Homeಮುಖಪುಟಬಿಹಾರದಲ್ಲಿ 'ಹಲಾಲ್' ಉತ್ಪನ್ನ ನಿಷೇಧಿಸಿ: ಸಿಎಂ ನಿತೀಶ್ ಕುಮಾರ್‌ಗೆ ಗಿರಿರಾಜ್ ಸಿಂಗ್ ಪತ್ರ

ಬಿಹಾರದಲ್ಲಿ ‘ಹಲಾಲ್’ ಉತ್ಪನ್ನ ನಿಷೇಧಿಸಿ: ಸಿಎಂ ನಿತೀಶ್ ಕುಮಾರ್‌ಗೆ ಗಿರಿರಾಜ್ ಸಿಂಗ್ ಪತ್ರ

- Advertisement -
- Advertisement -

ಉತ್ತರ ಪ್ರದೇಶದ ಬಳಿಕ ಬಿಹಾರದಲ್ಲಿ ಹಲಾಲ್ ಪ್ರಮಾಣಪತ್ರ ಹೊಂದಿರುವ ಉತ್ಪನ್ನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಿಎಂ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಹಲಾಲ್ ಉತ್ಪನ್ನ ‘ಜಿಹಾದ್’ ಎಂದಿರುವ ಗಿರಿರಾಜ್ ಸಿಂಗ್, ಇದರಿಂದ ಇಸ್ಲಾಮಿಕ್ ವ್ಯವಹಾರದ ಉದ್ದೇಶ ಹೊಂದಲಾಗಿದೆ ಎಂದಿದ್ದಾರೆ.

ಬಿಹಾರದ ಬೇಗುಸರಾಯ್‌ನ ಸಂಸದರಾಗಿರುವ ಗಿರಿರಾಜ್‌ ಸಿಂಗ್‌, ಸಿಎಂಗೆ ಬರೆದಿರುವ ಪತ್ರದ ಪ್ರತಿಯನ್ನು ಎಕ್ಸ್‌ (ಟ್ವಿಟ್ಟರ್‌) ನಲ್ಲಿ ಹಂಚಿಕೊಂಡಿದ್ದು, ಯಪಿ ಸಿಎಂ ಯೋಗಿ ಆದಿತ್ಯನಾಥ್‌ ಅವರ ನಿರ್ಧಾರವನ್ನು ಅಕ್ಕಪಕ್ಕದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಬೇಕು ಎಂದು ಹೇಳಿದ್ದಾರೆ.

ವಿಡಿಯೋ ಮೂಲಕ ಮಾತನಾಡಿರುವ ಗಿರಿರಾಜ್‌ ಸಿಂಗ್, ಹಲಾಲ್ ಪ್ರಾಮಾಣಿಕೃತ ಉತ್ಪನ್ನಗಳ ಮಾರಾಟ ಮಧ್ಯಕಾಲೀನ ಯುಗದಲ್ಲಿ ಮುಸ್ಲಿಂ ರಾಜರು ಇತರ ಧರ್ಮೀಯರಿಗೆ ವಿಧಿಸುತ್ತಿದ್ದ ‘ಜಿಝ್ಯಾ’ ತೆರಿಗೆಯಂತಿದೆ. ಕಾಂಗ್ರೆಸ್‌ ಸೇರಿದಂತೆ ಹಿಂದಿನ ಸರ್ಕಾರಗಳು ಮತ ರಾಜಕಾರಣಕ್ಕೋಸ್ಕರ ಹಲಾಲ್‌ ಉತ್ಪನ್ನವನ್ನು ಬೆಂಬಲಿಸಿದೆ ಎಂದಿದ್ದಾರೆ.

ತುಕ್ಡೇ ತುಕ್ಡೇ ಗ್ಯಾಂಗ್‌ಗಳು ಬಿಹಾರದ ಎಲ್ಲಾ ಮೂಲೆ ಮೂಲೆಗಳಲ್ಲಿ ಹಲಾಲ್ ಪ್ರಾಮಾಣಿಕೃತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಹಲಾಲ್‌ ಉತ್ಪನ್ನಗಳನ್ನು ಹಿಂದೂ ಮಂತ್ರಗಳಂತೆ ಕುರಾನ್‌ ಮೂಲಕ ಪವಿತ್ರೀಕರಣಗೊಳಿಸಲಾಗುತ್ತದೆ. ಇದರಿಂದ ಸನಾತನ ಧರ್ಮ ಅಪಾಯದಲ್ಲಿದೆ. ಹಲಾಲ್‌ ಉತ್ಪನ್ನಗಳ ಮೂಲಕ ಶರಿಯಾ ಕಾನೂನು ಹೇರಲಾಗ್ತಿದೆ. ಅಲ್ಲದೆ, ಇದು ಉಗ್ರವಾದಿಗಳೊಂದಿಗೆ ಸಂಪರ್ಕ ಹೊಂದಿದೆ ಎಂದು ಗಿರಿರಾಜ್‌ ಸಿಂಗ್ ಆರೋಪಿಸಿದ್ದಾರೆ.

ಗಿರಿರಾಜ್‌ ಸಿಂಗ್‌ ಆರೋಪಕ್ಕೆ ಜೆಡಿ(ಯು) ನಾಯಕ ನೀರಜ್‌ ಕುಮಾರ್‌ ತಿರುಗೇಟು ಕೊಟ್ಟಿದ್ದು, ಬಿಜೆಪಿ ನಾಯಕರು ಹಿಂದೂ ಧರ್ಮದ ಪಾಲಕರಂತೆ ತಮ್ಮನ್ನು ತಾವು ಬಿಂಬಿಸಿಕೊಳ್ಳುತ್ತಾರೆ. ಆದರೆ, ಅವರದ್ದೇ ಆಡಳಿತದ ಉತ್ತರ ಪ್ರದೇಶದಂತಹ ರಾಜ್ಯಗಳು ಗೋಮಾಂಸ ರಫ್ತಿನಲ್ಲಿ ಮುಂಚೂಣಿಯಲ್ಲಿದೆ. ಇವೆಲ್ಲವೂ ಅವರ ಬೂಟಾಟಿಕೆ ಎಂದಿದ್ದಾರೆ.

ಇದನ್ನೂ ಓದಿ: ಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...