Homeಮುಖಪುಟಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರ

ಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 1ರಂದು ’ಪತ್ರಿಕೆಗಳು ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ-2023’ನ್ನು ರಾಜ್ಯಸಭೆಯಲ್ಲಿ ಮಂಡಿಸಿ, ಎರಡು ದಿನಗಳ ನಂತರ ಧ್ವನಿ ಮತದಿಂದ ಅಂಗೀಕರಿಸಿತು. ಇದು ಅಸ್ತಿತ್ವದಲ್ಲಿರುವ ’ಪ್ರೆಸ್ ಅಂಡ್ ರಿಜಿಸ್ಟ್ರೇಶನ್ ಆಫ್ ಬುಕ್ಸ್ ಆಕ್ಟ್, 1867’ಅನ್ನು ಬದಲಿಸುತ್ತದೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ’ಈ ಮಸೂದೆಯಿಂದ ಮಾಧ್ಯಮ ಮತ್ತು ಪ್ರಕಾಶನ ಕಂಪನಿಗಳಿಗೆ ವ್ಯವಹಾರವನ್ನು ಸುಲಭಗೊಳಿಸಲು ಕಾರಣವಾಗುತ್ತದೆ, ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ ಮತ್ತು ವಸಾಹತುಶಾಹಿ ಯುಗದ ಹಲವಾರು ದಂಡದ ನಿಬಂಧನೆಗಳನ್ನು ತೊಡೆದುಹಾಕುತ್ತದೆ’ ಎಂದು ಹೇಳಿದ್ದಾರೆ. ಆದರೆ ಎಡಿಟರ್ಸ್ ಗಿಲ್ಡ್ ಮಾತ್ರ ಈ ಮಸೂದೆ ಅನಗತ್ಯವಾದ ಕಠಿಣ ನಿಬಂಧನೆಗಳನ್ನು ಒಳಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಅನುರಾಗ್ ಠಾಕೂರ್

ಭಯೋತ್ಪಾದಕ ಚಟುವಟಿಕೆಗಳು ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಪತ್ರಿಕೆ ಅಥವಾ ನಿಯತಕಾಲಿಕವನ್ನು ಪ್ರಾರಂಭಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಮಸೂದೆ ಹೇಳುತ್ತದೆ. ಆದರೆ ಈ ನಿಬಂಧನೆಯು ಸರ್ಕಾರವನ್ನು ಟೀಕಿಸುವ ವ್ಯಕ್ತಿಗಳಿಗೆ ಸುದ್ದಿಪತ್ರಿಕೆಗಳನ್ನು ಹೊರತರುವ ಹಕ್ಕನ್ನು ಕಿತ್ತುಕೊಳ್ಳಲು ದಾರಿ ಮಾಡಿಕೊಡುತ್ತದೆ ಎಂದು ದೆಹಲಿ ಮೂಲದ ಸಂಪಾದಕರ ಸಮೂಹ ಭಾರತದ ಎಡಿಟರ್ಸ್ ಗಿಲ್ಡ್ ತೀವ್ರ ಆತಂಕ ವ್ಯಕ್ತಪಡಿಸಿದೆ.

“ಭಯೋತ್ಪಾದಕ ಕೃತ್ಯ ಅಥವಾ ಕಾನೂನುಬಾಹಿರ ಚಟುವಟಿಕೆ” ಅಥವಾ “ರಾಜ್ಯದ ಭದ್ರತೆಯ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ” ಅಪರಾಧಿಗಳಿಗೆ ನಿಯತಕಾಲಿಕವನ್ನು ಹೊರತರುವ ಹಕ್ಕನ್ನು ನಿರಾಕರಿಸಲು ಮಸೂದೆಯ ಸೆಕ್ಷನ್ 4(1) ಮತ್ತು 11(4) ಸರ್ಕಾರಕ್ಕೆ ಅವಕಾಶ ನೀಡುತ್ತದೆ. ಆದರೆ PRB ಕಾಯಿದೆ 1867 ಅಂತಹ ಯಾವುದೇ ನಿಬಂಧನೆಗಳನ್ನು ಹೊಂದಿರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್ ಹೇಳುತ್ತದೆ.

