Homeಮುಖಪುಟಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

- Advertisement -
- Advertisement -

ಫಾದರ್ ಸ್ಟ್ಯಾನ್ ಸ್ವಾಮಿ ಸಾವಿಗೆ ಜಗತ್ತಿನೆಲ್ಲಡೆಯ ಮಾನವ ಹಕ್ಕುಗಳ ಹೋರಾಟಗಾರಿಂದ ಖಂಡನೆ ವ್ಯಕ್ತವಾಗಿದೆ. ದೇಶ ವಿದೇಶಗಳ ಸಂಘಟನೆಗಳಿಂದ ಕೇಂದ್ರ ಸರ್ಕಾರ ದಮನಕಾರಿ ಧೋರಣೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ಇಂದು ಸ್ಟ್ಯಾನ್ ಸ್ವಾಮಿ ಸಾವಿಗೆ ತಾನು ಕಾರಣವಲ್ಲವೆಂದು ಹೇಳಿಕೊಂಡಿದೆ. ಸ್ವಾವಿ ಬಂಧನದ ಸಂದರ್ಭದಲ್ಲಿ ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳನ್ನು ಕಯಗೊಳ್ಳಲಾಗಿದೆ. ಯಾವ ಲೋಪವೂ ಆಗಿಲ್ಲ ಎಂದು ತನ್ನ ನಡೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿನ್ನೆ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ. ಭೀಮಾ ಕೋರೆಂಗಾವ್ ಪ್ರಕರಣಕ್ಕೆ ಸಂಚುರೂಪಿಸಿದ ಅರೋಪದಲ್ಲಿ ಸ್ಟ್ಯಾನ್ ಸ್ವಾಮಿ, ವರವವರದ ರಾವ್, ಸುಧಾ ಭಾರದ್ವಾಜ್, ಆನಂದ ತೇಲ್ತಂಬ್ಡೆ ಸೇರಿದಂತೆ ಹೋರಾಟಗಾರರು, ಕವಿಗಳು ಮತ್ತು ಚಿಂತಕರನ್ನು UAPA  ಕಾನೂನಿನಡಿ ಬಂಧಿಸಲಾಗಿತ್ತು. ಬಂಧಿತ ಬಹುತೇಕರು 60-90 ವಯಸ್ಸಿನವರಾಗಿದ್ದು ನ್ಯಾಯಾಲಯಗಳು ಜಾಮೀನು ನೀಡಲು ನಿರಾಕರಿಸಿದ್ದವು.

90 ವರ್ಷ ವಯಸ್ಸಿನ ಸಾಹಿತಿ, ಫ್ರೊಪೆಸರ್ ವರವರದ ರಾವ್ ಅವರಿಗೆ ಇತ್ತೀಚೆಗಷ್ಟೆ ನ್ಯಾಯಾಲಯ ಜಾಮೀನು ನೀಡಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಟ್ಯಾನ್ ಸ್ವಾಮಿ ಅವರಿಗೆ ಜಾಮೀನು ನೀಡುವುದಿರಲಿ ಸೂಕ್ತ ಚಿಕಿತ್ಸೆಯನ್ನೂ ನೀಡಲಾಗಿರಲಿಲ್ಲ. ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಭಾರತದ ರಾಜಕೀಯರು, ಚಿಂತಕರು ಎಲ್ಲರೂ ವಯೋವೃದ್ಧರಾಗಿದ್ದು ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಬಿಡುಗಡೆ ಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಯಾರ ಮನವಿಗೂ, ಪತ್ರಕ್ಕೂ ಸ್ಪಂದಿಸದ ಕೇಂದ್ರ ಸರ್ಕಾರ ಸ್ಟ್ಯಾನ್ ಸ್ವಾಮಿ ಸಾವಿಗೆ ತಾನು ಕಾರಣವಲ್ಲ ಎಂದು ಇಂದು ಹೇಳಿದೆ. ವಿದೇಶಾಂಗ ಇಲಾಖೆ ಕಾರ್ಯದರ್ಶಿ ಅರಿಂದಾಮ್ ಬಗ್ಚಿ ಈ ಸಂಬಂಧ ಟ್ವಿಟ್ಟರ್ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

