋಧ ಪಕ್ಷವಾಗಿ ಕೆಲಸ ಮಾಡಲು ಹೇಗೆ ಸಾಧ್ಯವಾಗುತ್ತದೆ ಎನ್ನುವ ಪ್ರಶ್ನೆ ಮೂಡುತ್ತದೆ.

ಇದನ್ನೂ ಓದಿ: ಫೇಕ್ ನ್ಯೂಸ್ ತಡೆಗಟ್ಟುವಿಕೆಗೆ ಕ್ರಮಗಳು ಅಗತ್ಯ- ಬೆಕ್ಕಿಗೆ ಗಂಟೆ ಕಟ್ಟುವವರ್‍ಯಾರು? ಹೇಗೆ?

ಇಷ್ಟೇ ಅಲ್ಲದೇ ಬಿಲ್‌ನ ಸೆಕ್ಷನ್ 6(ಬಿ) ಪ್ರೆಸ್ ರಿಜಿಸ್ಟ್ರಾರ್‌ಗೆ ಪತ್ರಿಕೆಗಳನ್ನು “ಪರಿಶೀಲಿಸಲು ಅಥವಾ ಸಂಬಂಧಿತ ದಾಖಲೆಗಳು ಅಥವಾ ದಾಖಲೆಗಳ ಪ್ರತಿಗಳನ್ನು ತೆಗೆದುಕೊಳ್ಳಲು” ಅಧಿಕಾರವನ್ನು ನೀಡುತ್ತದೆ. ಪತ್ರಿಕಾ ಸಂಸ್ಥೆಯನ್ನು ಪ್ರವೇಶಿಸುವ ಈ ಅಧಿಕಾರವು ಅತಿಯಾಗಿ ಒಳನುಗ್ಗುವಿಕೆಗೆ ಅವಕಾಶ ಕೊಟ್ಟಿರುವುದನ್ನು ತೋರುತ್ತದೆ.

ಹಾಗಾಗಿ ಪತ್ರಿಕಾ ಸ್ವಾತಂತ್ರ್ಯಕ್ಕೆ ನಿರ್ಣಾಯಕವಾಗಿರುವ ವಿಷಯಗಳ ಬಗ್ಗೆ ಆಳವಾದ ಚರ್ಚೆಗೆ ಅವಕಾಶ ಮಾಡಿಕೊಡಲು, ಸಂಸತ್ತಿನ ಆಯ್ಕೆ ಸಮಿತಿಗೆ ಮಸೂದೆಯನ್ನು ಉಲ್ಲೇಖಿಸುವಂತೆ ಲೋಕಸಭೆಯ ಸ್ಪೀಕರ್ ಅವರನ್ನು ಎಡಿಟರ್ಸ್ ಗಿಲ್ಡ್ ಒತ್ತಾಯಿಸಿದೆ.

ಈ ಮಸೂದೆಯ ಸೆಕ್ಷನ್ 19, ಭಾರತದಲ್ಲಿ ಸುದ್ದಿ ಪ್ರಕಟಣೆಯನ್ನು ಮಾಡಬೇಕಾದ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮಾಧ್ಯಮಗಳನ್ನು ಕಟ್ಟಿಹಾಕಲು ಕೇಂದ್ರ ಸರ್ಕಾರ ನಂತರ ಪ್ರಯತ್ನ ಮಾಡುತ್ತಿರುವುದು ದೇಶದ ದುರಂತದ ಸಂಗತಿಯಾಗಿದೆ.

ಶಿವಾನಂದ ತಗಡೂರು

ಈ ಬಗ್ಗೆ ನ್ಯಾಯಪಥದೊಂದಿಗೆ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ನೂತನ ಮಸುದೆ ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪ್ರಯತ್ನ ಎಂದು ಟೀಕಿಸಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಸ್ವಾತಂತ್ರ್ಯ ಎನ್ನುವುದು ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ಆರೋಗ್ಯಕರ ಸಮಾಜ ನಿರ್ಮಾಣವಾಗಲು ಪತ್ರಿಕಾ ಸ್ವಾತಂತ್ರ್ಯ ಬಹಳ ಮುಖ್ಯ. ಏಕೆಂದರೆ ಪ್ರಜಾಪ್ರಭುತ್ವದ ಸ್ವಾಸ್ಥ್ಯವನ್ನು ಕಾಪಾಡುವುದು ಮಾಧ್ಯಮಗಳ ಜವಾಬ್ದಾರಿ. ಮಾಧ್ಯಮಗಳಲ್ಲಿ ಸರ್ಕಾರದ ಮೂಗು ತೂರಿಸುವಿಕೆ ಇರಬಾರದು. ಕೇಂದ್ರ ಸರ್ಕಾರದ ಈ ಹೊಸ ಮಸೂದೆಯಲ್ಲಿನ ಮುಖ್ಯ ಉದ್ದೇಶ, ಆಕ್ಷೇಪಾರ್ಹ ಅಂಶಗಳನ್ನ ಹಾಕಿ ಪತ್ರಿಕೆಗಳನ್ನು ಹೊರತರದಂತೆ ನೋಡಿಕೊಳ್ಳುವ ಹುನ್ನಾರವಾಗಿದೆ. ಹಾಗಾಗಿ ಮಸೂದೆಯನ್ನು ಮತ್ತೊಮ್ಮೆ ಪರಾಮರ್ಶಿಸಬೇಕು. ಮಾಧ್ಯಮದಲ್ಲಿ ಕೆಲಸ ಮಾಡಿದ ಹಿರಿಯ ಪತ್ರಕರ್ತರ ಸಲಹೆಗಳನ್ನು ಪಡೆದು ತಿದ್ದುಪಡಿ ಮಾಡಬೇಕು. ತರಾತುರಿಯಲ್ಲಿ ಈ ಮಸೂದೆ ತಂದಿರುವುದು ಸರಿಯಾದ ಕ್ರಮವಲ್ಲ, ಹಾಗಾಗಿ ಈ ಮಸೂದೆಯನ್ನು ಹಿಂಪಡೆಯಬೇಕು” ಎಂದು ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...