Homeಮುಖಪುಟಗಣರಾಜ್ಯೋತ್ಸವ ದಿನ 'ಸೆಕ್ಯುಲರ್', 'ಸಮಾಜವಾದಿ' ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

- Advertisement -
- Advertisement -

ಭಾರತದ 75ನೇ ಗಣರಾಜ್ಯ ದಿನದ ಸಂದರ್ಭದಲ್ಲಿ ಭಾರತ ಸರ್ಕಾರದ ಅಧಿಕೃತ ಸಾಮಾಜಿಕ ವೇದಿಕೆ  MyGovIndia ದಲ್ಲಿ ಹಂಚಿಕೊಳ್ಳಲಾದ ಸಂವಿಧಾನದ ಮೂಲ ಪೀಠಿಕೆಯು ‘ಸೆಕ್ಯುಲರ್’ ಮತ್ತು ‘ಸಮಾಜವಾದಿ’ ಪದಗಳನ್ನು ಒಳಗೊಂಡಿರಲಿಲ್ಲ. ಇದು ಮೋದಿ ಆಡಳಿತದ ಭಾರತದಲ್ಲಿ ಸಾರ್ವಭೌಮತ್ವ, ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ ಕುರಿತ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಂವಿಧಾನದ ಪೀಠಿಕೆಯನ್ನು ಭಾರತೀಯ ಸಂವಿಧಾನದ ಜೊತೆಗೆ ನವೆಂಬರ್ 26, 1949ರಂದು ಅಂಗೀಕರಿಸಲಾಯಿತು ಮತ್ತು ಜನವರಿ 26, 1950ರಿಂದ ಜಾರಿಗೆ ಬಂದಿದೆ. ಜ.26ರಂದು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ಸಂವಿಧಾನದ ಪೀಠಿಕೆಯನ್ನು 1976ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದು ಭಾರತದ ಸಂವಿಧಾನದ ಪೀಠಿಕೆಗೆ ಮಾಡಿದ ಏಕೈಕ ತಿದ್ದುಪಡಿಯಾಗಿದೆ.

42ನೇ ತಿದ್ದುಪಡಿ ಅಥವಾ ಸಂವಿಧಾನ (42ನೇ ತಿದ್ದುಪಡಿ) ಕಾಯಿದೆ-1976 ತುರ್ತು ಪರಿಸ್ಥಿತಿಯ ಅವಧಿಯಲ್ಲಿ 1976ರಲ್ಲಿ ಜಾರಿಗೆ ತರಲಾಯಿತು. ಈ ತಿದ್ದುಪಡಿಯ ವೇಳೆ ಸಂವಿಧಾನದ ಪೀಠಿಕೆ, ಹಲವಾರು ಆರ್ಟಿಕಲ್‌ಗಳು ಮತ್ತು ಏಳನೇ ಶೆಡ್ಯೂಲ್‌ (ಇದು ಒಕ್ಕೂಟ ಮತ್ತು ರಾಜ್ಯ ಶಾಸಕಾಂಗಗಳ ನಡುವಿನ ಅಧಿಕಾರ ಮತ್ತು ಕಾರ್ಯಗಳ ಬಗ್ಗೆ ಸೂಚಿಸುತ್ತದೆ). ಕಾಯಿದೆಯ ಪರಿಚ್ಛೇದ 2 (ಪೀಠಿಕೆಯ ತಿದ್ದುಪಡಿ), ಎರಡು ಬದಲಾವಣೆಗಳನ್ನು ಮುಂದಿಟ್ಟಿದೆ “ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯ” ಪದಗಳನ್ನು “ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ” ಎಂದು ಬದಲಿಸಲಾಗಿದೆ ಮತ್ತು “ರಾಷ್ಟ್ರದ ಏಕತೆ” ಎಂಬ ಪದಗುಚ್ಛವನ್ನು “ರಾಷ್ಟ್ರದ ಏಕತೆ ಮತ್ತು ಸಮಗ್ರತೆ” ಯೊಂದಿಗೆ ಬದಲಿಸಲಾಗಿದೆ.

