Homeಮುಖಪುಟಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ '14 ಕೋಟಿ ರೂ.' ವ್ಯಯಿಸಿದ್ದ ಮೋದಿ ಸರಕಾರ!

ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು, ನಿರ್ವಹಿಸಲು ತೆರಿಗೆದಾರರ ಹಣದಿಂದ 14 ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂಬ ಸ್ಪೋಟಕ ಮಾಹಿತಿ ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ನಿವೃತ್ತ ಕಮೋಡೋರ್(ಜಲಸೇನಾ ಅಧಿಕಾರಿ) ಲೋಕೇಶ್ ಬಾತ್ರಾ ಅವರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಆರ್‌ಟಿಐ ಈ ಮಹತ್ವದ ಮಾಹಿತಿಯನ್ನು ನೀಡಿದೆ. ಒಟ್ಟು 30 ಹಂತಗಳಲ್ಲಿ 12,04,59,043 ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಮಾರಾಟಕ್ಕೆ ಕಮಿಷನ್ ಆಗಿ ವಿಧಿಸಲಾಗಿದೆ ಮತ್ತು ಬಾಂಡ್‌ಗಳ ಮುದ್ರಣ ವೆಚ್ಚಕ್ಕಾಗಿ 1,93,73,604 ರೂ.ವ್ಯಯಿಸಲಾಗಿದೆ. ಕಮಿಷನ್‌ ಮೊತ್ತವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಲು ಮತ್ತು ನಿರ್ವಹಿಸಲು ವಿಧಿಸುವ ಹಣವನ್ನು ಸೂಚಿಸುತ್ತದೆ. ಇದಲ್ಲದೆ ಮಾಸ್ಕ್-ಎ ಪ್ರಿಂಟ್ ಭದ್ರತೆಯನ್ನು ಪರಿಶೀಲಿಸುವ ಸಾಧನಕ್ಕಾಗಿ ಹೆಚ್ಚುವರಿ 6,720 ರೂ.ಗಳನ್ನು ವಿಧಿಸಲಾಗಿದೆ ಎಂದು ಆರ್ಥಿಕ ವ್ಯವಹಾರಗಳ ಸಚಿವಾಲಯ ಆರ್‌ಟಿಐ ಮೂಲಕ ನೀಡಿದ ಮಾಹಿತಿಯಲ್ಲಿ ತಿಳಿಸಿದೆ.

ನಾಸಿಕ್ ಮೂಲದ ಇಂಡಿಯಾ ಸೆಕ್ಯುರಿಟಿ ಪ್ರೆಸ್ ಈ ಬಾಂಡ್‌ಗಳನ್ನು ಮುದ್ರಿಸುವ ಕಾರ್ಯವನ್ನು ಮಾಡಿದೆ. 1,000, ರೂ, 10,000, ರೂ 1 ಲಕ್ಷ, ರೂ 10 ಲಕ್ಷ ಮತ್ತು ರೂ 1 ಕೋಟಿ ಮೌಲ್ಯದ ಬಾಂಡ್‌ಗಳನ್ನು ಮುದ್ರಿಸಿದೆ.

ಮುದ್ರಿತವಾದ ಚುನಾವಣಾ ಬಾಂಡ್‌ಗಳು

1,000 ರೂ.ಗಳ 2,65,000 ಚುನಾವಣಾ ಬಾಂಡ್‌ಗಳು
10,000 ರೂ.ಗಳ 2,65,000 ಬಾಂಡ್‌ಗಳು
1 ಲಕ್ಷ ಮೌಲ್ಯದ 93,000 ಚುನಾವಣಾ ಬಾಂಡ್‌ಗಳು
10 ಲಕ್ಷ ಮೌಲ್ಯದ 26,000 ಬಾಂಡ್‌ಗಳು
1 ಕೋಟಿಯ 33,000 ಬಾಂಡ್‌ಗಳು