ಭಯೋತ್ಪಾದಕರಿಗೆ ಪತ್ರಿಕೆ ನೋಂದಣಿಗೆ ಅವಕಾಶವಿಲ್ಲ ಎನ್ನುವುದು ಸರಿ ಎನಿಸಿದರೂ ಈ ಕಾನೂನುಬಾಹಿರ ಚಟುವಟಿಕೆ ಎಂಬುದನ್ನು ಹೇಗೆ ಅರ್ಥೈಸಬೇಕು ಎನ್ನುವ ಪ್ರಶ್ನೆ ಮೂಡುತ್ತದೆ. ಈ ಕಾನೂನುಬಾಹಿರ ಪ್ರಕರಣಗಳನ್ನು ದಾಖಲು ಮಾಡುವವರು ಪೊಲೀಸರು. ಸರ್ಕಾರದ ಅಣತಿಯಂತೆ ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳು ಸರ್ಕಾರವನ್ನು ಟೀಕಿಸಿದರೆ ಸುಮ್ಮನಿರುವವರೇ? ಸರ್ಕಾರವು ಈ ಮಸೂದೆಯ ನಿಯಮಗಳಿಂದಲೇ ಪತ್ರಿಕೆಗಳನ್ನು ಕಟ್ಟಿಹಾಕುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಪತ್ರಕರ್ತರು ಸರ್ಕಾರವನ್ನು ಟೀಕಿಸಿ ಲೇಖನಗಳನ್ನು ಬರೆಯುತ್ತಾರೆ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗಿರುತ್ತವೆ. ಅಂತ ಪತ್ರಕರ್ತರನ್ನು ನಿಯಂತ್ರಿಸಲು ಮತ್ತು ಅವರಿಗೆ ನಿರ್ಬಂಧ ಹೇರುವ ಹುನ್ನಾರದ ಭಾಗವಾಗಿ ಈ ಮಸೂದೆಯನ್ನು ಕೇಂದ್ರ ಸರ್ಕಾರ ತರಲು ಮುಂದಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ತೀವ್ರ ಏರಿಕೆ ಕಂಡ ಫೇಕ್ ನ್ಯೂಸ್‌ಗಳ ಹರಿದಾಟ; ಕಡಿವಾಣಕ್ಕೆ ಸಿದ್ಧವಾಗಿದೆಯೇ ಸರ್ಕಾರ?

ಇತ್ತಿಚೆಗೆ ಸರ್ಕಾರಗಳು ಈ UAPA (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಕಾನೂನನ್ನು ಉದಾರವಾಗಿ ಮತ್ತು ಅನಿಯಂತ್ರಿತವಾಗಿ ಬಳಕೆ ಮಾಡುತ್ತವೆ. ಹಾಗೆಯೇ ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸಲು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ದೇಶದ್ರೋಹ ಸೇರಿದಂತೆ ಇತರ ಕ್ರಿಮಿನಲ್ ಕಾನೂನುಗಳನ್ನು ಎಗ್ಗಿಲ್ಲದೆ ಬಳಸಲಾಗುತ್ತಿದೆ. ಸಿದ್ದಿಕ್ ಕಪ್ಪನ್‌ರಂತಹ ಪತ್ರಕರ್ತರು ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದಾರೆ. ದೈನಿಕ್ ಭಾಸ್ಕರ್ ಪತ್ರಿಕೆಯ ಮೇಲೆ ಐಟಿ, ಇಡಿ ದಾಳಿ ಮಾಡಿ ಬೆದರಿಸಲಾಗಿದೆ. 2023ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು 180 ದೇಶಗಳಲ್ಲಿ 161ಕ್ಕೆ ಕುಸಿದಿದೆ ಎಂದು ಜಾಗತಿಕ ಮಾಧ್ಯಮ ವಾಚ್‌ಡಾಗ್ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ಹೇಳಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳನ್ನು ಟೀಕಿಸುವ ವ್ಯಕ್ತಿಗಳಿಗೆ ಸುದ್ದಿ ಪ್ರಕಟಣೆಯ ಹಕ್ಕನ್ನು ಕಿತ್ತುಕೊಳ್ಳಲು ಈ ಹೊಸ ನಿಬಂಧನೆಗಳು ದುರುಪಯೋಗಪಡಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತವೆ.

ಹೊಸ ಮಸೂದೆಯು ಪ್ರೆಸ್ ರಿಜಿಸ್ಟ್ರಾರ್ ಹೊರತುಪಡಿಸಿ ಸರ್ಕಾರಿ ಏಜೆನ್ಸಿಗಳಿಗೆ ತನ್ನ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಅಂದರೆ ಒಂದು ಪತ್ರಿಕೆ ನೋಂದಣಿ ಆಗಬೇಕಾದರೆ ಆ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿ ಮಾತ್ರವಲ್ಲದೇ ಪೊಲೀಸ್ ಇಲಾಖೆಯೂ ಒಳಗೊಳ್ಳಬೇಕಾಗುತ್ತದೆ. ಈ ಕ್ರಮವು ಅತ್ಯಂತ ಖೇದಕರ ಎಂದು ಎಡಿಟರ್ ಗಿಲ್ಡ್ ಹೇಳುತ್ತದೆ.

