Homeಮುಖಪುಟಗಣರಾಜ್ಯೋತ್ಸವ ದಿನ 'ಸೆಕ್ಯುಲರ್', 'ಸಮಾಜವಾದಿ' ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

- Advertisement -
- Advertisement -

ಭಾರತದ 75ನೇ ಗಣರಾಜ್ಯ ದಿನದ ಸಂದರ್ಭದಲ್ಲಿ ಭಾರತ ಸರ್ಕಾರದ ಅಧಿಕೃತ ಸಾಮಾಜಿಕ ವೇದಿಕೆ  MyGovIndia ದಲ್ಲಿ ಹಂಚಿಕೊಳ್ಳಲಾದ ಸಂವಿಧಾನದ ಮೂಲ ಪೀಠಿಕೆಯು ‘ಸೆಕ್ಯುಲರ್’ ಮತ್ತು ‘ಸಮಾಜವಾದಿ’ ಪದಗಳನ್ನು ಒಳಗೊಂಡಿರಲಿಲ್ಲ. ಇದು ಮೋದಿ ಆಡಳಿತದ ಭಾರತದಲ್ಲಿ ಸಾರ್ವಭೌಮತ್ವ, ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ ಕುರಿತ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಂವಿಧಾನದ ಪೀಠಿಕೆಯನ್ನು ಭಾರತೀಯ ಸಂವಿಧಾನದ ಜೊತೆಗೆ ನವೆಂಬರ್ 26, 1949ರಂದು ಅಂಗೀಕರಿಸಲಾಯಿತು ಮತ್ತು ಜನವರಿ 26, 1950ರಿಂದ ಜಾರಿಗೆ ಬಂದಿದೆ. ಜ.26ರಂದು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ಸಂವಿಧಾನದ ಪೀಠಿಕೆಯನ್ನು 1976ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದು ಭಾರತದ ಸಂವಿಧಾನದ ಪೀಠಿಕೆಗೆ ಮಾಡಿದ ಏಕೈಕ ತಿದ್ದುಪಡಿಯಾಗಿದೆ.

42ನೇ ತಿದ್ದುಪಡಿ ಅಥವಾ ಸಂವಿಧಾನ (42ನೇ ತಿದ್ದುಪಡಿ) ಕಾಯಿದೆ-1976 ತುರ್ತು ಪರಿಸ್ಥಿತಿಯ ಅವಧಿಯಲ್ಲಿ 1976ರಲ್ಲಿ ಜಾರಿಗೆ ತರಲಾಯಿತು. ಈ ತಿದ್ದುಪಡಿಯ ವೇಳೆ ಸಂವಿಧಾನದ ಪೀಠಿಕೆ, ಹಲವಾರು ಆರ್ಟಿಕಲ್‌ಗಳು ಮತ್ತು ಏಳನೇ ಶೆಡ್ಯೂಲ್‌ (ಇದು ಒಕ್ಕೂಟ ಮತ್ತು ರಾಜ್ಯ ಶಾಸಕಾಂಗಗಳ ನಡುವಿನ ಅಧಿಕಾರ ಮತ್ತು ಕಾರ್ಯಗಳ ಬಗ್ಗೆ ಸೂಚಿಸುತ್ತದೆ). ಕಾಯಿದೆಯ ಪರಿಚ್ಛೇದ 2 (ಪೀಠಿಕೆಯ ತಿದ್ದುಪಡಿ), ಎರಡು ಬದಲಾವಣೆಗಳನ್ನು ಮುಂದಿಟ್ಟಿದೆ “ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯ” ಪದಗಳನ್ನು “ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ” ಎಂದು ಬದಲಿಸಲಾಗಿದೆ ಮತ್ತು “ರಾಷ್ಟ್ರದ ಏಕತೆ” ಎಂಬ ಪದಗುಚ್ಛವನ್ನು “ರಾಷ್ಟ್ರದ ಏಕತೆ ಮತ್ತು ಸಮಗ್ರತೆ” ಯೊಂದಿಗೆ ಬದಲಿಸಲಾಗಿದೆ.

