Homeಮುಖಪುಟಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರ

ಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 1ರಂದು ’ಪತ್ರಿಕೆಗಳು ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ-2023’ನ್ನು ರಾಜ್ಯಸಭೆಯಲ್ಲಿ ಮಂಡಿಸಿ, ಎರಡು ದಿನಗಳ ನಂತರ ಧ್ವನಿ ಮತದಿಂದ ಅಂಗೀಕರಿಸಿತು. ಇದು ಅಸ್ತಿತ್ವದಲ್ಲಿರುವ ’ಪ್ರೆಸ್ ಅಂಡ್ ರಿಜಿಸ್ಟ್ರೇಶನ್ ಆಫ್ ಬುಕ್ಸ್ ಆಕ್ಟ್, 1867’ಅನ್ನು ಬದಲಿಸುತ್ತದೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ’ಈ ಮಸೂದೆಯಿಂದ ಮಾಧ್ಯಮ ಮತ್ತು ಪ್ರಕಾಶನ ಕಂಪನಿಗಳಿಗೆ ವ್ಯವಹಾರವನ್ನು ಸುಲಭಗೊಳಿಸಲು ಕಾರಣವಾಗುತ್ತದೆ, ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ ಮತ್ತು ವಸಾಹತುಶಾಹಿ ಯುಗದ ಹಲವಾರು ದಂಡದ ನಿಬಂಧನೆಗಳನ್ನು ತೊಡೆದುಹಾಕುತ್ತದೆ’ ಎಂದು ಹೇಳಿದ್ದಾರೆ. ಆದರೆ ಎಡಿಟರ್ಸ್ ಗಿಲ್ಡ್ ಮಾತ್ರ ಈ ಮಸೂದೆ ಅನಗತ್ಯವಾದ ಕಠಿಣ ನಿಬಂಧನೆಗಳನ್ನು ಒಳಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಅನುರಾಗ್ ಠಾಕೂರ್

ಭಯೋತ್ಪಾದಕ ಚಟುವಟಿಕೆಗಳು ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಪತ್ರಿಕೆ ಅಥವಾ ನಿಯತಕಾಲಿಕವನ್ನು ಪ್ರಾರಂಭಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಮಸೂದೆ ಹೇಳುತ್ತದೆ. ಆದರೆ ಈ ನಿಬಂಧನೆಯು ಸರ್ಕಾರವನ್ನು ಟೀಕಿಸುವ ವ್ಯಕ್ತಿಗಳಿಗೆ ಸುದ್ದಿಪತ್ರಿಕೆಗಳನ್ನು ಹೊರತರುವ ಹಕ್ಕನ್ನು ಕಿತ್ತುಕೊಳ್ಳಲು ದಾರಿ ಮಾಡಿಕೊಡುತ್ತದೆ ಎಂದು ದೆಹಲಿ ಮೂಲದ ಸಂಪಾದಕರ ಸಮೂಹ ಭಾರತದ ಎಡಿಟರ್ಸ್ ಗಿಲ್ಡ್ ತೀವ್ರ ಆತಂಕ ವ್ಯಕ್ತಪಡಿಸಿದೆ.

“ಭಯೋತ್ಪಾದಕ ಕೃತ್ಯ ಅಥವಾ ಕಾನೂನುಬಾಹಿರ ಚಟುವಟಿಕೆ” ಅಥವಾ “ರಾಜ್ಯದ ಭದ್ರತೆಯ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ” ಅಪರಾಧಿಗಳಿಗೆ ನಿಯತಕಾಲಿಕವನ್ನು ಹೊರತರುವ ಹಕ್ಕನ್ನು ನಿರಾಕರಿಸಲು ಮಸೂದೆಯ ಸೆಕ್ಷನ್ 4(1) ಮತ್ತು 11(4) ಸರ್ಕಾರಕ್ಕೆ ಅವಕಾಶ ನೀಡುತ್ತದೆ. ಆದರೆ PRB ಕಾಯಿದೆ 1867 ಅಂತಹ ಯಾವುದೇ ನಿಬಂಧನೆಗಳನ್ನು ಹೊಂದಿರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್ ಹೇಳುತ್ತದೆ.

