Homeಮುಖಪುಟಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ '14 ಕೋಟಿ ರೂ.' ವ್ಯಯಿಸಿದ್ದ ಮೋದಿ ಸರಕಾರ!

ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು, ನಿರ್ವಹಿಸಲು ತೆರಿಗೆದಾರರ ಹಣದಿಂದ 14 ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂಬ ಸ್ಪೋಟಕ ಮಾಹಿತಿ ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ನಿವೃತ್ತ ಕಮೋಡೋರ್(ಜಲಸೇನಾ ಅಧಿಕಾರಿ) ಲೋಕೇಶ್ ಬಾತ್ರಾ ಅವರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಆರ್‌ಟಿಐ ಈ ಮಹತ್ವದ ಮಾಹಿತಿಯನ್ನು ನೀಡಿದೆ. ಒಟ್ಟು 30 ಹಂತಗಳಲ್ಲಿ 12,04,59,043 ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಮಾರಾಟಕ್ಕೆ ಕಮಿಷನ್ ಆಗಿ ವಿಧಿಸಲಾಗಿದೆ ಮತ್ತು ಬಾಂಡ್‌ಗಳ ಮುದ್ರಣ ವೆಚ್ಚಕ್ಕಾಗಿ 1,93,73,604 ರೂ.ವ್ಯಯಿಸಲಾಗಿದೆ. ಕಮಿಷನ್‌ ಮೊತ್ತವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಲು ಮತ್ತು ನಿರ್ವಹಿಸಲು ವಿಧಿಸುವ ಹಣವನ್ನು ಸೂಚಿಸುತ್ತದೆ. ಇದಲ್ಲದೆ ಮಾಸ್ಕ್-ಎ ಪ್ರಿಂಟ್ ಭದ್ರತೆಯನ್ನು ಪರಿಶೀಲಿಸುವ ಸಾಧನಕ್ಕಾಗಿ ಹೆಚ್ಚುವರಿ 6,720 ರೂ.ಗಳನ್ನು ವಿಧಿಸಲಾಗಿದೆ ಎಂದು ಆರ್ಥಿಕ ವ್ಯವಹಾರಗಳ ಸಚಿವಾಲಯ ಆರ್‌ಟಿಐ ಮೂಲಕ ನೀಡಿದ ಮಾಹಿತಿಯಲ್ಲಿ ತಿಳಿಸಿದೆ.

ನಾಸಿಕ್ ಮೂಲದ ಇಂಡಿಯಾ ಸೆಕ್ಯುರಿಟಿ ಪ್ರೆಸ್ ಈ ಬಾಂಡ್‌ಗಳನ್ನು ಮುದ್ರಿಸುವ ಕಾರ್ಯವನ್ನು ಮಾಡಿದೆ. 1,000, ರೂ, 10,000, ರೂ 1 ಲಕ್ಷ, ರೂ 10 ಲಕ್ಷ ಮತ್ತು ರೂ 1 ಕೋಟಿ ಮೌಲ್ಯದ ಬಾಂಡ್‌ಗಳನ್ನು ಮುದ್ರಿಸಿದೆ.

ಮುದ್ರಿತವಾದ ಚುನಾವಣಾ ಬಾಂಡ್‌ಗಳು

1,000 ರೂ.ಗಳ 2,65,000 ಚುನಾವಣಾ ಬಾಂಡ್‌ಗಳು
10,000 ರೂ.ಗಳ 2,65,000 ಬಾಂಡ್‌ಗಳು
1 ಲಕ್ಷ ಮೌಲ್ಯದ 93,000 ಚುನಾವಣಾ ಬಾಂಡ್‌ಗಳು
10 ಲಕ್ಷ ಮೌಲ್ಯದ 26,000 ಬಾಂಡ್‌ಗಳು
1 ಕೋಟಿಯ 33,000 ಬಾಂಡ್‌ಗಳು