ಜನವರಿ 25ರಂದು ಭಾರತೀಯ ಸರ್ಕಾರದ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ MyGovIndia  ಸಂವಿಧಾನದ ಮೂಲ ಪೀಠಿಕೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ ನಾವು ಭಾರತ ಗಣರಾಜ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ, ನಮ್ಮ ಸಂವಿಧಾನದ ಮೂಲ ಪೀಠಿಕೆಯನ್ನು ಮರುಪರಿಶೀಲಿಸೋಣ. ಈ ಮೂಲಭೂತ ತತ್ವಗಳೊಂದಿಗೆ ನವ ಭಾರತ ಎಷ್ಟು ಚೆನ್ನಾಗಿ ಪ್ರತಿಧ್ವನಿಸುತ್ತದೆ? ಎಂಬುವುದನ್ನು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಮುನ್ನುಡಿ ವಿವಾದ;

ಸಂವಿಧಾನದ ಮೂಲ ಮುನ್ನುಡಿಯನ್ನು ಆಡಳಿತ ಪಕ್ಷವು ಹಂಚಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಸೆಪ್ಟೆಂಬರ್ 2023ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಮೊದಲ ಅಧಿವೇಶನದಲ್ಲಿ ಸಂಸತ್ತಿನ ಸದಸ್ಯರಿಗೆ ವಿತರಿಸಿದ ಸಂವಿಧಾನದ ಪ್ರತಿಗಳು ಅದರ ಮುನ್ನುಡಿಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಹೊಂದಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆಯು ಉದ್ದೇಶಪೂರ್ವಕ ಎಂದು ಅಧೀರ್‌ ರಂಜನ್‌ ಚೌದರಿ ಹೇಳಿದ ಬಳಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಆದರೆ ಈ ಆರೋಪವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ತಳ್ಳಿಹಾಕಿದ್ದರು. ಮೂಲ ಸಂವಿಧಾನವನ್ನು ಮುದ್ರಿಸಿದ್ದು, ಹಾಗಾಗಿ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದಾರೆ. ಸಂವಿಧಾನವನ್ನು ರಚಿಸಿದಾಗ ಅದು ಹೀಗಿತ್ತು. ನಂತರ ತಿದ್ದುಪಡಿ ಮಾಡಲಾಯಿತು. ಇದು ಮೂಲ ಪ್ರತಿ ಎಂದು ಅವರು ಸಮಜಾಯಿಸಿ ಹೇಳಿದ್ದರು.

ಜೂನ್ 2023ರಲ್ಲಿ ತೆಲಂಗಾಣ ಸ್ಟೇಟ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (SCERT) 10ನೇ ತರಗತಿಯ ಸಾಮಾಜ ಅಧ್ಯಯನಗಳ ಪಠ್ಯಪುಸ್ತಕಗಳ ಮುಖಪುಟದಲ್ಲಿ ಸಂವಿಧಾನದ ಮೂಲ ಪೀಠಿಕೆಯನ್ನು ಮುದ್ರಿಸಿ ಚರ್ಚೆಯನ್ನು ಹುಟ್ಟು ಹಾಕಿತ್ತು.

2015ರಲ್ಲಿ ಗಣರಾಜ್ಯೋತ್ಸವದಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೈಮ್ಸ್ ಆಫ್ ಇಂಡಿಯಾದಲ್ಲಿ ಅರ್ಧ ಪುಟದ ಜಾಹೀರಾತನ್ನು ಗಣರಾಜ್ಯೋತ್ಸವದಂದು ಪ್ರಧಾನ ಮಂತ್ರಿಯ ಸಂದೇಶದೊಂದಿಗೆ ಮೂಲ ಪೀಠಿಕೆಯ ಚಿತ್ರದೊಂದಿಗೆ ಬಿಡುಗಡೆ ಮಾಡಿತ್ತು. ಇದು ವ್ಯಾಪಕ ಖಂಡನೆಗೆ ಕಾರಣವಾಗಿತ್ತು. ಅಂದಿನ ಸಚಿವ ರಾಜ್ಯವರ್ಧನ್ ರಾಥೋಡ್ ಈ ಬಗ್ಗೆ ಪ್ರತಿಕ್ರಿಯಿಸಿ, ಜಾಹೀರಾತಿನ ಸುತ್ತಲಿನ ವಿವಾದವನ್ನು ತಳ್ಳಿಹಾಕಿದ್ದು, ಮೂಲ ಪೀಠಿಕೆಯ ಫೋಟೋ ಸಂವಿಧಾನದ ಪಿತಾಮಹರನ್ನು ಗೌರವಿಸುವ ಸಲುವಾಗಿ ಹಂಚಿಕೊಳ್ಳಲಾಗಿದೆ ಎಂದು ಬರೆಯಲಾಗಿದೆ.

ಇದನ್ನು ಓದಿ: ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. india belongs to different religions and region having different celebration it does mean secular, unity and integrity pls don’t try to change ambedkar constitution it will show ur defeat final path

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...