ಈ ಬಾಂಡ್‌ಗಳ ಮುದ್ರಣ ಮತ್ತು ನಿರ್ವಹಣೆಯ ವೆಚ್ಚವನ್ನು ದಾನಿಗಳು ಅಥವಾ ಚುನಾವಣಾ ಬಾಂಡ್‌ ಸ್ವೀಕರಿಸುವವರು ಭರಿಸುವುದಿಲ್ಲ, ಅದು ಸರ್ಕಾರ ಅಂದರೆ ತೆರಿಗೆದಾರರ ಹಣದಿಂದ ಭರಿಸಲಾಗಿದೆ. ಚುನಾವಣಾ ಬಾಂಡ್‌ ಯೋಜನೆಯಲ್ಲಿ, ಬಾಂಡ್ ಖರೀದಿಸುವ ದಾನಿಗಳು ಎಸ್‌ಬಿಐಗೆ ಯಾವುದೇ ಸೇವಾ ಶುಲ್ಕ (ಕಮಿಷನ್) ಮತ್ತು ಬಾಂಡ್‌ಗಳ ಮುದ್ರಣ ವೆಚ್ಚವನ್ನು ಪಾವತಿಸಬೇಕಾಗಿಲ್ಲ, ಸರ್ಕಾರ ಅಥವಾ ಅಂತಿಮವಾಗಿ ತೆರಿಗೆ ಪಾವತಿದಾರರು ಈ ವೆಚ್ಚವನ್ನು ಭರಿಸುತ್ತಾರೆ ಎಂದು ಬಾತ್ರಾ ಹೇಳಿದ್ದಾರೆ.

ಇದಲ್ಲದೆ ತೆರಿಗೆ ಪಾವತಿದಾರರ ವೆಚ್ಚದಲ್ಲಿ ರಾಜಕೀಯ ಪಕ್ಷಗಳ ತೆರಿಗೆ-ಮುಕ್ತ ಪ್ರಯೋಜನಗಳಿಗಾಗಿ ಚುನಾವಣಾ ಬಾಂಡ್‌ ಯೋಜನೆಯನ್ನು ನಿರ್ವಹಿಸಲು ಸರ್ಕಾರಿ ಯಂತ್ರೋಪಕರಣಗಳು ಮತ್ತು ಮಾನವಶಕ್ತಿಯ ಬಳಕೆಗೆ ಭಾರಿ ಮೊತ್ತವನ್ನು ಖರ್ಚು ಮಾಡಲಾಗಿದೆ ಎಂದು ಲೋಕೇಶ್ ಬಾತ್ರಾ ಅವರು ಆರೋಪಿಸಿದ್ದಾರೆ.

ಚುನಾವಣಾ ಬಾಂಡ್‌ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ ನಂತರ ನರೇಂದ್ರ ಮೋದಿ ಸರ್ಕಾರವು 2024ರಲ್ಲಿ ತಲಾ 1 ಕೋಟಿ ರೂಪಾಯಿಗಳ 8,350 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದೆ ಎಂದು ಬಾತ್ರಾ ಅವರು ಈ ಹಿಂದೆ ಸಲ್ಲಿಸಿದ ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ. ಒಂದು ಎಲೆಕ್ಟೋರಲ್ ಬಾಂಡ್ ಮುದ್ರಣದ ವೆಚ್ಚವು 25 ರೂಪಾಯಿಯಾಗಿದೆ, ಅದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚುವರಿ 6% ಜಿಎಸ್‌ಟಿಯನ್ನು ವಿಧಿಸುತ್ತವೆ.

ಫೆಬ್ರವರಿ 15ರಂದು ಸುಪ್ರೀಂಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು. ಇದು ಅಸಂವಿಧಾನಿಕ ಮತ್ತು ಈ ಮಾಹಿತಿಯ ಮತದಾರರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕರೆದಿರುವ ನ್ಯಾಯಾಲಯವು, ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ ಕುರಿತ ಮಾಹಿತಿ ನೀಡಲು ಕಾಲಾವಕಾಶವನ್ನು ಕೋರಿತ್ತು. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಎಸ್‌ಬಿಐಗೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡುವಂತೆ ಸುಪ್ರೀಂಕೋರ್ಟ್‌ ಖಡಕ್‌ ಆಗಿ ಸೂಚಿಸಿತ್ತು. ಆ ಬಳಿಕ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, ಬಿಜೆಪಿ ಚುನಾವಣಾ ಬಾಂಡ್‌ ಯೋಜನೆಯಿಂದ ಅತಿ ಹೆಚ್ಚು ಪ್ರಯೋಜನ ಪಡೆದುಕೊಂಡಿದೆ ಎನ್ನುವುದು ಬಯಲಾಗಿತ್ತು.

ಇದನ್ನು ಓದಿ: ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆಂದು ಸಂಭ್ರಮಿಸುವವರಿಗೆ ಆರ್‌ಬಿಐ ಮಾಜಿ ಗವರ್ನರ್ ಎಚ್ಚರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...