Homeಮುಖಪುಟಗಣರಾಜ್ಯೋತ್ಸವ ದಿನ 'ಸೆಕ್ಯುಲರ್', 'ಸಮಾಜವಾದಿ' ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

- Advertisement -
- Advertisement -

ಭಾರತದ 75ನೇ ಗಣರಾಜ್ಯ ದಿನದ ಸಂದರ್ಭದಲ್ಲಿ ಭಾರತ ಸರ್ಕಾರದ ಅಧಿಕೃತ ಸಾಮಾಜಿಕ ವೇದಿಕೆ  MyGovIndia ದಲ್ಲಿ ಹಂಚಿಕೊಳ್ಳಲಾದ ಸಂವಿಧಾನದ ಮೂಲ ಪೀಠಿಕೆಯು ‘ಸೆಕ್ಯುಲರ್’ ಮತ್ತು ‘ಸಮಾಜವಾದಿ’ ಪದಗಳನ್ನು ಒಳಗೊಂಡಿರಲಿಲ್ಲ. ಇದು ಮೋದಿ ಆಡಳಿತದ ಭಾರತದಲ್ಲಿ ಸಾರ್ವಭೌಮತ್ವ, ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ ಕುರಿತ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಂವಿಧಾನದ ಪೀಠಿಕೆಯನ್ನು ಭಾರತೀಯ ಸಂವಿಧಾನದ ಜೊತೆಗೆ ನವೆಂಬರ್ 26, 1949ರಂದು ಅಂಗೀಕರಿಸಲಾಯಿತು ಮತ್ತು ಜನವರಿ 26, 1950ರಿಂದ ಜಾರಿಗೆ ಬಂದಿದೆ. ಜ.26ರಂದು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ಸಂವಿಧಾನದ ಪೀಠಿಕೆಯನ್ನು 1976ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದು ಭಾರತದ ಸಂವಿಧಾನದ ಪೀಠಿಕೆಗೆ ಮಾಡಿದ ಏಕೈಕ ತಿದ್ದುಪಡಿಯಾಗಿದೆ.

42ನೇ ತಿದ್ದುಪಡಿ ಅಥವಾ ಸಂವಿಧಾನ (42ನೇ ತಿದ್ದುಪಡಿ) ಕಾಯಿದೆ-1976 ತುರ್ತು ಪರಿಸ್ಥಿತಿಯ ಅವಧಿಯಲ್ಲಿ 1976ರಲ್ಲಿ ಜಾರಿಗೆ ತರಲಾಯಿತು. ಈ ತಿದ್ದುಪಡಿಯ ವೇಳೆ ಸಂವಿಧಾನದ ಪೀಠಿಕೆ, ಹಲವಾರು ಆರ್ಟಿಕಲ್‌ಗಳು ಮತ್ತು ಏಳನೇ ಶೆಡ್ಯೂಲ್‌ (ಇದು ಒಕ್ಕೂಟ ಮತ್ತು ರಾಜ್ಯ ಶಾಸಕಾಂಗಗಳ ನಡುವಿನ ಅಧಿಕಾರ ಮತ್ತು ಕಾರ್ಯಗಳ ಬಗ್ಗೆ ಸೂಚಿಸುತ್ತದೆ). ಕಾಯಿದೆಯ ಪರಿಚ್ಛೇದ 2 (ಪೀಠಿಕೆಯ ತಿದ್ದುಪಡಿ), ಎರಡು ಬದಲಾವಣೆಗಳನ್ನು ಮುಂದಿಟ್ಟಿದೆ “ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯ” ಪದಗಳನ್ನು “ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ” ಎಂದು ಬದಲಿಸಲಾಗಿದೆ ಮತ್ತು “ರಾಷ್ಟ್ರದ ಏಕತೆ” ಎಂಬ ಪದಗುಚ್ಛವನ್ನು “ರಾಷ್ಟ್ರದ ಏಕತೆ ಮತ್ತು ಸಮಗ್ರತೆ” ಯೊಂದಿಗೆ ಬದಲಿಸಲಾಗಿದೆ.