ಜನವರಿ 25ರಂದು ಭಾರತೀಯ ಸರ್ಕಾರದ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ MyGovIndia  ಸಂವಿಧಾನದ ಮೂಲ ಪೀಠಿಕೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ ನಾವು ಭಾರತ ಗಣರಾಜ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ, ನಮ್ಮ ಸಂವಿಧಾನದ ಮೂಲ ಪೀಠಿಕೆಯನ್ನು ಮರುಪರಿಶೀಲಿಸೋಣ. ಈ ಮೂಲಭೂತ ತತ್ವಗಳೊಂದಿಗೆ ನವ ಭಾರತ ಎಷ್ಟು ಚೆನ್ನಾಗಿ ಪ್ರತಿಧ್ವನಿಸುತ್ತದೆ? ಎಂಬುವುದನ್ನು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಮುನ್ನುಡಿ ವಿವಾದ;

ಸಂವಿಧಾನದ ಮೂಲ ಮುನ್ನುಡಿಯನ್ನು ಆಡಳಿತ ಪಕ್ಷವು ಹಂಚಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಸೆಪ್ಟೆಂಬರ್ 2023ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಮೊದಲ ಅಧಿವೇಶನದಲ್ಲಿ ಸಂಸತ್ತಿನ ಸದಸ್ಯರಿಗೆ ವಿತರಿಸಿದ ಸಂವಿಧಾನದ ಪ್ರತಿಗಳು ಅದರ ಮುನ್ನುಡಿಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಹೊಂದಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆಯು ಉದ್ದೇಶಪೂರ್ವಕ ಎಂದು ಅಧೀರ್‌ ರಂಜನ್‌ ಚೌದರಿ ಹೇಳಿದ ಬಳಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಆದರೆ ಈ ಆರೋಪವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ತಳ್ಳಿಹಾಕಿದ್ದರು. ಮೂಲ ಸಂವಿಧಾನವನ್ನು ಮುದ್ರಿಸಿದ್ದು, ಹಾಗಾಗಿ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದಾರೆ. ಸಂವಿಧಾನವನ್ನು ರಚಿಸಿದಾಗ ಅದು ಹೀಗಿತ್ತು. ನಂತರ ತಿದ್ದುಪಡಿ ಮಾಡಲಾಯಿತು. ಇದು ಮೂಲ ಪ್ರತಿ ಎಂದು ಅವರು ಸಮಜಾಯಿಸಿ ಹೇಳಿದ್ದರು.

ಜೂನ್ 2023ರಲ್ಲಿ ತೆಲಂಗಾಣ ಸ್ಟೇಟ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (SCERT) 10ನೇ ತರಗತಿಯ ಸಾಮಾಜ ಅಧ್ಯಯನಗಳ ಪಠ್ಯಪುಸ್ತಕಗಳ ಮುಖಪುಟದಲ್ಲಿ ಸಂವಿಧಾನದ ಮೂಲ ಪೀಠಿಕೆಯನ್ನು ಮುದ್ರಿಸಿ ಚರ್ಚೆಯನ್ನು ಹುಟ್ಟು ಹಾಕಿತ್ತು.

2015ರಲ್ಲಿ ಗಣರಾಜ್ಯೋತ್ಸವದಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೈಮ್ಸ್ ಆಫ್ ಇಂಡಿಯಾದಲ್ಲಿ ಅರ್ಧ ಪುಟದ ಜಾಹೀರಾತನ್ನು ಗಣರಾಜ್ಯೋತ್ಸವದಂದು ಪ್ರಧಾನ ಮಂತ್ರಿಯ ಸಂದೇಶದೊಂದಿಗೆ ಮೂಲ ಪೀಠಿಕೆಯ ಚಿತ್ರದೊಂದಿಗೆ ಬಿಡುಗಡೆ ಮಾಡಿತ್ತು. ಇದು ವ್ಯಾಪಕ ಖಂಡನೆಗೆ ಕಾರಣವಾಗಿತ್ತು. ಅಂದಿನ ಸಚಿವ ರಾಜ್ಯವರ್ಧನ್ ರಾಥೋಡ್ ಈ ಬಗ್ಗೆ ಪ್ರತಿಕ್ರಿಯಿಸಿ, ಜಾಹೀರಾತಿನ ಸುತ್ತಲಿನ ವಿವಾದವನ್ನು ತಳ್ಳಿಹಾಕಿದ್ದು, ಮೂಲ ಪೀಠಿಕೆಯ ಫೋಟೋ ಸಂವಿಧಾನದ ಪಿತಾಮಹರನ್ನು ಗೌರವಿಸುವ ಸಲುವಾಗಿ ಹಂಚಿಕೊಳ್ಳಲಾಗಿದೆ ಎಂದು ಬರೆಯಲಾಗಿದೆ.

ಇದನ್ನು ಓದಿ: ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. india belongs to different religions and region having different celebration it does mean secular, unity and integrity pls don’t try to change ambedkar constitution it will show ur defeat final path

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...