ಭಯೋತ್ಪಾದಕರಿಗೆ ಪತ್ರಿಕೆ ನೋಂದಣಿಗೆ ಅವಕಾಶವಿಲ್ಲ ಎನ್ನುವುದು ಸರಿ ಎನಿಸಿದರೂ ಈ ಕಾನೂನುಬಾಹಿರ ಚಟುವಟಿಕೆ ಎಂಬುದನ್ನು ಹೇಗೆ ಅರ್ಥೈಸಬೇಕು ಎನ್ನುವ ಪ್ರಶ್ನೆ ಮೂಡುತ್ತದೆ. ಈ ಕಾನೂನುಬಾಹಿರ ಪ್ರಕರಣಗಳನ್ನು ದಾಖಲು ಮಾಡುವವರು ಪೊಲೀಸರು. ಸರ್ಕಾರದ ಅಣತಿಯಂತೆ ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳು ಸರ್ಕಾರವನ್ನು ಟೀಕಿಸಿದರೆ ಸುಮ್ಮನಿರುವವರೇ? ಸರ್ಕಾರವು ಈ ಮಸೂದೆಯ ನಿಯಮಗಳಿಂದಲೇ ಪತ್ರಿಕೆಗಳನ್ನು ಕಟ್ಟಿಹಾಕುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಪತ್ರಕರ್ತರು ಸರ್ಕಾರವನ್ನು ಟೀಕಿಸಿ ಲೇಖನಗಳನ್ನು ಬರೆಯುತ್ತಾರೆ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗಿರುತ್ತವೆ. ಅಂತ ಪತ್ರಕರ್ತರನ್ನು ನಿಯಂತ್ರಿಸಲು ಮತ್ತು ಅವರಿಗೆ ನಿರ್ಬಂಧ ಹೇರುವ ಹುನ್ನಾರದ ಭಾಗವಾಗಿ ಈ ಮಸೂದೆಯನ್ನು ಕೇಂದ್ರ ಸರ್ಕಾರ ತರಲು ಮುಂದಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ತೀವ್ರ ಏರಿಕೆ ಕಂಡ ಫೇಕ್ ನ್ಯೂಸ್‌ಗಳ ಹರಿದಾಟ; ಕಡಿವಾಣಕ್ಕೆ ಸಿದ್ಧವಾಗಿದೆಯೇ ಸರ್ಕಾರ?

ಇತ್ತಿಚೆಗೆ ಸರ್ಕಾರಗಳು ಈ UAPA (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಕಾನೂನನ್ನು ಉದಾರವಾಗಿ ಮತ್ತು ಅನಿಯಂತ್ರಿತವಾಗಿ ಬಳಕೆ ಮಾಡುತ್ತವೆ. ಹಾಗೆಯೇ ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸಲು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ದೇಶದ್ರೋಹ ಸೇರಿದಂತೆ ಇತರ ಕ್ರಿಮಿನಲ್ ಕಾನೂನುಗಳನ್ನು ಎಗ್ಗಿಲ್ಲದೆ ಬಳಸಲಾಗುತ್ತಿದೆ. ಸಿದ್ದಿಕ್ ಕಪ್ಪನ್‌ರಂತಹ ಪತ್ರಕರ್ತರು ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದಾರೆ. ದೈನಿಕ್ ಭಾಸ್ಕರ್ ಪತ್ರಿಕೆಯ ಮೇಲೆ ಐಟಿ, ಇಡಿ ದಾಳಿ ಮಾಡಿ ಬೆದರಿಸಲಾಗಿದೆ. 2023ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು 180 ದೇಶಗಳಲ್ಲಿ 161ಕ್ಕೆ ಕುಸಿದಿದೆ ಎಂದು ಜಾಗತಿಕ ಮಾಧ್ಯಮ ವಾಚ್‌ಡಾಗ್ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ಹೇಳಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳನ್ನು ಟೀಕಿಸುವ ವ್ಯಕ್ತಿಗಳಿಗೆ ಸುದ್ದಿ ಪ್ರಕಟಣೆಯ ಹಕ್ಕನ್ನು ಕಿತ್ತುಕೊಳ್ಳಲು ಈ ಹೊಸ ನಿಬಂಧನೆಗಳು ದುರುಪಯೋಗಪಡಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತವೆ.

ಹೊಸ ಮಸೂದೆಯು ಪ್ರೆಸ್ ರಿಜಿಸ್ಟ್ರಾರ್ ಹೊರತುಪಡಿಸಿ ಸರ್ಕಾರಿ ಏಜೆನ್ಸಿಗಳಿಗೆ ತನ್ನ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಅಂದರೆ ಒಂದು ಪತ್ರಿಕೆ ನೋಂದಣಿ ಆಗಬೇಕಾದರೆ ಆ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿ ಮಾತ್ರವಲ್ಲದೇ ಪೊಲೀಸ್ ಇಲಾಖೆಯೂ ಒಳಗೊಳ್ಳಬೇಕಾಗುತ್ತದೆ. ಈ ಕ್ರಮವು ಅತ್ಯಂತ ಖೇದಕರ ಎಂದು ಎಡಿಟರ್ ಗಿಲ್ಡ್ ಹೇಳುತ್ತದೆ.