ಜನವರಿ 25ರಂದು ಭಾರತೀಯ ಸರ್ಕಾರದ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ MyGovIndia  ಸಂವಿಧಾನದ ಮೂಲ ಪೀಠಿಕೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ ನಾವು ಭಾರತ ಗಣರಾಜ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ, ನಮ್ಮ ಸಂವಿಧಾನದ ಮೂಲ ಪೀಠಿಕೆಯನ್ನು ಮರುಪರಿಶೀಲಿಸೋಣ. ಈ ಮೂಲಭೂತ ತತ್ವಗಳೊಂದಿಗೆ ನವ ಭಾರತ ಎಷ್ಟು ಚೆನ್ನಾಗಿ ಪ್ರತಿಧ್ವನಿಸುತ್ತದೆ? ಎಂಬುವುದನ್ನು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಮುನ್ನುಡಿ ವಿವಾದ;

ಸಂವಿಧಾನದ ಮೂಲ ಮುನ್ನುಡಿಯನ್ನು ಆಡಳಿತ ಪಕ್ಷವು ಹಂಚಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಸೆಪ್ಟೆಂಬರ್ 2023ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಮೊದಲ ಅಧಿವೇಶನದಲ್ಲಿ ಸಂಸತ್ತಿನ ಸದಸ್ಯರಿಗೆ ವಿತರಿಸಿದ ಸಂವಿಧಾನದ ಪ್ರತಿಗಳು ಅದರ ಮುನ್ನುಡಿಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಹೊಂದಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆಯು ಉದ್ದೇಶಪೂರ್ವಕ ಎಂದು ಅಧೀರ್‌ ರಂಜನ್‌ ಚೌದರಿ ಹೇಳಿದ ಬಳಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಆದರೆ ಈ ಆರೋಪವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ತಳ್ಳಿಹಾಕಿದ್ದರು. ಮೂಲ ಸಂವಿಧಾನವನ್ನು ಮುದ್ರಿಸಿದ್ದು, ಹಾಗಾಗಿ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದಾರೆ. ಸಂವಿಧಾನವನ್ನು ರಚಿಸಿದಾಗ ಅದು ಹೀಗಿತ್ತು. ನಂತರ ತಿದ್ದುಪಡಿ ಮಾಡಲಾಯಿತು. ಇದು ಮೂಲ ಪ್ರತಿ ಎಂದು ಅವರು ಸಮಜಾಯಿಸಿ ಹೇಳಿದ್ದರು.

ಜೂನ್ 2023ರಲ್ಲಿ ತೆಲಂಗಾಣ ಸ್ಟೇಟ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (SCERT) 10ನೇ ತರಗತಿಯ ಸಾಮಾಜ ಅಧ್ಯಯನಗಳ ಪಠ್ಯಪುಸ್ತಕಗಳ ಮುಖಪುಟದಲ್ಲಿ ಸಂವಿಧಾನದ ಮೂಲ ಪೀಠಿಕೆಯನ್ನು ಮುದ್ರಿಸಿ ಚರ್ಚೆಯನ್ನು ಹುಟ್ಟು ಹಾಕಿತ್ತು.

2015ರಲ್ಲಿ ಗಣರಾಜ್ಯೋತ್ಸವದಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೈಮ್ಸ್ ಆಫ್ ಇಂಡಿಯಾದಲ್ಲಿ ಅರ್ಧ ಪುಟದ ಜಾಹೀರಾತನ್ನು ಗಣರಾಜ್ಯೋತ್ಸವದಂದು ಪ್ರಧಾನ ಮಂತ್ರಿಯ ಸಂದೇಶದೊಂದಿಗೆ ಮೂಲ ಪೀಠಿಕೆಯ ಚಿತ್ರದೊಂದಿಗೆ ಬಿಡುಗಡೆ ಮಾಡಿತ್ತು. ಇದು ವ್ಯಾಪಕ ಖಂಡನೆಗೆ ಕಾರಣವಾಗಿತ್ತು. ಅಂದಿನ ಸಚಿವ ರಾಜ್ಯವರ್ಧನ್ ರಾಥೋಡ್ ಈ ಬಗ್ಗೆ ಪ್ರತಿಕ್ರಿಯಿಸಿ, ಜಾಹೀರಾತಿನ ಸುತ್ತಲಿನ ವಿವಾದವನ್ನು ತಳ್ಳಿಹಾಕಿದ್ದು, ಮೂಲ ಪೀಠಿಕೆಯ ಫೋಟೋ ಸಂವಿಧಾನದ ಪಿತಾಮಹರನ್ನು ಗೌರವಿಸುವ ಸಲುವಾಗಿ ಹಂಚಿಕೊಳ್ಳಲಾಗಿದೆ ಎಂದು ಬರೆಯಲಾಗಿದೆ.

ಇದನ್ನು ಓದಿ: ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. india belongs to different religions and region having different celebration it does mean secular, unity and integrity pls don’t try to change ambedkar constitution it will show ur defeat final path

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...