ಈ ಹೊಸ ಮಸೂದೆಯು ಪತ್ರಿಕೆಗಳು ಮತ್ತು ನಿಯತಕಾಲಿಕೆಗಳ ಕಾರ್ಯಚಟುವಟಿಕೆಗಳ ಮೇಲೆ ಅನಿಯಂತ್ರಿತ ತಪಾಸಣೆಗಳನ್ನು ನಡೆಸಲು ಸರ್ಕಾರಕ್ಕೆ ಅಧಿಕಾರವನ್ನು ವಿಸ್ತರಿಸುತ್ತದೆ. ಪ್ರೆಸ್ ರಿಜಿಸ್ಟ್ರಾರ್‌ನ ಅಧಿಕಾರವನ್ನು ವಿಸ್ತರಣೆ ಮಾಡುವುದರಿಂದ ಪತ್ರಿಕೆಗಳನ್ನು ಹೊರತರಲು ಸಾಧ್ಯವಾಗುವುದಿಲ್ಲ ಮಾತ್ರವಲ್ಲ ಚಾಲ್ತಿಯಲ್ಲಿರುವ ಸುದ್ದಿ ಪ್ರಕಟಣೆಗಳಲ್ಲೂ ಸರ್ಕಾರ ಹಸ್ತಕ್ಷೇಪ ಮಾಡಬಹುದಾಗಿದ್ದು, ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಮಾಡುವ ಉದ್ದೇಶ ಹೊಂದಿದೆ.

ಈ ಮಸೂದೆಯಲ್ಲಿ ಅನೇಕ ನಿಬಂಧನೆಗಳು ಸರ್ಕಾರಿ ನಿಯಂತ್ರಣ ಸಂಸ್ಥೆಗಳ ಅಧಿಕಾರದ ಕುರಿತು ಅಸ್ಪಷ್ಟವಾಗಿವೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುವ ನಿಯಮಗಳನ್ನು ಹೊಂದಿದೆ ಎಂದು ಎಡಿಟರ್ಸ್ ಗಿಲ್ಡ್ ಸಂಸ್ಥೆಯು ತನ್ನ ಹೇಳಿಕೆಯಲ್ಲಿ ಹೇಳಿದೆ.

“ನಿರ್ದಿಷ್ಟ ಅಧಿಕಾರ” ಎಂಬ ಪದವು ಪತ್ರಿಕಾ ರಿಜಿಸ್ಟ್ರಾರ್‌ಅನ್ನು ಹೊರತುಪಡಿಸಿ ಸರ್ಕಾರಿ ಏಜೆನ್ಸಿಗಳಿಗೆ ತನ್ನ ಕಾರ್ಯವನ್ನು ನಡೆಸಲು ಅನುವು ಮಾಡಿಕೊಡುತ್ತದೆ. ಇದು ಪೊಲೀಸ್ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳನ್ನು ಸಹ ಒಳಗೊಂಡಿರುತ್ತದೆ. ಹಾಗಿದ್ದಾಗ ಪತ್ರಿಕೆಗಳು ವಿರೋಧ ಪಕ್ಷವಾಗಿ ಕೆಲಸ ಮಾಡಲು ಹೇಗೆ ಸಾಧ್ಯವಾಗುತ್ತದೆ ಎನ್ನುವ ಪ್ರಶ್ನೆ ಮೂಡುತ್ತದೆ.

ಇದನ್ನೂ ಓದಿ: ಫೇಕ್ ನ್ಯೂಸ್ ತಡೆಗಟ್ಟುವಿಕೆಗೆ ಕ್ರಮಗಳು ಅಗತ್ಯ- ಬೆಕ್ಕಿಗೆ ಗಂಟೆ ಕಟ್ಟುವವರ್‍ಯಾರು? ಹೇಗೆ?

ಇಷ್ಟೇ ಅಲ್ಲದೇ ಬಿಲ್‌ನ ಸೆಕ್ಷನ್ 6(ಬಿ) ಪ್ರೆಸ್ ರಿಜಿಸ್ಟ್ರಾರ್‌ಗೆ ಪತ್ರಿಕೆಗಳನ್ನು “ಪರಿಶೀಲಿಸಲು ಅಥವಾ ಸಂಬಂಧಿತ ದಾಖಲೆಗಳು ಅಥವಾ ದಾಖಲೆಗಳ ಪ್ರತಿಗಳನ್ನು ತೆಗೆದುಕೊಳ್ಳಲು” ಅಧಿಕಾರವನ್ನು ನೀಡುತ್ತದೆ. ಪತ್ರಿಕಾ ಸಂಸ್ಥೆಯನ್ನು ಪ್ರವೇಶಿಸುವ ಈ ಅಧಿಕಾರವು ಅತಿಯಾಗಿ ಒಳನುಗ್ಗುವಿಕೆಗೆ ಅವಕಾಶ ಕೊಟ್ಟಿರುವುದನ್ನು ತೋರುತ್ತದೆ.