ಈ ಬಾಂಡ್‌ಗಳ ಮುದ್ರಣ ಮತ್ತು ನಿರ್ವಹಣೆಯ ವೆಚ್ಚವನ್ನು ದಾನಿಗಳು ಅಥವಾ ಚುನಾವಣಾ ಬಾಂಡ್‌ ಸ್ವೀಕರಿಸುವವರು ಭರಿಸುವುದಿಲ್ಲ, ಅದು ಸರ್ಕಾರ ಅಂದರೆ ತೆರಿಗೆದಾರರ ಹಣದಿಂದ ಭರಿಸಲಾಗಿದೆ. ಚುನಾವಣಾ ಬಾಂಡ್‌ ಯೋಜನೆಯಲ್ಲಿ, ಬಾಂಡ್ ಖರೀದಿಸುವ ದಾನಿಗಳು ಎಸ್‌ಬಿಐಗೆ ಯಾವುದೇ ಸೇವಾ ಶುಲ್ಕ (ಕಮಿಷನ್) ಮತ್ತು ಬಾಂಡ್‌ಗಳ ಮುದ್ರಣ ವೆಚ್ಚವನ್ನು ಪಾವತಿಸಬೇಕಾಗಿಲ್ಲ, ಸರ್ಕಾರ ಅಥವಾ ಅಂತಿಮವಾಗಿ ತೆರಿಗೆ ಪಾವತಿದಾರರು ಈ ವೆಚ್ಚವನ್ನು ಭರಿಸುತ್ತಾರೆ ಎಂದು ಬಾತ್ರಾ ಹೇಳಿದ್ದಾರೆ.

ಇದಲ್ಲದೆ ತೆರಿಗೆ ಪಾವತಿದಾರರ ವೆಚ್ಚದಲ್ಲಿ ರಾಜಕೀಯ ಪಕ್ಷಗಳ ತೆರಿಗೆ-ಮುಕ್ತ ಪ್ರಯೋಜನಗಳಿಗಾಗಿ ಚುನಾವಣಾ ಬಾಂಡ್‌ ಯೋಜನೆಯನ್ನು ನಿರ್ವಹಿಸಲು ಸರ್ಕಾರಿ ಯಂತ್ರೋಪಕರಣಗಳು ಮತ್ತು ಮಾನವಶಕ್ತಿಯ ಬಳಕೆಗೆ ಭಾರಿ ಮೊತ್ತವನ್ನು ಖರ್ಚು ಮಾಡಲಾಗಿದೆ ಎಂದು ಲೋಕೇಶ್ ಬಾತ್ರಾ ಅವರು ಆರೋಪಿಸಿದ್ದಾರೆ.

ಚುನಾವಣಾ ಬಾಂಡ್‌ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ ನಂತರ ನರೇಂದ್ರ ಮೋದಿ ಸರ್ಕಾರವು 2024ರಲ್ಲಿ ತಲಾ 1 ಕೋಟಿ ರೂಪಾಯಿಗಳ 8,350 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದೆ ಎಂದು ಬಾತ್ರಾ ಅವರು ಈ ಹಿಂದೆ ಸಲ್ಲಿಸಿದ ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ. ಒಂದು ಎಲೆಕ್ಟೋರಲ್ ಬಾಂಡ್ ಮುದ್ರಣದ ವೆಚ್ಚವು 25 ರೂಪಾಯಿಯಾಗಿದೆ, ಅದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚುವರಿ 6% ಜಿಎಸ್‌ಟಿಯನ್ನು ವಿಧಿಸುತ್ತವೆ.

ಫೆಬ್ರವರಿ 15ರಂದು ಸುಪ್ರೀಂಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು. ಇದು ಅಸಂವಿಧಾನಿಕ ಮತ್ತು ಈ ಮಾಹಿತಿಯ ಮತದಾರರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕರೆದಿರುವ ನ್ಯಾಯಾಲಯವು, ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ ಕುರಿತ ಮಾಹಿತಿ ನೀಡಲು ಕಾಲಾವಕಾಶವನ್ನು ಕೋರಿತ್ತು. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಎಸ್‌ಬಿಐಗೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡುವಂತೆ ಸುಪ್ರೀಂಕೋರ್ಟ್‌ ಖಡಕ್‌ ಆಗಿ ಸೂಚಿಸಿತ್ತು. ಆ ಬಳಿಕ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, ಬಿಜೆಪಿ ಚುನಾವಣಾ ಬಾಂಡ್‌ ಯೋಜನೆಯಿಂದ ಅತಿ ಹೆಚ್ಚು ಪ್ರಯೋಜನ ಪಡೆದುಕೊಂಡಿದೆ ಎನ್ನುವುದು ಬಯಲಾಗಿತ್ತು.

ಇದನ್ನು ಓದಿ: ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆಂದು ಸಂಭ್ರಮಿಸುವವರಿಗೆ ಆರ್‌ಬಿಐ ಮಾಜಿ ಗವರ್ನರ್ ಎಚ್ಚರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...