ಈ ಹೊಸ ಮಸೂದೆಯು ಪತ್ರಿಕೆಗಳು ಮತ್ತು ನಿಯತಕಾಲಿಕೆಗಳ ಕಾರ್ಯಚಟುವಟಿಕೆಗಳ ಮೇಲೆ ಅನಿಯಂತ್ರಿತ ತಪಾಸಣೆಗಳನ್ನು ನಡೆಸಲು ಸರ್ಕಾರಕ್ಕೆ ಅಧಿಕಾರವನ್ನು ವಿಸ್ತರಿಸುತ್ತದೆ. ಪ್ರೆಸ್ ರಿಜಿಸ್ಟ್ರಾರ್‌ನ ಅಧಿಕಾರವನ್ನು ವಿಸ್ತರಣೆ ಮಾಡುವುದರಿಂದ ಪತ್ರಿಕೆಗಳನ್ನು ಹೊರತರಲು ಸಾಧ್ಯವಾಗುವುದಿಲ್ಲ ಮಾತ್ರವಲ್ಲ ಚಾಲ್ತಿಯಲ್ಲಿರುವ ಸುದ್ದಿ ಪ್ರಕಟಣೆಗಳಲ್ಲೂ ಸರ್ಕಾರ ಹಸ್ತಕ್ಷೇಪ ಮಾಡಬಹುದಾಗಿದ್ದು, ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಮಾಡುವ ಉದ್ದೇಶ ಹೊಂದಿದೆ.

ಈ ಮಸೂದೆಯಲ್ಲಿ ಅನೇಕ ನಿಬಂಧನೆಗಳು ಸರ್ಕಾರಿ ನಿಯಂತ್ರಣ ಸಂಸ್ಥೆಗಳ ಅಧಿಕಾರದ ಕುರಿತು ಅಸ್ಪಷ್ಟವಾಗಿವೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುವ ನಿಯಮಗಳನ್ನು ಹೊಂದಿದೆ ಎಂದು ಎಡಿಟರ್ಸ್ ಗಿಲ್ಡ್ ಸಂಸ್ಥೆಯು ತನ್ನ ಹೇಳಿಕೆಯಲ್ಲಿ ಹೇಳಿದೆ.

“ನಿರ್ದಿಷ್ಟ ಅಧಿಕಾರ” ಎಂಬ ಪದವು ಪತ್ರಿಕಾ ರಿಜಿಸ್ಟ್ರಾರ್‌ಅನ್ನು ಹೊರತುಪಡಿಸಿ ಸರ್ಕಾರಿ ಏಜೆನ್ಸಿಗಳಿಗೆ ತನ್ನ ಕಾರ್ಯವನ್ನು ನಡೆಸಲು ಅನುವು ಮಾಡಿಕೊಡುತ್ತದೆ. ಇದು ಪೊಲೀಸ್ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳನ್ನು ಸಹ ಒಳಗೊಂಡಿರುತ್ತದೆ. ಹಾಗಿದ್ದಾಗ ಪತ್ರಿಕೆಗಳು ವಿರೋಧ ಪಕ್ಷವಾಗಿ ಕೆಲಸ ಮಾಡಲು ಹೇಗೆ ಸಾಧ್ಯವಾಗುತ್ತದೆ ಎನ್ನುವ ಪ್ರಶ್ನೆ ಮೂಡುತ್ತದೆ.

ಇದನ್ನೂ ಓದಿ: ಫೇಕ್ ನ್ಯೂಸ್ ತಡೆಗಟ್ಟುವಿಕೆಗೆ ಕ್ರಮಗಳು ಅಗತ್ಯ- ಬೆಕ್ಕಿಗೆ ಗಂಟೆ ಕಟ್ಟುವವರ್‍ಯಾರು? ಹೇಗೆ?

ಇಷ್ಟೇ ಅಲ್ಲದೇ ಬಿಲ್‌ನ ಸೆಕ್ಷನ್ 6(ಬಿ) ಪ್ರೆಸ್ ರಿಜಿಸ್ಟ್ರಾರ್‌ಗೆ ಪತ್ರಿಕೆಗಳನ್ನು “ಪರಿಶೀಲಿಸಲು ಅಥವಾ ಸಂಬಂಧಿತ ದಾಖಲೆಗಳು ಅಥವಾ ದಾಖಲೆಗಳ ಪ್ರತಿಗಳನ್ನು ತೆಗೆದುಕೊಳ್ಳಲು” ಅಧಿಕಾರವನ್ನು ನೀಡುತ್ತದೆ. ಪತ್ರಿಕಾ ಸಂಸ್ಥೆಯನ್ನು ಪ್ರವೇಶಿಸುವ ಈ ಅಧಿಕಾರವು ಅತಿಯಾಗಿ ಒಳನುಗ್ಗುವಿಕೆಗೆ ಅವಕಾಶ ಕೊಟ್ಟಿರುವುದನ್ನು ತೋರುತ್ತದೆ.

