Homeಮುಖಪುಟಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ಕಳೆದ 20 ವರ್ಷಗಳಲ್ಲಿ ಬಂಧನಕ್ಕೊಳಗಾದ ಮೊದಲ ಒಕ್ಕೂಟ ಸರ್ಕಾರದ ಸಚಿವರಾಗಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಅವರನ್ನು, “ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದ ಅಜ್ಞಾನಿ. ಅವರಿಗೆ ಕಪಾಳಮೋಕ್ಷ ಮಾಡಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕೂಟ ಸಚಿವ ನಾರಾಯಣ್ ರಾಣೆ ಅವರನ್ನು ಮಹಾರಾಷ್ಟ್ರದ ಸಂಗಮೇಶ್ವರದಲ್ಲಿ ಮಂಗಳವಾರ ಬಂಧಿಸಲಾಗಿದೆ. ರಾಣೆ ಅವರು ಕಳೆದ 20 ವರ್ಷಗಳಲ್ಲಿ ಬಂಧನಕ್ಕೊಳಗಾದ ಮೊದಲ ಒಕ್ಕೂಟ ಸಚಿವರಾಗಿದ್ದಾರೆ.

ಬಾಂಬೆ ಹೈಕೋರ್ಟ್ ನಾರಾಯಣ ರಾಣೆ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಬಳಿಕ ಬಂಧನ ಪಕ್ರಿಕೆಗಳು ನಡೆಯುತ್ತಿದೆ. “ಪ್ರಕರಣದಲ್ಲಿ ಸಚಿವರನ್ನು ಬಂಧಿಸಲಾಗುವುದು ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ನಂತರ ನ್ಯಾಯಾಲಯದ ಆದೇಶಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಾಸಿಕ್ ಪೊಲೀಸ್ ಮುಖ್ಯಸ್ಥ ದೀಪಕ್ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಡ ಸರ್ಕಾರದಲ್ಲಿ ಬಂಡಾಯ: ಕಾಂಗ್ರೆಸ್‌ಗೆ ಹೊಸ ತಲೆ ನೋವು!

ರಾಣೆ ಅವರು ಒಕ್ಕೂಟ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾಗಿರುವುದರಿಂದ ಬಂಧನದ ನಂತರ, ಉಪರಾಷ್ಟ್ರಪತಿ (ವೆಂಕಯ್ಯ ನಾಯ್ಡು) ಅವರಿಗೆ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

“ರಾಣೆಯನ್ನು ಬಂಧಿಸುವಾಗ, ಒಕ್ಕೂಟ ಸರ್ಕಾರದ ಸಚಿವರಿಗೆ ಸಂಬಂಧಿಸಿದ ಎಲ್ಲಾ ಪ್ರೋಟೋಕಾಲ್‌ಗಳನ್ನು ಪೊಲೀಸರು ಅನುಸರಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ನಾಸಿಕ್, ಪುಣೆ, ಔರಂಗಾಬಾದ್‌ನ ಪೊಲೀಸ್‌ ಠಾಣೆಗಳಲ್ಲಿ ರಾಣೆ ವಿರುದ್ದ ದೂರು ದಾಖಲಾಗಿದೆ. ನಾಸಿಕ್‌ನಲ್ಲಿ ಎಫ್‌ಐಆರ್‌ ದಾಖಲಾದ ಬಳಿಕ ರಾಣೆ ಅವರನ್ನು ಬಂಧಿಸುವಂತೆ ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಆದೇಶಿಸಿದ್ದಾರೆ.

ಇದನ್ನೂ ಓದಿ: ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ಅವರ ಆದೇಶದ ನಂತರ, ನಾಸಿಕ್ ಡಿಸಿಪಿ (ಅಪರಾಧ) ಸಂಜಯ್ ಬಾರ್ಕುಂಡ್ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಆನಂದ ವಾಘ್ ನೇತೃತ್ವದಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ತಂಡವು ಸಂಗಮೇಶ್ವರಕ್ಕೆ ತೆರಳಿದ್ದು, ಬಂಧನ ಕ್ರಮಗಳು ನಡೆಯುತ್ತಿವೆ.

ರಾಣೆ ವಿರುದ್ದ ನಾಸಿಕ್‌ನಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ), 505 (2) (ಕಿಡಿಗೇಡಿತನ), 153-ಬಿ (1) (ಸಿ) (ಅಸಾಮರಸ್ಯ ಅಥವಾ ದ್ವೇಷದ ಭಾವನೆಯನ್ನು ಉಂಟುಮಾಡುವ ಸಾಧ್ಯತೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ತಮ್ಮ ಆಗಸ್ಟ್ 15ರ ಭಾಷಣದ ಸಮಯದಲ್ಲಿ ಸ್ವಾತಂತ್ರ್ಯದ ವರ್ಷವನ್ನು ಮರೆತಿದ್ದಾರೆ.  ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದಿರುವುದು ನಾಚಿಕೆಗೇಡು. ಆ ಸಂದರ್ಭದಲ್ಲಿ ನಾನು ಅಲ್ಲಿದ್ದಿದ್ದರೆ ಸರಿಯಾಗಿ ಕಪಾಳಮೋಕ್ಷ ಮಾಡುತ್ತಿದ್ದೆ” ಎಂದು ಸೋಮವಾರ ರಾಯಗಡ ಜಿಲ್ಲೆಯಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಸಚಿವ ನಾರಾಯಣ್ ರಾಣೆ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...