Homeಮುಖಪುಟಗಣರಾಜ್ಯೋತ್ಸವ ದಿನ 'ಸೆಕ್ಯುಲರ್', 'ಸಮಾಜವಾದಿ' ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

- Advertisement -
- Advertisement -

ಭಾರತದ 75ನೇ ಗಣರಾಜ್ಯ ದಿನದ ಸಂದರ್ಭದಲ್ಲಿ ಭಾರತ ಸರ್ಕಾರದ ಅಧಿಕೃತ ಸಾಮಾಜಿಕ ವೇದಿಕೆ  MyGovIndia ದಲ್ಲಿ ಹಂಚಿಕೊಳ್ಳಲಾದ ಸಂವಿಧಾನದ ಮೂಲ ಪೀಠಿಕೆಯು ‘ಸೆಕ್ಯುಲರ್’ ಮತ್ತು ‘ಸಮಾಜವಾದಿ’ ಪದಗಳನ್ನು ಒಳಗೊಂಡಿರಲಿಲ್ಲ. ಇದು ಮೋದಿ ಆಡಳಿತದ ಭಾರತದಲ್ಲಿ ಸಾರ್ವಭೌಮತ್ವ, ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ ಕುರಿತ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಂವಿಧಾನದ ಪೀಠಿಕೆಯನ್ನು ಭಾರತೀಯ ಸಂವಿಧಾನದ ಜೊತೆಗೆ ನವೆಂಬರ್ 26, 1949ರಂದು ಅಂಗೀಕರಿಸಲಾಯಿತು ಮತ್ತು ಜನವರಿ 26, 1950ರಿಂದ ಜಾರಿಗೆ ಬಂದಿದೆ. ಜ.26ರಂದು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ಸಂವಿಧಾನದ ಪೀಠಿಕೆಯನ್ನು 1976ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದು ಭಾರತದ ಸಂವಿಧಾನದ ಪೀಠಿಕೆಗೆ ಮಾಡಿದ ಏಕೈಕ ತಿದ್ದುಪಡಿಯಾಗಿದೆ.

42ನೇ ತಿದ್ದುಪಡಿ ಅಥವಾ ಸಂವಿಧಾನ (42ನೇ ತಿದ್ದುಪಡಿ) ಕಾಯಿದೆ-1976 ತುರ್ತು ಪರಿಸ್ಥಿತಿಯ ಅವಧಿಯಲ್ಲಿ 1976ರಲ್ಲಿ ಜಾರಿಗೆ ತರಲಾಯಿತು. ಈ ತಿದ್ದುಪಡಿಯ ವೇಳೆ ಸಂವಿಧಾನದ ಪೀಠಿಕೆ, ಹಲವಾರು ಆರ್ಟಿಕಲ್‌ಗಳು ಮತ್ತು ಏಳನೇ ಶೆಡ್ಯೂಲ್‌ (ಇದು ಒಕ್ಕೂಟ ಮತ್ತು ರಾಜ್ಯ ಶಾಸಕಾಂಗಗಳ ನಡುವಿನ ಅಧಿಕಾರ ಮತ್ತು ಕಾರ್ಯಗಳ ಬಗ್ಗೆ ಸೂಚಿಸುತ್ತದೆ). ಕಾಯಿದೆಯ ಪರಿಚ್ಛೇದ 2 (ಪೀಠಿಕೆಯ ತಿದ್ದುಪಡಿ), ಎರಡು ಬದಲಾವಣೆಗಳನ್ನು ಮುಂದಿಟ್ಟಿದೆ “ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯ” ಪದಗಳನ್ನು “ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ” ಎಂದು ಬದಲಿಸಲಾಗಿದೆ ಮತ್ತು “ರಾಷ್ಟ್ರದ ಏಕತೆ” ಎಂಬ ಪದಗುಚ್ಛವನ್ನು “ರಾಷ್ಟ್ರದ ಏಕತೆ ಮತ್ತು ಸಮಗ್ರತೆ” ಯೊಂದಿಗೆ ಬದಲಿಸಲಾಗಿದೆ.