ಹಾಗಾಗಿ ಪತ್ರಿಕಾ ಸ್ವಾತಂತ್ರ್ಯಕ್ಕೆ ನಿರ್ಣಾಯಕವಾಗಿರುವ ವಿಷಯಗಳ ಬಗ್ಗೆ ಆಳವಾದ ಚರ್ಚೆಗೆ ಅವಕಾಶ ಮಾಡಿಕೊಡಲು, ಸಂಸತ್ತಿನ ಆಯ್ಕೆ ಸಮಿತಿಗೆ ಮಸೂದೆಯನ್ನು ಉಲ್ಲೇಖಿಸುವಂತೆ ಲೋಕಸಭೆಯ ಸ್ಪೀಕರ್ ಅವರನ್ನು ಎಡಿಟರ್ಸ್ ಗಿಲ್ಡ್ ಒತ್ತಾಯಿಸಿದೆ.

ಈ ಮಸೂದೆಯ ಸೆಕ್ಷನ್ 19, ಭಾರತದಲ್ಲಿ ಸುದ್ದಿ ಪ್ರಕಟಣೆಯನ್ನು ಮಾಡಬೇಕಾದ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮಾಧ್ಯಮಗಳನ್ನು ಕಟ್ಟಿಹಾಕಲು ಕೇಂದ್ರ ಸರ್ಕಾರ ನಂತರ ಪ್ರಯತ್ನ ಮಾಡುತ್ತಿರುವುದು ದೇಶದ ದುರಂತದ ಸಂಗತಿಯಾಗಿದೆ.

ಶಿವಾನಂದ ತಗಡೂರು

ಈ ಬಗ್ಗೆ ನ್ಯಾಯಪಥದೊಂದಿಗೆ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ನೂತನ ಮಸುದೆ ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪ್ರಯತ್ನ ಎಂದು ಟೀಕಿಸಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಸ್ವಾತಂತ್ರ್ಯ ಎನ್ನುವುದು ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ಆರೋಗ್ಯಕರ ಸಮಾಜ ನಿರ್ಮಾಣವಾಗಲು ಪತ್ರಿಕಾ ಸ್ವಾತಂತ್ರ್ಯ ಬಹಳ ಮುಖ್ಯ. ಏಕೆಂದರೆ ಪ್ರಜಾಪ್ರಭುತ್ವದ ಸ್ವಾಸ್ಥ್ಯವನ್ನು ಕಾಪಾಡುವುದು ಮಾಧ್ಯಮಗಳ ಜವಾಬ್ದಾರಿ. ಮಾಧ್ಯಮಗಳಲ್ಲಿ ಸರ್ಕಾರದ ಮೂಗು ತೂರಿಸುವಿಕೆ ಇರಬಾರದು. ಕೇಂದ್ರ ಸರ್ಕಾರದ ಈ ಹೊಸ ಮಸೂದೆಯಲ್ಲಿನ ಮುಖ್ಯ ಉದ್ದೇಶ, ಆಕ್ಷೇಪಾರ್ಹ ಅಂಶಗಳನ್ನ ಹಾಕಿ ಪತ್ರಿಕೆಗಳನ್ನು ಹೊರತರದಂತೆ ನೋಡಿಕೊಳ್ಳುವ ಹುನ್ನಾರವಾಗಿದೆ. ಹಾಗಾಗಿ ಮಸೂದೆಯನ್ನು ಮತ್ತೊಮ್ಮೆ ಪರಾಮರ್ಶಿಸಬೇಕು. ಮಾಧ್ಯಮದಲ್ಲಿ ಕೆಲಸ ಮಾಡಿದ ಹಿರಿಯ ಪತ್ರಕರ್ತರ ಸಲಹೆಗಳನ್ನು ಪಡೆದು ತಿದ್ದುಪಡಿ ಮಾಡಬೇಕು. ತರಾತುರಿಯಲ್ಲಿ ಈ ಮಸೂದೆ ತಂದಿರುವುದು ಸರಿಯಾದ ಕ್ರಮವಲ್ಲ, ಹಾಗಾಗಿ ಈ ಮಸೂದೆಯನ್ನು ಹಿಂಪಡೆಯಬೇಕು” ಎಂದು ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...