 ಭಾರತ ಸರ್ಕಾರದ ಸಂವಿಧಾನಿಕ ಮತ್ತು ಪ್ರಜಾಪ್ರಭುತ್ವವಾದಿ ನಿಲುವುಗಳು ದೇಶದ ಸ್ವತಂತ್ರ ನ್ಯಾಯಾಂಗದಿಂದ ಅನೇಕ ಬಾರಿ ಪ್ರಶಂಸೆಗೊಳಗಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಮಾನವ ಹಕ್ಕುಗಳ ಆಯೋಗಗಳು ಉಲ್ಲಂಘನೆಯನ್ನು ಗಮನಿಸುತ್ತಲೇ ಇರುತ್ತವೆ. ಸ್ವತಂತ್ರ ಮಾಧ್ಯಮ ಮತ್ತು ಜಾಗೃತ ಸಮಾಜಕೂಡ ಸರ್ಕಾರದ ಪ್ರಜಾಪ್ರಭುತ್ವವಾದಿ ನಿಲುವುಗಳನ್ನು ಒಪ್ಪಿದೆ. ಮುಂದೆ ಕೂಡ ಭಾರತ ಸರ್ಕಾರ ಮಾನವ ಹಕ್ಕುಗಳ ರಕ್ಷಣೆಗೆ ತನ್ನ ಬದ್ಧತೆಯನ್ನು ಮುಂದುವೆರೆಸಿಕೊಂಡು ಹೋಗುತ್ತದೆ ಎಂದು ಸರ್ಕಾರ ಇಂದು ತನ್ನ ಪ್ರಕಟಣೆಯಲ್ಲಿ ತಿಳಿಸದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ, ಶರದ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸೀತಾರಮ್ ಯೆಚೂರಿ ಸೇರಿದಂತೆ ವಿರೋಧಪಕ್ಷಗಳ 10 ಕ್ಕು ಹೆಚ್ಚು ನ್ಯಾಯಕರು ಇಂದು ರಾಷ್ಟ್ರಪತಿಗಳಿಗೆ ಪತ್ರ ಬರೆದು ಸ್ಟ್ಯಾನ್‌ ಸ್ವಾಮಿ ಸಾವಿಗೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ. UAPA ಕಾಯ್ದೆಯಡಿ ಬಂಧನಕ್ಕೆ ಒಳಗಾಗಿರುವ ಎಲ್ಲಾ ರಾಜಕೀಯ ಖೈದಿಗಳನ್ನು ಬಿಡುಗಡೆಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಲ್ಲಿ ಮನವಿ ಮಾಡಿದ್ದಾರೆ.

ಝಾರ್ಕಂಡದಲ್ಲಿ ಆದಿವಾಸಿಗಳಿಗಾಗಿ ಹೋರಾಟ ನಡೆಸಿದ ಸ್ಟ್ಯಾನ್‌ ಸ್ವಾಮಿ ಶ್ರೇಷ್ಠ ಮಾನವ ಹಕ್ಕುಗಳ ಹೋರಾಟಗಾರರಾಗಿದ್ದರು. UAPA ನಂತಹ ಭಯೋತ್ಪಾದನೆ ತಡೆ ಕಾಯ್ದೆಯಡಿ ಸುಳ್ಳು ಆರೋಪಗಳಡಿ ಅವರನ್ನು ಸರ್ಕಾರ ಜೈಲಿಗೆ ಹಾಕಿದೆ ಎಂದು ವಿರೋಧ ಪಕ್ಷಗಳ ನಾಯಕರು ತಮ್ಮ ಪತ್ರದಲ್ಲಿ ನರೇಂದ್ರ ಮೋದಿ ಸರ್ಕಾದ ವಿರುದ್ಧ ನೇರ ಆರೋಪಗಳನ್ನು ಮಾಡಿದ್ದಾರೆ.

ಸ್ಟ್ಯಾನ್ ಸ್ವಾಮಿ ಕುಟುಂಬಸ್ಥರು ಮತ್ತು ಎಲ್ಗರ್‌ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಇತರ ಹೋರಾಟಗಾರರು ಸ್ಟ್ಯಾನ್‌ ಸ್ವಾಮಿಯವರದು ಸಾಮಾನ್ಯ ಸಾವಲ್ಲ ಇದೊಂದು ವ್ಯವಸ್ಥೆಯೇ ನಡೆಸಿದ ಕಗ್ಗೊಲೆ ಎಂದು ಆಕ್ರೋಶವನ್ನು ಹೊರಹಾಕಿದ್ದರು.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...