ಹಾಗಾಗಿ ಪತ್ರಿಕಾ ಸ್ವಾತಂತ್ರ್ಯಕ್ಕೆ ನಿರ್ಣಾಯಕವಾಗಿರುವ ವಿಷಯಗಳ ಬಗ್ಗೆ ಆಳವಾದ ಚರ್ಚೆಗೆ ಅವಕಾಶ ಮಾಡಿಕೊಡಲು, ಸಂಸತ್ತಿನ ಆಯ್ಕೆ ಸಮಿತಿಗೆ ಮಸೂದೆಯನ್ನು ಉಲ್ಲೇಖಿಸುವಂತೆ ಲೋಕಸಭೆಯ ಸ್ಪೀಕರ್ ಅವರನ್ನು ಎಡಿಟರ್ಸ್ ಗಿಲ್ಡ್ ಒತ್ತಾಯಿಸಿದೆ.

ಈ ಮಸೂದೆಯ ಸೆಕ್ಷನ್ 19, ಭಾರತದಲ್ಲಿ ಸುದ್ದಿ ಪ್ರಕಟಣೆಯನ್ನು ಮಾಡಬೇಕಾದ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮಾಧ್ಯಮಗಳನ್ನು ಕಟ್ಟಿಹಾಕಲು ಕೇಂದ್ರ ಸರ್ಕಾರ ನಂತರ ಪ್ರಯತ್ನ ಮಾಡುತ್ತಿರುವುದು ದೇಶದ ದುರಂತದ ಸಂಗತಿಯಾಗಿದೆ.

ಶಿವಾನಂದ ತಗಡೂರು

ಈ ಬಗ್ಗೆ ನ್ಯಾಯಪಥದೊಂದಿಗೆ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ನೂತನ ಮಸುದೆ ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪ್ರಯತ್ನ ಎಂದು ಟೀಕಿಸಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಸ್ವಾತಂತ್ರ್ಯ ಎನ್ನುವುದು ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ಆರೋಗ್ಯಕರ ಸಮಾಜ ನಿರ್ಮಾಣವಾಗಲು ಪತ್ರಿಕಾ ಸ್ವಾತಂತ್ರ್ಯ ಬಹಳ ಮುಖ್ಯ. ಏಕೆಂದರೆ ಪ್ರಜಾಪ್ರಭುತ್ವದ ಸ್ವಾಸ್ಥ್ಯವನ್ನು ಕಾಪಾಡುವುದು ಮಾಧ್ಯಮಗಳ ಜವಾಬ್ದಾರಿ. ಮಾಧ್ಯಮಗಳಲ್ಲಿ ಸರ್ಕಾರದ ಮೂಗು ತೂರಿಸುವಿಕೆ ಇರಬಾರದು. ಕೇಂದ್ರ ಸರ್ಕಾರದ ಈ ಹೊಸ ಮಸೂದೆಯಲ್ಲಿನ ಮುಖ್ಯ ಉದ್ದೇಶ, ಆಕ್ಷೇಪಾರ್ಹ ಅಂಶಗಳನ್ನ ಹಾಕಿ ಪತ್ರಿಕೆಗಳನ್ನು ಹೊರತರದಂತೆ ನೋಡಿಕೊಳ್ಳುವ ಹುನ್ನಾರವಾಗಿದೆ. ಹಾಗಾಗಿ ಮಸೂದೆಯನ್ನು ಮತ್ತೊಮ್ಮೆ ಪರಾಮರ್ಶಿಸಬೇಕು. ಮಾಧ್ಯಮದಲ್ಲಿ ಕೆಲಸ ಮಾಡಿದ ಹಿರಿಯ ಪತ್ರಕರ್ತರ ಸಲಹೆಗಳನ್ನು ಪಡೆದು ತಿದ್ದುಪಡಿ ಮಾಡಬೇಕು. ತರಾತುರಿಯಲ್ಲಿ ಈ ಮಸೂದೆ ತಂದಿರುವುದು ಸರಿಯಾದ ಕ್ರಮವಲ್ಲ, ಹಾಗಾಗಿ ಈ ಮಸೂದೆಯನ್ನು ಹಿಂಪಡೆಯಬೇಕು” ಎಂದು ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...