Homeಮುಖಪುಟಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ಕಳೆದ 20 ವರ್ಷಗಳಲ್ಲಿ ಬಂಧನಕ್ಕೊಳಗಾದ ಮೊದಲ ಒಕ್ಕೂಟ ಸರ್ಕಾರದ ಸಚಿವರಾಗಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಅವರನ್ನು, “ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದ ಅಜ್ಞಾನಿ. ಅವರಿಗೆ ಕಪಾಳಮೋಕ್ಷ ಮಾಡಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕೂಟ ಸಚಿವ ನಾರಾಯಣ್ ರಾಣೆ ಅವರನ್ನು ಮಹಾರಾಷ್ಟ್ರದ ಸಂಗಮೇಶ್ವರದಲ್ಲಿ ಮಂಗಳವಾರ ಬಂಧಿಸಲಾಗಿದೆ. ರಾಣೆ ಅವರು ಕಳೆದ 20 ವರ್ಷಗಳಲ್ಲಿ ಬಂಧನಕ್ಕೊಳಗಾದ ಮೊದಲ ಒಕ್ಕೂಟ ಸಚಿವರಾಗಿದ್ದಾರೆ.

ಬಾಂಬೆ ಹೈಕೋರ್ಟ್ ನಾರಾಯಣ ರಾಣೆ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಬಳಿಕ ಬಂಧನ ಪಕ್ರಿಕೆಗಳು ನಡೆಯುತ್ತಿದೆ. “ಪ್ರಕರಣದಲ್ಲಿ ಸಚಿವರನ್ನು ಬಂಧಿಸಲಾಗುವುದು ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ನಂತರ ನ್ಯಾಯಾಲಯದ ಆದೇಶಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಾಸಿಕ್ ಪೊಲೀಸ್ ಮುಖ್ಯಸ್ಥ ದೀಪಕ್ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಡ ಸರ್ಕಾರದಲ್ಲಿ ಬಂಡಾಯ: ಕಾಂಗ್ರೆಸ್‌ಗೆ ಹೊಸ ತಲೆ ನೋವು!

ರಾಣೆ ಅವರು ಒಕ್ಕೂಟ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾಗಿರುವುದರಿಂದ ಬಂಧನದ ನಂತರ, ಉಪರಾಷ್ಟ್ರಪತಿ (ವೆಂಕಯ್ಯ ನಾಯ್ಡು) ಅವರಿಗೆ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

“ರಾಣೆಯನ್ನು ಬಂಧಿಸುವಾಗ, ಒಕ್ಕೂಟ ಸರ್ಕಾರದ ಸಚಿವರಿಗೆ ಸಂಬಂಧಿಸಿದ ಎಲ್ಲಾ ಪ್ರೋಟೋಕಾಲ್‌ಗಳನ್ನು ಪೊಲೀಸರು ಅನುಸರಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ನಾಸಿಕ್, ಪುಣೆ, ಔರಂಗಾಬಾದ್‌ನ ಪೊಲೀಸ್‌ ಠಾಣೆಗಳಲ್ಲಿ ರಾಣೆ ವಿರುದ್ದ ದೂರು ದಾಖಲಾಗಿದೆ. ನಾಸಿಕ್‌ನಲ್ಲಿ ಎಫ್‌ಐಆರ್‌ ದಾಖಲಾದ ಬಳಿಕ ರಾಣೆ ಅವರನ್ನು ಬಂಧಿಸುವಂತೆ ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಆದೇಶಿಸಿದ್ದಾರೆ.

ಇದನ್ನೂ ಓದಿ: ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ಅವರ ಆದೇಶದ ನಂತರ, ನಾಸಿಕ್ ಡಿಸಿಪಿ (ಅಪರಾಧ) ಸಂಜಯ್ ಬಾರ್ಕುಂಡ್ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಆನಂದ ವಾಘ್ ನೇತೃತ್ವದಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ತಂಡವು ಸಂಗಮೇಶ್ವರಕ್ಕೆ ತೆರಳಿದ್ದು, ಬಂಧನ ಕ್ರಮಗಳು ನಡೆಯುತ್ತಿವೆ.

ರಾಣೆ ವಿರುದ್ದ ನಾಸಿಕ್‌ನಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ), 505 (2) (ಕಿಡಿಗೇಡಿತನ), 153-ಬಿ (1) (ಸಿ) (ಅಸಾಮರಸ್ಯ ಅಥವಾ ದ್ವೇಷದ ಭಾವನೆಯನ್ನು ಉಂಟುಮಾಡುವ ಸಾಧ್ಯತೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ತಮ್ಮ ಆಗಸ್ಟ್ 15ರ ಭಾಷಣದ ಸಮಯದಲ್ಲಿ ಸ್ವಾತಂತ್ರ್ಯದ ವರ್ಷವನ್ನು ಮರೆತಿದ್ದಾರೆ.  ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದಿರುವುದು ನಾಚಿಕೆಗೇಡು. ಆ ಸಂದರ್ಭದಲ್ಲಿ ನಾನು ಅಲ್ಲಿದ್ದಿದ್ದರೆ ಸರಿಯಾಗಿ ಕಪಾಳಮೋಕ್ಷ ಮಾಡುತ್ತಿದ್ದೆ” ಎಂದು ಸೋಮವಾರ ರಾಯಗಡ ಜಿಲ್ಲೆಯಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಸಚಿವ ನಾರಾಯಣ್ ರಾಣೆ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...