ಜನವರಿ 25ರಂದು ಭಾರತೀಯ ಸರ್ಕಾರದ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ MyGovIndia  ಸಂವಿಧಾನದ ಮೂಲ ಪೀಠಿಕೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ ನಾವು ಭಾರತ ಗಣರಾಜ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ, ನಮ್ಮ ಸಂವಿಧಾನದ ಮೂಲ ಪೀಠಿಕೆಯನ್ನು ಮರುಪರಿಶೀಲಿಸೋಣ. ಈ ಮೂಲಭೂತ ತತ್ವಗಳೊಂದಿಗೆ ನವ ಭಾರತ ಎಷ್ಟು ಚೆನ್ನಾಗಿ ಪ್ರತಿಧ್ವನಿಸುತ್ತದೆ? ಎಂಬುವುದನ್ನು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಮುನ್ನುಡಿ ವಿವಾದ;

ಸಂವಿಧಾನದ ಮೂಲ ಮುನ್ನುಡಿಯನ್ನು ಆಡಳಿತ ಪಕ್ಷವು ಹಂಚಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಸೆಪ್ಟೆಂಬರ್ 2023ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಮೊದಲ ಅಧಿವೇಶನದಲ್ಲಿ ಸಂಸತ್ತಿನ ಸದಸ್ಯರಿಗೆ ವಿತರಿಸಿದ ಸಂವಿಧಾನದ ಪ್ರತಿಗಳು ಅದರ ಮುನ್ನುಡಿಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಹೊಂದಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆಯು ಉದ್ದೇಶಪೂರ್ವಕ ಎಂದು ಅಧೀರ್‌ ರಂಜನ್‌ ಚೌದರಿ ಹೇಳಿದ ಬಳಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಆದರೆ ಈ ಆರೋಪವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ತಳ್ಳಿಹಾಕಿದ್ದರು. ಮೂಲ ಸಂವಿಧಾನವನ್ನು ಮುದ್ರಿಸಿದ್ದು, ಹಾಗಾಗಿ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದಾರೆ. ಸಂವಿಧಾನವನ್ನು ರಚಿಸಿದಾಗ ಅದು ಹೀಗಿತ್ತು. ನಂತರ ತಿದ್ದುಪಡಿ ಮಾಡಲಾಯಿತು. ಇದು ಮೂಲ ಪ್ರತಿ ಎಂದು ಅವರು ಸಮಜಾಯಿಸಿ ಹೇಳಿದ್ದರು.

ಜೂನ್ 2023ರಲ್ಲಿ ತೆಲಂಗಾಣ ಸ್ಟೇಟ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (SCERT) 10ನೇ ತರಗತಿಯ ಸಾಮಾಜ ಅಧ್ಯಯನಗಳ ಪಠ್ಯಪುಸ್ತಕಗಳ ಮುಖಪುಟದಲ್ಲಿ ಸಂವಿಧಾನದ ಮೂಲ ಪೀಠಿಕೆಯನ್ನು ಮುದ್ರಿಸಿ ಚರ್ಚೆಯನ್ನು ಹುಟ್ಟು ಹಾಕಿತ್ತು.

2015ರಲ್ಲಿ ಗಣರಾಜ್ಯೋತ್ಸವದಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೈಮ್ಸ್ ಆಫ್ ಇಂಡಿಯಾದಲ್ಲಿ ಅರ್ಧ ಪುಟದ ಜಾಹೀರಾತನ್ನು ಗಣರಾಜ್ಯೋತ್ಸವದಂದು ಪ್ರಧಾನ ಮಂತ್ರಿಯ ಸಂದೇಶದೊಂದಿಗೆ ಮೂಲ ಪೀಠಿಕೆಯ ಚಿತ್ರದೊಂದಿಗೆ ಬಿಡುಗಡೆ ಮಾಡಿತ್ತು. ಇದು ವ್ಯಾಪಕ ಖಂಡನೆಗೆ ಕಾರಣವಾಗಿತ್ತು. ಅಂದಿನ ಸಚಿವ ರಾಜ್ಯವರ್ಧನ್ ರಾಥೋಡ್ ಈ ಬಗ್ಗೆ ಪ್ರತಿಕ್ರಿಯಿಸಿ, ಜಾಹೀರಾತಿನ ಸುತ್ತಲಿನ ವಿವಾದವನ್ನು ತಳ್ಳಿಹಾಕಿದ್ದು, ಮೂಲ ಪೀಠಿಕೆಯ ಫೋಟೋ ಸಂವಿಧಾನದ ಪಿತಾಮಹರನ್ನು ಗೌರವಿಸುವ ಸಲುವಾಗಿ ಹಂಚಿಕೊಳ್ಳಲಾಗಿದೆ ಎಂದು ಬರೆಯಲಾಗಿದೆ.

ಇದನ್ನು ಓದಿ: ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. india belongs to different religions and region having different celebration it does mean secular, unity and integrity pls don’t try to change ambedkar constitution it will show ur defeat final path

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...