Homeಮುಖಪುಟಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ಮಹಾ ಸಿಎಂಗೆ ಕಪಾಳಮೋಕ್ಷ ಹೇಳಿಕೆ: ಒಕ್ಕೂಟ ಸರ್ಕಾರದ ಸಚಿವ ಅರೆಸ್ಟ್‌!

ಕಳೆದ 20 ವರ್ಷಗಳಲ್ಲಿ ಬಂಧನಕ್ಕೊಳಗಾದ ಮೊದಲ ಒಕ್ಕೂಟ ಸರ್ಕಾರದ ಸಚಿವರಾಗಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಅವರನ್ನು, “ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದ ಅಜ್ಞಾನಿ. ಅವರಿಗೆ ಕಪಾಳಮೋಕ್ಷ ಮಾಡಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕೂಟ ಸಚಿವ ನಾರಾಯಣ್ ರಾಣೆ ಅವರನ್ನು ಮಹಾರಾಷ್ಟ್ರದ ಸಂಗಮೇಶ್ವರದಲ್ಲಿ ಮಂಗಳವಾರ ಬಂಧಿಸಲಾಗಿದೆ. ರಾಣೆ ಅವರು ಕಳೆದ 20 ವರ್ಷಗಳಲ್ಲಿ ಬಂಧನಕ್ಕೊಳಗಾದ ಮೊದಲ ಒಕ್ಕೂಟ ಸಚಿವರಾಗಿದ್ದಾರೆ.

ಬಾಂಬೆ ಹೈಕೋರ್ಟ್ ನಾರಾಯಣ ರಾಣೆ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಬಳಿಕ ಬಂಧನ ಪಕ್ರಿಕೆಗಳು ನಡೆಯುತ್ತಿದೆ. “ಪ್ರಕರಣದಲ್ಲಿ ಸಚಿವರನ್ನು ಬಂಧಿಸಲಾಗುವುದು ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ನಂತರ ನ್ಯಾಯಾಲಯದ ಆದೇಶಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ನಾಸಿಕ್ ಪೊಲೀಸ್ ಮುಖ್ಯಸ್ಥ ದೀಪಕ್ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಡ ಸರ್ಕಾರದಲ್ಲಿ ಬಂಡಾಯ: ಕಾಂಗ್ರೆಸ್‌ಗೆ ಹೊಸ ತಲೆ ನೋವು!

ರಾಣೆ ಅವರು ಒಕ್ಕೂಟ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾಗಿರುವುದರಿಂದ ಬಂಧನದ ನಂತರ, ಉಪರಾಷ್ಟ್ರಪತಿ (ವೆಂಕಯ್ಯ ನಾಯ್ಡು) ಅವರಿಗೆ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

“ರಾಣೆಯನ್ನು ಬಂಧಿಸುವಾಗ, ಒಕ್ಕೂಟ ಸರ್ಕಾರದ ಸಚಿವರಿಗೆ ಸಂಬಂಧಿಸಿದ ಎಲ್ಲಾ ಪ್ರೋಟೋಕಾಲ್‌ಗಳನ್ನು ಪೊಲೀಸರು ಅನುಸರಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ನಾಸಿಕ್, ಪುಣೆ, ಔರಂಗಾಬಾದ್‌ನ ಪೊಲೀಸ್‌ ಠಾಣೆಗಳಲ್ಲಿ ರಾಣೆ ವಿರುದ್ದ ದೂರು ದಾಖಲಾಗಿದೆ. ನಾಸಿಕ್‌ನಲ್ಲಿ ಎಫ್‌ಐಆರ್‌ ದಾಖಲಾದ ಬಳಿಕ ರಾಣೆ ಅವರನ್ನು ಬಂಧಿಸುವಂತೆ ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಆದೇಶಿಸಿದ್ದಾರೆ.

ಇದನ್ನೂ ಓದಿ: ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ಅವರ ಆದೇಶದ ನಂತರ, ನಾಸಿಕ್ ಡಿಸಿಪಿ (ಅಪರಾಧ) ಸಂಜಯ್ ಬಾರ್ಕುಂಡ್ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಆನಂದ ವಾಘ್ ನೇತೃತ್ವದಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ತಂಡವು ಸಂಗಮೇಶ್ವರಕ್ಕೆ ತೆರಳಿದ್ದು, ಬಂಧನ ಕ್ರಮಗಳು ನಡೆಯುತ್ತಿವೆ.

ರಾಣೆ ವಿರುದ್ದ ನಾಸಿಕ್‌ನಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ), 505 (2) (ಕಿಡಿಗೇಡಿತನ), 153-ಬಿ (1) (ಸಿ) (ಅಸಾಮರಸ್ಯ ಅಥವಾ ದ್ವೇಷದ ಭಾವನೆಯನ್ನು ಉಂಟುಮಾಡುವ ಸಾಧ್ಯತೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ತಮ್ಮ ಆಗಸ್ಟ್ 15ರ ಭಾಷಣದ ಸಮಯದಲ್ಲಿ ಸ್ವಾತಂತ್ರ್ಯದ ವರ್ಷವನ್ನು ಮರೆತಿದ್ದಾರೆ.  ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದಿರುವುದು ನಾಚಿಕೆಗೇಡು. ಆ ಸಂದರ್ಭದಲ್ಲಿ ನಾನು ಅಲ್ಲಿದ್ದಿದ್ದರೆ ಸರಿಯಾಗಿ ಕಪಾಳಮೋಕ್ಷ ಮಾಡುತ್ತಿದ್ದೆ” ಎಂದು ಸೋಮವಾರ ರಾಯಗಡ ಜಿಲ್ಲೆಯಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಸಚಿವ ನಾರಾಯಣ್ ರಾಣೆ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಎಂದ ಝೀ ಮತ್ತು ನ್ಯೂಸ್18

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...